Homeಮುಖಪುಟಬಿಹಾರ ಕರಡು ಮತದಾರರ ಪಟ್ಟಿ ಪ್ರಕಟಣೆ ತಡೆಯಲು ಸುಪ್ರೀಂ ನಕಾರ: ಆಧಾರ್, ವೋಟರ್ ಐಡಿ ಪರಿಗಣಿಸುವಂತೆ...

ಬಿಹಾರ ಕರಡು ಮತದಾರರ ಪಟ್ಟಿ ಪ್ರಕಟಣೆ ತಡೆಯಲು ಸುಪ್ರೀಂ ನಕಾರ: ಆಧಾರ್, ವೋಟರ್ ಐಡಿ ಪರಿಗಣಿಸುವಂತೆ ಒತ್ತಾಯ

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆಯ ವೇಳಾಪಟ್ಟಿಯಂತೆ ಆಗಸ್ಟ್ 1ರಂದು ಬಿಹಾರದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡುವುದಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ (ಜುಲೈ 28) ನಿರಾಕರಿಸಿತು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠವು ಇಂದು ವಿವರವಾದ ವಿಚಾರಣೆ ನಡೆಸಿಲ್ಲ. ಏಕೆಂದರೆ, ಪೀಠದ ಭಾಗವಾದ ನ್ಯಾಯಮೂರ್ತಿ ಕಾಂತ್ ಅವರು ಮಧ್ಯಾಹ್ನ ಸಿಜೆಐ ಅವರೊಂದಿಗಿನ ಆಡಳಿತಾತ್ಮಕ ಸಭೆಯಲ್ಲಿ ಭಾಗವಹಿಸಬೇಕಾಗಿತ್ತು. ಹಾಗಾಗಿ, ಅರ್ಜಿದಾರರಿಗೆ ಈ ಪ್ರಕರಣಗಳನ್ನು ಆದಷ್ಟು ಬೇಗ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಭರವಸೆ ನೀಡಿದ ನ್ಯಾಯಮೂರ್ತಿ ಕಾಂತ್, ನಾಳೆ ವಾದಕ್ಕೆ ಅಗತ್ಯವಿರುವ ತಾತ್ಕಾಲಿಕ ಸಮಯವನ್ನು ತಿಳಿಸುವಂತೆ ವಕೀಲರಿಗೆ ಹೇಳಿದರು.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪರ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು, ಕರಡು ಪಟ್ಟಿಯ ಅಧಿಸೂಚನೆಯನ್ನು ತಡೆಯುವಂತೆ ಪೀಠವನ್ನು ಕೋರಿದರು. ಇದು ಸುಮಾರು 4.5 ಕೋಟಿ ಮತದಾರರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು ಹೇಳಿದರು. ಕರಡು ಪಟ್ಟಿ ಪ್ರಕಟವಾದ ನಂತರ, ಹೊರಗಿಡಲಾದ ವ್ಯಕ್ತಿಗಳು ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಸೇರ್ಪಡೆಗೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅಲ್ಲದೆ, ಕರಡು ಪಟ್ಟಿ ಪ್ರಕಟಿಸುವ ಮೊದಲು ವಿಚಾರಣೆ ನಡೆಸಲು ನ್ಯಾಯಾಲಯ ಒಪ್ಪಿಕೊಂಡ ಕಾರಣ ಜೂನ್ 10ರಂದು ತಡೆ ಕೋರಿರಲಿಲ್ಲ ಎಂದು ನೆನಪಿಸಿದರು.

ಚುನಾವಣಾ ಆಯೋಗದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಇದು ಕೇವಲ ಕರಡು ಪಟ್ಟಿ ಎಂದು ವಾದಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್, “ಇದು ಕರಡು ಪಟ್ಟಿ, ಯಾವುದೇ ಅಕ್ರಮ ಕಂಡುಬಂದರೆ ನ್ಯಾಯಾಲಯವು ಅಂತಿಮವಾಗಿ ಇಡೀ ಪ್ರಕ್ರಿಯೆಯನ್ನು ರದ್ದುಗೊಳಿಸಬಹುದು ಎಂದು ಹೇಳಿದರು.

ಈ ವೇಳೆ ಎಡಿಆರ್ ಪರ ವಕೀಲ ಶಂಕರನಾರಾಯಣನ್ ಅವರು, ಈ ಪ್ರಕ್ರಿಯೆಯು ‘ಅರ್ಜಿಗಳ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸುವಂತೆ ನ್ಯಾಯಮೂರ್ತಿ ಕಾಂತ್ ಅವರನ್ನು ಕೇಳಿಕೊಂಡರು. ನಾವು ಅರ್ಥಮಾಡಿಕೊಂಡಂತೆ ಅಂತಹ ಅಭಿಪ್ರಾಯ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರ ಎಡಿಆರ್ ಪರ ವಕೀಲರು, ಸುಪ್ರೀಂ ಕೋರ್ಟ್ ಜುಲೈ 10ರಂದು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಪರಿಗಣಿಸುವಂತೆ ನೀಡಿದ ಸಲಹೆಯನ್ನು ಚುನಾವಣಾ ಆಯೋಗ ಉಲ್ಲಂಘಿಸುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ಆಗ, ಚುನಾವಣಾ ಆಯೋಗ ತನ್ನ ಪ್ರತಿ ಅಫಿಡವಿಟ್‌ನಲ್ಲಿ ಈ ದಾಖಲೆಗಳ ಬಗ್ಗೆ ತನ್ನ ಆಕ್ಷೇಪಣೆಯನ್ನು ವ್ಯಕ್ತಪಡಿಸಿದೆ ಎಂದು ದ್ವಿವೇದಿ ಹೇಳಿದರು. ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ, ಹಲವಾರು ನಕಲಿ ಕಾರ್ಡ್‌ಗಳನ್ನು ನೀಡಲಾಗಿದೆ ಎಂದರು.

ಈ ವೇಳೆ, ಆಧಾರ್ ಕಾರ್ಡ್ ಮತ್ತು ಮತದಾರರ ಚುನಾವಣಾ ಗುರುತಿನ ಚೀಟಿಯನ್ನು ಕನಿಷ್ಠ ಶಾಸನಬದ್ಧ ದಾಖಲೆಗಳನ್ನಾಗಿ ಪರಿಗಣಿಸುವಂತೆ ಪೀಠವು ಮೌಖಿಕವಾಗಿ ಚುನಾವಣಾ ಆಯೋಗಕ್ಕೆ ಹೇಳಿತು.

ಈ ದಾಖಲೆಗಳು (ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ) ಸರಿಯಾಗಿವೆ ಎಂಬ ಊಹೆ ಇದೆ. ನೀವು ಅವುಗಳನ್ನು ಪರಿಗಣಿಸಿ. ಒಂದು ವೇಳೆ ನಕಲಿ ಎಂದು ಕಂಡು ಬಂದರೆ, ಅದೇ ಪ್ರಕರಣಕ್ಕೆ ಆಧಾರವಾಗಿರುತ್ತದೆ. ಭೂಮಿಯ ಮೇಲಿನ ಯಾವುದೇ ದಾಖಲೆಯನ್ನು ನಕಲಿ ಮಾಡಬಹುದು” ಎಂದು ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗದ ಪರ ವಕೀಲರಿಗೆ ಮೌಖಿಕವಾಗಿ ಹೇಳಿದರು.

“ಸಾಮೂಹಿಕ ಹೊರಗಿಡುವಿಕೆ” ಬದಲಿಗೆ, “ಸಾಮೂಹಿಕ ಸೇರ್ಪಡೆ” ಇರಬೇಕು ಎಂದು ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗಕ್ಕೆ ತಿಳಿಸಿದರು.

ಈ ಹಿಂದಿನ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಬಾಗ್ಚಿ ಅವರ ರಜಾ ಅವಧಿಯ ಪೀಠವು, ಪೌರತ್ವವನ್ನು ನಿರ್ಧರಿಸುವುದು ಚುನಾವಣಾ ಆಯೋಗದ ಕೆಲಸವಲ್ಲ. ಅದು ಕೇಂದ್ರ ಸರ್ಕಾರದ ವಿಶೇಷ ಹಕ್ಕು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತ್ತು. ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳನ್ನು ಪರಿಗಣಿಸುವಂತೆಯೂ ಚುನಾವಣಾ ಆಯೋಗಕ್ಕೆ ಸಲಹೆ ನೀಡಿತ್ತು.

Courtesy : livelaw.in

ಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಕುರಿತ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...