Homeಅಂತರಾಷ್ಟ್ರೀಯಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

ಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

- Advertisement -
- Advertisement -

ಸೌದಿ ಅರೇಬಿಯಾದ ಮಕ್ಕಾದ ಗ್ರ್ಯಾಂಡ್ ಮಸೀದಿಯೊಳಗೆ ಪ್ಯಾಲೆಸ್ತೀನಿಯನ್ ಧ್ವಜವನ್ನು ಎತ್ತಿ ಗಾಜಾ ಪಟ್ಟಿಯಲ್ಲಿರುವ ಮಾನವೀಯ ಬಿಕ್ಕಟ್ಟಿನ ಬಗ್ಗೆ ಗಮನ ಸೆಳೆಯುವ ಘೋಷಣೆಗಳನ್ನು ಕೂಗಿದ ನಂತರ ಭದ್ರತಾ ಪಡೆಗಳು ಈಜಿಪ್ಟ್ ಯಾತ್ರಿಕನನ್ನು ಬಂಧಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾದ ಘಟನೆಯ 35 ಸೆಕೆಂಡುಗಳ ವೀಡಿಯೊ ಕ್ಲಿಪ್, ಕಾಬಾದ ಮುಂದೆ ಆ ವ್ಯಕ್ತಿ ಧ್ವಜ ಬೀಸುತ್ತಾ ಭಾವನಾತ್ಮಕವಾಗಿ ‘ವಾ ಇಸ್ಲಾಮಾ!’ ಎಂದು ಕೂಗುತ್ತಿರುವುದನ್ನು ಕಾಣಬಹುದು. ಇದು ಐತಿಹಾಸಿಕ ಇಸ್ಲಾಮಿಕ್ ದುಃಖದ ಕೂಗು, ಗಾಜಾದ ಮಕ್ಕಳು ಸಾಯುತ್ತಿದ್ದಾರೆ. ಓ ಮುಸ್ಲಿಮರು! ಎಂದು ಕೂಗಿದ್ದಾರೆ.

ನಂತರ, ಸೌದಿ ಅಧಿಕಾರಿಗಳು ಮಸೀದಿಯೊಳಗೆ ಅವರನ್ನು ಸಮೀಪಿಸಿ ತ್ವರಿತವಾಗಿ ಬಂಧಿಸಿದರು. ಈ ಘಟನೆಯು ಆನ್‌ಲೈನ್ ಟೀಕೆಗೆ ಗುರಿಯಾಗಿದೆ. ಇಸ್ಲಾಮಿಕ್ ಪವಿತ್ರ ತಾಣಗಳಲ್ಲಿ ರಾಜಕೀಯ ಅಭಿವ್ಯಕ್ತಿಯ ಮೇಲೆ ಸೌದಿ ಅರೇಬಿಯಾದ ನಿಷೇಧದ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

ಆಧ್ಯಾತ್ಮಿಕ ಗಮನವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಉಲ್ಲೇಖಿಸಿ ಸೌದಿ ಅರೇಬಿಯಾ ಧ್ವಜ, ಘೋಷಣೆಗಳು ಸೇರಿದಂತೆ ಹಜ್ ಮತ್ತು ಉಮ್ರಾ ಸಮಯದಲ್ಲಿ ಎಲ್ಲ ರಾಜಕೀಯ ಸಂದೇಶಗಳನ್ನು ನಿಷೇಧಿಸಿದೆ. ಆದರೂ, ಪ್ಯಾಲೆಸ್ತೀನಿಯನ್ ಪರ ಧ್ವನಿಗಳನ್ನು ಮೌನಗೊಳಿಸಲು ಈ ನೀತಿಯನ್ನು ಬಳಸಲಾಗುತ್ತಿದೆ ಎಂದು ಕೆಲವರು ವಿಮರ್ಷೆ ಮಾಡಿದ್ದಾರೆ.

ಗಾಜಾದಲ್ಲಿ ಪರಿಸ್ಥಿತಿ ಹದಗೆಡುತ್ತಿರುವುದರ ಬಗ್ಗೆ ಜಾಗತಿಕ ಕಳವಳ ಹೆಚ್ಚುತ್ತಿರುವಂತೆಯೇ ಬಂಧನವಾಗಿದೆ. ಈ ಪ್ರದೇಶವು ದಿಗ್ಬಂಧನದಲ್ಲಿದ್ದು, ನಡೆಯುತ್ತಿರುವ ಮಿಲಿಟರಿ ದಾಳಿಗಳ ನಡುವೆಯೂ ಆಹಾರ, ನೀರು ಮತ್ತು ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ಸಾಮಗ್ರಿಗಳ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ವಿಶ್ವಾದ್ಯಂತ ಮಾನವೀಯ ಬೆಂಬಲಕ್ಕಾಗಿ ಕರೆಗಳು ತೀವ್ರಗೊಂಡಿವೆ.

ಪಾಲೆಸ್ತೀನ್ ಪರ ಧ್ವನಿ ಎತ್ತಿದ್ದಕ್ಕಾಗಿ ಬಂಧಿಸಿರುವುದು ಇದೇ ಮೊದಲ ಪ್ರಕರಣವಲ್ಲ. ಈ ವರ್ಷದ ಏಪ್ರಿಲ್‌ನಲ್ಲಿ, ಪ್ಯಾಲೆಸ್ತೀನಿಯನ್ ಸಂಕೇತಗಳನ್ನು ಹೊಂದಿರುವ ಹೆಡ್‌ಬ್ಯಾಂಡ್ ಧರಿಸಿದ್ದಕ್ಕಾಗಿ ಸೌದಿ ಅಧಿಕಾರಿಗಳು ಟರ್ಕಿಶ್ ಮಹಿಳೆಗೆ ಗ್ರ್ಯಾಂಡ್ ಮಸೀದಿಗೆ ಪ್ರವೇಶವನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 2024 ರಲ್ಲಿ, ಪ್ಯಾಲೆಸ್ತೀನಿಯನ್ ಧ್ವಜವನ್ನು ಪ್ರದರ್ಶಿಸುವ ಚೀಲವನ್ನು ಹೊತ್ತೊಯ್ದಿದ್ದಕ್ಕಾಗಿ ಮಹಿಳೆಯನ್ನು ಬಂಧಿಸಲಾಯಿತು.

ನಂತರ, ನವೆಂಬರ್‌ನಲ್ಲಿ, ಅಲ್ಜೀರಿಯಾದ ಯಾತ್ರಿಕ ಮತ್ತು ಟರ್ಕಿಶ್ ಶೇಖ್ ಎಂಬ ಇಬ್ಬರು ವ್ಯಕ್ತಿಗಳನ್ನು ಅವರ ತೀರ್ಥಯಾತ್ರೆಯ ಸಮಯದಲ್ಲಿ ಗಾಜಾ ಮತ್ತು ಪ್ಯಾಲೆಸ್ತೀನ್‌ಗಾಗಿ ಸಾರ್ವಜನಿಕವಾಗಿ ಬೆಂಬಲಿಸಿದ್ದಕ್ಕಾಗಿ ಬಂಧಿಸಲಾಯಿತು ಎಂದು ವರದಿಯಾಗಿದೆ.

ಗಾಝಾ | ಹಸಿವಿನಿಂದ ಮತ್ತೆ ಐವರು ಸಾವು: ಆಹಾರ ಖರೀದಿಸಲು ಕ್ಯಾಮರಾ, ಪ್ರೆಸ್ ಶೀಲ್ಡ್ ಮಾರಾಟಕ್ಕಿಟ್ಟ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...