Homeಅಂತರಾಷ್ಟ್ರೀಯಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

ಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

- Advertisement -
- Advertisement -

ಸೌದಿ ಅರೇಬಿಯಾದ ಮಕ್ಕಾದ ಗ್ರ್ಯಾಂಡ್ ಮಸೀದಿಯೊಳಗೆ ಪ್ಯಾಲೆಸ್ತೀನಿಯನ್ ಧ್ವಜವನ್ನು ಎತ್ತಿ ಗಾಜಾ ಪಟ್ಟಿಯಲ್ಲಿರುವ ಮಾನವೀಯ ಬಿಕ್ಕಟ್ಟಿನ ಬಗ್ಗೆ ಗಮನ ಸೆಳೆಯುವ ಘೋಷಣೆಗಳನ್ನು ಕೂಗಿದ ನಂತರ ಭದ್ರತಾ ಪಡೆಗಳು ಈಜಿಪ್ಟ್ ಯಾತ್ರಿಕನನ್ನು ಬಂಧಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾದ ಘಟನೆಯ 35 ಸೆಕೆಂಡುಗಳ ವೀಡಿಯೊ ಕ್ಲಿಪ್, ಕಾಬಾದ ಮುಂದೆ ಆ ವ್ಯಕ್ತಿ ಧ್ವಜ ಬೀಸುತ್ತಾ ಭಾವನಾತ್ಮಕವಾಗಿ ‘ವಾ ಇಸ್ಲಾಮಾ!’ ಎಂದು ಕೂಗುತ್ತಿರುವುದನ್ನು ಕಾಣಬಹುದು. ಇದು ಐತಿಹಾಸಿಕ ಇಸ್ಲಾಮಿಕ್ ದುಃಖದ ಕೂಗು, ಗಾಜಾದ ಮಕ್ಕಳು ಸಾಯುತ್ತಿದ್ದಾರೆ. ಓ ಮುಸ್ಲಿಮರು! ಎಂದು ಕೂಗಿದ್ದಾರೆ.

ನಂತರ, ಸೌದಿ ಅಧಿಕಾರಿಗಳು ಮಸೀದಿಯೊಳಗೆ ಅವರನ್ನು ಸಮೀಪಿಸಿ ತ್ವರಿತವಾಗಿ ಬಂಧಿಸಿದರು. ಈ ಘಟನೆಯು ಆನ್‌ಲೈನ್ ಟೀಕೆಗೆ ಗುರಿಯಾಗಿದೆ. ಇಸ್ಲಾಮಿಕ್ ಪವಿತ್ರ ತಾಣಗಳಲ್ಲಿ ರಾಜಕೀಯ ಅಭಿವ್ಯಕ್ತಿಯ ಮೇಲೆ ಸೌದಿ ಅರೇಬಿಯಾದ ನಿಷೇಧದ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

ಆಧ್ಯಾತ್ಮಿಕ ಗಮನವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಉಲ್ಲೇಖಿಸಿ ಸೌದಿ ಅರೇಬಿಯಾ ಧ್ವಜ, ಘೋಷಣೆಗಳು ಸೇರಿದಂತೆ ಹಜ್ ಮತ್ತು ಉಮ್ರಾ ಸಮಯದಲ್ಲಿ ಎಲ್ಲ ರಾಜಕೀಯ ಸಂದೇಶಗಳನ್ನು ನಿಷೇಧಿಸಿದೆ. ಆದರೂ, ಪ್ಯಾಲೆಸ್ತೀನಿಯನ್ ಪರ ಧ್ವನಿಗಳನ್ನು ಮೌನಗೊಳಿಸಲು ಈ ನೀತಿಯನ್ನು ಬಳಸಲಾಗುತ್ತಿದೆ ಎಂದು ಕೆಲವರು ವಿಮರ್ಷೆ ಮಾಡಿದ್ದಾರೆ.

ಗಾಜಾದಲ್ಲಿ ಪರಿಸ್ಥಿತಿ ಹದಗೆಡುತ್ತಿರುವುದರ ಬಗ್ಗೆ ಜಾಗತಿಕ ಕಳವಳ ಹೆಚ್ಚುತ್ತಿರುವಂತೆಯೇ ಬಂಧನವಾಗಿದೆ. ಈ ಪ್ರದೇಶವು ದಿಗ್ಬಂಧನದಲ್ಲಿದ್ದು, ನಡೆಯುತ್ತಿರುವ ಮಿಲಿಟರಿ ದಾಳಿಗಳ ನಡುವೆಯೂ ಆಹಾರ, ನೀರು ಮತ್ತು ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ಸಾಮಗ್ರಿಗಳ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ವಿಶ್ವಾದ್ಯಂತ ಮಾನವೀಯ ಬೆಂಬಲಕ್ಕಾಗಿ ಕರೆಗಳು ತೀವ್ರಗೊಂಡಿವೆ.

ಪಾಲೆಸ್ತೀನ್ ಪರ ಧ್ವನಿ ಎತ್ತಿದ್ದಕ್ಕಾಗಿ ಬಂಧಿಸಿರುವುದು ಇದೇ ಮೊದಲ ಪ್ರಕರಣವಲ್ಲ. ಈ ವರ್ಷದ ಏಪ್ರಿಲ್‌ನಲ್ಲಿ, ಪ್ಯಾಲೆಸ್ತೀನಿಯನ್ ಸಂಕೇತಗಳನ್ನು ಹೊಂದಿರುವ ಹೆಡ್‌ಬ್ಯಾಂಡ್ ಧರಿಸಿದ್ದಕ್ಕಾಗಿ ಸೌದಿ ಅಧಿಕಾರಿಗಳು ಟರ್ಕಿಶ್ ಮಹಿಳೆಗೆ ಗ್ರ್ಯಾಂಡ್ ಮಸೀದಿಗೆ ಪ್ರವೇಶವನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 2024 ರಲ್ಲಿ, ಪ್ಯಾಲೆಸ್ತೀನಿಯನ್ ಧ್ವಜವನ್ನು ಪ್ರದರ್ಶಿಸುವ ಚೀಲವನ್ನು ಹೊತ್ತೊಯ್ದಿದ್ದಕ್ಕಾಗಿ ಮಹಿಳೆಯನ್ನು ಬಂಧಿಸಲಾಯಿತು.

ನಂತರ, ನವೆಂಬರ್‌ನಲ್ಲಿ, ಅಲ್ಜೀರಿಯಾದ ಯಾತ್ರಿಕ ಮತ್ತು ಟರ್ಕಿಶ್ ಶೇಖ್ ಎಂಬ ಇಬ್ಬರು ವ್ಯಕ್ತಿಗಳನ್ನು ಅವರ ತೀರ್ಥಯಾತ್ರೆಯ ಸಮಯದಲ್ಲಿ ಗಾಜಾ ಮತ್ತು ಪ್ಯಾಲೆಸ್ತೀನ್‌ಗಾಗಿ ಸಾರ್ವಜನಿಕವಾಗಿ ಬೆಂಬಲಿಸಿದ್ದಕ್ಕಾಗಿ ಬಂಧಿಸಲಾಯಿತು ಎಂದು ವರದಿಯಾಗಿದೆ.

ಗಾಝಾ | ಹಸಿವಿನಿಂದ ಮತ್ತೆ ಐವರು ಸಾವು: ಆಹಾರ ಖರೀದಿಸಲು ಕ್ಯಾಮರಾ, ಪ್ರೆಸ್ ಶೀಲ್ಡ್ ಮಾರಾಟಕ್ಕಿಟ್ಟ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...