Homeಅಂತರಾಷ್ಟ್ರೀಯ'ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..'; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

‘ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..’; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

- Advertisement -
- Advertisement -

ಇಸ್ರೇಲ್‌ನ ಎರಡು ಪ್ರಮುಖ ಮಾನವ ಹಕ್ಕುಗಳ ಗುಂಪುಗಳಾದ ಬಿಟ್ಸೆಲೆಮ್ ಮತ್ತು ಫಿಸಿಶಿಯನ್ಸ್ ಫಾರ್ ಹ್ಯೂಮನ್ ರೈಟ್ಸ್ ಸಂಸ್ಥೆಗಳು, ಗಾಝಾದಲ್ಲಿ ಇಸ್ರೇಲ್‌ನ ಕ್ರಮಗಳು ನರಮೇಧಕ್ಕೆ ಕಾರಣವೆಂದು ಹೇಳುವ ಹೊಸ ವರದಿಯನ್ನು ಪ್ರಕಟಿಸಿವೆ.

ಈ ವರದಿಯು ಇಸ್ರೇಲ್‌ನ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ವಿವರಿಸಲು ‘ನರಮೇಧ’ ಎಂಬ ಪದವನ್ನು ಮೊದಲ ಬಾರಿಗೆ ಬಳಸಿದೆ ಎನ್ನಲಾಗುತ್ತಿ. ಇದಕ್ಕೂ ಮೊದಲು, ಅಮ್ನೆಸ್ಟಿ ಇಂಟರ್‌ನ್ಯಾಷನಲ್, ಹ್ಯೂಮನ್ ರೈಟ್ಸ್ ವಾಚ್ ಮತ್ತು ವಿಶ್ವಸಂಸ್ಥೆಯ ವಿಶೇಷ ಸಮಿತಿ ಸೇರಿದಂತೆ ಅನೇಕ ಪ್ರಮುಖ ಅಂತರರಾಷ್ಟ್ರೀಯ ಎನ್‌ಜಿಒಗಳು ಹಲವಾರು ತಿಂಗಳುಗಳಿಂದ ಈ ಪದವನ್ನು ಬಳಸುತ್ತಿವೆ.

ಈ ಬಗ್ಗೆ ಬಿಟ್ಸೆಲೆಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಗಾಝಾದ ಮೇಲಿನ ಇಸ್ರೇಲ್‌ನ ಯುದ್ಧವನ್ನು “ಗಾಝಾದ ಜನಸಂಖ್ಯೆಯನ್ನು ನಾಶಮಾಡುವ ಮತ್ತು ಪ್ಯಾಲೆಸ್ತೀನಿಯನ್ ಸಮಾಜವು ಅಲ್ಲಿ ಅಸ್ತಿತ್ವದಲ್ಲಿರಲು ಸಾಧ್ಯವಾಗದಷ್ಟು ದುರಂತದ ಜೀವನ ಪರಿಸ್ಥಿತಿಗಳನ್ನು ಹೇರುವ ಸ್ಪಷ್ಟ ಪ್ರಯತ್ನ” ಎಂದು ವಿವರಿಸಿದ್ದಾರೆ.

“ಇಸ್ರೇಲ್ ಆಡಳಿತದ ಜನಾಂಗೀಯ ಹತ್ಯಾಕಾಂಡದಲ್ಲಿ ಯಾವುದೇ ಪ್ಯಾಲೆಸ್ತೀನಿಯನ್ ಸುರಕ್ಷಿತವಾಗಿಲ್ಲ. ನರಮೇಧಕ್ಕೆ ಯಾವುದೇ ಸಮರ್ಥನೆ ಇಲ್ಲ, ಸ್ವರಕ್ಷಣೆ ಅಲ್ಲ, ಭದ್ರತೆ ಅಲ್ಲ, ಅಕ್ಟೋಬರ್ 7, 2023 ರಂದು ಹಮಾಸ್ ಮಾಡಿದ ಘೋರ ಕೃತ್ಯಗಳು ಇಸ್ರೇಲಿಗಳಲ್ಲಿ ಆಳವಾದ ಅಸ್ತಿತ್ವದ ಭಯವನ್ನು ಹುಟ್ಟುಹಾಕಿದವು. ಅಂತರರಾಷ್ಟ್ರೀಯ ಸಮುದಾಯವು ದೌರ್ಜನ್ಯಗಳನ್ನು ತಡೆಯುವ ಕರ್ತವ್ಯದಲ್ಲಿ ವಿಫಲವಾಗಿದೆ. ಆದರೆ, ಪಾಶ್ಚಿಮಾತ್ಯ ಜಗತ್ತಿನ ನಾಯಕರು, ವಿಶೇಷವಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್, ಇಸ್ರೇಲ್‌ನ ವಿನಾಶಕಾರಿ ಕೃತ್ಯಗಳಿಗೆ ಅನುವು ಮಾಡಿಕೊಡುವ ಬೆಂಬಲವನ್ನು ನೀಡುವ ಮೂಲಕ ಜವಾಬ್ದಾರಿಯನ್ನು ಹಂಚಿಕೊಂಡಿದ್ದಾರೆ. ಇಸ್ರೇಲ್ ಗಾಝಾದಲ್ಲಿ ನಡೆಸುತ್ತಿರುವ ನರಮೇಧವನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಕರ್ತವ್ಯವಾಗಿದೆ” ಎಂದು ಹೇಳಿದೆ.

“ಸಾಮಾಜಿಕ ಮಾಧ್ಯಮಗಳಲ್ಲಿ, ಬಾಂಬ್ ದಾಳಿಯಿಂದ ನಾಶವಾದ ಕಟ್ಟಡಗಳ ಅಡಿಯಲ್ಲಿ ಜನರು ಹೂತುಹೋಗಿರುವುದು, ಸ್ಥಳಾಂತರಗೊಂಡವರ ಶಿಬಿರಗಳು ಬೆಂಕಿಯಲ್ಲಿ ಬಿದ್ದಿರುವುದು, ಹಸಿವಿನಿಂದ ಬಳಲುತ್ತಿರುವ ಮಕ್ಕಳು, ನೀರಿಗಾಗಿ ಹತಾಶರಾಗಿರುವ ಜನರು, ಗಾಯಗೊಂಡವರಿಗೆ ಮತ್ತು ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದೆ ಉಳಿದಿರುವ ಆಸ್ಪತ್ರೆಗಳ ದೃಶ್ಯಗಳನ್ನು ನಾವು ನೋಡುತ್ತಿದ್ದೇವೆ. ಮಾನವ ಹಕ್ಕುಗಳ ಸಂಘಟನೆಯಾಗಿ ಸತ್ಯವನ್ನು ಹೇಳುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ; ನರಮೇಧ ಇಲ್ಲಿಯೇ ಮತ್ತು ಇದೀಗ ನಡೆಯುತ್ತಿದೆ. ಇದು ನಮ್ಮ ನರಮೇಧ, ನಾವು ಇದನ್ನು ನಿಲ್ಲಿಸಬೇಕಾಗಿದೆ” ಎಂದು ಸಂಸ್ಥೆ ಪ್ರತಿಪಾದಿಸಿದೆ.

ಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...