Homeಅಂತರಾಷ್ಟ್ರೀಯ'ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..'; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

‘ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..’; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

- Advertisement -
- Advertisement -

ಇಸ್ರೇಲ್‌ನ ಎರಡು ಪ್ರಮುಖ ಮಾನವ ಹಕ್ಕುಗಳ ಗುಂಪುಗಳಾದ ಬಿಟ್ಸೆಲೆಮ್ ಮತ್ತು ಫಿಸಿಶಿಯನ್ಸ್ ಫಾರ್ ಹ್ಯೂಮನ್ ರೈಟ್ಸ್ ಸಂಸ್ಥೆಗಳು, ಗಾಝಾದಲ್ಲಿ ಇಸ್ರೇಲ್‌ನ ಕ್ರಮಗಳು ನರಮೇಧಕ್ಕೆ ಕಾರಣವೆಂದು ಹೇಳುವ ಹೊಸ ವರದಿಯನ್ನು ಪ್ರಕಟಿಸಿವೆ.

ಈ ವರದಿಯು ಇಸ್ರೇಲ್‌ನ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ವಿವರಿಸಲು ‘ನರಮೇಧ’ ಎಂಬ ಪದವನ್ನು ಮೊದಲ ಬಾರಿಗೆ ಬಳಸಿದೆ ಎನ್ನಲಾಗುತ್ತಿ. ಇದಕ್ಕೂ ಮೊದಲು, ಅಮ್ನೆಸ್ಟಿ ಇಂಟರ್‌ನ್ಯಾಷನಲ್, ಹ್ಯೂಮನ್ ರೈಟ್ಸ್ ವಾಚ್ ಮತ್ತು ವಿಶ್ವಸಂಸ್ಥೆಯ ವಿಶೇಷ ಸಮಿತಿ ಸೇರಿದಂತೆ ಅನೇಕ ಪ್ರಮುಖ ಅಂತರರಾಷ್ಟ್ರೀಯ ಎನ್‌ಜಿಒಗಳು ಹಲವಾರು ತಿಂಗಳುಗಳಿಂದ ಈ ಪದವನ್ನು ಬಳಸುತ್ತಿವೆ.

ಈ ಬಗ್ಗೆ ಬಿಟ್ಸೆಲೆಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಗಾಝಾದ ಮೇಲಿನ ಇಸ್ರೇಲ್‌ನ ಯುದ್ಧವನ್ನು “ಗಾಝಾದ ಜನಸಂಖ್ಯೆಯನ್ನು ನಾಶಮಾಡುವ ಮತ್ತು ಪ್ಯಾಲೆಸ್ತೀನಿಯನ್ ಸಮಾಜವು ಅಲ್ಲಿ ಅಸ್ತಿತ್ವದಲ್ಲಿರಲು ಸಾಧ್ಯವಾಗದಷ್ಟು ದುರಂತದ ಜೀವನ ಪರಿಸ್ಥಿತಿಗಳನ್ನು ಹೇರುವ ಸ್ಪಷ್ಟ ಪ್ರಯತ್ನ” ಎಂದು ವಿವರಿಸಿದ್ದಾರೆ.

“ಇಸ್ರೇಲ್ ಆಡಳಿತದ ಜನಾಂಗೀಯ ಹತ್ಯಾಕಾಂಡದಲ್ಲಿ ಯಾವುದೇ ಪ್ಯಾಲೆಸ್ತೀನಿಯನ್ ಸುರಕ್ಷಿತವಾಗಿಲ್ಲ. ನರಮೇಧಕ್ಕೆ ಯಾವುದೇ ಸಮರ್ಥನೆ ಇಲ್ಲ, ಸ್ವರಕ್ಷಣೆ ಅಲ್ಲ, ಭದ್ರತೆ ಅಲ್ಲ, ಅಕ್ಟೋಬರ್ 7, 2023 ರಂದು ಹಮಾಸ್ ಮಾಡಿದ ಘೋರ ಕೃತ್ಯಗಳು ಇಸ್ರೇಲಿಗಳಲ್ಲಿ ಆಳವಾದ ಅಸ್ತಿತ್ವದ ಭಯವನ್ನು ಹುಟ್ಟುಹಾಕಿದವು. ಅಂತರರಾಷ್ಟ್ರೀಯ ಸಮುದಾಯವು ದೌರ್ಜನ್ಯಗಳನ್ನು ತಡೆಯುವ ಕರ್ತವ್ಯದಲ್ಲಿ ವಿಫಲವಾಗಿದೆ. ಆದರೆ, ಪಾಶ್ಚಿಮಾತ್ಯ ಜಗತ್ತಿನ ನಾಯಕರು, ವಿಶೇಷವಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್, ಇಸ್ರೇಲ್‌ನ ವಿನಾಶಕಾರಿ ಕೃತ್ಯಗಳಿಗೆ ಅನುವು ಮಾಡಿಕೊಡುವ ಬೆಂಬಲವನ್ನು ನೀಡುವ ಮೂಲಕ ಜವಾಬ್ದಾರಿಯನ್ನು ಹಂಚಿಕೊಂಡಿದ್ದಾರೆ. ಇಸ್ರೇಲ್ ಗಾಝಾದಲ್ಲಿ ನಡೆಸುತ್ತಿರುವ ನರಮೇಧವನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಕರ್ತವ್ಯವಾಗಿದೆ” ಎಂದು ಹೇಳಿದೆ.

“ಸಾಮಾಜಿಕ ಮಾಧ್ಯಮಗಳಲ್ಲಿ, ಬಾಂಬ್ ದಾಳಿಯಿಂದ ನಾಶವಾದ ಕಟ್ಟಡಗಳ ಅಡಿಯಲ್ಲಿ ಜನರು ಹೂತುಹೋಗಿರುವುದು, ಸ್ಥಳಾಂತರಗೊಂಡವರ ಶಿಬಿರಗಳು ಬೆಂಕಿಯಲ್ಲಿ ಬಿದ್ದಿರುವುದು, ಹಸಿವಿನಿಂದ ಬಳಲುತ್ತಿರುವ ಮಕ್ಕಳು, ನೀರಿಗಾಗಿ ಹತಾಶರಾಗಿರುವ ಜನರು, ಗಾಯಗೊಂಡವರಿಗೆ ಮತ್ತು ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದೆ ಉಳಿದಿರುವ ಆಸ್ಪತ್ರೆಗಳ ದೃಶ್ಯಗಳನ್ನು ನಾವು ನೋಡುತ್ತಿದ್ದೇವೆ. ಮಾನವ ಹಕ್ಕುಗಳ ಸಂಘಟನೆಯಾಗಿ ಸತ್ಯವನ್ನು ಹೇಳುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ; ನರಮೇಧ ಇಲ್ಲಿಯೇ ಮತ್ತು ಇದೀಗ ನಡೆಯುತ್ತಿದೆ. ಇದು ನಮ್ಮ ನರಮೇಧ, ನಾವು ಇದನ್ನು ನಿಲ್ಲಿಸಬೇಕಾಗಿದೆ” ಎಂದು ಸಂಸ್ಥೆ ಪ್ರತಿಪಾದಿಸಿದೆ.

ಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...