Homeಮುಖಪುಟಮಾನಹಾನಿ ಪ್ರಕರಣ: ಮೇಧಾ ಪಾಟ್ಕರ್ ಶಿಕ್ಷೆ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್

ಮಾನಹಾನಿ ಪ್ರಕರಣ: ಮೇಧಾ ಪಾಟ್ಕರ್ ಶಿಕ್ಷೆ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್

- Advertisement -
- Advertisement -

ಪ್ರಸ್ತುತ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ವಿನಯ್ ಕುಮಾರ್ ಸಕ್ಸೇನಾ ಅವರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ನರ್ಮದಾ ಬಚಾವೋ ಆಂದೋಲನದ ನಾಯಕಿ ಹಾಗೂ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಜು.29) ಎತ್ತಿಹಿಡಿದಿದೆ.

ಸೆಷನ್ಸ್ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಅಕ್ರಮವಾಗಿಲ್ಲ. ಇದರಲ್ಲಿ ಯಾವುದೇ ಹಸ್ತಕ್ಷೇಪದ ಅಗತ್ಯವಿಲ್ಲ. ಸಾಕ್ಷ್ಯಾಧಾರಗಳು ಮತ್ತು ಅನ್ವಯವಾಗುವ ಕಾನೂನನ್ನು ಸೂಕ್ತವಾಗಿ ಪರಿಗಣಿಸಿದ ನಂತರ ಶಿಕ್ಷೆಯ ಆದೇಶವನ್ನು ನೀಡಲಾಗಿದೆ. ಮೇಧಾ ಪಾಟ್ಕರ್ ಅವರ ಮೇಲ್ಮನವಿಯನ್ನು ವಜಾಗೊಳಿಸಲಾಗುತ್ತಿದೆ” ಎಂದು ನ್ಯಾಯಮೂರ್ತಿ ಶಾಲಿಂದರ್ ಕೌರ್ ಅವರ ಪೀಠ ಹೇಳಿದೆ.

ಆದಾಗ್ಯೂ, ಪಾಟ್ಕರ್ ಪ್ರತಿ ಮೂರು ತಿಂಗಳಿಗೊಮ್ಮೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ವಿಧಿಸಿದ್ದ ಷರತ್ತನ್ನು ನ್ಯಾಯಾಲಯ ಮಾರ್ಪಡಿಸಿದೆ. ಪಾಟ್ಕರ್ ಅವರು ದೈಹಿಕವಾಗಿ, ವಿಸಿ ಮೂಲಕ ಹಾಜರಾಗಲು ಅಥವಾ ವಕೀಲರ ಮೂಲಕ ಪ್ರತಿನಿಧಿಸಲು ಸ್ವಾತಂತ್ರ್ಯ ಹೊಂದಿರುತ್ತಾರೆ ಎಂದು ಹೈಕೋರ್ಟ್ ಹೇಳಿದೆ.

ಏಪ್ರಿಲ್ 2ರಂದು ಪ್ರಕರಣದಲ್ಲಿ ಶಿಕ್ಷೆ ವಿಧಿಸುವುದರ ವಿರುದ್ಧದ ಮೇಲ್ಮನವಿಯನ್ನು ವಜಾಗೊಳಿಸಿದ್ದ ಸೆಷನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಪಾಟ್ಕರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಅಲ್ಲದೆ, ಶಿಕ್ಷೆಯ ಕುರಿತು ವಾದ ಮಂಡಿಸಲು ಖುದ್ದಾಗಿ ಹಾಜರಾಗುವಂತೆ ನಿರ್ದೇಶಿಸಿ ಅದೇ ದಿನಾಂಕದಂದು ಹೊರಡಿಸಲಾದ ಆದೇಶವನ್ನೂ ಪಾಟ್ಕರ್ ಪ್ರಶ್ನಿಸಿದ್ದರು.

ಸಕ್ಸೇನಾ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ಸಾಬೀತುಪಡಿಸಲು ಹೆಚ್ಚುವರಿ ಸಾಕ್ಷಿಯನ್ನು ಪ್ರಸ್ತುತಪಡಿಸಲು ಮತ್ತು ವಿಚಾರಣೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದರ ವಿರುದ್ಧದ ಪಾಟ್ಕರ್ ಅರ್ಜಿಯನ್ನು ಕೂಡ ಹೈಕೋರ್ಟ್ ವಜಾಗೊಳಿಸಿದೆ.

ಏಪ್ರಿಲ್‌ನಲ್ಲಿ ನ್ಯಾಯಮೂರ್ತಿ ಕೌರ್ ಅವರು ಪಾಟ್ಕರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ್ದರು ಮತ್ತು 25,000 ರೂ.ಗಳ ವೈಯಕ್ತಿಕ ಬಾಂಡ್ ಸಲ್ಲಿಸುವ ಷರತ್ತು ವಿಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದ್ದರು.

1860ರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 ರ ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟ ಅಪರಾಧಕ್ಕಾಗಿ ಪಾಟ್ಕರ್ ಅವರನ್ನು ದೋಷಿ ಎಂದು ಘೋಷಿಸಲಾಗಿತ್ತು.

2001ರಲ್ಲಿ ಪಾಟ್ಕರ್ ವಿರುದ್ಧ ಸಕ್ಸೇನಾ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.

ನವೆಂಬರ್ 25, 2000ದಲ್ಲಿ “ದೇಶಭಕ್ತನ ನಿಜವಾದ ಮುಖ”ಎಂಬ ಶೀರ್ಷಿಕೆಯಡಿಯಲ್ಲಿ ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟನೆಯ ವಿರುದ್ಧ ಮಾನಹಾನಿ ಆರೋಪ ಮಾಡಿ ಸಕ್ಸೇನಾ ಪ್ರಕರಣ ದಾಖಲಿಸಿದ್ದರು.

“ಹವಾಲಾ ವಹಿವಾಟಿನಲ್ಲಿ ಮುಳುಗಿರುವ ವಿಕೆ ಸಕ್ಸೇನಾ, ಸ್ವತಃ ಮಾಲೆಗಾಂವ್‌ಗೆ ಬಂದು ಎನ್‌ಬಿಎಯನ್ನು ಹೊಗಳಿ ರೂ. 40,000ರ ಚೆಕ್‌ ಅನ್ನು ನೀಡಿದ್ದಾರೆ. ಲೋಕ ಸಮಿತಿಯು ತ್ವರಿತವಾಗಿ ರಸೀದಿ ಮತ್ತು ಪತ್ರವನ್ನು ಕಳುಹಿಸಿದೆ. ಅದು ಪ್ರಾಮಾಣಿಕತೆ ಮತ್ತು ಉತ್ತಮ ದಾಖಲೆ ಇಟ್ಟುಕೊಳ್ಳುವುದನ್ನು ತೋರಿಸುತ್ತದೆ. ಆದರೆ, ಚೆಕ್ ನಗದೀಕರಿಸಿಲ್ಲ, ಬೌನ್ಸ್ ಆಗಿದೆ. ವಿಚಾರಣೆಯಲ್ಲಿ, ಖಾತೆಯು ಅಸ್ತಿತ್ವದಲ್ಲಿಲ್ಲ ಎಂದು ಬ್ಯಾಂಕ್ ವರದಿ ಮಾಡಿದೆ” ಎಂದು ಪಾಟ್ಕರ್ ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದರು.

ಪಾಟ್ಕರ್ ಅವರ ಪ್ರಕಟಣೆ ದುರುದ್ದೇಶಪೂರಿತವಾಗಿದ್ದು, ಸಕ್ಸೇನಾ ಅವರ ಒಳ್ಳೆಯ ಹೆಸರನ್ನು ಹಾಳುಮಾಡುವ ಗುರಿಯನ್ನು ಹೊಂದಿತ್ತು. ಇದರಿಂದ ಅವರ ಸ್ಥಾನಮಾನ ಮತ್ತು ಕ್ರೆಡಿಟ್‌ಗೆ ಗಣನೀಯ ಹಾನಿಯುಂಟಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದರು.

“ಆರೋಪಿಯ ಹೇಳಿಕೆಗಳು ದೂರುದಾರರನ್ನು ಹೇಡಿ, ದೇಶಪ್ರೇಮಿ ಅಲ್ಲ ಮತ್ತು ಹವಾಲಾ ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದಿದೆ. ಇದು ಮಾನಹಾನಿಕರ ಮಾತ್ರವಲ್ಲದೆ, ದೂರದಾರರ ಬಗ್ಗೆ ನಕಾರಾತ್ಮಕ ಭಾವನೆ ಹುಟ್ಟಿಸುತ್ತದೆ”ಎಂದಿದ್ದರು.

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...