Homeಮುಖಪುಟಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

ಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

- Advertisement -
- Advertisement -

ಶನಿವಾರ ತಡರಾತ್ರಿ ಪೊಲೀಸರೊಂದಿಗೆ ಮನೆಗೆ ನುಗ್ಗಿದ 30 ರಿಂದ 40 ಜನರ ಗುಂಪು, ನಮ್ಮ ಭಾರತೀಯ ಪೌರತ್ವ ಸಾಬೀತು ಮಾಡುವಂತೆ ಒತ್ತಾಯಿಸಿದೆ ಎಂದು ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ಪುಣೆ ಮೂಲದ ನಿವೃತ್ತ ಹಿರಿಯ ಯೋಧನ ಕುಟುಂಬ ಆರೋಪಿಸಿದೆ.

ತಡರಾತ್ರಿ ಪುಣೆಯ ಚಂದನ್ ನಗರದ ನಮ್ಮ ಮನೆಗೆ ಏಕಾಏಕಿ ಮನೆಗ ನುಗ್ಗಿದ ಗುಂಪು, ನಮ್ಮ ಭಾರತೀಯ ಪೌರತ್ವದ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದೆ. ಅಲ್ಲದೆ, ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ನಿವೃತ್ತ ಯೋಧ ಹಕೀಮುದ್ದೀನ್ ಶೇಖ್ ಅವರ ಕುಟುಂಬ ಮಂಗಳವಾರ ಹೇಳಿಕೊಂಡಿದೆ.

“ಬೆಳಿಗ್ಗೆ 3 ಗಂಟೆಯವರೆಗೆ ಕಾಯುತ್ತೇವೆ . ಅದರೊಳಗೆ ನೀವು ಪೌರತ್ವ ಸಾಬೀತು ಮಾಡಲು ವಿಫಲರಾದರೆ, ನಿಮ್ಮನ್ನು ಬಾಂಗ್ಲಾದೇಶಿಯರು ಅಥವಾ ರೋಹಿಂಗ್ಯಾಗಳು ಎಂಬುವುದಾಗಿ ಘೋಷಿಸುತ್ತೇವೆ” ಎಂದು ನಮಗೆ ಬೆದರಿಕೆ ಹಾಕಲಾಗಿದೆ ಎಂದು ಯೋಧನ ಕುಟುಂಬ ತಿಳಿಸಿದೆ.

“ಅಕ್ರಮ ವಲಸಿಗರು ಎಂಬ ಶಂಕೆಯ ಮೇಲೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಮ್ಮ ತಂಡ ದಾಖಲೆಗಳನ್ನು ಕೇಳಿತ್ತು. ಅವರು ಭಾರತೀಯರು ಎಂದು ಖಚಿತವಾದ ಬಳಿಕ, ಅವರನ್ನು ಬಿಟ್ಟು ಕಳಿಸಿದ್ದೇವೆ. ಪೊಲೀಸರ ತಂಡದೊಂದಿಗೆ ಹೊರಗಿನವರು ಯಾರು ಇರಲಿಲ್ಲ. ಈ ಬಗ್ಗೆ ವಿಡಿಯೋ ಇದೆ” ಎಂದು ಡಿಸಿಪಿ ಸೋಮೈ ಮುಂಡೆ ಹೆಳಿದ್ದಾರೆ.

58 ವರ್ಷದ ನಿವೃತ್ತ ಯೋಧ ಹಕೀಮುದ್ದೀನ್ ಅವರು, 1984ರಿಂದ 2000ವರೆಗೆ ಭಾರತೀಯ ಸೇನೆಯ 269ನೇ ಇಂಜಿನಿಯರ್ ರೆಜೆಮೆಂಟ್‌ನಲ್ಲಿ 16 ವರ್ಷದ ಸೇವೆ ಸಲ್ಲಿಸಿದವರು. “ಕಾರ್ಗಿಲ್ ಯುದ್ದದಲ್ಲಿ ನಾನು ಈ ದೇಶಕ್ಕೋಸ್ಕರ ಹೋರಾಡಿದವನು. ನನ್ನ ಇಡೀ ಕುಟುಂಬ ಈ ದೇಶಕ್ಕೆ ಸಮರ್ಪಿತವಾಗಿದೆ. ನಮ್ಮನ್ನೇಕೆ ಪೌರತ್ವ ಸಾಬೀತುಪಡಿಸಲು ಕೇಳಿದ್ದು? ಎಂದು ಹಕೀಮುದ್ದೀನ್ ಪ್ರಶ್ನಿಸಿದ್ದಾರೆ.

ಹಕೀಮುದ್ದೀನ್ ಅವರ ಕುಟುಂಬಸ್ಥರು ಮೂಲತಃ ಉತ್ತರ ಪ್ರದೇಶದ ಪ್ರತಾಪ್‌ಘಡದವರು, 1960ರಿಂದ ಪುಣೆಯಲ್ಲಿ ವಾಸಿಸುತ್ತಿದ್ದಾರೆ. ಹಕೀಮುದ್ದೀನ್ 2013ರಲ್ಲಿ ತನ್ನ ಸ್ವಗ್ರಾಮಕ್ಕೆ ಹಿಂದಿರುಗಿದ್ದಾರೆ. ಅವರ ಸಹೋದರ,ಇತರ ಕುಟುಂಬಸ್ಥರು ಮತ್ತು ಸಂಬಂಧಿಕರು ಪುಣೆಯಲ್ಲೇ ಇದ್ದಾರೆ.

ಅಪರಿಚಿತ ಪುರುಷರ ಗುಂಪೊಂದು ಘೋಷಣೆಗಳನ್ನು ಕೂಗುತ್ತಾ ನಮ್ಮ ಮನೆ ಬಳಿಗೆ ಬಂತು. ಬಾಗಿಲಿಗೆ ಒದ್ದು ಏಕಾಏಕಿ ಮನೆಯೊಳಗೆ ನುಗ್ಗಿತು. ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿತು. ಸಿವಿಲ್ ಡ್ರೆಸ್‌ನಲ್ಲಿದ್ದ ಅಧಿಕಾರಿಯೊಬ್ಬರು ಅವರನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಪೊಲೀಸ್ ವ್ಯಾನ್ ರಸ್ತೆಯಲ್ಲಿ ಕಾಯುತ್ತಿತ್ತು” ಎಂದು ಹಕೀಮುದ್ದೀನ್ ಅವರ ಸಹೋದರ ಇರ್ಷಾದ್ ಶೇಖ್ ಹೇಳಿದ್ದಾರೆ.

ಹಕೀಮುದ್ದೀನ್ ಮಾತ್ರವಲ್ಲದೆ ನಮ್ಮ ಕುಟುಂಬದಲ್ಲಿ ಶೇಖ್ ನಯೀಮುದ್ದೀನ್ ಮತ್ತು ಶೇಖ್ ಮೊಹಮ್ಮದ್ ಸಲೀಂ ಎಂಬ ಇನ್ನಿಬ್ಬರು ನಿವೃತ್ತ ಯೋಧರಿದ್ದಾರೆ. ಅವರು 1965 ಮತ್ತು 1971ರ ಯುದ್ಧಗಳಲ್ಲಿ ದೇಶಕ್ಕಾಗಿ ಹೋರಾಡಿವದರು. “ಸೈನಿಕರ ಕುಟುಂಬಗಳನ್ನು ಹೀಗೆ ನಡೆಸಿಕೊಳ್ಳುತ್ತಾರಾ? ಎಂದು ಇರ್ಷಾದ್ ಪ್ರಶ್ನಿಸಿದ್ದಾರೆ. ಸಿಕ್ಕ ಸಿಕ್ಕವರು ಬಾಗಿಲು ತಟ್ಟಿದಾಗಲೆಲ್ಲಾ ನಮ್ಮ ಪೌರತ್ವ ಸಾಬೀತುಪಡಿಸಬೇಕಾದರೆ ನಾವು ಭಾರತೀಯರಾಗಿರುವುದರ ಅರ್ಥವೇನು? ಎಂದಿದ್ದಾರೆ.

ಮನೆಗೆ ನುಗ್ಗಿದ ಗುಂಪು ದಾಖಲೆಗಳನ್ನು ತೋರಿಸಿದರೂ ಅದನ್ನು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ. ನಾವು ಆಧಾರ್ ಕಾರ್ಡ್ ತೋರಿಸಿದರೂ, ಅದು ನಕಲಿ ಎಂದು ಗುಂಪು ಅಪಹಾಸ್ಯ ಮಾಡಿತು ಎಂದು ಯೋಧ ಹಕೀಮುದ್ದೀನ್ ಅವರ ಸೋದರಳಿಯರಾದ ನೌಶಾದ್ ಮತ್ತು ನವಾಬ್ ಶೇಖ್ ಹೇಳಿದ್ದಾರೆ. ಅವರು ಗೂಂಡಾಗಳಂತೆ ವರ್ತಿಸಿದ್ದಾರೆ ಎಂದು ನೌಶಾದ್ ಆರೋಪಿಸಿದ್ದು, ಅವರು ಬಾಗಿಲಿಗೆ ಒದ್ದರು, ಮಹಿಳೆಯರ ಮುಂದೆ ದಾಖಲೆ ತೋರಿಸುವಂತೆ ಅಬ್ಬರಿಸಿದರು ಎಂದು ಹೇಳಿದ್ದಾರೆ.

ಭಾನುವಾರ ಕೂಡ ನಮ್ಮನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಅಲ್ಲಿ ನಮ್ಮ ದಾಖಲೆಗಳನ್ನು ಪಡೆದು ಎರಡು ಗಂಟೆ ಕಾಯಿಸಿದರು. ನಂತರ ಇನ್‌ಸ್ಪೆಕ್ಟರ್ ಬರಲ್ಲ ಎಂದು ಕಳಿಸಿದರು. ನಮ್ಮ ದಾಖಲೆಗಳು ಈಗಲೂ ಅವರ ಬಳಿಯಿದೆ ಎಂದು ಮತ್ತೊಬ್ಬರು ಶಂಶಾದ್ ಶೇಖ್ ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದು, “ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಮಾಹಿತಿ ಪ್ರಕಾರ ಪೊಲೀಸರು ಬಲವಂತವಾಗಿ ಮನೆಗೆ ಪ್ರವೇಶಿಸಿಲ್ಲ” ಎಂದಿದ್ದಾರೆ.

Courtesy: timesofindia.indiatimes.com

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...