Homeಮುಖಪುಟಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

ಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

- Advertisement -
- Advertisement -

ಶನಿವಾರ ತಡರಾತ್ರಿ ಪೊಲೀಸರೊಂದಿಗೆ ಮನೆಗೆ ನುಗ್ಗಿದ 30 ರಿಂದ 40 ಜನರ ಗುಂಪು, ನಮ್ಮ ಭಾರತೀಯ ಪೌರತ್ವ ಸಾಬೀತು ಮಾಡುವಂತೆ ಒತ್ತಾಯಿಸಿದೆ ಎಂದು ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ಪುಣೆ ಮೂಲದ ನಿವೃತ್ತ ಹಿರಿಯ ಯೋಧನ ಕುಟುಂಬ ಆರೋಪಿಸಿದೆ.

ತಡರಾತ್ರಿ ಪುಣೆಯ ಚಂದನ್ ನಗರದ ನಮ್ಮ ಮನೆಗೆ ಏಕಾಏಕಿ ಮನೆಗ ನುಗ್ಗಿದ ಗುಂಪು, ನಮ್ಮ ಭಾರತೀಯ ಪೌರತ್ವದ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದೆ. ಅಲ್ಲದೆ, ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ನಿವೃತ್ತ ಯೋಧ ಹಕೀಮುದ್ದೀನ್ ಶೇಖ್ ಅವರ ಕುಟುಂಬ ಮಂಗಳವಾರ ಹೇಳಿಕೊಂಡಿದೆ.

“ಬೆಳಿಗ್ಗೆ 3 ಗಂಟೆಯವರೆಗೆ ಕಾಯುತ್ತೇವೆ . ಅದರೊಳಗೆ ನೀವು ಪೌರತ್ವ ಸಾಬೀತು ಮಾಡಲು ವಿಫಲರಾದರೆ, ನಿಮ್ಮನ್ನು ಬಾಂಗ್ಲಾದೇಶಿಯರು ಅಥವಾ ರೋಹಿಂಗ್ಯಾಗಳು ಎಂಬುವುದಾಗಿ ಘೋಷಿಸುತ್ತೇವೆ” ಎಂದು ನಮಗೆ ಬೆದರಿಕೆ ಹಾಕಲಾಗಿದೆ ಎಂದು ಯೋಧನ ಕುಟುಂಬ ತಿಳಿಸಿದೆ.

“ಅಕ್ರಮ ವಲಸಿಗರು ಎಂಬ ಶಂಕೆಯ ಮೇಲೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಮ್ಮ ತಂಡ ದಾಖಲೆಗಳನ್ನು ಕೇಳಿತ್ತು. ಅವರು ಭಾರತೀಯರು ಎಂದು ಖಚಿತವಾದ ಬಳಿಕ, ಅವರನ್ನು ಬಿಟ್ಟು ಕಳಿಸಿದ್ದೇವೆ. ಪೊಲೀಸರ ತಂಡದೊಂದಿಗೆ ಹೊರಗಿನವರು ಯಾರು ಇರಲಿಲ್ಲ. ಈ ಬಗ್ಗೆ ವಿಡಿಯೋ ಇದೆ” ಎಂದು ಡಿಸಿಪಿ ಸೋಮೈ ಮುಂಡೆ ಹೆಳಿದ್ದಾರೆ.

58 ವರ್ಷದ ನಿವೃತ್ತ ಯೋಧ ಹಕೀಮುದ್ದೀನ್ ಅವರು, 1984ರಿಂದ 2000ವರೆಗೆ ಭಾರತೀಯ ಸೇನೆಯ 269ನೇ ಇಂಜಿನಿಯರ್ ರೆಜೆಮೆಂಟ್‌ನಲ್ಲಿ 16 ವರ್ಷದ ಸೇವೆ ಸಲ್ಲಿಸಿದವರು. “ಕಾರ್ಗಿಲ್ ಯುದ್ದದಲ್ಲಿ ನಾನು ಈ ದೇಶಕ್ಕೋಸ್ಕರ ಹೋರಾಡಿದವನು. ನನ್ನ ಇಡೀ ಕುಟುಂಬ ಈ ದೇಶಕ್ಕೆ ಸಮರ್ಪಿತವಾಗಿದೆ. ನಮ್ಮನ್ನೇಕೆ ಪೌರತ್ವ ಸಾಬೀತುಪಡಿಸಲು ಕೇಳಿದ್ದು? ಎಂದು ಹಕೀಮುದ್ದೀನ್ ಪ್ರಶ್ನಿಸಿದ್ದಾರೆ.

ಹಕೀಮುದ್ದೀನ್ ಅವರ ಕುಟುಂಬಸ್ಥರು ಮೂಲತಃ ಉತ್ತರ ಪ್ರದೇಶದ ಪ್ರತಾಪ್‌ಘಡದವರು, 1960ರಿಂದ ಪುಣೆಯಲ್ಲಿ ವಾಸಿಸುತ್ತಿದ್ದಾರೆ. ಹಕೀಮುದ್ದೀನ್ 2013ರಲ್ಲಿ ತನ್ನ ಸ್ವಗ್ರಾಮಕ್ಕೆ ಹಿಂದಿರುಗಿದ್ದಾರೆ. ಅವರ ಸಹೋದರ,ಇತರ ಕುಟುಂಬಸ್ಥರು ಮತ್ತು ಸಂಬಂಧಿಕರು ಪುಣೆಯಲ್ಲೇ ಇದ್ದಾರೆ.

ಅಪರಿಚಿತ ಪುರುಷರ ಗುಂಪೊಂದು ಘೋಷಣೆಗಳನ್ನು ಕೂಗುತ್ತಾ ನಮ್ಮ ಮನೆ ಬಳಿಗೆ ಬಂತು. ಬಾಗಿಲಿಗೆ ಒದ್ದು ಏಕಾಏಕಿ ಮನೆಯೊಳಗೆ ನುಗ್ಗಿತು. ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿತು. ಸಿವಿಲ್ ಡ್ರೆಸ್‌ನಲ್ಲಿದ್ದ ಅಧಿಕಾರಿಯೊಬ್ಬರು ಅವರನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಪೊಲೀಸ್ ವ್ಯಾನ್ ರಸ್ತೆಯಲ್ಲಿ ಕಾಯುತ್ತಿತ್ತು” ಎಂದು ಹಕೀಮುದ್ದೀನ್ ಅವರ ಸಹೋದರ ಇರ್ಷಾದ್ ಶೇಖ್ ಹೇಳಿದ್ದಾರೆ.

ಹಕೀಮುದ್ದೀನ್ ಮಾತ್ರವಲ್ಲದೆ ನಮ್ಮ ಕುಟುಂಬದಲ್ಲಿ ಶೇಖ್ ನಯೀಮುದ್ದೀನ್ ಮತ್ತು ಶೇಖ್ ಮೊಹಮ್ಮದ್ ಸಲೀಂ ಎಂಬ ಇನ್ನಿಬ್ಬರು ನಿವೃತ್ತ ಯೋಧರಿದ್ದಾರೆ. ಅವರು 1965 ಮತ್ತು 1971ರ ಯುದ್ಧಗಳಲ್ಲಿ ದೇಶಕ್ಕಾಗಿ ಹೋರಾಡಿವದರು. “ಸೈನಿಕರ ಕುಟುಂಬಗಳನ್ನು ಹೀಗೆ ನಡೆಸಿಕೊಳ್ಳುತ್ತಾರಾ? ಎಂದು ಇರ್ಷಾದ್ ಪ್ರಶ್ನಿಸಿದ್ದಾರೆ. ಸಿಕ್ಕ ಸಿಕ್ಕವರು ಬಾಗಿಲು ತಟ್ಟಿದಾಗಲೆಲ್ಲಾ ನಮ್ಮ ಪೌರತ್ವ ಸಾಬೀತುಪಡಿಸಬೇಕಾದರೆ ನಾವು ಭಾರತೀಯರಾಗಿರುವುದರ ಅರ್ಥವೇನು? ಎಂದಿದ್ದಾರೆ.

ಮನೆಗೆ ನುಗ್ಗಿದ ಗುಂಪು ದಾಖಲೆಗಳನ್ನು ತೋರಿಸಿದರೂ ಅದನ್ನು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ. ನಾವು ಆಧಾರ್ ಕಾರ್ಡ್ ತೋರಿಸಿದರೂ, ಅದು ನಕಲಿ ಎಂದು ಗುಂಪು ಅಪಹಾಸ್ಯ ಮಾಡಿತು ಎಂದು ಯೋಧ ಹಕೀಮುದ್ದೀನ್ ಅವರ ಸೋದರಳಿಯರಾದ ನೌಶಾದ್ ಮತ್ತು ನವಾಬ್ ಶೇಖ್ ಹೇಳಿದ್ದಾರೆ. ಅವರು ಗೂಂಡಾಗಳಂತೆ ವರ್ತಿಸಿದ್ದಾರೆ ಎಂದು ನೌಶಾದ್ ಆರೋಪಿಸಿದ್ದು, ಅವರು ಬಾಗಿಲಿಗೆ ಒದ್ದರು, ಮಹಿಳೆಯರ ಮುಂದೆ ದಾಖಲೆ ತೋರಿಸುವಂತೆ ಅಬ್ಬರಿಸಿದರು ಎಂದು ಹೇಳಿದ್ದಾರೆ.

ಭಾನುವಾರ ಕೂಡ ನಮ್ಮನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಅಲ್ಲಿ ನಮ್ಮ ದಾಖಲೆಗಳನ್ನು ಪಡೆದು ಎರಡು ಗಂಟೆ ಕಾಯಿಸಿದರು. ನಂತರ ಇನ್‌ಸ್ಪೆಕ್ಟರ್ ಬರಲ್ಲ ಎಂದು ಕಳಿಸಿದರು. ನಮ್ಮ ದಾಖಲೆಗಳು ಈಗಲೂ ಅವರ ಬಳಿಯಿದೆ ಎಂದು ಮತ್ತೊಬ್ಬರು ಶಂಶಾದ್ ಶೇಖ್ ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದು, “ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಮಾಹಿತಿ ಪ್ರಕಾರ ಪೊಲೀಸರು ಬಲವಂತವಾಗಿ ಮನೆಗೆ ಪ್ರವೇಶಿಸಿಲ್ಲ” ಎಂದಿದ್ದಾರೆ.

Courtesy: timesofindia.indiatimes.com

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...