Homeಮುಖಪುಟಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ನಟ ಪ್ರಕಾಶ್ ರಾಜ್

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ನಟ ಪ್ರಕಾಶ್ ರಾಜ್

- Advertisement -
- Advertisement -

ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗೆ ಹೊಂದಿಕೊಂಡಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಬುಧವಾರ (ಜು.30) ಜಾರಿ ನಿರ್ದೇಶನಾಲಯ (ಇಡಿ) ಮುಂದೆ ವಿಚಾರಣೆ ಹಾಜರಾದರು.

ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ ಪ್ರಚಾರಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಸೈಬರಾಬಾದ್ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಹೆಸರಿಸಲಾದ 29 ಸೆಲೆಬ್ರಿಟಿಗಳಲ್ಲಿ ಪ್ರಕಾಶ್ ರಾಜ್ ಕೂಡ ಒಬ್ಬರು.

ನಟ, ನಟಿಯರು ಸೇರಿದಂತೆ ಪ್ರಭಾವಿಗಳು ಆನ್‌ಲೈನ್‌ ಜಾಹಿರಾತುಗಳ ಮೂಲಕ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

2016ರಲ್ಲಿ ಜಂಗ್ಲೀ ರಮ್ಮಿ ಎಂಬ ಗೇಮಿಂಗ್ ಆ್ಯಪ್‌ ಜಾಹಿರಾತು ಸಂಬಂಧ ಪ್ರಕಾಶ್ ರಾಜ್ ವಿರುದ್ದ ಪ್ರಕರಣ ದಾಖಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, “ಅಂತಹ ಆ್ಯಪ್‌ಗಳ ಜಾಹಿರಾತು ಸರಿಯಾದುದಲ್ಲ ಎಂದು ಅರಿತುಕೊಂಡ ನಂತರ, 2017ರಲ್ಲಿ ನಾನು ಅದರಿಂದ ಹಿಂದೆ ಸರಿದಿದ್ದೇನೆ. ಅಂದಿನಿಂದ ಯಾವುದೇ ಗೇಮಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳಿಗೆ ಸಂಬಂಧಿಸಿದಂತೆ ಸೆಲೆಬ್ರೆಟಿಗಳ ಹಣಕಾಸು ವಹಿವಾಟುಗಳು ಮತ್ತು ಡಿಜಿಟಲ್ ಟ್ರೇಲ್‌ಗಳನ್ನು ಇಡಿ ತನಿಖೆ ನಡೆಸುತ್ತಿದೆ. ಸಮನ್ಸ್ ಪಡೆದವರಲ್ಲಿ ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ನಿಧಿ ಅಗರ್ವಾಲ್, ಅನನ್ಯ ನಾಗಲ್ಲ ಮತ್ತು ದೂರದರ್ಶನ ನಿರೂಪಕಿ ಶ್ರೀಮುಖಿ ಸೇರಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 49ರೊಂದಿಗೆ ಓದಲಾದ ಸೆಕ್ಷನ್ 318(4) ಮತ್ತು 112, ತೆಲಂಗಾಣ ರಾಜ್ಯ ಗೇಮಿಂಗ್ ಕಾಯ್ದೆಯ ಸೆಕ್ಷನ್ 4 ಮತ್ತು ಐಟಿ ಕಾಯ್ದೆಯ ಸೆಕ್ಷನ್ 66-ಡಿ ಸೇರಿದಂತೆ ಬಹು ಕಾನೂನುಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಪ್ರಕಾಶ್ ರಾಜ್ ಸೇರಿದಂತೆ ಸೆಲೆಬ್ರೆಟಿಗಳ ವಿರುದ್ದ ತನಿಖೆ ಆರಂಭಗೊಂಡಿದೆ.

ಜುಲೈ 23ರ ಬುಧವಾರ ವಿಚಾರಣೆಗೆ ಹಾಜರಾಗಲು ನಟ ರಾಣಾ ದಗ್ಗುಬಾಟಿ ಅವರಿಗೆ ಇಡಿ ಸೂಚಿಸಿತ್ತು. ಆದರೆ, ಅವರು ಸಿನಿಮಾ ಕೆಲಸಗಳನ್ನು ಉಲ್ಲೇಖಿಸಿ ಹೆಚ್ಚಿನ ಸಮಯ ಕೋರಿದ್ದರು. ಹಾಗಾಗಿ, ಅವರಿಗೆ ಆಗಸ್ಟ್ 13ರಂದು ಹಾಜರಾಗುವಂತೆ ಇಡಿ ಸೂಚಿಸಿದೆ. ಅಂದೇ ಮಂಚು ಲಕ್ಷ್ಮಿ ಕೂಡ ವಿಚಾರಣೆಗೆ ಹಾಜರಾಗಲಿದ್ದಾರೆ. ಆಗಸ್ಟ್ 6ರಂದು ಹಾಜರಾಗಲು ವಿಜಯ್ ದೇವರಕೊಂಡ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...