Homeಮುಖಪುಟ"ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು" : ಕೇಂದ್ರಕ್ಕೆ ಸುಪ್ರೀಂ ತರಾಟೆ

“ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” : ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ತ್ರಿಪುರದ ಶಿಬಿರಗಳಲ್ಲಿ ಆಶ್ರಯ ಪಡೆದಿರುವ ಬ್ರೂ ನಿರಾಶ್ರಿತರಿಗೆ ಪಡಿತರವನ್ನು ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಇನ್ನು 15 ದಿನಗಳಲ್ಲಿ ಇದಕ್ಕೆ ಕಾರಣ ನೀಡುವಂತೆ ಆದೇಶಿಸಿದೆ.

“ಈ ಕುರಿತು ಎರಡು ವಾರದಲ್ಲಿ ವರದಿ ನೀಡಿ. ಈ ರೀತಿ ಮಾಡುವುದು ಸರಿಯಲ್ಲ. ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” ಎಂದು ಮುಖ್ಯ ನ್ಯಾಯಮೂರ್ತಿಗಳಾದ ಶರತ್‌ ಅರವಿಂದ್‌ ಬೊಬ್ಡೆ ನೇತೃತ್ವದ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ಹಲವು ಕಾರಣಗಳಿಗಾಗಿ ತಮ್ಮ ಸಂಬಂಧಿಕರನ್ನು ಕಳೆದುಕೊಂಡ 32,000 ಕ್ಕೂ ಹೆಚ್ಚು ಬ್ರೂ ನಿರಾಶ್ರಿತರು ತ್ರಿಪುರದ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಇವರೆಲ್ಲರೂ ಮಿಝೋರಾಂಗೆ ತೆರಳಬೇಕು ಎನ್ನುವುದು ಕೇಂದ್ರ ಸರ್ಕಾರದ ವಾದ.

ಇದಕ್ಕೆ ಪ್ರತಿಯಾಗಿ ಬ್ರೂ ನಿರಾಶ್ರಿತರು ಭಾರತ ದೇಶದಲ್ಲಿ ಎಲ್ಲಿ ಬೇಕಾದರೂ ವಾಸಿಸಲು ಸಂವಿಧಾನ ನಮಗೆ ಹಕ್ಕುಗಳನ್ನು ನೀಡಿದೆ. ನಾವು ಒಳ್ಳೆಯ ನಾಗರಿಕರಾಗಿದ್ದು ನಾವು ಇಲ್ಲಿ ಶಾಂತಿಯಿಂದ ನೆಲೆಸಿದ್ದೇವೆ. ದೇಶದ ನಾಗರಿಕರಿಗೆ ಸಿಗಬೇಕಾದ ಎಲ್ಲಾ ಹಕ್ಕುಗಳು ನಮಗೂ ಸಹ ದಕ್ಕಬೇಕು. ನಮ್ಮ ಸಮಸ್ಯೆಯನ್ನು ಬಗೆಹರಿಸದೇ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ನಮ್ಮನ್ನು ದಬ್ಬುವುದು ಸಾವಿನ ಬಾಯಿಗೆ ದೂಡಿದಂತೆಯೇ ಹೊರತು ಮತ್ತೇನಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ನಮಗೆ ರೇಷನ್ ನೀಡುವುದನ್ನು ನಿಲ್ಲಿಸಿದ್ದಾರೆ. ವೈದ್ಯಕೀಯ ಸೌಲಭ್ಯವೂ ಇಲ್ಲ. ಒಂದು ವಾರದಲ್ಲಿಯೇ ಸುಮಾರು 7 ಜನ ಹಸಿವಿನಿಂದ ಮಡಿದಿದ್ದಾರೆ. ನಾವು ಕೂಡ ಇಲ್ಲಿಯೇ ಸಾಯಲು ಸಿದ್ದರಿದ್ದೇವೆಯೇ ಹೊರತು ಮಿಝೋರಾಂಗೆ ತೆರಳಿ ಸಾಮಾಜಿಕ, ಧಾರ್ಮಿಕ ಕಿರುಕುಳಕ್ಕೆ ಒಳಗಾಗಲು ಸಿದ್ದರಿಲ್ಲ ಎಂದು ಬ್ರೂ ನಿರಾಶ್ರಿತರು ಪಟ್ಟು ಹಿಡಿದಿದ್ದಾರೆ.

ಬ್ರೂ ನಿರಾಶ್ರಿತರನ್ನು ವಾಪಸ್ ಕಳುಹಿಸಲು ಕೇಂದ್ರದ ಗಡುವು ಮುಗಿದ ಒಂದು ದಿನದ ನಂತರ ಡಿಸೆಂಬರ್‌ 1ರ ಭಾನುವಾರದಿಂದ ಪಡಿತರ ಸರಬರಾಜನ್ನು ನಿಲ್ಲಿಸಲಾಯಿತು. ಒಂಬತ್ತನೇ ಮತ್ತು ಅಂತಿಮ ಹಂತದ ವಾಪಸಾತಿ ಪಂತದಲ್ಲಿ 4,000 ಕ್ಕೂ ಹೆಚ್ಚು ಸ್ಥಳಾಂತರಗೊಂಡ ಕುಟುಂಬಗಳಲ್ಲಿ ಕೇವಲ 171 ಜನರನ್ನು ಮಾತ್ರ ಮಿಜೋರಾಂಗೆ ಕಳುಹಿಸಬಹುದಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮಿಜೋರಾಂಗೆ ವಾಪಸಾಗುವ ಬದಲು ತ್ರಿಪುರದಲ್ಲಿ ಪುನರ್ವಸತಿ ಕಲ್ಪಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳದ ಕಾರಣ 32,000 ಕ್ಕೂ ಹೆಚ್ಚು ಬ್ರೂ ಸ್ಥಳಾಂತರಗೊಂಡವರಿಗೆ ಪಡಿತರ ಸರಬರಾಜನ್ನು ಮತ್ತೆ ನಿಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ನಿಷೇದಾಜ್ಞೆ, ಲಾಠಿ ಚಾರ್ಜ್‌ ಮೂಲಕ ಅವರನ್ನು ಸ್ಥಳಾಂತರಿಸಲು ಸರ್ಕಾರ ಮೊದಲು ಪ್ರಯತ್ನಿಸಿತು. ಆದರೆ ಅದು ಸಫಲವಾಗಲಿಲ್ಲ. ನಂತರ ಸರ್ಕಾರ ಇಲ್ಲಿಂದ ಸ್ಥಳಾಂತರಗೊಂಡವರ ಖಾತೆಗೆ 25 ಸಾವಿರ ಹಣ ಹಾಕುವುದಾಗಿಯೂ ಭರವಸೆ ನೀಡಿತ್ತು. ಆದರೂ ಅವರು ಜಗ್ಗಲಿಲ್ಲ. ಹಾಗಾಗಿ ಸರ್ಕಾರ ಈಗ ಅವರಿಗೆ ಮೂಲಭೂತವಾಗಿ ಸಿಗಬೇಕಾದ ಆಹಾರ ಮತ್ತು ವೈದ್ಯಕೀಯ ಸೇವೆಯನ್ನು ನಿಲ್ಲಿಸಿದೆ. ಹಾಗಾಗಿಯೇ ಸುಪ್ರೀಂ ಕೋರ್ಟ್‌ ಸರ್ಕಾರವನ್ನು ಜಾಡಿಸಿದೆ. ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...