Homeಮುಖಪುಟಬಿಹಾರ ವಿಧಾನಸಭಾ ಚುನಾವಣೆಗೆ ಜೈಲಿನಿಂದಲೇ ಶಾರ್ಜೀಲ್ ಇಮಾಮ್ ಸ್ಪರ್ಧೆ: ವರದಿ

ಬಿಹಾರ ವಿಧಾನಸಭಾ ಚುನಾವಣೆಗೆ ಜೈಲಿನಿಂದಲೇ ಶಾರ್ಜೀಲ್ ಇಮಾಮ್ ಸ್ಪರ್ಧೆ: ವರದಿ

- Advertisement -
- Advertisement -

ಹೋರಾಟಗಾರ ಶಾರ್ಜೀಲ್ ಇಮಾಮ್ ಬಿಹಾರ ವಿಧಾನಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಅವರ ವಕೀಲ ಅಹ್ಮದ್ ಇಬ್ರಾಹಿಂ ತಿಳಿಸಿರುವುದಾಗಿ scroll.in ವರದಿ ಮಾಡಿದೆ.

ಶಾರ್ಜೀಲ್ ಕಿಶನ್‌ಗಂಜ್ ಜಿಲ್ಲೆಯ ಬಹದ್ದೂರ್‌ಗಂಜ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

2020ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಿ ಗೆದ್ದು, ನಂತರ ಬಿಹಾರದ ಪ್ರಸ್ತುತ ಪ್ರತಿಪಕ್ಷ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸೇರಿರುವ ಮೊಹಮ್ಮದ್ ಅನ್ಜರ್ ನಯೀಮಿ ಬಹದ್ದೂರ್‌ಗಂಜ್ ಕ್ಷೇತ್ರದ ಈಗಿನ ಶಾಸಕರಾಗಿದ್ದಾರೆ.

ಬಿಹಾರದಲ್ಲಿ ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ಶಾರ್ಜೀಲ್ ಇಮಾಮ್ ಐದು ವರ್ಷಕ್ಕೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ. ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಪ್ರಸ್ತಾವಿತ ರಾಷ್ಟ್ರೀಯ ನಾಗರಿಕರ ನೋಂದಣಿಯ( ಎನ್‌ಆರ್‌ಸಿ) ವಿರುದ್ಧದ ಪ್ರತಿಭಟನೆಗಳ ಸಂದರ್ಭ, 2019ರ ಡಿಸೆಂಬರ್‌ನಲ್ಲಿ ದೆಹಲಿಯಲ್ಲಿ ಮತ್ತು 2020ರ ಜನವರಿಯಲ್ಲಿ ಅಲಿಘರ್, ಅಸನ್ಸೋಲ್ ಮತ್ತು ಚಕ್‌ಬಂದ್‌ನಲ್ಲಿ ಮಾಡಿದ ಭಾಷಣಗಳಿಗೆ ಸಂಬಂಧಿಸಿದಂತೆ ಇಮಾನ್ ಅವರನ್ನು ಜನವರಿ 2020ರಲ್ಲಿ ಬಂಧಿಸಲಾಗಿದೆ.

ಪೊಲೀಸ್ ಆರೋಪಪಟ್ಟಿಯು, ಇಮಾಮ್ ಅವರ ಭಾಷಣಗಳು ಮುಸ್ಲಿಂ ಸಮುದಾಯದ ಜನರನ್ನು ಪ್ರಚೋದಿಸುವಂತಿದ್ದವು, ಇದು ಗಲಭೆಗಳಿಗೆ ಕಾರಣವಾಯಿತು ಎಂದು ಆರೋಪಿಸಿದೆ.

ಫೆಬ್ರವರಿ 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ ಘರ್ಷಣೆಗಳು ನಡೆದಿತ್ತು. ಈ ಹಿಂಸಾಚಾರದಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು ನೂರಾರು ಜನರು ಗಾಯಗೊಂಡಿದ್ದರು.

ಈ ಹಿಂಸಾಚಾರವು ನರೇಂದ್ರ ಮೋದಿ ಸರ್ಕಾರವನ್ನು ಕೆಡವುವ ದೊಡ್ಡ ಪಿತೂರಿಯ ಭಾಗವಾಗಿ ಮಾಡಲಾಗಿದೆ. ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದವರೇ ಈ ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಇಮಾಮ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಆರೋಪ ಹೊರಿಸಲಾಗಿದೆ. ದೇಶದ್ರೋಹ; ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸದ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು; ರಾಷ್ಟ್ರೀಯ ಏಕೀಕರಣಕ್ಕೆ ವಿರುದ್ದವಾದ ಪೂರ್ವಾಗ್ರಹ ಪೀಡಿತ ಹೇಳಿಕೆಗಳು ಮತ್ತು ವರ್ಗಗಳ ನಡುವೆ ದ್ವೇಷ ಅಥವಾ ಕೆಟ್ಟ ಭಾವನೆಯನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ವಿಭಾಗಗಳ ಅಡಿಯಲ್ಲಿಯೂ ಅವರ ವಿರುದ್ಧ ಆರೋಪ ಹೊರಿಸಲಾಗಿದೆ.

ಇಮಾಮ್‌ಗೆ ಕೆಲ ಪ್ರಕರಣಗಳಲ್ಲಿ ಜಾಮೀನು ದೊರೆತಿದೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಜಾಮೀನು ಸಿಗದ ಕಾರಣ ಅವರು ಜೈಲಿನಲ್ಲೇ ಉಳಿಯುವಂತಾಗಿದೆ. ಹಲವು ವರ್ಷಗಳು ಕಳೆದರೂ ಅವರ ವಿರುದ್ದ ವಿಚಾರಣೆ ಇನ್ನೂ ನ್ಯಾಯಾಲಯದಲ್ಲಿ ಆರಂಭಗೊಂಡಿಲ್ಲ. ಪದೇ ಪದೇ ಜಾಮೀನು ಕೋರಿ ಅರ್ಜಿ ಸಲ್ಲಿಸಿದರೂ ಮುಂದೂಡಿಕೆಯಾಗುತ್ತಿದೆ.

ಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...