Homeಮುಖಪುಟಮಧ್ಯಪ್ರದೇಶದಲ್ಲಿ ಪ್ರತಿದಿನ 7 ಎಸ್‌ಸಿ, ಎಸ್‌ಟಿ ಮಹಿಳೆಯರ ಮೇಲೆ ಅತ್ಯಾಚಾರ: ಸರ್ಕಾರದಿಂದ ಮಾಹಿತಿ

ಮಧ್ಯಪ್ರದೇಶದಲ್ಲಿ ಪ್ರತಿದಿನ 7 ಎಸ್‌ಸಿ, ಎಸ್‌ಟಿ ಮಹಿಳೆಯರ ಮೇಲೆ ಅತ್ಯಾಚಾರ: ಸರ್ಕಾರದಿಂದ ಮಾಹಿತಿ

- Advertisement -
- Advertisement -

ಮಧ್ಯಪ್ರದೇಶದಲ್ಲಿ 2022 ರಿಂದ 2024ರ ನಡುವೆ ಒಟ್ಟು 7,418 ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. 558 ಮಹಿಳೆಯರನ್ನು ಕೊಲೆ ಮಾಡಲಾಗಿದೆ ಮತ್ತು 338 ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ರಾಜ್ಯ ಸರ್ಕಾರ ವಿಧಾನಸಭೆಗೆ ಮಾಹಿತಿ ನೀಡಿದೆ.

ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸರ್ಕಾರ, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಪ್ರತಿದಿನ ಏಳು ಎಸ್‌ಸಿ/ಎಸ್‌ಟಿ ಮಹಿಳೆಯರು ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಹೇಳಿದೆ.

ಗಮನಾರ್ಹವಾಗಿ, ಮಧ್ಯ ಪ್ರದೇಶದ ಒಟ್ಟು ಜನಸಂಖ್ಯೆಯ ಶೇಕಡ 38ರಷ್ಟು ಈ ಎರಡು ತಳ ಸಮುದಾಯಗಳ ಜನರಿದ್ದಾರೆ. ಒಟ್ಟು ಜನ ಸಂಖ್ಯೆಯಲ್ಲಿ ಎಸ್‌ಸಿಗಳ ಪ್ರಮಾಣ ಶೇಕಡ 16 ಮತ್ತು ಎಸ್‌ಟಿಗಳ ಪ್ರಮಾಣ ಶೇಕಡ 20ರಷ್ಟಿದೆ.

2022-2024 ರ ನಡುವೆ ಮಧ್ಯಪ್ರದೇಶದಲ್ಲಿ ಸುಮಾರು 558 ಎಸ್‌ಸಿ/ಎಸ್‌ಟಿ ಮಹಿಳೆಯರು ಕೊಲೆಯಾಗಿದ್ದಾರೆ. ಈ ಪೈಕಿ 411 ಪರಿಶಿಷ್ಟ ಪಂಗಡದ ಮಹಿಳೆಯರು ಮತ್ತು 147 ಪರಿಶಿಷ್ಟ ಜಾತಿಯವರು ಎಂದು ಸರ್ಕಾರ ತಿಳಿಸಿದೆ.

ಅದೇ ಅವಧಿಯಲ್ಲಿ ಎರಡೂ ಸಮುದಾಯಗಳ ಮಹಿಳೆಯರ ಮೇಲೆ ನಡೆದ 338 ಸಾಮೂಹಿಕ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಸಂತ್ರಸ್ತ ಮಹಿಳೆಯರ ಪೈಕಿ 186 ಮಂದಿ ಎಸ್‌ಟಿ 152 ಜನರು ಎಸ್‌ಸಿ ಸಮುದಾಯಕ್ಕೆ ಸೇರಿದವರು.

ಇದೇ ಅವಧಿಯಲ್ಲಿ ಒಟ್ಟು 5,983 ಎಸ್‌ಸಿ/ಎಸ್‌ಟಿ ಮಹಿಳೆಯರು ಕಿರುಕುಳಕ್ಕೊಳಗಾಗಿದ್ದಾರೆ. ಅಂದರೆ ಪ್ರತಿದಿನ ಐದು ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 3,367 ಸಂತ್ರಸ್ತರು ಪರಿಶಿಷ್ಟ ಜಾತಿಯವರು ಮತ್ತು 2,616 ಮಹಿಳೆಯರು ಪರಿಶಿಷ್ಟ ಪಂಗಡದವರು.

ಪರಿಶಿಷ್ಟ ಪಂಗಡದ ಮಹಿಳೆಯರು ಅತ್ಯಾಚಾರ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯಂತಹ ಹಿಂಸಾತ್ಮಕ ಮತ್ತು ಲೈಂಗಿಕ ಅಪರಾಧಗಳಿಗೆ ಹೆಚ್ಚು ಗುರಿಯಾಗಿದ್ದಾರೆ ಎಂದು ಹೇಳಲಾಗಿದ್ದರೂ, ಪರಿಶಿಷ್ಟ ಜಾತಿಯ ಮಹಿಳೆಯರು ತುಲನಾತ್ಮಕವಾಗಿ ಹೆಚ್ಚು ಕೌಟುಂಬಿಕ ಹಿಂಸಾಚಾರ ಮತ್ತು ಕಿರುಕುಳದ ಅಪಾಯವನ್ನು ಹೊಂದಿದ್ದಾರೆ ಎಂದು ದತ್ತಾಂಶವು ಬಹಿರಂಗಪಡಿಸಿದೆ.

ಎಸ್‌ಸಿ/ಎಸ್‌ಟಿ ಮಹಿಳೆಯರ ಮೇಲಿನ 1,906 ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ 1,352 ಬಲಿಪಶುಗಳು ಪರಿಶಿಷ್ಟ ಜಾತಿಗೆ ಸೇರಿದವರು ಮತ್ತು 554 ಮಂದಿ ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಮೂರು ವರ್ಷಗಳ ಅವಧಿಯಲ್ಲಿ ಪ್ರತಿದಿನ ಸರಾಸರಿ ಇಬ್ಬರು ಎಸ್‌ಸಿ/ಎಸ್‌ಟಿ ಮಹಿಳೆಯರು ಕೌಟುಂಬಿಕ ದೌರ್ಜನ್ಯವನ್ನು ಎದುರಿಸಿದ್ದಾರೆ ಎಂದು ಸರ್ಕಾರದ ಅಂಕಿ ಅಂಶ ಹೇಳಿದೆ.

ಸದನದಲ್ಲಿ ಹಂಚಿಕೊಂಡ ಅಧಿಕೃತ ಅಂಕಿಅಂಶಗಳ ಪ್ರಕಾರ, ಮಧ್ಯಪ್ರದೇಶದಲ್ಲಿ ಮೂರು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿ ಮಹಿಳೆಯರ ವಿರುದ್ಧ ಒಟ್ಟು 44,978 ಅಪರಾಧ ಪ್ರಕರಣಗಳು ದಾಖಲಾಗಿವೆ, ಅಂದರೆ ದಿನಕ್ಕೆ ಸರಾಸರಿ 41 ಪ್ರಕರಣಗಳು ದಾಖಲಾಗಿವೆ.

ಈ ಆಘಾತಕಾರಿ ಅಂಕಿ ಅಂಶಗಳು ರಾಜ್ಯದ ತಳ ಸಮುದಾಯಗಳ ಮಹಿಳೆಯರ ಅಸಹಾಯಕತೆಯನ್ನು ಎತ್ತಿ ತೋರಸಿದೆ. ಅವರ ಸುರಕ್ಷತೆ ಮತ್ತು ನ್ಯಾಯ ಕೊಡಿಸಲು ಕ್ರಮಗಳ ತುರ್ತು ಅಗತ್ಯತೆಯನ್ನು ಒತ್ತಿ ಹೇಳಿದೆ.

ಬಿಹಾರ ವಿಧಾನಸಭಾ ಚುನಾವಣೆಗೆ ಜೈಲಿನಿಂದಲೇ ಶಾರ್ಜೀಲ್ ಇಮಾಮ್ ಸ್ಪರ್ಧೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...