Homeಅಂತರಾಷ್ಟ್ರೀಯಇರಾನ್ ಜೊತೆ ತೈಲ ವ್ಯಾಪಾರ: ಭಾರತದ ಆರು ಕಂಪನಿಗಳಿಗೆ ನಿರ್ಬಂಧ ವಿಧಿಸಿದ ಅಮೆರಿಕ

ಇರಾನ್ ಜೊತೆ ತೈಲ ವ್ಯಾಪಾರ: ಭಾರತದ ಆರು ಕಂಪನಿಗಳಿಗೆ ನಿರ್ಬಂಧ ವಿಧಿಸಿದ ಅಮೆರಿಕ

- Advertisement -
- Advertisement -

ಇರಾನ್ ಜೊತೆಗೆ ತೈಲ ಅಥವಾ ಪೆಟ್ರೋಕೆಮಿಕಲ್ ಉತ್ಪನ್ನಗಳ ಮಾರಾಟ ಮತ್ತು ಖರೀದಿ ಮಾಡುತ್ತಿರುವ ಕಾರಣ ನೀಡಿ ಭಾರತದ ಆರು ಕಂಪನಿಗಳ ಮೇಲೆ ಟ್ರಂಪ್ ಆಡಳಿತವು ನಿರ್ಬಂಧ ಹೇರಿದೆ ಎಂದು ವರದಿಯಾಗಿದೆ.

ಭಾರತದ ಕಂಪನಿಗಳು ಇರಾನ್ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧಗಳನ್ನು ಉಲ್ಲಂಘಿಸಿ ಪೆಟ್ರೋಲಿಯಂ ಉತ್ಪನ್ನಗಳ ಖರೀದಿ ಮತ್ತು ಮಾರುಕಟ್ಟೆ ವಹಿವಾಟು ನಡೆಸುತ್ತಿವೆ ಎಂದು ಅಮೆರಿಕ ವಿದೇಶಾಂಗ ಇಲಾಖೆ ಆರೋಪಿಸಿದೆ.

ಆಲ್ಕೆಮಿಕಲ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್, ಗ್ಲೋಬಲ್ ಇಂಡಸ್ಟ್ರಿಯಲ್ ಕೆಮಿಕಲ್ಸ್ ಲಿಮಿಟೆಡ್, ಜುಪಿಟರ್ ಡೈ ಕೆಮ್ ಪ್ರೈವೇಟ್ ಲಿಮಿಟೆಡ್, ರಾಮ್ನಿಕ್ಲಾಲ್ ಎಸ್ ಗೊಸಾಲಿಯಾ, ಪರ್ಸಿಸ್ಟೆಂಟ್ ಪೆಟ್ರೋಕೆಮ್ ಪ್ರೈವೇಟ್ ಲಿಮಿಟೆಡ್, ಕಾಂಚನ್ ಪಾಲಿಮರ್ಸ್ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ.

ಇರಾನ್ ಜೊತೆ ತೈಲ ವ್ಯವಹಾರ ಹೊಂದಿರುವ ವಿವಿಧ ದೇಶಗಳ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ. ಅವುಗಳಲ್ಲಿ ಭಾರತದ 6 ಕಂಪನಿಗಳು ಸೇರಿವೆ ಎಂದು ವರದಿಗಳು ಹೇಳಿವೆ.

ಇರಾನ್ ಮಧ್ಯ ಪ್ರಾಚ್ಯದಲ್ಲಿ ಸಂಘರ್ಷವನ್ನು ಉತ್ತೇಜಿಸುತ್ತಿದೆ. ತೈಲ ವ್ಯವಹಾರದ ಆದಾಯವನ್ನು ವಿವಿಧ ದೇಶಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸುತ್ತಿದೆ. ತನ್ನದೇ ಜನರನ್ನು ಧಮನಿಸುತ್ತಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಆರೋಪಿಸಿದೆ. ಹಾಗಾಗಿ, ಕ್ರಮ ಕೈಗೊಳ್ಳಲಾಗಿದೆ ಎಂದಿದೆ.

ಪ್ರಮುಖವಾಗಿ ಭಾರತ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಟರ್ಕಿ ಮತ್ತು ಇಂಡೋನೇಷ್ಯಾದ ಕಂಪನಿಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಟ್ರಂಪ್ ಅವರು ಹೇಳಿದಂತೆ, ಇರಾನ್ ಜೊತೆ ತೈಲ ವ್ಯವಹಾರ ಮಾಡಲು ಮುಂದಾಗುವ ದೇಶ, ಕಂಪನಿ ಮತ್ತು ವ್ಯಕ್ತಿಗಳು ಸ್ವಯಂ ಅಪಾಯ ತಂದುಕೊಳ್ಳಿಲಿದ್ದಾರೆ. ಅವರಿಗೆ ಅಮೆರಿಕದಲ್ಲಿ ವ್ಯವಹಾರ ನಡೆಸಲು ನಿರ್ಬಂಧ ವಿಧಿಸಲಾಗುವುದು ಎಂದು ಅಮೆರಿಕದ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿದೆ.

ಭಾರತದ ಪೆಟ್ರೋಕೆಮಿಕಲ್ ಟ್ರೇಡಿಂಗ್ ಕಂಪನಿ ಆಲ್ಕೆಮಿಕಲ್ ಸೊಲ್ಯೂಷನ್ಸ್ 2024ರ ಜನವರಿಯಿಂದ ಡಿಸೆಂಬರ್ ನಡುವೆ ಬಹು ಕಂಪನಿಗಳ ಮೂಲಕ 84 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಇರಾನಿನ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿರುವ ಆರೋಪವಿದೆ.

ರಾಮ್ನಿಕ್ಲಾಲ್ ಎಸ್ ಗೊಸಾಲಿಯಾ ಕಂಪನಿಯು 2024ರ ಜನವರಿ 2025ರ ಜನವರಿ ನಡುವೆ ಬಹು ಕಂಪನಿಗಳಿಂದ ಮೆಥನಾಲ್ ಮತ್ತು ಟೊಲುಯೀನ್ ಸೇರಿದಂತೆ 22 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಇರಾನಿನ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎನ್ನಲಾಗಿದೆ.

ಕಾಂಚನ್ ಪಾಲಿಮರ್ಸ್ ಕಂಪನಿಯು 2024ರ ಫೆಬ್ರವರಿಯಿಂದ ಜುಲೈ ನಡುವೆ ಯುಎಇ ಮೂಲದ ತನಾಯಿಸ್ ಟ್ರೇಡಿಂಗ್‌ನಿಂದ ಪಾಲಿಥಿಲೀನ್ ಸೇರಿದಂತೆ 1.3 ಮಿಲಿಯನ್ ಡಾಲರ್‌ಗಳಿಗೂ ಹೆಚ್ಚು ಮೌಲ್ಯದ ಇರಾನಿನ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎಂದು ಹೇಳಲಾಗಿದೆ.

ಜುಪಿಟರ್ ಡೈ ಕೆಮ್ ಪ್ರೈವೇಟ್ ಲಿಮಿಟೆಡ್ ಕಂಪನಿಯು 2024ರ ಜನವರಿಯಿಂದ 2025ರ ಜನವರಿ ನಡುವೆ ಬಹು ಕಂಪನಿಗಳಿಂದ 49 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಟೊಲ್ಯೂನ್ ಸೇರಿದಂತೆ ಇರಾನ್ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎನ್ನಲಾಗಿದೆ.

ಇನ್ನುಳಿದ ಎರಡು ಭಾರತೀಯ ಕಂಪನಿಗಳಾದ ಗ್ಲೋಬಲ್ ಇಂಡಸ್ಟ್ರಿಯಲ್ ಕೆಮಿಕಲ್ಸ್ ಲಿಮಿಟೆಡ್ ಮತ್ತು ಪರ್ಸಿಸ್ಟೆಂಟ್ ಪೆಟ್ರೋಕೆಮ್ ಪ್ರೈವೇಟ್ ಲಿಮಿಟೆಡ್ ಕಳೆದ ವರ್ಷದ ಬಹು ಕಂಪನಿಗಳೊಂದಿಗೆ ಕ್ರಮವಾಗಿ 51 ಮಿಲಿಯನ್ ಡಾಲರ್ ಮತ್ತು 14 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ವ್ಯವಹಾರ ನಡೆಸಿವೆ ಎಂದು ಹೇಳಲಾಗಿದೆ.

ಉದ್ದೇಶಪೂರ್ವಕವಾಗಿ ಇರಾನ್‌ನಿಂದ ಪೆಟ್ರೋಕೆಮಿಕಲ್ ಉತ್ಪನ್ನಗಳ ಖರೀದಿ, ಸ್ವಾಧೀನ, ಮಾರಾಟ, ಸಾಗಣೆ ಮತ್ತು ಮಾರುಕಟ್ಟೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಕಂಪನಿಗಳಿಗೆ ಅಮೆರಿಕ ನಿರ್ಬಂಧ ವಿಧಿಸಿದೆ ಎಂದು ವರದಿಗಳು ಹೇಳಿವೆ.

ಭಾರತಕ್ಕೆ ಶೇ.25 ಸುಂಕ ವಿಧಿಸಿದ ಟ್ರಂಪ್ ಆಡಳಿತ: ಆಗಸ್ಟ್ 1ರಿಂದ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...