Homeಕರ್ನಾಟಕಒಳಮೀಸಲಾತಿಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ: ಕರಿಯಪ್ಪ ಗುಡಿಮನಿ 

ಒಳಮೀಸಲಾತಿಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ: ಕರಿಯಪ್ಪ ಗುಡಿಮನಿ 

- Advertisement -
- Advertisement -

ಕಂಪ್ಲಿ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ, ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ ವರದಿಯನ್ನು ಕೂಡಲೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಆಗಸ್ಟ್ 11ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಮಾದಿಗ ಮುಖಂಡ ಕರಿಯಪ್ಪ ಗುಡಿಮನೆ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಈ ಅನಿರ್ದಿಷ್ಟಾವಧಿ ಅಹೋರಾತ್ರಿ ಸತ್ಯಾಗ್ರಹಕ್ಕೆ ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿಯ ಸದಸ್ಯ ವಸಂತರಾಜ ಕಹಳೆ ಮತ್ತು ದಲಿತ ಮುಖಂಡ ಅಂಬಣ್ಣ ಆರೋಲಿ ಅವರು ಕೂಡ ಕರೆ ನೀಡಿದ್ದು, ಸುಮಾರು ಮೂವತ್ತು ವರ್ಷಗಳ ಹೋರಾಟ ಅಂತಿಮ ಹಂತಕ್ಕೆ ತಲುಪಿದೆ ಎಂದು ಹೇಳಿದ್ದಾರೆ.

ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಒಳ ಮೀಸಲಾತಿ ಹೋರಾಟ ಅಂಗವಾಗಿ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೂವತ್ತು ವರ್ಷಗಳ ಹೋರಾಟದ ಫಲ, ಲಾಭ ಮತ್ತು ನಷ್ಟದ ಬಗ್ಗೆ ಚರ್ಚೆಗಳಿದ್ದು, ಭಾಗವಹಿಸಬೇಕು ಎಂದರು

ನಾಗಮೋಹನ್‌ದಾಸ್ ವರದಿ ಅನುಷ್ಠಾನಕ್ಕೆ ಒತ್ತಾಯ

ಒಳಮೀಸಲಾತಿ ವಿಚಾರವಾಗಿ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಅಂಬಣ್ಣ ಆರೋಲಿ ಆರೋಪಿಸಿದ್ದಾರೆ.  ಸುಪ್ರೀಂ ಕೋರ್ಟ್ ಆದೇಶದ ನಂತರವೂ ಸರ್ಕಾರಗಳು ಈ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಳ್ಳುತ್ತಿಲ್ಲ. ಒಳಮೀಸಲಾತಿ ವಿಚಾರದಲ್ಲಿ ಹಲವು ಸಂಘಟನೆಗಳ ಗೊಂದಲಗಳಿದ್ದರೂ, ನಾಗಮೋಹನ್‌ದಾಸ್ ವರದಿ ಸ್ಪಷ್ಟ ಮತ್ತು ನಿಖರವಾಗಿದೆ ಎಂದು ಅವರು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಒಳಮೀಸಲಾತಿ ಹೋರಾಟ ಇನ್ನೂ ಜೀವಂತವಾಗಿದೆ ಎಂದು ಅಂಬಣ್ಣ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಒಳಮೀಸಲಾತಿ ಜಾರಿಯಾಗಿದ್ದರೂ, ಕರ್ನಾಟಕದಲ್ಲಿ ರಾಜಕೀಯ ಪಕ್ಷಗಳ ಇಚ್ಛಾಶಕ್ತಿ ಕೊರತೆಯಿಂದ ಈ ಹೋರಾಟ ನನೆಗುದಿಗೆ ಬಿದ್ದಿದೆ ಎಂದು ಅಂಬಣ್ಣ ಆರೋಲಿ ದೂರಿದ್ದಾರೆ. ಈವರೆಗೂ ಯಾವುದೇ ರಾಜಕೀಯ ಪಕ್ಷಗಳು ಅಥವಾ ಮುಖಂಡರು ಈ ಹೋರಾಟಕ್ಕೆ ಬೆಂಬಲ ನೀಡಿಲ್ಲ ಎಂದೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪಂಜಾಬ್ ಸರ್ಕಾರ ಈ ವಿಷಯವನ್ನು ಮೊದಲು ಸುಪ್ರೀಂ ಕೋರ್ಟ್‌ಗೆ ಒಯ್ದಿತ್ತು. ಅದರ ನಂತರ ಕರ್ನಾಟಕದಿಂದ ನಾವು ಸಹ ಸುಪ್ರೀಂ ಕೋರ್ಟ್‌ಗೆ ಹೋಗಿದ್ದು, ನ್ಯಾಯಾಲಯದ ಆದೇಶದಿಂದಾಗಿ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಅವರು ವಿವರಿಸಿದರು. ಕಳೆದ ಚುನಾವಣೆಗಳ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೆ ಭರವಸೆ ನೀಡಿದ್ದವು. ಹಾಗಾಗಿ, ಜುಲೈ 30ರೊಳಗೆ ವರದಿಯನ್ನು ಪಡೆಯಬೇಕು ಮತ್ತು ಅಧಿವೇಶನದಲ್ಲಿ ಇದರ ಬಗ್ಗೆ ನಿರ್ಣಯ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಈ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾದಿಗ ಸಮುದಾಯದ ಮುಖಂಡರಾದ ಕರಿಯಪ್ಪ ಗುಡಿಮನೆ, ಹನುಮಂತಪ್ಪ ಮ್ಯಾಗಳಮನಿ, ಯಲ್ಲಪ್ಪ, ಮಲ್ಲಿಕಾರ್ಜುನ ಪುಜಾರ್, ಪ್ರಕಾಶ ಎಚ್. ಹೊಳೆಯಪ್ಪನವರ್, ದೇವರಾಜ್ ನಡುವಲಮನಿ, ಲಿಂಗಪ್ಪ ಮೈನಳ್ಳಿ, ಮುದಕಪ್ಪ ಹೊಸಮನಿ, ದೇವರಾಜ್ ಕಿನ್ನಾಳ, ಗುರುಮೂರ್ತಿ ನೆರೆಗಲ್, ಶಂಕರ ನೆರೆಗಲ್ ಮತ್ತು ನಾಗರಾಜ ನೆರೆಗಲ್ ಭಾಗವಹಿಸಿದ್ದರು.

ಹರಿಯಾಣದಲ್ಲಿ ಪ್ರದೇಶ ಸಮಿತಿ ಉಸ್ತುವಾರಿ ನಕ್ಸಲ್ ಸದಸ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...