Homeಕರ್ನಾಟಕ6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಎಲ್ಲ ಆರೋಪಿಗಳ ಖುಲಾಸೆ ಕುರಿತು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಇದು ನ್ಯಾಯದ ಘೋರ ವೈಫಲ್ಯವಾಗಿದೆ. ತನಿಖೆ ಮತ್ತು ಪ್ರಾಸಿಕ್ಯೂಷನ್‌ನ “ಉದ್ದೇಶಪೂರ್ವಕ ಕಳಪೆ”ಯ ಪ್ರತಿಫಲ ಎಂದು ಅವರು ಕರೆದಿದ್ದಾರೆ.

“ಈ ತೀರ್ಪು ಅತ್ಯಂತ ನಿರಾಶಾದಾಯಕವಾಗಿದೆ. ಈ  ಸ್ಫೋಟದಲ್ಲಿ ಆರು ಮಂದಿ ನಮಾಜಿಗಳನ್ನು ಹತ್ಯೆ ಮಾಡಲಾಗಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ. ಈ ಸಂತ್ರಸ್ತರನ್ನು ಅವರ ಧರ್ಮದ ಕಾರಣಕ್ಕಾಗಿ  ಗುರಿಯಾಗಿಸಲಾಗಿತ್ತು,” ಎಂದು ಓವೈಸಿ ಎಕ್ಸ್‌ನಲ್ಲಿ ಅಭಿಪ್ರಾಯಿಸಿದ್ದಾರೆ. 17 ವರ್ಷಗಳ ತನಿಖೆಯು ಪುರಾವೆಗಳ ಕೊರತೆಯಿಂದಾಗಿ ಆರೋಪಿಗಳ  ಖುಲಾಸೆಯಲ್ಲಿ ಹೇಗೆ ಕೊನೆಗೊಂಡಿತು ಎಂದು ಅವರು ಪ್ರಶ್ನಿಸಿದ್ದಾರೆ.

7/11 ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ಮುಸ್ಲಿಂ ಆರೋಪಿಗಳನ್ನು ದೋಷಮುಕ್ತಿಗೊಳಿಸಿದಾಗ ಈ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಗಳು ಮೇಲ್ಮನವಿಯನ್ನು ಸಲ್ಲಿಸಿದ್ದವು.  ಅದೇ ತುರ್ತನ್ನು ಈ ಮಾಲೆಗಾಂವ್ ಪ್ರಕರಣದ ತೀರ್ಪನ್ನು ಪ್ರಶ್ನಿಸಿ ಈ ಕೇಂದ್ರ ಮತ್ತು ಮಹಾರಾಷ್ಟ್ರ ಸರಕಾರಗಳು ಮೇಲ್ಮನವಿಯನ್ನು ಸಲ್ಲಿಸುತ್ತವೆಯೇ ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ.

“ಮುಂಬೈ ರೈಲು ಸ್ಫೋಟದ ಖುಲಾಸೆಗಳಲ್ಲಿ ತಕ್ಷಣ ತಡೆ ನೀಡಲು ಒತ್ತಾಯಿಸಿದಂತೆ ಮೋದಿ ಮತ್ತು ಫಡ್ನವೀಸ್ ಸರ್ಕಾರಗಳು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆಯೇ? ಮಹಾರಾಷ್ಟ್ರದ ‘ಜಾತ್ಯತೀತ’ ರಾಜಕೀಯ ಪಕ್ಷಗಳು ಈ ಸ್ಫೋಟದ ಕುರಿತು ಜವಾಬ್ದಾರಿ ಯಾರೆಂದು ಪ್ರಶ್ನಿಸುತ್ತವೆಯೇ? ಆ 6 ಜನರನ್ನು ಕೊಂದವರು ಯಾರು?” ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಕರಣದ ಸುತ್ತ ಇದ್ದ ಹಿಂದಿನ ವಿವಾದಗಳನ್ನು ಸಹ ಓವೈಸಿ ನೆನಪಿಸಿಕೊಂಡಿದ್ದಾರೆ. “ನೆನಪಿರಲಿ, 2016ರಲ್ಲಿ ಆಗಿನ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರೋಹಿಣಿ ಸಾಲಿಯನ್ ಅವರು ಎನ್‌ಐಎ ತಂಡವು ತಮಗೆ ಆರೋಪಿಗಳ ವಿರುದ್ಧ ‘ಮೃದು ಧೋರಣೆ’ ತೋರಿಸಲು ಹೇಳಿತ್ತು ಎಂದು ಹೇಳಿದ್ದರು. 2017ರಲ್ಲಿ ಎನ್‌ಐಎ ಸಾಧ್ವಿ ಪ್ರಜ್ಞಾ ಅವರನ್ನು ಖುಲಾಸೆಗೊಳಿಸಲು ಪ್ರಯತ್ನಿಸಿತ್ತು, ಇದೇ ಸಾಧ್ವಿ 2019ರಲ್ಲಿ ಬಿಜೆಪಿ ಸಂಸದೆಯಾದರು” ಎಂದು ಅವರು ಹೇಳಿದ್ದಾರೆ.

ಮಾಜಿ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಅವರ ತನಿಖೆಯ ಪಾತ್ರವನ್ನು ಸಹ ಅವರು ಸ್ಮರಿಸಿದ್ದಾರೆ. “ಕರ್ಕರೆ ಅವರು ಮಾಲೆಗಾಂವ್‌ನಲ್ಲಿನ ಸಂಚನ್ನು ಭೇದಿಸಿದ್ದರು ಮತ್ತು 26/11ರ ದಾಳಿಯ ಸಮಯದಲ್ಲಿ ಪಾಕಿಸ್ತಾನಿ ಭಯೋತ್ಪಾದಕರಿಂದ ದುರಂತವಾಗಿ ಹತ್ಯೆಯಾದರು” ಎಂದು ಅವರು ಹೇಳಿದ್ದಾರೆ.  “ಬಿಜೆಪಿ ಸಂಸದೆ (ಸಾಧ್ವಿ ಪ್ರಜ್ಞಾ) ತಾವು ಅವರಿಗೆ ಶಾಪ ಹಾಕಿದ್ದಾಗಿ ಮತ್ತು ಅವರ ಸಾವು ತಮ್ಮ ಶಾಪದ ಪರಿಣಾಮ ಎಂದು ಹೇಳಿದ್ದರು” ಎಂದು ಓವೈಸಿ ನೆನಸಿಪಿಸಿದ್ದಾರೆ.

ಈ ಸ್ಫೋಟದ ಹೊಣೆಗಾರಿಕೆಯ ಕುರಿತು ಕಳವಳ ವ್ಯಕ್ತಪಡಿಸಿದ ಓವೈಸಿ, “ಎನ್‌ಐಎ ಮತ್ತು ಎಟಿಎಸ್ ಅಧಿಕಾರಿಗಳನ್ನು ಅವರ ದೋಷಪೂರಿತ ತನಿಖೆಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ನಮಗೆಲ್ಲಾ ಉತ್ತರ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಇದು ‘ಭಯೋತ್ಪಾದನೆಯ ವಿರುದ್ಧ ಕಠಿಣ’ ಎಂದು ಹೇಳಿಕೊಳ್ಳುವ ಮೋದಿ ಸರ್ಕಾರ” ಎಂದು ವ್ಯಂಗ್ಯವಾಡಿದ್ದಾರೆ.

“ಈ ಬಿಜೆಪಿ ಸರ್ಕಾರ ಭಯೋತ್ಪಾದನೆಯ ಆರೋಪಿಯನ್ನು ಸಂಸದೆಯನ್ನಾಗಿ ಮಾಡಿದೆ ಎಂಬುದನ್ನು ಜಗತ್ತು ನೆನಪಿಟ್ಟುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯವು ಗುರುವಾರ 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದೆ.

“ಸ್ಫೋಟವು ನ್ಯಾಯಾಲಯದಿಂದ ಸಾಬೀತಾಗಿದೆ. ನಾವು ಈ ಖುಲಾಸೆಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ. ನಾವು ಸ್ವತಂತ್ರವಾಗಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಮಾಲೆಗಾಂವ್ ಸ್ಫೋಟದ ಸಂತ್ರಸ್ತರ ಕುಟುಂಬಗಳ ಪರ ವಕೀಲ ಅಡ್ವೊಕೇಟ್ ಶಾಹಿದ್ ನದೀಮ್ ಎಎನ್‌ಐಗೆ ತಿಳಿಸಿದ್ದಾರೆ.

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...