Homeಕರ್ನಾಟಕ6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಎಲ್ಲ ಆರೋಪಿಗಳ ಖುಲಾಸೆ ಕುರಿತು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಇದು ನ್ಯಾಯದ ಘೋರ ವೈಫಲ್ಯವಾಗಿದೆ. ತನಿಖೆ ಮತ್ತು ಪ್ರಾಸಿಕ್ಯೂಷನ್‌ನ “ಉದ್ದೇಶಪೂರ್ವಕ ಕಳಪೆ”ಯ ಪ್ರತಿಫಲ ಎಂದು ಅವರು ಕರೆದಿದ್ದಾರೆ.

“ಈ ತೀರ್ಪು ಅತ್ಯಂತ ನಿರಾಶಾದಾಯಕವಾಗಿದೆ. ಈ  ಸ್ಫೋಟದಲ್ಲಿ ಆರು ಮಂದಿ ನಮಾಜಿಗಳನ್ನು ಹತ್ಯೆ ಮಾಡಲಾಗಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ. ಈ ಸಂತ್ರಸ್ತರನ್ನು ಅವರ ಧರ್ಮದ ಕಾರಣಕ್ಕಾಗಿ  ಗುರಿಯಾಗಿಸಲಾಗಿತ್ತು,” ಎಂದು ಓವೈಸಿ ಎಕ್ಸ್‌ನಲ್ಲಿ ಅಭಿಪ್ರಾಯಿಸಿದ್ದಾರೆ. 17 ವರ್ಷಗಳ ತನಿಖೆಯು ಪುರಾವೆಗಳ ಕೊರತೆಯಿಂದಾಗಿ ಆರೋಪಿಗಳ  ಖುಲಾಸೆಯಲ್ಲಿ ಹೇಗೆ ಕೊನೆಗೊಂಡಿತು ಎಂದು ಅವರು ಪ್ರಶ್ನಿಸಿದ್ದಾರೆ.

7/11 ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ಮುಸ್ಲಿಂ ಆರೋಪಿಗಳನ್ನು ದೋಷಮುಕ್ತಿಗೊಳಿಸಿದಾಗ ಈ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಗಳು ಮೇಲ್ಮನವಿಯನ್ನು ಸಲ್ಲಿಸಿದ್ದವು.  ಅದೇ ತುರ್ತನ್ನು ಈ ಮಾಲೆಗಾಂವ್ ಪ್ರಕರಣದ ತೀರ್ಪನ್ನು ಪ್ರಶ್ನಿಸಿ ಈ ಕೇಂದ್ರ ಮತ್ತು ಮಹಾರಾಷ್ಟ್ರ ಸರಕಾರಗಳು ಮೇಲ್ಮನವಿಯನ್ನು ಸಲ್ಲಿಸುತ್ತವೆಯೇ ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ.

“ಮುಂಬೈ ರೈಲು ಸ್ಫೋಟದ ಖುಲಾಸೆಗಳಲ್ಲಿ ತಕ್ಷಣ ತಡೆ ನೀಡಲು ಒತ್ತಾಯಿಸಿದಂತೆ ಮೋದಿ ಮತ್ತು ಫಡ್ನವೀಸ್ ಸರ್ಕಾರಗಳು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆಯೇ? ಮಹಾರಾಷ್ಟ್ರದ ‘ಜಾತ್ಯತೀತ’ ರಾಜಕೀಯ ಪಕ್ಷಗಳು ಈ ಸ್ಫೋಟದ ಕುರಿತು ಜವಾಬ್ದಾರಿ ಯಾರೆಂದು ಪ್ರಶ್ನಿಸುತ್ತವೆಯೇ? ಆ 6 ಜನರನ್ನು ಕೊಂದವರು ಯಾರು?” ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಕರಣದ ಸುತ್ತ ಇದ್ದ ಹಿಂದಿನ ವಿವಾದಗಳನ್ನು ಸಹ ಓವೈಸಿ ನೆನಪಿಸಿಕೊಂಡಿದ್ದಾರೆ. “ನೆನಪಿರಲಿ, 2016ರಲ್ಲಿ ಆಗಿನ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರೋಹಿಣಿ ಸಾಲಿಯನ್ ಅವರು ಎನ್‌ಐಎ ತಂಡವು ತಮಗೆ ಆರೋಪಿಗಳ ವಿರುದ್ಧ ‘ಮೃದು ಧೋರಣೆ’ ತೋರಿಸಲು ಹೇಳಿತ್ತು ಎಂದು ಹೇಳಿದ್ದರು. 2017ರಲ್ಲಿ ಎನ್‌ಐಎ ಸಾಧ್ವಿ ಪ್ರಜ್ಞಾ ಅವರನ್ನು ಖುಲಾಸೆಗೊಳಿಸಲು ಪ್ರಯತ್ನಿಸಿತ್ತು, ಇದೇ ಸಾಧ್ವಿ 2019ರಲ್ಲಿ ಬಿಜೆಪಿ ಸಂಸದೆಯಾದರು” ಎಂದು ಅವರು ಹೇಳಿದ್ದಾರೆ.

ಮಾಜಿ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಅವರ ತನಿಖೆಯ ಪಾತ್ರವನ್ನು ಸಹ ಅವರು ಸ್ಮರಿಸಿದ್ದಾರೆ. “ಕರ್ಕರೆ ಅವರು ಮಾಲೆಗಾಂವ್‌ನಲ್ಲಿನ ಸಂಚನ್ನು ಭೇದಿಸಿದ್ದರು ಮತ್ತು 26/11ರ ದಾಳಿಯ ಸಮಯದಲ್ಲಿ ಪಾಕಿಸ್ತಾನಿ ಭಯೋತ್ಪಾದಕರಿಂದ ದುರಂತವಾಗಿ ಹತ್ಯೆಯಾದರು” ಎಂದು ಅವರು ಹೇಳಿದ್ದಾರೆ.  “ಬಿಜೆಪಿ ಸಂಸದೆ (ಸಾಧ್ವಿ ಪ್ರಜ್ಞಾ) ತಾವು ಅವರಿಗೆ ಶಾಪ ಹಾಕಿದ್ದಾಗಿ ಮತ್ತು ಅವರ ಸಾವು ತಮ್ಮ ಶಾಪದ ಪರಿಣಾಮ ಎಂದು ಹೇಳಿದ್ದರು” ಎಂದು ಓವೈಸಿ ನೆನಸಿಪಿಸಿದ್ದಾರೆ.

ಈ ಸ್ಫೋಟದ ಹೊಣೆಗಾರಿಕೆಯ ಕುರಿತು ಕಳವಳ ವ್ಯಕ್ತಪಡಿಸಿದ ಓವೈಸಿ, “ಎನ್‌ಐಎ ಮತ್ತು ಎಟಿಎಸ್ ಅಧಿಕಾರಿಗಳನ್ನು ಅವರ ದೋಷಪೂರಿತ ತನಿಖೆಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ನಮಗೆಲ್ಲಾ ಉತ್ತರ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಇದು ‘ಭಯೋತ್ಪಾದನೆಯ ವಿರುದ್ಧ ಕಠಿಣ’ ಎಂದು ಹೇಳಿಕೊಳ್ಳುವ ಮೋದಿ ಸರ್ಕಾರ” ಎಂದು ವ್ಯಂಗ್ಯವಾಡಿದ್ದಾರೆ.

“ಈ ಬಿಜೆಪಿ ಸರ್ಕಾರ ಭಯೋತ್ಪಾದನೆಯ ಆರೋಪಿಯನ್ನು ಸಂಸದೆಯನ್ನಾಗಿ ಮಾಡಿದೆ ಎಂಬುದನ್ನು ಜಗತ್ತು ನೆನಪಿಟ್ಟುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯವು ಗುರುವಾರ 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದೆ.

“ಸ್ಫೋಟವು ನ್ಯಾಯಾಲಯದಿಂದ ಸಾಬೀತಾಗಿದೆ. ನಾವು ಈ ಖುಲಾಸೆಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ. ನಾವು ಸ್ವತಂತ್ರವಾಗಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಮಾಲೆಗಾಂವ್ ಸ್ಫೋಟದ ಸಂತ್ರಸ್ತರ ಕುಟುಂಬಗಳ ಪರ ವಕೀಲ ಅಡ್ವೊಕೇಟ್ ಶಾಹಿದ್ ನದೀಮ್ ಎಎನ್‌ಐಗೆ ತಿಳಿಸಿದ್ದಾರೆ.

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...