Homeಕರ್ನಾಟಕಕಲಬುರಗಿ ಕೇಂದ್ರೀಯ ವಿವಿಯಲ್ಲಿ ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ: ಲೈಂಗಿಕ ದೌರ್ಜನ್ಯದ ಆರೋಪ

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ: ಲೈಂಗಿಕ ದೌರ್ಜನ್ಯದ ಆರೋಪ

- Advertisement -
- Advertisement -

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (CUK) ಭೂವಿಜ್ಞಾನ ಕೋರ್ಸ್‌ನ ಐದನೇ ಸೆಮಿಸ್ಟರ್ ವಿದ್ಯಾರ್ಥಿನಿ ಜಯಶ್ರೀ (22) ಅವರ ಆತ್ಮಹತ್ಯೆ ಪ್ರಕರಣವು ಗಂಭೀರ ಸ್ವರೂಪ ಪಡೆದುಕೊಂಡಿದೆ. ಒಡಿಶಾ ಮೂಲದ ದಲಿತ ವಿದ್ಯಾರ್ಥಿನಿಯಾದ ಜಯಶ್ರೀ ಅವರು ಬುಧವಾರ ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕೇವಲ ಒಂದು ವೈಯಕ್ತಿಕ ದುರಂತವಲ್ಲ, ಬದಲಾಗಿ ವಿಶ್ವವಿದ್ಯಾಲಯದ ಆಡಳಿತದಲ್ಲಿ ನಡೆಯುತ್ತಿರುವ ದೌರ್ಜನ್ಯ ಮತ್ತು ವ್ಯವಸ್ಥಿತ ನಿರ್ಲಕ್ಷ್ಯದ ಪರಿಣಾಮ ಎಂದು ವಿದ್ಯಾರ್ಥಿ ಸಮುದಾಯ ಹಾಗೂ ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಘಟನೆಯ ಸುತ್ತ ಹಲವಾರು ಅನುಮಾನಗಳು: ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ.

ಆರೋಪಿತರಿಗೆ ಆಡಳಿತದ ಕುಮ್ಮಕ್ಕು: ವಿಶ್ವವಿದ್ಯಾಲಯದಲ್ಲಿ ಈ ಹಿಂದೆ ಲೈಂಗಿಕ ಕಿರುಕುಳದ ಪ್ರಕರಣಗಳು ನಡೆದಿದ್ದರೂ, ಆಡಳಿತ ಮಂಡಳಿ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಸಂಧಾನದ ಮೂಲಕ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿದೆ ಎಂದು ವಿದ್ಯಾರ್ಥಿಗಳು ಆಪಾದಿಸಿದ್ದಾರೆ. ಕ್ಯಾಂಟೀನ್ ನಡೆಸುತ್ತಿದ್ದ ವ್ಯಕ್ತಿಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಾಗ, ಆತನ ಸಹೋದರನಾದ ಪ್ರಾಧ್ಯಾಪಕ ಮಲ್ಲಿಕಾರ್ಜುನ ಹೂಗಾರ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಸಂಧಾನ ನಡೆಸಿದೆ ಎನ್ನಲಾಗಿದೆ.

ಸಾವಿಗೂ ಮುನ್ನ ದೂರು: ಜಯಶ್ರೀ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಕೆಲವೇ ದಿನಗಳ ಮೊದಲು ವಿಶ್ವವಿದ್ಯಾಲಯದ ಡೀನ್ ಆಗಿರುವ ಪ್ರೊ. ಬಸವರಾಜ ಕುಬಕಡ್ಡಿ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಆದರೆ ಆ ದೂರಿನ ಕುರಿತು ಯಾವುದೇ ಕ್ರಮ ಕೈಗೊಂಡಿರುವ ಬಗ್ಗೆ ಮಾಹಿತಿ ಇಲ್ಲ.

ನಿರ್ಲಕ್ಷ್ಯದ ಇ-ಮೇಲ್ ದೂರು: ಈ ಹಿಂದೆ, ತೆಲಂಗಾಣ ಮೂಲದ ಬಿಜೆಪಿ ನಾಯಕ ಮತ್ತು ಕ್ಯಾಂಟೀನ್ ಗುತ್ತಿಗೆದಾರನ ವಿರುದ್ಧ ದಲಿತ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೇರವಾಗಿ ಡೀನ್ ಅವರಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಳು. ಆದರೂ, ಆ ದೂರಿನ ಬಗ್ಗೆಯೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಡಾ. ಪಿ. ನಂದಕುಮಾರ್ ದೂರಿದ್ದಾರೆ.

ಪೊಲೀಸರ ಆಗಮನಕ್ಕೂ ಮುನ್ನ ಬಾಗಿಲು ಮುರಿಯುವ ಯತ್ನ: ಜಯಶ್ರೀ ಅವರು ನೇಣಿಗೆ ಶರಣಾದ ದೃಶ್ಯವನ್ನು ಕಿಟಕಿಯಿಂದ ನೋಡಬಹುದಾಗಿತ್ತು. ಆದರೆ ಪೊಲೀಸರು ಸ್ಥಳಕ್ಕೆ ಬರುವ ಮುನ್ನವೇ ಕೆಲವು ಪ್ರಾಧ್ಯಾಪಕರು ಉಪಕುಲಪತಿಗಳ ಅನುಪಸ್ಥಿತಿಯಲ್ಲೇ ಕೊಠಡಿಯ ಬಾಗಿಲು ಮುರಿಯಲು ಪ್ರಯತ್ನಿಸಿರುವುದು ಅನುಮಾನಕ್ಕೆ ಮತ್ತಷ್ಟು ಇಂಬು ಕೊಟ್ಟಿದೆ. ಸಾಕ್ಷ್ಯ ನಾಶ ಮಾಡುವ ಪ್ರಯತ್ನ ನಡೆದಿದೆಯೇ ಎಂಬ ಪ್ರಶ್ನೆಯೂ ಈಗ ಎದುರಾಗಿದೆ.

ಸಾಮಾಜಿಕ ಕಾರ್ಯಕರ್ತರ ಆಕ್ರೋಶ: ಈ ಪ್ರಕರಣದ ಕುರಿತು ಸಾಮಾಜಿಕ ಕಾರ್ಯಕರ್ತರಾದ ವಿಕಾಸ್ ಆರ್. ಮೌರ್ಯ ಮತ್ತು ಹುಲಿಕುಂಟೆ ಮೂರ್ತಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸೌಜನ್ಯ ಪರ ದನಿ ಎತ್ತಿದ ಕರ್ನಾಟಕ ಜಯಶ್ರೀ ವಿಷಯದಲ್ಲಿ ಮೌನವಾಗಿದೆ. ಯಾಕೆ? ಜಾತಿ ತಿಳಿಯಿತೆ?” ಎಂದು ವಿಕಾಸ್ ಮೌರ್ಯ ಅವರು ನೇರವಾಗಿ ಪ್ರಶ್ನಿಸಿದ್ದಾರೆ.

“ಇದು ಮತ್ತೊಂದು ಸಾಂಸ್ಥಿಕ ಹತ್ಯೆ… ದಲಿತರ ಬದುಕುಗಳು ಹೀಗೆ ಹುಳ ಉಪ್ಪಟೆಗಳ ಹಾಗೆ ನಶಿಸಿಹೋಗುತ್ತಿದ್ದರೆ ಮುಂದೇನು?” ಎಂದು ಹುಲಿಕುಂಟೆ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

ಕಲ್ಬುರ್ಗಿ ಕೇಂದ್ರೀಯ ವಿವಿಯಲ್ಲಿ(ಸಿಯುಕೆ) ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಇಲ್ಲಿ ದೌರ್ಜನ್ಯ, ಹಿಂಸೆ ನಡೆದಿದೆ.‌ ನಿಷ್ಪಕ್ಷಪಾತ ತನಿಖೆ ನಡೆಸಬೇಕು.  ಆದರೆ ನಾಗರಿಕ ಸಮಾಜದ ಮೌನ ಮಾತ್ರ … ಸಿಯುಕೆನಲ್ಲಿ ಆರೆಸ್ಸಸ್ ನ ಪ್ರಾಬಲ್ಯ, ದಲಿತರ ಮೇಲಿನ ಶೋಷಣೆ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದರ‌ ವಿರುದ್ಧ ಕಲ್ಬುರ್ಗಿಯ‌ ಸ್ಥಳೀಯ ಹೋರಾಟ ಯಾಕೆ ರೂಪುಗೊಳ್ಳಲಿಲ್ಲ ಎನ್ನುವುದು ಯಕ್ಷಪ್ರಶ್ನೆ. ಒಂದು ವಿವಿಯೊಳಗಿನ ಮತಧರ್ಮಾಂದರು, ಜಾತಿವಾದಿಗಳ ವಿರುದ್ಧ ಹೋರಾಟ ರೂಪಿಸಲು ಸೋ ಕಾಲ್ಡ್ ಚಳುವಳಿಗಳು‌ ವಿಫಲವಾಗಿವೆ ಎಂದರೆ ಇನ್ನು ಜಿಲ್ಲೆ, ರಾಜ್ಯ, ದೇಶಾದ್ಯಂತ ಈ ದುಷ್ಟರ ವಿರುದ್ಧ ಸಂಘಟನೆ ಕಟ್ಟುವುದು ಕನಸಿನ ಮಾತು. ಈಗ ಹೇಗೆ ಸಾಂಕೇತಿಕ ಮಟ್ಟದಲ್ಲಿದೆಯೋ ಹಾಗೆ ಮುಂದುವರಿಸಿಕೊಂಡು ಹೋಗುವುದು ‘ಎಲ್ಲರಿಗೂ ಅನುಕೂಲ’… ಇದಕ್ಕೆ ಮುಖ್ಯ ಕಾರಣಗಳನ್ನು ಹೇಳುತ್ತಾ ಹೋದರೆ… ಎಂದು ಶ್ರೀಪಾದ್ ಭಟ್ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಹೇಳಿಕೆಗಳು, ವಿಶ್ವವಿದ್ಯಾಲಯದ ಆಡಳಿತವು ದಲಿತ ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣ ಒದಗಿಸುವಲ್ಲಿ ವಿಫಲವಾಗಿದೆ ಎಂಬುದನ್ನು ತೋರಿಸುತ್ತವೆ.

ತನಿಖೆಗೆ ಒತ್ತಾಯ: ವಿದ್ಯಾರ್ಥಿಗಳು ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಆಡಳಿತ ಮಂಡಳಿಯ ನಿರ್ಲಕ್ಷ್ಯ, ಲೈಂಗಿಕ ಕಿರುಕುಳದ ಆರೋಪಗಳು ಮತ್ತು ಸಾಕ್ಷ್ಯ ನಾಶದ ಸಾಧ್ಯತೆಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಘಟನೆಯು ವಿಶ್ವವಿದ್ಯಾಲಯದ ಆಡಳಿತಕ್ಕೆ ಒಂದು ಸವಾಲಾಗಿ ಪರಿಣಮಿಸಿದ್ದು, ವಿದ್ಯಾರ್ಥಿನಿಯರಿಗೆ ಸೂಕ್ತ ನ್ಯಾಯ ದೊರೆಯುವುದೇ ಎಂದು ಕಾದು ನೋಡಬೇಕಿದೆ.

ಮಾಲೆಗಾಂವ್ ಸ್ಫೋಟ ಪ್ರಕರಣ: ಆರೋಪಿಗಳ ದೋಷಮುಕ್ತಿ, ನ್ಯಾಯಕ್ಕಾಗಿ ಬಾಂಬೆ ಹೈಕೋರ್ಟ್ ಕಡೆಗೆ ಸಂತ್ರಸ್ತರ ಚಿತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...