Homeಕರ್ನಾಟಕಕಲಬುರಗಿ ಕೇಂದ್ರೀಯ ವಿವಿಯಲ್ಲಿ ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ: ಲೈಂಗಿಕ ದೌರ್ಜನ್ಯದ ಆರೋಪ

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ: ಲೈಂಗಿಕ ದೌರ್ಜನ್ಯದ ಆರೋಪ

- Advertisement -
- Advertisement -

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (CUK) ಭೂವಿಜ್ಞಾನ ಕೋರ್ಸ್‌ನ ಐದನೇ ಸೆಮಿಸ್ಟರ್ ವಿದ್ಯಾರ್ಥಿನಿ ಜಯಶ್ರೀ (22) ಅವರ ಆತ್ಮಹತ್ಯೆ ಪ್ರಕರಣವು ಗಂಭೀರ ಸ್ವರೂಪ ಪಡೆದುಕೊಂಡಿದೆ. ಒಡಿಶಾ ಮೂಲದ ದಲಿತ ವಿದ್ಯಾರ್ಥಿನಿಯಾದ ಜಯಶ್ರೀ ಅವರು ಬುಧವಾರ ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕೇವಲ ಒಂದು ವೈಯಕ್ತಿಕ ದುರಂತವಲ್ಲ, ಬದಲಾಗಿ ವಿಶ್ವವಿದ್ಯಾಲಯದ ಆಡಳಿತದಲ್ಲಿ ನಡೆಯುತ್ತಿರುವ ದೌರ್ಜನ್ಯ ಮತ್ತು ವ್ಯವಸ್ಥಿತ ನಿರ್ಲಕ್ಷ್ಯದ ಪರಿಣಾಮ ಎಂದು ವಿದ್ಯಾರ್ಥಿ ಸಮುದಾಯ ಹಾಗೂ ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಘಟನೆಯ ಸುತ್ತ ಹಲವಾರು ಅನುಮಾನಗಳು: ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ.

ಆರೋಪಿತರಿಗೆ ಆಡಳಿತದ ಕುಮ್ಮಕ್ಕು: ವಿಶ್ವವಿದ್ಯಾಲಯದಲ್ಲಿ ಈ ಹಿಂದೆ ಲೈಂಗಿಕ ಕಿರುಕುಳದ ಪ್ರಕರಣಗಳು ನಡೆದಿದ್ದರೂ, ಆಡಳಿತ ಮಂಡಳಿ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಸಂಧಾನದ ಮೂಲಕ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿದೆ ಎಂದು ವಿದ್ಯಾರ್ಥಿಗಳು ಆಪಾದಿಸಿದ್ದಾರೆ. ಕ್ಯಾಂಟೀನ್ ನಡೆಸುತ್ತಿದ್ದ ವ್ಯಕ್ತಿಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಾಗ, ಆತನ ಸಹೋದರನಾದ ಪ್ರಾಧ್ಯಾಪಕ ಮಲ್ಲಿಕಾರ್ಜುನ ಹೂಗಾರ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಸಂಧಾನ ನಡೆಸಿದೆ ಎನ್ನಲಾಗಿದೆ.

ಸಾವಿಗೂ ಮುನ್ನ ದೂರು: ಜಯಶ್ರೀ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಕೆಲವೇ ದಿನಗಳ ಮೊದಲು ವಿಶ್ವವಿದ್ಯಾಲಯದ ಡೀನ್ ಆಗಿರುವ ಪ್ರೊ. ಬಸವರಾಜ ಕುಬಕಡ್ಡಿ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಆದರೆ ಆ ದೂರಿನ ಕುರಿತು ಯಾವುದೇ ಕ್ರಮ ಕೈಗೊಂಡಿರುವ ಬಗ್ಗೆ ಮಾಹಿತಿ ಇಲ್ಲ.

ನಿರ್ಲಕ್ಷ್ಯದ ಇ-ಮೇಲ್ ದೂರು: ಈ ಹಿಂದೆ, ತೆಲಂಗಾಣ ಮೂಲದ ಬಿಜೆಪಿ ನಾಯಕ ಮತ್ತು ಕ್ಯಾಂಟೀನ್ ಗುತ್ತಿಗೆದಾರನ ವಿರುದ್ಧ ದಲಿತ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೇರವಾಗಿ ಡೀನ್ ಅವರಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಳು. ಆದರೂ, ಆ ದೂರಿನ ಬಗ್ಗೆಯೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಡಾ. ಪಿ. ನಂದಕುಮಾರ್ ದೂರಿದ್ದಾರೆ.

ಪೊಲೀಸರ ಆಗಮನಕ್ಕೂ ಮುನ್ನ ಬಾಗಿಲು ಮುರಿಯುವ ಯತ್ನ: ಜಯಶ್ರೀ ಅವರು ನೇಣಿಗೆ ಶರಣಾದ ದೃಶ್ಯವನ್ನು ಕಿಟಕಿಯಿಂದ ನೋಡಬಹುದಾಗಿತ್ತು. ಆದರೆ ಪೊಲೀಸರು ಸ್ಥಳಕ್ಕೆ ಬರುವ ಮುನ್ನವೇ ಕೆಲವು ಪ್ರಾಧ್ಯಾಪಕರು ಉಪಕುಲಪತಿಗಳ ಅನುಪಸ್ಥಿತಿಯಲ್ಲೇ ಕೊಠಡಿಯ ಬಾಗಿಲು ಮುರಿಯಲು ಪ್ರಯತ್ನಿಸಿರುವುದು ಅನುಮಾನಕ್ಕೆ ಮತ್ತಷ್ಟು ಇಂಬು ಕೊಟ್ಟಿದೆ. ಸಾಕ್ಷ್ಯ ನಾಶ ಮಾಡುವ ಪ್ರಯತ್ನ ನಡೆದಿದೆಯೇ ಎಂಬ ಪ್ರಶ್ನೆಯೂ ಈಗ ಎದುರಾಗಿದೆ.

ಸಾಮಾಜಿಕ ಕಾರ್ಯಕರ್ತರ ಆಕ್ರೋಶ: ಈ ಪ್ರಕರಣದ ಕುರಿತು ಸಾಮಾಜಿಕ ಕಾರ್ಯಕರ್ತರಾದ ವಿಕಾಸ್ ಆರ್. ಮೌರ್ಯ ಮತ್ತು ಹುಲಿಕುಂಟೆ ಮೂರ್ತಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸೌಜನ್ಯ ಪರ ದನಿ ಎತ್ತಿದ ಕರ್ನಾಟಕ ಜಯಶ್ರೀ ವಿಷಯದಲ್ಲಿ ಮೌನವಾಗಿದೆ. ಯಾಕೆ? ಜಾತಿ ತಿಳಿಯಿತೆ?” ಎಂದು ವಿಕಾಸ್ ಮೌರ್ಯ ಅವರು ನೇರವಾಗಿ ಪ್ರಶ್ನಿಸಿದ್ದಾರೆ.

“ಇದು ಮತ್ತೊಂದು ಸಾಂಸ್ಥಿಕ ಹತ್ಯೆ… ದಲಿತರ ಬದುಕುಗಳು ಹೀಗೆ ಹುಳ ಉಪ್ಪಟೆಗಳ ಹಾಗೆ ನಶಿಸಿಹೋಗುತ್ತಿದ್ದರೆ ಮುಂದೇನು?” ಎಂದು ಹುಲಿಕುಂಟೆ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

ಕಲ್ಬುರ್ಗಿ ಕೇಂದ್ರೀಯ ವಿವಿಯಲ್ಲಿ(ಸಿಯುಕೆ) ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಇಲ್ಲಿ ದೌರ್ಜನ್ಯ, ಹಿಂಸೆ ನಡೆದಿದೆ.‌ ನಿಷ್ಪಕ್ಷಪಾತ ತನಿಖೆ ನಡೆಸಬೇಕು.  ಆದರೆ ನಾಗರಿಕ ಸಮಾಜದ ಮೌನ ಮಾತ್ರ … ಸಿಯುಕೆನಲ್ಲಿ ಆರೆಸ್ಸಸ್ ನ ಪ್ರಾಬಲ್ಯ, ದಲಿತರ ಮೇಲಿನ ಶೋಷಣೆ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದರ‌ ವಿರುದ್ಧ ಕಲ್ಬುರ್ಗಿಯ‌ ಸ್ಥಳೀಯ ಹೋರಾಟ ಯಾಕೆ ರೂಪುಗೊಳ್ಳಲಿಲ್ಲ ಎನ್ನುವುದು ಯಕ್ಷಪ್ರಶ್ನೆ. ಒಂದು ವಿವಿಯೊಳಗಿನ ಮತಧರ್ಮಾಂದರು, ಜಾತಿವಾದಿಗಳ ವಿರುದ್ಧ ಹೋರಾಟ ರೂಪಿಸಲು ಸೋ ಕಾಲ್ಡ್ ಚಳುವಳಿಗಳು‌ ವಿಫಲವಾಗಿವೆ ಎಂದರೆ ಇನ್ನು ಜಿಲ್ಲೆ, ರಾಜ್ಯ, ದೇಶಾದ್ಯಂತ ಈ ದುಷ್ಟರ ವಿರುದ್ಧ ಸಂಘಟನೆ ಕಟ್ಟುವುದು ಕನಸಿನ ಮಾತು. ಈಗ ಹೇಗೆ ಸಾಂಕೇತಿಕ ಮಟ್ಟದಲ್ಲಿದೆಯೋ ಹಾಗೆ ಮುಂದುವರಿಸಿಕೊಂಡು ಹೋಗುವುದು ‘ಎಲ್ಲರಿಗೂ ಅನುಕೂಲ’… ಇದಕ್ಕೆ ಮುಖ್ಯ ಕಾರಣಗಳನ್ನು ಹೇಳುತ್ತಾ ಹೋದರೆ… ಎಂದು ಶ್ರೀಪಾದ್ ಭಟ್ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಹೇಳಿಕೆಗಳು, ವಿಶ್ವವಿದ್ಯಾಲಯದ ಆಡಳಿತವು ದಲಿತ ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣ ಒದಗಿಸುವಲ್ಲಿ ವಿಫಲವಾಗಿದೆ ಎಂಬುದನ್ನು ತೋರಿಸುತ್ತವೆ.

ತನಿಖೆಗೆ ಒತ್ತಾಯ: ವಿದ್ಯಾರ್ಥಿಗಳು ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಆಡಳಿತ ಮಂಡಳಿಯ ನಿರ್ಲಕ್ಷ್ಯ, ಲೈಂಗಿಕ ಕಿರುಕುಳದ ಆರೋಪಗಳು ಮತ್ತು ಸಾಕ್ಷ್ಯ ನಾಶದ ಸಾಧ್ಯತೆಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಘಟನೆಯು ವಿಶ್ವವಿದ್ಯಾಲಯದ ಆಡಳಿತಕ್ಕೆ ಒಂದು ಸವಾಲಾಗಿ ಪರಿಣಮಿಸಿದ್ದು, ವಿದ್ಯಾರ್ಥಿನಿಯರಿಗೆ ಸೂಕ್ತ ನ್ಯಾಯ ದೊರೆಯುವುದೇ ಎಂದು ಕಾದು ನೋಡಬೇಕಿದೆ.

ಮಾಲೆಗಾಂವ್ ಸ್ಫೋಟ ಪ್ರಕರಣ: ಆರೋಪಿಗಳ ದೋಷಮುಕ್ತಿ, ನ್ಯಾಯಕ್ಕಾಗಿ ಬಾಂಬೆ ಹೈಕೋರ್ಟ್ ಕಡೆಗೆ ಸಂತ್ರಸ್ತರ ಚಿತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...