Homeಕರ್ನಾಟಕಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ...

ಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ ರೋಚಕ ತಿರುವು

- Advertisement -
- Advertisement -

ಧರ್ಮಸ್ಥಳ: ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂಬ ದೂರುದಾರನ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳದ ನೇತ್ರಾವತಿ ನದಿಯ ದಡದಲ್ಲಿ ನಡೆಯುತ್ತಿರುವ ಶವ ಶೋಧ ಕಾರ್ಯಾಚರಣೆಯು ಇದೀಗ ಐದನೇ ದಿನಕ್ಕೆ ತಲುಪಿದೆ. ಇಷ್ಟು ದಿನ ಯಾವುದೇ ಮಹತ್ವದ ಸುಳಿವು ಸಿಗದೇ ಇದ್ದ ತನಿಖಾ ತಂಡಕ್ಕೆ, ಶೋಧ ಕಾರ್ಯದ 4ನೇ ದಿನವಾದ ನಿನ್ನೆ (ಗುರುವಾರ) 6ನೇ ಪಾಯಿಂಟ್‌ನಲ್ಲಿ ದೊರೆತ ಮಾನವ ಅವಶೇಷಗಳು ಹೊಸ ಹುರುಪು ತಂದಿದ್ದು, ಈ ಪ್ರಕರಣಕ್ಕೆ ರೋಚಕ ತಿರುವು ನೀಡಿವೆ.

ಪ್ರವಾಹ ಮತ್ತು ನಿರ್ಮಾಣ ಕಾರ್ಯಗಳಿಂದ ಸವಾಲು:

ಸೋಮವಾರದಿಂದ ಪ್ರಾರಂಭವಾದ ಶೋಧ ಕಾರ್ಯಾಚರಣೆಯಲ್ಲಿ ಮೊದಲ 3 ದಿನಗಳಲ್ಲಿ ಶವ ಶೋಧ ತಂಡವು ನದಿಯ ಬಲ ದಡದಲ್ಲಿರುವ 1 ರಿಂದ 5 ಪಾಯಿಂಟ್‌ಗಳಲ್ಲಿ ತೀವ್ರ ಶೋಧ ನಡೆಸಿತ್ತು. ಆದರೆ, 2014ರ ನಂತರ ನೇತ್ರಾವತಿ ನದಿಯಲ್ಲಿ ಉಂಟಾದ ಭಾರಿ ಪ್ರವಾಹ, ಭೂಕುಸಿತ ಮತ್ತು ನದಿ ನೀರಿನ ಹರಿವಿನಿಂದಾಗಿ ಅನೇಕ ಶವಗಳು ಕೊಚ್ಚಿಕೊಂಡು ಹೋಗಿರಬಹುದು ಎಂದು ತಜ್ಞರು ಮತ್ತು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ದೂರುದಾರ ಗುರುತಿಸಿದ ಹಲವು ಸ್ಥಳಗಳಲ್ಲಿ ಸ್ನಾನಘಟ್ಟಗಳು, ಶೌಚಾಲಯಗಳು ಮತ್ತು ಇತರ ನಿರ್ಮಾಣ ಕಾರ್ಯಗಳು ನಡೆದಿರುವುದರಿಂದಲೂ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಈ ಪ್ರದೇಶವು ದಟ್ಟವಾದ ಅರಣ್ಯ ಪ್ರದೇಶವಾಗಿರುವುದರಿಂದ, ಇಂಚಿಂಚು ಶೋಧ ಮಾಡುವುದು ಅತ್ಯಂತ ಕಷ್ಟದ ಕೆಲಸವಾಗಿದೆ ಮತ್ತು ಇದಕ್ಕೆ ಹೆಚ್ಚಿನ ಸಮಯ ಹಾಗೂ ವಿಶೇಷ ಅನುಮತಿಗಳ ಅಗತ್ಯವಿದೆ.

ನಿರೀಕ್ಷೆ ಹುಟ್ಟಿಸಿದ 13ನೇ ಪಾಯಿಂಟ್:

ಪ್ರಕರಣದಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿರುವುದು ನೇತ್ರಾವತಿ ಸ್ನಾನಘಟ್ಟದ ಎಡಭಾಗದಲ್ಲಿರುವ 13ನೇ ಪಾಯಿಂಟ್. ಇಲ್ಲಿ 10ಕ್ಕೂ ಹೆಚ್ಚು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಹೇಳಿದ್ದಾನೆ. ಶವಗಳನ್ನು ಹೂಳಿದ್ದ ಜಾಗದಲ್ಲಿ ಮೊದಲು 5ರಿಂದ 6 ಅಡಿ ಗುಂಡಿ ಇತ್ತಂತೆ. ಈಗ ಆ ಜಾಗವನ್ನು ಮಣ್ಣು ಹಾಕಿ ಸಮತಟ್ಟುಗೊಳಿಸಲಾಗಿದ್ದು, ವಿದ್ಯುತ್ ಕಂಬಗಳನ್ನು ಹಾಕಲಾಗಿದೆ. ಸ್ಥಳೀಯರ ಪ್ರಕಾರ, ಈ ಸ್ಥಳದಲ್ಲಿ 5-6 ಅಡಿ ಆಳದಲ್ಲಿ ಶವಗಳು ಸಿಗುವುದು ಕಷ್ಟ. ಹಾಗಾಗಿ 10-15 ಅಡಿ ಆಳದವರೆಗೆ ಅಗೆಯುವುದು ಅವಶ್ಯಕ ಎಂದು ವಾದಿಸಿದ್ದಾರೆ. ಈ ಪಾಯಿಂಟ್‌ಗಳ ಪ್ರದೇಶವು ಭೂಕುಸಿತ ಮತ್ತು ನೆರೆ ಸಂಭವಿಸಿರುವುದು ಕಡಿಮೆ ಇರುವುದರಿಂದ, ಇಲ್ಲಿ ಶವಗಳು ಸಿಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆಯ ಕಾರ್ಯಾಚರಣೆ ಮತ್ತು ಮಹತ್ವದ ಸುಳಿವು:

ಗುರುವಾರದಂದು ನೇತ್ರಾವತಿ ಸೇತುವೆಯ ಮುಖ್ಯರಸ್ತೆಯಿಂದ ಸುಮಾರು 300 ಮೀಟರ್ ಒಳಗೆ ಇರುವ 6ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಂಡಿತ್ತು. ಈ ಪ್ರದೇಶದಲ್ಲಿ ಭೂಕುಸಿತ ಮತ್ತು ಪ್ರವಾಹದ ಸಾಧ್ಯತೆ ಕಡಿಮೆ ಇರುವುದರಿಂದ, ತನಿಖಾ ತಂಡವು ಇಲ್ಲಿಗೆ ಹೆಚ್ಚಿನ ಗಮನ ನೀಡಿತ್ತು. ನಿನ್ನೆ ಬೆಳಿಗ್ಗೆ 11.30ಕ್ಕೆ ಕಾರ್ಯಾಚರಣೆ ಆರಂಭವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಮಾನವ ಅವಶೇಷಗಳು ಪತ್ತೆಯಾಗಿವೆ. ಈ ಮಹತ್ವದ ಬೆಳವಣಿಗೆಯಿಂದ ಎಸ್‌ಐಟಿ ತಂಡ ತಕ್ಷಣವೇ ಪೂರ್ಣ ಎಚ್ಚರಿಕೆ ವಹಿಸಿತು. ಎಫ್‌ಎಸ್‌ಎಲ್ ತಜ್ಞರೊಂದಿಗೆ ಉಪವಿಭಾಗಾಧಿಕಾರಿ ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಉಪಸ್ಥಿತರಿದ್ದರು. ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಸಂಜೆ 7.30ರವರೆಗೆ ಮುಂದುವರೆಯಿತು.

ಸಿಕ್ಕ ಅವಶೇಷಗಳನ್ನು ಅತಿ ಸೂಕ್ಷ್ಮವಾಗಿ ಸಂಗ್ರಹಿಸಿ, ಪ್ರತ್ಯೇಕ ಪ್ಲಾಸ್ಟಿಕ್ ಕಂಟೇನರ್‌ಗಳಲ್ಲಿ ಹಾಕಿ ಸೀಲ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಮತ್ತು ಎಸ್‌ಐಟಿ ತಂಡದವರು ಈ ಕಾರ್ಯವನ್ನು ಜಂಟಿಯಾಗಿ ನಿರ್ವಹಿಸಿದ್ದಾರೆ. ಈ ಅವಶೇಷಗಳನ್ನು ಈಗ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಡಿಎನ್‌ಎ ಪರೀಕ್ಷೆ ಮತ್ತು ಇತರ ವಿಧಿವಿಜ್ಞಾನ ಪರೀಕ್ಷೆಗಳ ಮೂಲಕ ಮಹತ್ವದ ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ. ಸದ್ಯಕ್ಕೆ, ಸಿಕ್ಕ ಅವಶೇಷಗಳು ಮಹಿಳೆಯದ್ದೋ ಅಥವಾ ಪುರುಷರದ್ದೋ ಎಂಬ ಮಾಹಿತಿ ಲಭ್ಯವಾಗಿಲ್ಲ.

ಸ್ಥಳೀಯ ಕಾರ್ಮಿಕರನ್ನು ಹೊರಗಿಟ್ಟ ಕಾರ್ಯಾಚರಣೆ:

ಶೋಧ ಕಾರ್ಯಾಚರಣೆಯ ಮತ್ತೊಂದು ಗಮನಾರ್ಹ ಅಂಶವೆಂದರೆ, ಸ್ಥಳೀಯ ಕಾರ್ಮಿಕರ ಬದಲಿಗೆ ವಲಸೆ ಕಾರ್ಮಿಕರನ್ನು ಬಳಸಿಕೊಳ್ಳಲಾಗಿದೆ. ಈ ನಿರ್ಧಾರದ ಹಿಂದೆ ಹಲವು ಕಾರಣಗಳಿರಬಹುದು ಎಂದು ಅಂದಾಜಿಸಲಾಗಿದೆ. ಇಡೀ ಪ್ರದೇಶವು ಅರಣ್ಯ ವ್ಯಾಪ್ತಿಗೆ ಒಳಪಟ್ಟಿರುವುದರಿಂದ, ಇಂಚಿಂಚು ಶೋಧ ಮಾಡುವುದು ಕಷ್ಟಕರ. ಆದರೂ, ಶೋಧ ಕಾರ್ಯಕ್ಕೆ ಲೀಡ್ ಸಿಕ್ಕಿರುವುದು, ತನಿಖೆಗೆ ಹೊಸ ಆಯಾಮ ನೀಡಿದೆ.

ಈ ಪ್ರಕರಣವು ಧರ್ಮಸ್ಥಳದಂತಹ ಪುಣ್ಯಕ್ಷೇತ್ರದಲ್ಲಿ ನಡೆದಿರುವುದರಿಂದ ಎಲ್ಲೆಡೆ ತೀವ್ರ ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಪ್ರಯೋಗಾಲಯದ ವರದಿಗಳು ಬಂದ ನಂತರವೇ, ಈ ಅವಶೇಷಗಳ ಮೂಲ, ಹಿನ್ನೆಲೆ ಮತ್ತು ಹೂಳಿದ ಉದ್ದೇಶದ ಬಗ್ಗೆ ಇನ್ನಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ನ್ಯಾಯ ಸಿಗಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದು, ಈ ಪ್ರಕರಣದ ಅಂತ್ಯ ಏನಾಗಲಿದೆ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ.

ತನಿಖೆಗೆ ಒಳಪಟ್ಟಿರುವ ಸ್ಥಳಗಳಿಗೆ ಪೊಲೀಸ್ ಭದ್ರತೆ, ಶೆಡ್‌ಗಳ ರಕ್ಷಣೆ

ಎಸ್‌ಐಟಿ ತಂಡವು ದೂರುದಾರರು ಸೂಚಿಸಿದ ಸ್ಥಳಗಳಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ ಮಹತ್ವದ ಅಂಶಗಳು ಪತ್ತೆಯಾಗಿದ್ದು, ಇವುಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದುವರೆಗೆ ಆರು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಅದರಲ್ಲಿ ಒಂದು ಸ್ಥಳದಲ್ಲಿ ಅವಶೇಷಗಳು ಪತ್ತೆಯಾಗಿವೆ.

ಮುಂದಿನ ತನಿಖೆಗೆ ಯಾವುದೇ ಅಡ್ಡಿಯಾಗಬಾರದು ಹಾಗೂ ಮಳೆಯಿಂದಾಗಿ ಅವಶೇಷಗಳಿಗೆ ಹಾನಿಯಾಗದಂತೆ ತಡೆಯಲು, ಆ ಸ್ಥಳದ ಸುತ್ತ ತಾತ್ಕಾಲಿಕ ತಗಡಿನ ಶೆಡ್ ನಿರ್ಮಿಸಿ ರಕ್ಷಣೆ ಒದಗಿಸಲಾಗಿದೆ. ಅಷ್ಟೇ ಅಲ್ಲದೆ, ಈ ಸ್ಥಳಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಯಾವುದೇ ಅನಗತ್ಯ ಚಟುವಟಿಕೆಗಳು ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಕ್ರಮಗಳು ತನಿಖೆಯ ಮಹತ್ವವನ್ನು ಸೂಚಿಸುತ್ತವೆ ಮತ್ತು ಭವಿಷ್ಯದಲ್ಲಿ ಲಭ್ಯವಾಗುವ ಸಾಕ್ಷ್ಯಗಳನ್ನು ಸುರಕ್ಷಿತವಾಗಿಡಲು ಸಹಕಾರಿಯಾಗಿವೆ.

ವಿಶೇಷ ವರದಿ: ರವಿ ಈಚಲಮರ

ಧರ್ಮಸ್ಥಳದಲ್ಲಿ ಶವ ಶೋಧ: 6ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರದ ಅವಶೇಷ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...