Homeಕರ್ನಾಟಕಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ...

ಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ ರೋಚಕ ತಿರುವು

- Advertisement -
- Advertisement -

ಧರ್ಮಸ್ಥಳ: ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂಬ ದೂರುದಾರನ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳದ ನೇತ್ರಾವತಿ ನದಿಯ ದಡದಲ್ಲಿ ನಡೆಯುತ್ತಿರುವ ಶವ ಶೋಧ ಕಾರ್ಯಾಚರಣೆಯು ಇದೀಗ ಐದನೇ ದಿನಕ್ಕೆ ತಲುಪಿದೆ. ಇಷ್ಟು ದಿನ ಯಾವುದೇ ಮಹತ್ವದ ಸುಳಿವು ಸಿಗದೇ ಇದ್ದ ತನಿಖಾ ತಂಡಕ್ಕೆ, ಶೋಧ ಕಾರ್ಯದ 4ನೇ ದಿನವಾದ ನಿನ್ನೆ (ಗುರುವಾರ) 6ನೇ ಪಾಯಿಂಟ್‌ನಲ್ಲಿ ದೊರೆತ ಮಾನವ ಅವಶೇಷಗಳು ಹೊಸ ಹುರುಪು ತಂದಿದ್ದು, ಈ ಪ್ರಕರಣಕ್ಕೆ ರೋಚಕ ತಿರುವು ನೀಡಿವೆ.

ಪ್ರವಾಹ ಮತ್ತು ನಿರ್ಮಾಣ ಕಾರ್ಯಗಳಿಂದ ಸವಾಲು:

ಸೋಮವಾರದಿಂದ ಪ್ರಾರಂಭವಾದ ಶೋಧ ಕಾರ್ಯಾಚರಣೆಯಲ್ಲಿ ಮೊದಲ 3 ದಿನಗಳಲ್ಲಿ ಶವ ಶೋಧ ತಂಡವು ನದಿಯ ಬಲ ದಡದಲ್ಲಿರುವ 1 ರಿಂದ 5 ಪಾಯಿಂಟ್‌ಗಳಲ್ಲಿ ತೀವ್ರ ಶೋಧ ನಡೆಸಿತ್ತು. ಆದರೆ, 2014ರ ನಂತರ ನೇತ್ರಾವತಿ ನದಿಯಲ್ಲಿ ಉಂಟಾದ ಭಾರಿ ಪ್ರವಾಹ, ಭೂಕುಸಿತ ಮತ್ತು ನದಿ ನೀರಿನ ಹರಿವಿನಿಂದಾಗಿ ಅನೇಕ ಶವಗಳು ಕೊಚ್ಚಿಕೊಂಡು ಹೋಗಿರಬಹುದು ಎಂದು ತಜ್ಞರು ಮತ್ತು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ದೂರುದಾರ ಗುರುತಿಸಿದ ಹಲವು ಸ್ಥಳಗಳಲ್ಲಿ ಸ್ನಾನಘಟ್ಟಗಳು, ಶೌಚಾಲಯಗಳು ಮತ್ತು ಇತರ ನಿರ್ಮಾಣ ಕಾರ್ಯಗಳು ನಡೆದಿರುವುದರಿಂದಲೂ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಈ ಪ್ರದೇಶವು ದಟ್ಟವಾದ ಅರಣ್ಯ ಪ್ರದೇಶವಾಗಿರುವುದರಿಂದ, ಇಂಚಿಂಚು ಶೋಧ ಮಾಡುವುದು ಅತ್ಯಂತ ಕಷ್ಟದ ಕೆಲಸವಾಗಿದೆ ಮತ್ತು ಇದಕ್ಕೆ ಹೆಚ್ಚಿನ ಸಮಯ ಹಾಗೂ ವಿಶೇಷ ಅನುಮತಿಗಳ ಅಗತ್ಯವಿದೆ.

ನಿರೀಕ್ಷೆ ಹುಟ್ಟಿಸಿದ 13ನೇ ಪಾಯಿಂಟ್:

ಪ್ರಕರಣದಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿರುವುದು ನೇತ್ರಾವತಿ ಸ್ನಾನಘಟ್ಟದ ಎಡಭಾಗದಲ್ಲಿರುವ 13ನೇ ಪಾಯಿಂಟ್. ಇಲ್ಲಿ 10ಕ್ಕೂ ಹೆಚ್ಚು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಹೇಳಿದ್ದಾನೆ. ಶವಗಳನ್ನು ಹೂಳಿದ್ದ ಜಾಗದಲ್ಲಿ ಮೊದಲು 5ರಿಂದ 6 ಅಡಿ ಗುಂಡಿ ಇತ್ತಂತೆ. ಈಗ ಆ ಜಾಗವನ್ನು ಮಣ್ಣು ಹಾಕಿ ಸಮತಟ್ಟುಗೊಳಿಸಲಾಗಿದ್ದು, ವಿದ್ಯುತ್ ಕಂಬಗಳನ್ನು ಹಾಕಲಾಗಿದೆ. ಸ್ಥಳೀಯರ ಪ್ರಕಾರ, ಈ ಸ್ಥಳದಲ್ಲಿ 5-6 ಅಡಿ ಆಳದಲ್ಲಿ ಶವಗಳು ಸಿಗುವುದು ಕಷ್ಟ. ಹಾಗಾಗಿ 10-15 ಅಡಿ ಆಳದವರೆಗೆ ಅಗೆಯುವುದು ಅವಶ್ಯಕ ಎಂದು ವಾದಿಸಿದ್ದಾರೆ. ಈ ಪಾಯಿಂಟ್‌ಗಳ ಪ್ರದೇಶವು ಭೂಕುಸಿತ ಮತ್ತು ನೆರೆ ಸಂಭವಿಸಿರುವುದು ಕಡಿಮೆ ಇರುವುದರಿಂದ, ಇಲ್ಲಿ ಶವಗಳು ಸಿಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆಯ ಕಾರ್ಯಾಚರಣೆ ಮತ್ತು ಮಹತ್ವದ ಸುಳಿವು:

ಗುರುವಾರದಂದು ನೇತ್ರಾವತಿ ಸೇತುವೆಯ ಮುಖ್ಯರಸ್ತೆಯಿಂದ ಸುಮಾರು 300 ಮೀಟರ್ ಒಳಗೆ ಇರುವ 6ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಂಡಿತ್ತು. ಈ ಪ್ರದೇಶದಲ್ಲಿ ಭೂಕುಸಿತ ಮತ್ತು ಪ್ರವಾಹದ ಸಾಧ್ಯತೆ ಕಡಿಮೆ ಇರುವುದರಿಂದ, ತನಿಖಾ ತಂಡವು ಇಲ್ಲಿಗೆ ಹೆಚ್ಚಿನ ಗಮನ ನೀಡಿತ್ತು. ನಿನ್ನೆ ಬೆಳಿಗ್ಗೆ 11.30ಕ್ಕೆ ಕಾರ್ಯಾಚರಣೆ ಆರಂಭವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಮಾನವ ಅವಶೇಷಗಳು ಪತ್ತೆಯಾಗಿವೆ. ಈ ಮಹತ್ವದ ಬೆಳವಣಿಗೆಯಿಂದ ಎಸ್‌ಐಟಿ ತಂಡ ತಕ್ಷಣವೇ ಪೂರ್ಣ ಎಚ್ಚರಿಕೆ ವಹಿಸಿತು. ಎಫ್‌ಎಸ್‌ಎಲ್ ತಜ್ಞರೊಂದಿಗೆ ಉಪವಿಭಾಗಾಧಿಕಾರಿ ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಉಪಸ್ಥಿತರಿದ್ದರು. ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಸಂಜೆ 7.30ರವರೆಗೆ ಮುಂದುವರೆಯಿತು.

ಸಿಕ್ಕ ಅವಶೇಷಗಳನ್ನು ಅತಿ ಸೂಕ್ಷ್ಮವಾಗಿ ಸಂಗ್ರಹಿಸಿ, ಪ್ರತ್ಯೇಕ ಪ್ಲಾಸ್ಟಿಕ್ ಕಂಟೇನರ್‌ಗಳಲ್ಲಿ ಹಾಕಿ ಸೀಲ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಮತ್ತು ಎಸ್‌ಐಟಿ ತಂಡದವರು ಈ ಕಾರ್ಯವನ್ನು ಜಂಟಿಯಾಗಿ ನಿರ್ವಹಿಸಿದ್ದಾರೆ. ಈ ಅವಶೇಷಗಳನ್ನು ಈಗ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಡಿಎನ್‌ಎ ಪರೀಕ್ಷೆ ಮತ್ತು ಇತರ ವಿಧಿವಿಜ್ಞಾನ ಪರೀಕ್ಷೆಗಳ ಮೂಲಕ ಮಹತ್ವದ ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ. ಸದ್ಯಕ್ಕೆ, ಸಿಕ್ಕ ಅವಶೇಷಗಳು ಮಹಿಳೆಯದ್ದೋ ಅಥವಾ ಪುರುಷರದ್ದೋ ಎಂಬ ಮಾಹಿತಿ ಲಭ್ಯವಾಗಿಲ್ಲ.

ಸ್ಥಳೀಯ ಕಾರ್ಮಿಕರನ್ನು ಹೊರಗಿಟ್ಟ ಕಾರ್ಯಾಚರಣೆ:

ಶೋಧ ಕಾರ್ಯಾಚರಣೆಯ ಮತ್ತೊಂದು ಗಮನಾರ್ಹ ಅಂಶವೆಂದರೆ, ಸ್ಥಳೀಯ ಕಾರ್ಮಿಕರ ಬದಲಿಗೆ ವಲಸೆ ಕಾರ್ಮಿಕರನ್ನು ಬಳಸಿಕೊಳ್ಳಲಾಗಿದೆ. ಈ ನಿರ್ಧಾರದ ಹಿಂದೆ ಹಲವು ಕಾರಣಗಳಿರಬಹುದು ಎಂದು ಅಂದಾಜಿಸಲಾಗಿದೆ. ಇಡೀ ಪ್ರದೇಶವು ಅರಣ್ಯ ವ್ಯಾಪ್ತಿಗೆ ಒಳಪಟ್ಟಿರುವುದರಿಂದ, ಇಂಚಿಂಚು ಶೋಧ ಮಾಡುವುದು ಕಷ್ಟಕರ. ಆದರೂ, ಶೋಧ ಕಾರ್ಯಕ್ಕೆ ಲೀಡ್ ಸಿಕ್ಕಿರುವುದು, ತನಿಖೆಗೆ ಹೊಸ ಆಯಾಮ ನೀಡಿದೆ.

ಈ ಪ್ರಕರಣವು ಧರ್ಮಸ್ಥಳದಂತಹ ಪುಣ್ಯಕ್ಷೇತ್ರದಲ್ಲಿ ನಡೆದಿರುವುದರಿಂದ ಎಲ್ಲೆಡೆ ತೀವ್ರ ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಪ್ರಯೋಗಾಲಯದ ವರದಿಗಳು ಬಂದ ನಂತರವೇ, ಈ ಅವಶೇಷಗಳ ಮೂಲ, ಹಿನ್ನೆಲೆ ಮತ್ತು ಹೂಳಿದ ಉದ್ದೇಶದ ಬಗ್ಗೆ ಇನ್ನಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ನ್ಯಾಯ ಸಿಗಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದು, ಈ ಪ್ರಕರಣದ ಅಂತ್ಯ ಏನಾಗಲಿದೆ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ.

ತನಿಖೆಗೆ ಒಳಪಟ್ಟಿರುವ ಸ್ಥಳಗಳಿಗೆ ಪೊಲೀಸ್ ಭದ್ರತೆ, ಶೆಡ್‌ಗಳ ರಕ್ಷಣೆ

ಎಸ್‌ಐಟಿ ತಂಡವು ದೂರುದಾರರು ಸೂಚಿಸಿದ ಸ್ಥಳಗಳಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ ಮಹತ್ವದ ಅಂಶಗಳು ಪತ್ತೆಯಾಗಿದ್ದು, ಇವುಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದುವರೆಗೆ ಆರು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಅದರಲ್ಲಿ ಒಂದು ಸ್ಥಳದಲ್ಲಿ ಅವಶೇಷಗಳು ಪತ್ತೆಯಾಗಿವೆ.

ಮುಂದಿನ ತನಿಖೆಗೆ ಯಾವುದೇ ಅಡ್ಡಿಯಾಗಬಾರದು ಹಾಗೂ ಮಳೆಯಿಂದಾಗಿ ಅವಶೇಷಗಳಿಗೆ ಹಾನಿಯಾಗದಂತೆ ತಡೆಯಲು, ಆ ಸ್ಥಳದ ಸುತ್ತ ತಾತ್ಕಾಲಿಕ ತಗಡಿನ ಶೆಡ್ ನಿರ್ಮಿಸಿ ರಕ್ಷಣೆ ಒದಗಿಸಲಾಗಿದೆ. ಅಷ್ಟೇ ಅಲ್ಲದೆ, ಈ ಸ್ಥಳಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಯಾವುದೇ ಅನಗತ್ಯ ಚಟುವಟಿಕೆಗಳು ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಕ್ರಮಗಳು ತನಿಖೆಯ ಮಹತ್ವವನ್ನು ಸೂಚಿಸುತ್ತವೆ ಮತ್ತು ಭವಿಷ್ಯದಲ್ಲಿ ಲಭ್ಯವಾಗುವ ಸಾಕ್ಷ್ಯಗಳನ್ನು ಸುರಕ್ಷಿತವಾಗಿಡಲು ಸಹಕಾರಿಯಾಗಿವೆ.

ವಿಶೇಷ ವರದಿ: ರವಿ ಈಚಲಮರ

ಧರ್ಮಸ್ಥಳದಲ್ಲಿ ಶವ ಶೋಧ: 6ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರದ ಅವಶೇಷ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...