Homeಕರ್ನಾಟಕ10,000 ರೂ. ಗೌರವಧನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಆ.12ರಿಂದ ಅಹೋರಾತ್ರಿ ಸತ್ಯಾಗ್ರಹ

10,000 ರೂ. ಗೌರವಧನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಆ.12ರಿಂದ ಅಹೋರಾತ್ರಿ ಸತ್ಯಾಗ್ರಹ

- Advertisement -
- Advertisement -

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಜ್ಯದ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14ರ ವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಅವರು ಮಾತನಾಡಿ, “ಕಳೆದ ಹಲವು ವರ್ಷಗಳಿಂದ ನಾವು ನಮ್ಮ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಈ ಹಿಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹10,000 ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಏಳು ತಿಂಗಳು ಕಳೆದರೂ ಆ ಭರವಸೆ ಈಡೇರಿಲ್ಲ” ಎಂದು ತಿಳಿಸಿದರು.

ಅಲ್ಲದೆ, “ಕಳೆದ ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಲಾಗಿದೆ. ಆದರೆ, ಆಶಾ ಕಾರ್ಯಕರ್ತೆಯರನ್ನು ಮಾತ್ರ ನಿರ್ಲಕ್ಷಿಸಲಾಗಿದೆ. ₹42,000 ಆಶಾ ಕಾರ್ಯಕರ್ತೆಯರಿಗೆ ₹1,000 ಗೌರವಧನ ಹೆಚ್ಚಿಸುವುದಾಗಿ ಸರ್ಕಾರ ಹೇಳಿದ್ದರೂ, ಅದು ಕೇವಲ ಭರವಸೆಯಾಗಿಯೇ ಉಳಿದಿದೆ” ಎಂದು ನಾಗಲಕ್ಷ್ಮಿ ಅವರು ಬೇಸರ ವ್ಯಕ್ತಪಡಿಸಿದರು.

ಪ್ರಮುಖ ಬೇಡಿಕೆಗಳು

  • ಮುಖ್ಯಮಂತ್ರಿಗಳು ಘೋಷಿಸಿದಂತೆ, ಮಾಸಿಕ ₹10,000 ಗೌರವಧನವನ್ನು ಏಪ್ರಿಲ್ ತಿಂಗಳಿನಿಂದ ಜಾರಿಗೆ ತರಬೇಕು.
  • 60 ವರ್ಷ ಪೂರೈಸಿದ ಆಶಾ ಕಾರ್ಯಕರ್ತೆಯರನ್ನು ಯಾವುದೇ ಪೂರ್ವ ಸೂಚನೆ ಅಥವಾ ಪರಿಹಾರ ನೀಡದೆ ಸೇವೆಯಿಂದ ತೆಗೆದುಹಾಕುವುದನ್ನು ನಿಲ್ಲಿಸಬೇಕು. ನಿವೃತ್ತರಾದ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು (ಒಟ್ಟು ಮೊತ್ತದ ಪರಿಹಾರ) ನೀಡಬೇಕು.
  • ನಗರ ಪ್ರದೇಶಗಳಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ ₹2,000 ಗೌರವಧನ ನೀಡಬೇಕು.
  • ಕೇಂದ್ರ ಸರ್ಕಾರ ಜೂನ್-ಜುಲೈನಲ್ಲಿ ಹೆಚ್ಚಿಸಿದ ಪ್ರೋತ್ಸಾಹಧನವನ್ನು ರಾಜ್ಯದಲ್ಲೂ ಜಾರಿಗೆ ತರಬೇಕು.
  • ಜನಸಂಖ್ಯೆ ಮಿತಿಯ ಹೆಸರಿನಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.
  • ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು.

ಈ ಸತ್ಯಾಗ್ರಹದಲ್ಲಿ ಸಂಘದ ಉಪಾಧ್ಯಕ್ಷೆ ಟಿ.ಸಿ. ರಮಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪಾಧ್ಯಕ್ಷೆ ನಾಗರತ್ನ, ಮತ್ತು ಇತರ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಮುಂದುವರೆಸುವ ನಿರ್ಧಾರಕ್ಕೆ ಬಂದಿರುವುದಾಗಿ ಸಂಘದ ಮುಖಂಡರು ತಿಳಿಸಿದ್ದಾರೆ.

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಖಂಡಿಸಿ ಆ.18ಕ್ಕೆ ದಲಿತ ಸಂಘಟನೆಗಳಿಂದ ವಿಧಾನಸೌಧ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...