Homeಮುಖಪುಟದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5...

ದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5 ದಿನಗಳ ಪ್ರತಿಭಟನೆ ಬಳಿಕ ಮೃತದೇಹ ಸ್ವೀಕಾರ

- Advertisement -
- Advertisement -

ತಿರುನಲ್ವೇಲಿ, ತಮಿಳುನಾಡು: ಪ್ರೇಮಸಂಬಂಧದ ಕಾರಣಕ್ಕೆ ನಡೆದಿದೆ ಎನ್ನಲಾದ ದಲಿತ ಟೆಕ್ಕಿ ಕವಿನ್ ಸೆಲ್ವಗಣೇಶ್‌ (23) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಸುರ್ಜಿತ್‌ನ ತಂದೆ ಮತ್ತು ಸಬ್ ಇನ್ಸ್‌ಪೆಕ್ಟರ್ ಸರವಣನ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಹತ್ಯೆಗೆ ಕಾರಣರಾದ ಎಲ್ಲರನ್ನೂ ಬಂಧಿಸುವವರೆಗೂ ಮೃತದೇಹ ಸ್ವೀಕರಿಸುವುದಿಲ್ಲ ಎಂದು ಕವಿನ್ ಕುಟುಂಬ ಐದು ದಿನಗಳ ಕಾಲ ನಡೆಸಿದ ತೀವ್ರ ಪ್ರತಿಭಟನೆಯ ನಂತರ ಈ ಬಂಧನ ನಡೆದಿದೆ.

ಈ ಪ್ರಕರಣದಲ್ಲಿ ಆರೋಪಿ ಸುರ್ಜಿತ್‌ರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರ ತಂದೆಯನ್ನು ಸಹ ಬಂಧಿಸಬೇಕು ಎಂದು ಕವಿನ್ ಕುಟುಂಬ ಪಟ್ಟು ಹಿಡಿದಿತ್ತು. ಶುಕ್ರವಾರ, ಸಬ್ ಇನ್ಸ್‌ಪೆಕ್ಟರ್ ಸರವಣನ್‌ ಬಂಧನದ ನಂತರ, ಮೃತ ಟೆಕ್ಕಿಯ ಕುಟುಂಬ ತಿರುನಲ್ವೇಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತದೇಹವನ್ನು ಸ್ವೀಕರಿಸಿದೆ. ಈ ವೇಳೆ ಸಚಿವ ಕೆ.ಎನ್. ನೆಹರು ಮತ್ತು ಜಿಲ್ಲಾಧಿಕಾರಿ ಆರ್. ಸುಕುಮಾರ್ ಸಹ ಉಪಸ್ಥಿತರಿದ್ದರು.

ಪ್ರೀತಿಯೇ ಹತ್ಯೆಗೆ ಕಾರಣ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಕವಿನ್ ಮತ್ತು ಆರೋಪಿ ಸುರ್ಜಿತ್‌ನ ಸಹೋದರಿ ಸುಭಾಷಿಣಿ ನಡುವಿನ ಪ್ರೇಮಸಂಬಂಧವೇ ಈ ಹತ್ಯೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಆದರೆ, ಸುಭಾಷಿಣಿ ಈ ಕುರಿತು ವಿಡಿಯೋವೊಂದರಲ್ಲಿ ಸ್ಪಷ್ಟಪಡಿಸಿದ್ದು, “ನಾವು ನಿಜವಾಗಿಯೂ ಪರಸ್ಪರ ಪ್ರೀತಿಸುತ್ತಿದ್ದೆವು. ಆದರೆ, ನಮ್ಮ ಸಂಬಂಧದ ಬಗ್ಗೆ ತಕ್ಷಣವೇ ನಮ್ಮ ಪೋಷಕರಿಗೆ ತಿಳಿಸಬಾರದೆಂದು ನಿರ್ಧರಿಸಿದ್ದೆವು. ಮೇ 30ರಂದು ನನ್ನ ಅಣ್ಣ ಸುರ್ಜಿತ್ ಈ ವಿಷಯವನ್ನು ನನ್ನ ತಂದೆಗೆ ತಿಳಿಸಿದ್ದ. ಆದರೆ, ಕವಿನ್ ಸ್ವಲ್ಪ ಸಮಯ ಬೇಕು ಎಂದಿದ್ದರಿಂದ ನಾನು ಸುಮ್ಮನಿದ್ದೆ” ಎಂದು ಹೇಳಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ಕವಿನ್ ಅವರ ಸಂಬಂಧಿ ಸೆಲ್ವಂ, “ಇದು ಸ್ಪಷ್ಟವಾಗಿ ಮರ್ಯಾದೆಗೇಡು ಹತ್ಯೆ (Honour killing). ಸುರ್ಜಿತ್‌ ಬಂಧನವಾಗಿದೆ, ಆದರೆ ಅವನ ತಂದೆ-ತಾಯಿಯನ್ನೂ ಬಂಧಿಸಬೇಕು. ಎಫ್‌ಐಆರ್ ಆಧಾರದ ಮೇಲೆ ಅವರನ್ನು ಬಂಧಿಸಲು ಅವಕಾಶವಿದೆ,” ಎಂದು ಒತ್ತಾಯಿಸಿದ್ದರು. ಸಾರ್ವಜನಿಕರ ಆಕ್ರೋಶ ಮತ್ತು ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿ (Crime Branch–CID) ಗೆ ವರ್ಗಾಯಿಸಲಾಗಿದೆ.

ಪ್ರಕರಣದ ಹಿನ್ನೆಲೆ

ಕವಿನ್ ಸೆಲ್ವಗಣೇಶ್ ಮತ್ತು ಸುಭಾಷಿಣಿ ಪ್ರೀತಿಸುತ್ತಿದ್ದರು. ಈ ಸಂಬಂಧ ಸುರ್ಜಿತ್‌ಗೆ ಇಷ್ಟವಿರಲಿಲ್ಲ. ಮೇ 30ರಂದು ಕವಿನ್‌ರನ್ನು ಆತನ ಪ್ರೇಯಸಿ ಸುಭಾಷಿಣಿ ಕೆಲಸ ಮಾಡುತ್ತಿದ್ದ ಸಿಧಾ ಕೇಂದ್ರದ ಬಳಿ ಸುರ್ಜಿತ್ ಬೈಕಿನಲ್ಲಿ ಕರೆದುಕೊಂಡು ಹೋಗಿದ್ದನು. ಸಿಸಿಟಿವಿ ದೃಶ್ಯಗಳಲ್ಲಿ ಈ ಘಟನೆ ದಾಖಲಾಗಿದೆ. ನಂತರ ಕವಿನ್ ದೇಹವು ತೀವ್ರ ಗಾಯಗಳೊಂದಿಗೆ ಪತ್ತೆಯಾಗಿತ್ತು. ಸುರ್ಜಿತ್‌ನನ್ನು ಕೊಲೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಸರವಣನ್ ಅವರ ಬಂಧನದ ನಂತರ, ನ್ಯಾಯ ಸಿಗುವ ಭರವಸೆಯಲ್ಲಿ ಕುಟುಂಬವು ಪ್ರತಿಭಟನೆಯನ್ನು ಹಿಂತೆಗೆದುಕೊಂಡು ಮೃತದೇಹವನ್ನು ಸ್ವೀಕರಿಸಿದೆ. ಈ ಘಟನೆ ತಮಿಳುನಾಡಿನಲ್ಲಿ ಜಾತಿವಾದದ ವಿರುದ್ಧ ತೀವ್ರ ಚರ್ಚೆಗೆ ಕಾರಣವಾಗಿದ್ದು, ಕಮಲ್ ಹಾಸನ್ ಸೇರಿದಂತೆ ಹಲವು ರಾಜಕೀಯ ನಾಯಕರು ಖಂಡಿಸಿದ್ದಾರೆ.

ಮುಂಬೈ-ಕೋಲ್ಕತ್ತಾ ಇಂಡಿಗೋ ವಿಮಾನದಲ್ಲಿ ಮುಸ್ಲಿಂ ಪ್ರಯಾಣಿಕನಿಗೆ ಕಪಾಳಮೋಕ್ಷ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...