Homeಮುಖಪುಟದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5...

ದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5 ದಿನಗಳ ಪ್ರತಿಭಟನೆ ಬಳಿಕ ಮೃತದೇಹ ಸ್ವೀಕಾರ

- Advertisement -
- Advertisement -

ತಿರುನಲ್ವೇಲಿ, ತಮಿಳುನಾಡು: ಪ್ರೇಮಸಂಬಂಧದ ಕಾರಣಕ್ಕೆ ನಡೆದಿದೆ ಎನ್ನಲಾದ ದಲಿತ ಟೆಕ್ಕಿ ಕವಿನ್ ಸೆಲ್ವಗಣೇಶ್‌ (23) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಸುರ್ಜಿತ್‌ನ ತಂದೆ ಮತ್ತು ಸಬ್ ಇನ್ಸ್‌ಪೆಕ್ಟರ್ ಸರವಣನ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಹತ್ಯೆಗೆ ಕಾರಣರಾದ ಎಲ್ಲರನ್ನೂ ಬಂಧಿಸುವವರೆಗೂ ಮೃತದೇಹ ಸ್ವೀಕರಿಸುವುದಿಲ್ಲ ಎಂದು ಕವಿನ್ ಕುಟುಂಬ ಐದು ದಿನಗಳ ಕಾಲ ನಡೆಸಿದ ತೀವ್ರ ಪ್ರತಿಭಟನೆಯ ನಂತರ ಈ ಬಂಧನ ನಡೆದಿದೆ.

ಈ ಪ್ರಕರಣದಲ್ಲಿ ಆರೋಪಿ ಸುರ್ಜಿತ್‌ರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರ ತಂದೆಯನ್ನು ಸಹ ಬಂಧಿಸಬೇಕು ಎಂದು ಕವಿನ್ ಕುಟುಂಬ ಪಟ್ಟು ಹಿಡಿದಿತ್ತು. ಶುಕ್ರವಾರ, ಸಬ್ ಇನ್ಸ್‌ಪೆಕ್ಟರ್ ಸರವಣನ್‌ ಬಂಧನದ ನಂತರ, ಮೃತ ಟೆಕ್ಕಿಯ ಕುಟುಂಬ ತಿರುನಲ್ವೇಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತದೇಹವನ್ನು ಸ್ವೀಕರಿಸಿದೆ. ಈ ವೇಳೆ ಸಚಿವ ಕೆ.ಎನ್. ನೆಹರು ಮತ್ತು ಜಿಲ್ಲಾಧಿಕಾರಿ ಆರ್. ಸುಕುಮಾರ್ ಸಹ ಉಪಸ್ಥಿತರಿದ್ದರು.

ಪ್ರೀತಿಯೇ ಹತ್ಯೆಗೆ ಕಾರಣ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಕವಿನ್ ಮತ್ತು ಆರೋಪಿ ಸುರ್ಜಿತ್‌ನ ಸಹೋದರಿ ಸುಭಾಷಿಣಿ ನಡುವಿನ ಪ್ರೇಮಸಂಬಂಧವೇ ಈ ಹತ್ಯೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಆದರೆ, ಸುಭಾಷಿಣಿ ಈ ಕುರಿತು ವಿಡಿಯೋವೊಂದರಲ್ಲಿ ಸ್ಪಷ್ಟಪಡಿಸಿದ್ದು, “ನಾವು ನಿಜವಾಗಿಯೂ ಪರಸ್ಪರ ಪ್ರೀತಿಸುತ್ತಿದ್ದೆವು. ಆದರೆ, ನಮ್ಮ ಸಂಬಂಧದ ಬಗ್ಗೆ ತಕ್ಷಣವೇ ನಮ್ಮ ಪೋಷಕರಿಗೆ ತಿಳಿಸಬಾರದೆಂದು ನಿರ್ಧರಿಸಿದ್ದೆವು. ಮೇ 30ರಂದು ನನ್ನ ಅಣ್ಣ ಸುರ್ಜಿತ್ ಈ ವಿಷಯವನ್ನು ನನ್ನ ತಂದೆಗೆ ತಿಳಿಸಿದ್ದ. ಆದರೆ, ಕವಿನ್ ಸ್ವಲ್ಪ ಸಮಯ ಬೇಕು ಎಂದಿದ್ದರಿಂದ ನಾನು ಸುಮ್ಮನಿದ್ದೆ” ಎಂದು ಹೇಳಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ಕವಿನ್ ಅವರ ಸಂಬಂಧಿ ಸೆಲ್ವಂ, “ಇದು ಸ್ಪಷ್ಟವಾಗಿ ಮರ್ಯಾದೆಗೇಡು ಹತ್ಯೆ (Honour killing). ಸುರ್ಜಿತ್‌ ಬಂಧನವಾಗಿದೆ, ಆದರೆ ಅವನ ತಂದೆ-ತಾಯಿಯನ್ನೂ ಬಂಧಿಸಬೇಕು. ಎಫ್‌ಐಆರ್ ಆಧಾರದ ಮೇಲೆ ಅವರನ್ನು ಬಂಧಿಸಲು ಅವಕಾಶವಿದೆ,” ಎಂದು ಒತ್ತಾಯಿಸಿದ್ದರು. ಸಾರ್ವಜನಿಕರ ಆಕ್ರೋಶ ಮತ್ತು ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿ (Crime Branch–CID) ಗೆ ವರ್ಗಾಯಿಸಲಾಗಿದೆ.

ಪ್ರಕರಣದ ಹಿನ್ನೆಲೆ

ಕವಿನ್ ಸೆಲ್ವಗಣೇಶ್ ಮತ್ತು ಸುಭಾಷಿಣಿ ಪ್ರೀತಿಸುತ್ತಿದ್ದರು. ಈ ಸಂಬಂಧ ಸುರ್ಜಿತ್‌ಗೆ ಇಷ್ಟವಿರಲಿಲ್ಲ. ಮೇ 30ರಂದು ಕವಿನ್‌ರನ್ನು ಆತನ ಪ್ರೇಯಸಿ ಸುಭಾಷಿಣಿ ಕೆಲಸ ಮಾಡುತ್ತಿದ್ದ ಸಿಧಾ ಕೇಂದ್ರದ ಬಳಿ ಸುರ್ಜಿತ್ ಬೈಕಿನಲ್ಲಿ ಕರೆದುಕೊಂಡು ಹೋಗಿದ್ದನು. ಸಿಸಿಟಿವಿ ದೃಶ್ಯಗಳಲ್ಲಿ ಈ ಘಟನೆ ದಾಖಲಾಗಿದೆ. ನಂತರ ಕವಿನ್ ದೇಹವು ತೀವ್ರ ಗಾಯಗಳೊಂದಿಗೆ ಪತ್ತೆಯಾಗಿತ್ತು. ಸುರ್ಜಿತ್‌ನನ್ನು ಕೊಲೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಸರವಣನ್ ಅವರ ಬಂಧನದ ನಂತರ, ನ್ಯಾಯ ಸಿಗುವ ಭರವಸೆಯಲ್ಲಿ ಕುಟುಂಬವು ಪ್ರತಿಭಟನೆಯನ್ನು ಹಿಂತೆಗೆದುಕೊಂಡು ಮೃತದೇಹವನ್ನು ಸ್ವೀಕರಿಸಿದೆ. ಈ ಘಟನೆ ತಮಿಳುನಾಡಿನಲ್ಲಿ ಜಾತಿವಾದದ ವಿರುದ್ಧ ತೀವ್ರ ಚರ್ಚೆಗೆ ಕಾರಣವಾಗಿದ್ದು, ಕಮಲ್ ಹಾಸನ್ ಸೇರಿದಂತೆ ಹಲವು ರಾಜಕೀಯ ನಾಯಕರು ಖಂಡಿಸಿದ್ದಾರೆ.

ಮುಂಬೈ-ಕೋಲ್ಕತ್ತಾ ಇಂಡಿಗೋ ವಿಮಾನದಲ್ಲಿ ಮುಸ್ಲಿಂ ಪ್ರಯಾಣಿಕನಿಗೆ ಕಪಾಳಮೋಕ್ಷ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....