Homeಮುಖಪುಟಟ್ರಂಪ್ ಎಚ್ಚರಿಕೆ ನಡುವೆಯೂ ರಷ್ಯಾ ತೈಲ ಆಮದು ಮುಂದುವರಿಕೆ: ಭಾರತೀಯ ಹಿರಿಯ ಅಧಿಕಾರಿಗಳು

ಟ್ರಂಪ್ ಎಚ್ಚರಿಕೆ ನಡುವೆಯೂ ರಷ್ಯಾ ತೈಲ ಆಮದು ಮುಂದುವರಿಕೆ: ಭಾರತೀಯ ಹಿರಿಯ ಅಧಿಕಾರಿಗಳು

- Advertisement -
- Advertisement -

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಯ ನಡುವೆಯೂ ಭಾರತವು ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ಮುಂದುವರಿಸಲಿದೆ ಎಂದು ಭಾರತ ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ವಿಷಯದ ಸೂಕ್ಷ್ಮತೆಯ ಕಾರಣದಿಂದ ಈ ಮೂಲದ ಅಧಿಕಾರಿಗಳು ತಮ್ಮ ಹೆಸರನ್ನು ಬಹಿರಂಗಪಡಿಸಲು ಅವರು ಬಯಸಿಲ್ಲವೆನ್ನಲಾಗಿದೆ.

“ಇವು ದೀರ್ಘಕಾಲೀನ ತೈಲ ಒಪ್ಪಂದಗಳು. ಒಂದೇ ದಿನದಲ್ಲಿ ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದು ಸುಲಭವಲ್ಲ” ಎಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ತಿಂಗಳು ಟ್ರೂತ್ ಸೋಶಿಯಲ್ ಪೋಸ್ಟ್‌ನಲ್ಲಿ ಟ್ರಂಪ್ ಅವರು, ರಷ್ಯಾ ಶಸ್ತ್ರಾಸ್ತ್ರ ಮತ್ತು ತೈಲವನ್ನು ಖರೀದಿಸುವ ಭಾರತದ ಮೇಲೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ಸೂಚಿಸಿದ್ದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಭಾರತವು ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುತ್ತಿಲ್ಲ ಎಂದು ತಾನು ಕೇಳಿದ್ದೇನೆ ಎಂದು ಹೇಳಿದ್ದರು.

ಇದಕ್ಕೆ ತದ್ವಿರುದ್ಧವಾಗಿ, ಶನಿವಾರದಂದು ನ್ಯೂಯಾರ್ಕ್ ಟೈಮ್ಸ್ ಇಬ್ಬರು ಅನಾಮಧೇಯ ಹಿರಿಯ ಭಾರತೀಯ ಅಧಿಕಾರಿಗಳನ್ನು ಉಲ್ಲೇಖಿಸಿ, ಭಾರತ ಸರ್ಕಾರದ ನೀತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ವರದಿ ಮಾಡಿದೆ. ರಷ್ಯಾದಿಂದ ಆಮದುಗಳನ್ನು ಕಡಿಮೆ ಮಾಡಲು ಭಾರತ ಸರ್ಕಾರ ತೈಲ ಕಂಪನಿಗಳಿಗೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದೇ ವಾರ ರಾಯಿಟರ್ಸ್ ವರದಿ ಮಾಡಿದಂತೆ, ಜುಲೈನಲ್ಲಿ ರಷ್ಯಾ ತೈಲದ ರಿಯಾಯಿತಿ ಕಡಿಮೆಯಾದ ನಂತರ ಭಾರತದ ಸರ್ಕಾರಿ ಸ್ವಾಮ್ಯದ ರಿಫೈನರಿಗಳು ಕಳೆದ ವಾರ ರಷ್ಯಾ ತೈಲ ಖರೀದಿ ನಿಲ್ಲಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ನಮ್ಮ ಇಂಧನ ಅವಶ್ಯಕತೆಗಳಿಗಾಗಿ ಲಭ್ಯವಿರುವ ಮಾರುಕಟ್ಟೆಗಳು, ಕೊಡುಗೆಗಳು ಹಾಗೂ ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಪರಿಗಣಿಸುತ್ತೇವೆ” ಎಂದು ಶುಕ್ರವಾರದ ನಿಯಮಿತ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜೈಸ್ವಾಲ್ ಅವರು, ಭಾರತವು ರಷ್ಯಾದೊಂದಿಗೆ “ಸ್ಥಿರ ಮತ್ತು ಕಾಲಾತೀತ ಪಾಲುದಾರಿಕೆ”ಯನ್ನು ಹೊಂದಿದೆ ಮತ್ತು ವಿವಿಧ ರಾಷ್ಟ್ರಗಳೊಂದಿಗಿನ ದ್ವಿಪಕ್ಷೀಯ ಸಂಬಂಧಗಳನ್ನು ಮೂರನೇ ದೇಶದ ದೃಷ್ಟಿಕೋನದಿಂದ ನೋಡಬಾರದು ಎಂದು ಹೇಳಿದರು.

ವಾಷಿಂಗ್ಟನ್‌ನ ಶ್ವೇತಭವನ ಈ ಕುರಿತು ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಿಯಾಯಿತಿ ಕಡಿಮೆ ಆದ ಕಾರಣ ಖರೀದಿ ನಿಲುಗಡೆ

ರಷ್ಯಾ ತೈಲದ ರಿಯಾಯಿತಿ 2022ರಿಂದಲೇ ಇಳಿದಿದ್ದು, ಇದು ಪಾಶ್ಚಿಮಾತ್ಯ ನಿರ್ಬಂಧಗಳು ಹೇರಿದಾಗಿನಿಂದಲೇ ಅತ್ಯಂತ ಕಡಿಮೆ ಮಟ್ಟಕ್ಕೆ ತಲುಪಿದೆ ಎಂದು ಮೂಲಗಳು ತಿಳಿಸಿವೆ. ಕಡಿಮೆ ರಷ್ಯನ್ ರಫ್ತು ಮತ್ತು ಸ್ಥಿರ ಬೇಡಿಕೆಯಿಂದಾಗಿ ಈ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ, ದೇಶದ ಸರ್ಕಾರಿ ರಿಫೈನರಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (HPCL), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (BPCL) ಮತ್ತು ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಲಿಮಿಟೆಡ್ (MRPL), ಕಳೆದ ಒಂದು ವಾರದಿಂದ ರಷ್ಯಾ ಕಚ್ಚಾ ತೈಲ ಖರೀದಿಗೆ ಮುಂದಾಗಿಲ್ಲ ಎಂದು ರಿಫೈನರಿಗಳ ಖರೀದಿ ಯೋಜನೆಗಳ ಬಗ್ಗೆ ತಿಳಿದಿರುವ ನಾಲ್ಕು ಮೂಲಗಳು ರಾಯಿಟರ್ಸ್‌ಗೆ ತಿಳಿಸಿವೆ.

ಭಾರತದ ಅಗ್ರ ತೈಲ ಪೂರೈಕೆದಾರ

ಜುಲೈ 14ರಂದು, ರಷ್ಯಾ ಉಕ್ರೇನ್‌ನೊಂದಿಗೆ ಶಾಂತಿ ಒಪ್ಪಂದಕ್ಕೆ ಬರದಿದ್ದರೆ ರಷ್ಯಾ ತೈಲ ಖರೀದಿಸುವ ದೇಶಗಳ ಮೇಲೆ 100% ಸುಂಕ ವಿಧಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದರು. ಭಾರತಕ್ಕೆ ರಷ್ಯಾ ಪ್ರಮುಖ ತೈಲ ಪೂರೈಕೆದಾರ ರಾಷ್ಟ್ರವಾಗಿದ್ದು, ಭಾರತದ ಒಟ್ಟು ತೈಲ ಪೂರೈಕೆಯಲ್ಲಿ ಶೇಕಡಾ 35ರಷ್ಟು ಪಾಲು ಹೊಂದಿದೆ.

2025ರ ಮೊದಲ ಆರು ತಿಂಗಳಲ್ಲಿ, ರಷ್ಯಾ ಭಾರತಕ್ಕೆ ಅಗ್ರ ತೈಲ ಪೂರೈಕೆದಾರನಾಗಿ ಮುಂದುವರಿದಿದ್ದು, ಇರಾಕ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಂತರದ ಸ್ಥಾನಗಳಲ್ಲಿವೆ. ಈ ವರ್ಷದ ಜನವರಿ-ಜೂನ್ ಅವಧಿಯಲ್ಲಿ ಭಾರತವು ಪ್ರತಿದಿನ ಸುಮಾರು 1.75 ದಶಲಕ್ಷ ಬ್ಯಾರೆಲ್‌ ರಷ್ಯಾ ತೈಲ ಆಮದು ಮಾಡಿಕೊಂಡಿದೆ, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 1% ಹೆಚ್ಚಳವಾಗಿದೆ ಎಂದು ರಾಯಿಟರ್ಸ್‌ಗೆ ಲಭ್ಯವಾದ ದತ್ತಾಂಶಗಳು ತೋರಿಸುತ್ತವೆ.

ರಷ್ಯಾ ತೈಲದ ಪ್ರಮುಖ ಖರೀದಿದಾರನಾದ ನಯಾರಾ ಎನರ್ಜಿ (Nayara Energy) ಇತ್ತೀಚೆಗೆ ಯುರೋಪಿಯನ್ ಯೂನಿಯನ್ (EU) ನಿಂದ ನಿರ್ಬಂಧಗಳಿಗೆ ಒಳಗಾಗಿದೆ. ಏಕೆಂದರೆ ಈ ರಿಫೈನರಿ ರಷ್ಯಾದ ತೈಲ ಸಂಸ್ಥೆಯಾದ ರೋಸ್ನೆಫ್ಟ್ (Rosneft) ಸೇರಿದಂತೆ ರಷ್ಯನ್ ಸಂಸ್ಥೆಗಳ ಬಹುಪಾಲು ಒಡೆತನದಲ್ಲಿದೆ. ಕಳೆದ ತಿಂಗಳು, ಇಯೂ ನಿರ್ಬಂಧಗಳ ನಂತರ ನಯಾರಾ ಎನರ್ಜಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ರಾಜೀನಾಮೆ ನೀಡಿದ್ದು, ಕಂಪನಿಯ ಹಿರಿಯ ಅಧಿಕಾರಿಯಾದ ಸೆರ್ಗೆ ಡೆನಿಸೊವ್ (Sergey Denisov) ಅವರನ್ನು ಸಿಇಒ ಆಗಿ ನೇಮಿಸಲಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಇದೇ ತಿಂಗಳ ಕೊನೆಯಲ್ಲಿ, ಹೊಸ ಇಯೂ ನಿರ್ಬಂಧಗಳಿಂದಾಗಿ ನಯಾರಾ ಎನರ್ಜಿಯಿಂದ ಹೊರಬಿದ್ದ ತೈಲ ಉತ್ಪನ್ನಗಳನ್ನು ಹೊತ್ತ ಮೂರು ಹಡಗುಗಳು ಇನ್ನೂ ತಮ್ಮ ಸರಕುಗಳನ್ನು ಇಳಿಸಲು ಸಾಧ್ಯವಾಗಿಲ್ಲ ಎಂದು ರಾಯಿಟರ್ಸ್ ವರದಿ ಮಾಡಿದೆ.

ಅಜ್ಮೀರ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ದರ್ಗಾ ಪ್ರದೇಶದ 150ಕ್ಕೂ ಹೆಚ್ಚು ಅನಧಿಕೃತ ಮಳಿಗೆಗಳು ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...