Homeಅಂತರಾಷ್ಟ್ರೀಯಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

ಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

- Advertisement -
- Advertisement -

ಇಸ್ರೇಲ್ ವಿಧಿಸಿದ ದಿಗ್ಭಂಧನದಿಂದ ಆಹಾರ, ನೀರು ಗಾಝಾದಲ್ಲಿ ಮತ್ತೆ 6 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾದವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.

ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಾಗ್ರಿಗಳು ಗಾಝಾ ತಲುಪದಂತೆ ಮಾರ್ಚ್ 2ರಿಂದ ಇಸ್ರೇಲ್ ದಿಗ್ಬಂಧನ ವಿಧಿಸಿದೆ. ಹಾಗಾಗಿ, ಯಾವುದೇ ನೆರವು ಟ್ರಕ್‌ಗಳು ಯುದ್ಧ ಪೀಡಿತ ಭೂಮಿಗೆ ಹೋಗುತ್ತಿಲ್ಲ. ಇದರಿಂದ ಗಾಝಾದ ಜನರ ಪರಿಸ್ಥಿತಿ ಇನ್ನಷ್ಟು ಶೋಚಣೀಯವಾಗಿದೆ.

ಈ 21ನೇ ಶತಮಾನದಲ್ಲಿ, ಮನುಷ್ಯರು ಚಂದ್ರನ ಮೇಲೆ ಹೋಗಿ ಬಂದಿರುವ ಕಾಲದಲ್ಲಿ, ನಮ್ಮ ಜೊತೆಯೇ ಈ ಭೂಮಿ ಮೇಲೆ ಬದುಕುತ್ತಿರುವ ಒಂದು ಪ್ರದೇಶದ ಜನರು ಆಹಾರ ಸಿಗದೆ ಸಾಯುತ್ತಿರುವುದು ಅಥವಾ ಆಹಾರ ಸಿಗದಂತೆ ಮಾಡಿ ಸಾಯಿಸುತ್ತಿರುವುದು ಸತ್ತು ಹೋಗಿರುವ ಮಾನವೀಯತೆಗೆ ಒಂದು ನಿದರ್ಶನವಾಗಿದೆ.

ಆಹಾರ ಸಿಗದೆ ಸಾಯುತ್ತಿರುವವರ ಕಥೆ ಒಂದೆಡೆಯಾದರೆ, ಸಿಗುತ್ತಿರುವ ಅಲ್ಪ ಸ್ವಲ್ಪ ಆಹಾರವನ್ನು ಪಡೆಯಲು ಹೋದವರು ವಾಪಸ್ ಬರುತ್ತಾರೆ ಎಂಬ ಧೈರ್ಯ ಗಾಝಾದ ಜನತೆಗೆ ಇಲ್ಲ. ಏಕೆಂದರೆ, ಆಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತವನ್ನು ಗುರಿಯಾಗಿಸಿ ಇಸ್ರೇಲ್ ಗುಂಡಿಕ್ಕುತ್ತಿದೆ. ಹಾಗಾಗಿ, ಆಹಾರ ಬದಲು ಅನೇಕರ ಹೆಣಗಳು ವಾಪಸ್ ತಾತ್ಕಾಲಿಕ ಟೆಂಟ್‌ಗಳಾದ ಮನೆಗಳಿಗೆ ಬಂದಿವೆ.

ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ಜಿಹೆಚ್‌ಎಫ್ ಗುಂಪು ಕಳೆದ ಮೇ ತಿಂಗಳಿನಿಂದ ಗಾಝಾದಲ್ಲಿ ಆಹಾರ ವಿತರಣೆ ನಡೆಸುತ್ತಿದೆ. ಇವರನ್ನು ಬಿಟ್ಟು ಬೇರೆಯವರಿಗೆ ಅವಕಾಶ ಇಲ್ಲ ಎಂಬ ವರದಿಗಳಿವೆ. ಈ ಜಿಹೆಚ್‌ಎಫ್‌ನ ನಾಲ್ಕು ಆಹಾರ ವಿತರಣಾ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತ 1,400 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಪಡೆ ಗುಂಡಿಕ್ಕಿ ಕೊಂದಿದೆ. ಹಾಗಾಗಿ, ಆಹಾರ ವಿತರಣೆಯ ನೆಪದಲ್ಲಿ ಜನರನ್ನು ಕೊಲ್ಲಲೆಂದೇ ಅಮೆರಿಕ-ಇಸ್ರೇಲ್ ಜಿಹೆಚ್‌ಎಫ್ ಆಹಾರ ವಿತರಣಾ ಕೇಂದ್ರಗಳನ್ನು ತೆರೆದಂತೆ ತೋರುತ್ತಿದೆ.

ಮಾನವೀಯ ನೆರವು ವಿತರಣೆಯ ಮೇಲಿನ ಇಸ್ರೇಲ್ ನಿರ್ಬಂಧಗಳು ಇತ್ತೀಚಿನ ದಿನಗಳಲ್ಲಿ ಭಾಗಶಃ ತೆಗೆದುಹಾಕಲಾಗಿದ್ದರೂ, ಪ್ಯಾಲೆಸ್ತೀನಿಯರು ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಕುಟುಂಬಗಳನ್ನು ಪೋಷಿಸಲು ಸಾಕಷ್ಟು ಆಹಾರವನ್ನು ಹುಡುಕಲು ಹೆಣಗಾಡುತ್ತಿದ್ದಾರೆ ಎಂದು ವಿಶ್ವಸಂಸ್ಥೆ ಮತ್ತು ಇತರ ಮಾನವೀಯ ಸಂಸ್ಥೆಗಳ ಅಧಿಕಾರಿಗಳು ಹೇಳುತ್ತಾರೆ.

ಆಹಾರ ಸಿಗದಂತೆ ಮಾಡಿರುವ ಇಸ್ರೇಲ್‌ನ ಅಮಾನವೀಯ ನಡೆಗೆ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸ್ವತಃ ಇಸ್ರೇಲ್ ವಿಮಾನದ ಮೂಲಕ ಗಾಝಾದ ಜನತೆಗೆ ಆಹಾರ ವಿತರಣೆ ಮಾಡಿದೆ ಎಂದು ವರದಿಯಾಗಿದೆ. ಆದರೆ, ಮಾನವೀಯ ಗುಂಪುಗಳು ವಿಮಾನದಿಂದ ಅಗತ್ಯ ವಸ್ತುಗಳನ್ನು ಎಸೆಯುವುದನ್ನು ವಿರೋಧಿಸಿದೆ. ಎಲ್ಲಾ ಗಡಿಗಳನ್ನು ತೆರೆದು ಗಾಝಾಗೆ ಅಗತ್ಯ ಸಾಮಾಗ್ರಿಗಳು ತಲುಪುವಂತೆ ಮಾಡಬೇಕು ಎಂದು ಆಗ್ರಹಿಸಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳು ಇಸ್ರೇಲ್ ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ ಗಾಝಾದಾದ್ಯಂತ ಇಸ್ರೇಲಿ ಪಡೆಗಳು ಕನಿಷ್ಠ 22 ಜನರನ್ನು ಹತ್ಯೆಗೈದಿವೆ. ಇದರಲ್ಲಿ 16 ಮಂದಿ ನೆರವು ಪಡೆಯಲು ನಿಂತವರು ಎಂದು ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ಅಲ್ ಜಝೀರಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಗಾಝಾ ಮೇಲೆ ನಡೆಸಿದ ದಾಳಿಯಿಂದ ಇದುವರೆಗೆ ಕನಿಷ್ಠ 60,430 ಜನರು ಸಾವನ್ನಪ್ಪಿದ್ದಾರೆ ಮತ್ತು 148,722 ಜನರು ಗಾಯಗೊಂಡಿದ್ದಾರೆ. ಇದುವರೆಗೆ 93 ಮಕ್ಕಳು ಸೇರಿದಂತೆ 175 ಜನರು ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾಗಿದ್ದಾರೆ.

ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿದೆ ಎಂದು ತನಗೆ ತಿಳಿದುಬಂದಿದೆ: ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...