Homeಕರ್ನಾಟಕಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

ಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

- Advertisement -
- Advertisement -

ರಾಜ್ಯದಲ್ಲಿ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ (ಸಂರಕ್ಷಿತ ಪ್ರದೇಶ) ಕಡಿಮೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಪರಿಸರಕ್ಕೆ ಅತ್ಯಂತ ಮಾರಕವಾಗಿದ್ದು, ರಿಯಲ್ ಎಸ್ಟೇಟ್ ಮಾಫಿಯಾಗೆ ಮಣೆ ಹಾಕಲು ನಮ್ಮ ಪ್ರಾಕೃತಿಕ ಸಂಪತ್ತನ್ನೇ ನಾಶ ಮಾಡುವ ಹುನ್ನಾರ ಎಂದು ಪರಿಸರ ಕಾರ್ಯಕರ್ತರ ರಾಜ್ಯ ಸಂಘಟನೆ ‘ಪರಿಸರಕ್ಕಾಗಿ ನಾವು’ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘಟನೆಯ ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ 2014ರ (ಕೆಟಿಸಿಡಿಎ) ಕಾಯ್ದೆಗೆ ತಿದ್ದುಪಡಿ ತಂದು, ಕೆರೆಗಳ ಸಂರಕ್ಷಿತ ಪ್ರದೇಶವನ್ನು ಕಡಿಮೆ ಮಾಡುವುದರಿಂದ, ಈಗಾಗಲೇ ಮಾಲಿನ್ಯದಿಂದ ತುಂಬಿರುವ ಮತ್ತಷ್ಟು ಕೊಳಕನ್ನು ಕೆರೆಗಳಿಗೆ ನೇರವಾಗಿ ಹರಿಸಲು ರಿಯಲ್ ಎಸ್ಟೇಟ್ ಮಾಫಿಯಾದವರಿಗೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದಿದ್ದಾರೆ.

ಪರಿಸರ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ನೈಸರ್ಗಿಕ ಸಂಪತ್ತು ಉಳಿಸಬೇಕೇಂಬ ಕಾಳಜಿಯುಳ್ಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಡೆದಿರುವ ಸಭೆಯೇ ಇಂತಹ ನಿರ್ಧಾರ ಕೈಗೊಂಡಿದೆ ಎಂದರೆ, ಸಭೆಯ ತೀರ್ಮಾನದ ಹಿಂದಿನ ರಾಜಕೀಯ ಪ್ರಭಾವ ಎಷ್ಟರ ಮಟ್ಟಿಗಿದೆ ಎಂಬುದನ್ನು ಯಾರು ಬೇಕಾದರೂ ಊಹಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಕೆರೆಗಳು ಹಾಗೂ ಮಳೆನೀರು ಸಾಗಿಸುವ ರಾಜಕಾಲುವೆಗಳು ಸುತ್ತಮುತ್ತಲಿನ ಪ್ರದೇಶ ಸಂರಕ್ಷಿತವಾಗಿರುವುದರಿಂದ ಅವುಗಳ ಒತ್ತುವರಿಗೆ ತಡೆಯಾಗುತ್ತದೆ. ಮಾಲಿನ್ಯ ಹರಿಯುವುದಕ್ಕೂ ತಡೆಯಾಗಿ, ಜೀವವೈವಿಧ್ಯತೆಗೆ ಅನುವಾಗುತ್ತದೆ. ಇಂತಹ ಬಫರ್ ಝೋನ್ ಅನ್ನೇ ಬಹುತೇಕ ಇಲ್ಲವಾಗಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿರುವುದು ನಿಜಕ್ಕೂ ದುಃಖ ತರುವಂತಹ ವಿಷಯ ಎಂದಿದ್ದಾರೆ.

ಸಾಮಾಜಿಕ ಕಾಳಜಿಯುಳ್ಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸರದ ಮೇಲೆ ಇಂತಹ ಅಕ್ರಮಣ ಮಾಡುವ ನಿರ್ಧಾರವನ್ನು ತೆಗೆದುಕೊಂಡಿರುವುದು ಬೇಸರ ಮೂಡಿಸಿದೆ. ಅವರ ಸುತ್ತಮುತ್ತಲಿನ ಪಟ್ಟಭದ್ರ ಹಿತಾಸಕ್ತಿಗಳಿಂದ ಇಂತಹ ನಿರ್ಧಾರವಾಗಿದ್ದರೆ ಮುಖ್ಯಮಂತ್ರಿಗಳು ಕೂಡಲೇ ಇದನ್ನು ವಾಪಸ್ ಪಡೆಯಬೇಕು. ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಹಿಂದಿನಂತೆಯೇ ವಿಸ್ತಾರವಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಒಂದು ಕೆರೆಯೂ ಕುಡಿಯುವ ನೀರನ್ನು ಹೊಂದಿಲ್ಲ. ಅಂತಹ ಯೋಗ್ಯತೆಯನ್ನು ಭೂ ಮಾಫಿಯಾದವರು, ರಿಯಲ್ ಎಸ್ಟೇಟ್ ಕುಳಗಳು ಕಳೆದಿದ್ದಾರೆ. ಕೆರೆಗಳ ಸುತ್ತ ಸಾವಿರಾರು ಅಪಾರ್ಟ್ ಮೆಂಟ್ ಗಳಿವೆ. ಎಸ್ ಟಿಪಿ ಅಳವಡಿಸುವುದು ಕಡ್ಡಾಯವಾಗಿದ್ದರೂ ಇವರಲ್ಲಿ ಬಹುತೇಕರು ತ್ಯಾಜ್ಯ ನೀರನ್ನು ಸಂಸ್ಕರಿಸುತ್ತಿಲ್ಲ. ತ್ಯಾಜ್ಯ ನೀರನ್ನೇ ಕೆರೆಗಳಿಗೆ ಹರಿಸುತ್ತಿದ್ದಾರೆ. ಇನ್ನು ಬಫರ್ ಝೋನ್ ಅನ್ನೂ ಕಡಿಮೆ ಮಾಡಿದರೆ ಅವರೆಲ್ಲರೂ ತ್ಯಾಜ್ಯವನ್ನು ನೇರವಾಗಿ ಕೆರೆಗೇ ಬಿಡುವುದಕ್ಕೆ ಅನುವಾಗುತ್ತದೆ. ಇಂತಹ ಕೆರೆಗಳು ರೋಗರುಜಿನಗಳನ್ನು ಹರಡುವ ತಾಣವಾಗುತ್ತವೆ ಎಂದು ರಾಮಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ರಾಜಕಾಲುವೆಗಳ ಬಫರ್ ಝೋನ್ ಅನ್ನು 15 ಮೀಟರ್, 10 ಮೀಟರ್, 5 ಮೀಟರ್‌ಗೆ ನಿಗದಿಪಡಿಸಲು ಸರ್ಕಾರ ಹೊರಟಿದೆ. ಜೊತೆಗೆ ಆ ಬಫರ್ ಝೋನ್‌ನಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲು ಯೋಜನೆ ರೂಪಿಸಿ ಟೆಂಡರ್ ಅನ್ನೂ ಕರೆಯಲಾಗಿದೆ. ಇದು ಕೂಡ ಬಹಳ ಅಪಾಯಕಾರಿ ಯೋಜನೆಯಾಗಿದ್ದು, ಇದನ್ನು ತಕ್ಷಣ ಕೈಬಿಡಬೇಕು ಎಂದು ಪರಿಸರಕ್ಕಾಗಿ ನಾವು ಸಂಘಟನೆ ಒತ್ತಾಯಿಸಿದೆ.

ಪರಿಸರಕ್ಕೆ ಮಾರಕವಾಗುವ ಬಫರ್ ಝೋನ್ ಕಡಿಮೆ ಮಾಡುವುದನ್ನು ಸರ್ಕಾರಕ್ಕೆ ಸಲಹೆ ನೀಡಿರುವವರಿಗೆ, ಹಿರಿಯರೂ ಹಾಗೂ ಪ್ರಪಂಚವನ್ನು ಹಲವು ದಶಕಗಳಿಂದ ಕಂಡಿರುವ ರಾಜಕಾರಿಣಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣೆ ಹಾಕಬಾರದು. ರಿಯಲ್ ಎಸ್ಟೇಟ್ ಕುಳಗಳಿಗೆ ಹಣಮಾಡಲು ಸಾಕಷ್ಟು ಜಾಗವಿದೆ. ಕೆರೆ ಮತ್ತು ರಾಜಕಾಲುವೆಗಳು ಹಾಗೂ ಬಫರ್ ಝೋನ್ ಅನ್ನು ಅವರಿಂದ ಉಳಿಸಬೇಕು. ಈ ಬಗ್ಗೆ ಕಠಿಣ ಕ್ರಮವನ್ನು ಮುಖ್ಯಮಂತ್ರಿಯವರು ತೆಗೆದುಕೊಳ್ಳಲೇಬೇಕಿದೆ ಎಂದಿದೆ.

‘ಬ್ರಾಂಡ್ ಬೆಂಗಳೂರು’ ಮಾಡಲು ಹೊರಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಎಲ್ಲವನ್ನೂ ಯೋಜನೆಗಳಿಂದಲೇ ಅಳೆಯಬಾರದು. ಮೂಲಸೌಕರ್ಯಕ್ಕೆ ಬೃಹತ್ ಯೋಜನೆಗಳು ಬೇಕು. ಹಾಗೆಂದು ಪರಿಸರವನ್ನು ಹಾಳು ಮಾಡುವ ಮಾಫಿಯಾಗೆ ಸರ್ಕಾರ ಮಣಿಯಬಾರದು. ಲಕ್ಷಾಂತರ ಸಸಿಗಳನ್ನು ನೆಟ್ಟರೆ, ಸಾವಿರಾರು ವಿದ್ಯಾರ್ಥಿಗಳಿಗೆ ಸಸಿಗಳನ್ನು ಬೆಳಸುವ ಜವಾಬ್ದಾರಿಯನ್ನು ನೀಡಿದರಷ್ಟೇ ಪರಿಸರ ಉಳಿಯುವುದಿಲ್ಲ. ಜಲಮೂಲಗಳಾದ ಕೆರೆಗಳಿಗೆ ಕಿಂಚಿತ್ತೂ ಅಡಚಣೆಯಾಗಬಾರದು. ರಾಜಕಾಲುವೆಯ ಸುತ್ತಮುತ್ತ ಜೀವವೈವಿಧ್ಯತೆಗೆ ಅವಕಾಶ ಮಾಡಲು ಬಫರ್ ಝೋನ್ ಅಗತ್ಯವಿದೆ. ಹೀಗಾಗಿ, ಕೆರೆಗಳು, ರಾಜಕಾಲುವೆಗಳು, ಬಫರ್ ಝೋನ್ ಅನ್ನು ಉಳಿಸಿಕೊಳ್ಳಲು ಡಿ.ಕೆ. ಶಿವಕುಮಾರ್ ಅವರು ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಯಾವುದೇ ಕಾರಣಕ್ಕೂ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಕಡಿಮೆ ಮಾಡಬಾರದು. ಇದರ ಪ್ರಸ್ತಾವವನ್ನು ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಸಂಘಟನೆ ಸಿಎಂ ಮತ್ತು ಡಿಸಿಎಂಗೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...