Homeಕರ್ನಾಟಕಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ...

ಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ಕುತೂಹಲ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ರಚಿಸಲಾದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿಯು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗ್ಗೆ 11 ಗಂಟೆಗೆ ಸಲ್ಲಿಕೆಯಾಗಲಿದೆ. ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿ ಕುರಿತು ಶಿಫಾರಸು ಮಾಡಲು ಈ ಆಯೋಗವನ್ನು ರಚಿಸಲಾಗಿತ್ತು.

ಆಯೋಗದ ಮೂಲಗಳ ಪ್ರಕಾರ, ಅಂತಿಮ ವರದಿ ಸಿದ್ಧವಾಗಿದೆ. ಇಂದು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಒಳ ಮೀಸಲಾತಿ ವಿಷಯದಿಂದಾಗಿ ಸಾರ್ವಜನಿಕ ಸೇವೆಗಳ ನೇಮಕಾತಿಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ವರದಿ ಸಲ್ಲಿಕೆಯಾದ ನಂತರ ಮತ್ತು ಶಿಫಾರಸುಗಳು ಅಂಗೀಕಾರಗೊಂಡ ನಂತರ ನೇಮಕಾತಿ ಪ್ರಕ್ರಿಯೆ ಪುನರಾರಂಭವಾಗಲಿದೆ.

ಆಯೋಗವು ಮೇ 5 ರಿಂದ 3 ತಿಂಗಳ ಸಮೀಕ್ಷೆ ನಡೆಸಿದ್ದು, ರಾಜ್ಯದಲ್ಲಿನ 1.16 ಕೋಟಿ ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 93 ರಷ್ಟು ಜನರನ್ನು ಗುರುತಿಸಿದೆ. ಆದರೆ, ಬೆಂಗಳೂರು ನಗರದಲ್ಲಿ ಮಾತ್ರ ಸಮೀಕ್ಷೆ ನಿಧಾನವಾಗಿದ್ದು, ಇಲ್ಲಿನ 13.62 ಲಕ್ಷ ಅಂದಾಜು ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 53 ರಷ್ಟು ಜನರನ್ನು ಮಾತ್ರ ಗುರುತಿಸಲಾಗಿದೆ.

ಸುಪ್ರೀಂ ಕೋರ್ಟ್ ಆಗಸ್ಟ್ 2024 ರಲ್ಲಿ ನೀಡಿದ ತೀರ್ಪಿನ ನಂತರ ರಾಜ್ಯ ಸರ್ಕಾರ ಈ ಆಯೋಗವನ್ನು ರಚಿಸಿತ್ತು. ಈ ತೀರ್ಪು ರಾಜ್ಯದಲ್ಲಿನ 101 ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲು ಅವಕಾಶ ಮಾಡಿಕೊಟ್ಟಿತ್ತು. ದಲಿತ ಎಡ (ಮಾದಿಗ) ಸಮುದಾಯಗಳು ಒಳ ಮೀಸಲಾತಿಗೆ ಪ್ರಮುಖ ಬೇಡಿಕೆ ಇಟ್ಟಿದ್ದು, ಮೀಸಲಾತಿ ಸೌಲಭ್ಯಗಳು ಇದುವರೆಗೆ ದಲಿತ ಬಲ (ಹೊಲೆಯ), ಭೋವಿ ಮತ್ತು ಲಂಬಾಣಿ ಸಮುದಾಯಗಳಿಗೆ ಮಾತ್ರ ದೊರೆತಿವೆ ಎಂದು ಆರೋಪಿಸಿವೆ.

ಒಳಮೀಸಲಾತಿ ಸಮೀಕ್ಷಾ ಅಂತಿಮ ವರದಿಯನ್ನು ಇಂದು ಸಲ್ಲಿಕೆಯಾಗಲಿದೆ. ಕೂಡಲೇ ಮುಂದಿನ ಸಚಿವ ಸಂಪುಟದಲ್ಲಿ ಮಂಡನೆಯಾಗಿ ಮುಂದಿನ ಅಧಿವೇಶನದಲ್ಲಿ ಚರ್ಚೆಯಾಗಿ ಜಾರಿಯಾಗಲೇಬೇಕು.

ಒಂದು ವೇಳೆ ಉಪ ಸಮಿತಿನೋ ಮತ್ತೊಂದೊ ಮಾಡುವ ಪ್ರಯತ್ನವನ್ನೇನಾದರೂ ಸರ್ಕಾರ ಮಾಡುವ ಪ್ರಯತ್ನ ಮಾಡಿದರೆ ನಿಜಕ್ಕೂ ಮೀಸಲಾತಿ ವಿರೋಧಿ ಬಿಜೆಪಿ ಸಂಘಪರಿವಾರದ ಖೂಳರು ಇದರ ಎಲ್ಲಾ ಲಾಭವನ್ನು ಪಡೆದೇ ಪಡೆಯುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.

ಮತ್ತೆ ಬಿಜೆಪಿಯ ಸಂಘಪರಿವಾರದ ಖೂಳರು ಇದರ ಲಾಭ ಪಡೆಯುತ್ತಾರೆಂದ ಒಳಮೀಸಲಾತಿ ಮಾಡಬೇಕಿಲ್ಲ.  35 ವರ್ಷಗಳ ನ್ಯಾಯದ ಬೇಡಿಕೆ ಇದು. ಇದನ್ನು ಜಾರಿ ಮಾಡಬೇಕಿರುವುದು ಕಾಂಗ್ರೆಸ್ ನ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಒಳಮೀಸಲಾತಿ ಪರ ಹೋರಾಟಗಾರ ಚಂದ್ರು ತರಹುಣಸೆ ತಿಳಿಸಿದ್ದಾರೆ.

ಒಳಮಿಸಲಾತಿ ವರದಿ ಸಲ್ಲಿಸಲು ಇಂದಿಗೆ (ಜು.4) ಸಮಯ ನಿಗದಿಯಾಗಿದೆ. ಹಾಗಂತ ಇದಕ್ಕಾಗಿ ಸಂಭ್ರಮಿಸಬೇಕಿಲ್ಲ ಮತ್ತು ಮೈ ಮರೆಯಬೇಕಿಲ್ಲ. ವರದಿ ಜಾರಿ ಆಗಿ ಸರ್ಕಾರದ ಆದೇಶದ ಪ್ರತಿ ಕೈ ಸೇರುವವರೆಗೂ ಸರ್ಕಾರದ ಮೇಲೆ ಒತ್ತಡ ನಿರಂತರವಾಗಿರಲಿ ಮತ್ತು ಒಳಮೀಸಲಾತಿ ಜಾರಿ ಪ್ರಮಾಣದಲ್ಲಿ ಅಂದರೇ ಪರ್ಸಂಟೇಜ್ ಹಂಚಿಕೆ ವಿಚಾರದಲ್ಲಿ ಯಾವ ಮೋಸ, ಅನ್ಯಾಯ ಆಗದಂತೆ ಹಕ್ಕೊತ್ತಾಯ ನಿರಂತರವಾಗಿರಲಿ. ಕಳೆದ ಮುವ್ವತೈದು ವರ್ಷಗಳಲ್ಲಿ ಆದ ಅದೆಷ್ಟೋ ನಂಬಿಕೆ ದ್ರೋಹಗಳು ಇನ್ನೂ ನಮ್ಮ ಕಣ್ಣಿಗೆ ಕಟ್ಟಿದಂತಿರುವಾಗ ಮತ್ತೊಂದು ನಂಬಿಕೆ ದ್ರೋಹ ಆಗದಂತೆ ಜಾಗ್ರತೆ ವಹಿಸೋಣ. ಸಂಭ್ರಮ ಅಂತ ಮೈ ಮರೆತು ಬಿಡೋದು ಬೇಡ. ಸದಾಶಿವ ಆಯೋಗದ ವರದಿ ಸಲ್ಲಿಕೆಯಾದಾಗ ಮತ್ತು ಮಾದುಸ್ವಾಮಿ ವರದಿ ಸಲ್ಲಿಕೆಯಾದಾಗಲೂ ಹೀಗೆಯೇ ಸಂಭ್ರಮ ಪಟ್ಟಿದ್ದು. ಕೊನೆಗೆ ಏನಾಯಿತೆಂಬ ಉದಾಹರಣೆಗೆ ನಾವೆ ಜೀವಂತ ಸಾಕ್ಷಿಗಳು ಇದ್ದೇವೆಯಲ್ಲ ಎಂದು ಹೋರಾಟಗಾರ ಬಿ ಆರ್ ಭಾಸ್ಕರ್ ಪ್ರಸಾದ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅಭಿಪ್ರಾಯಿಸಿದ್ದಾರೆ.

ಸೇನಾ ಅಧಿಕಾರಿಯಿಂದ ಸ್ಪೈಸ್‌ಜೆಟ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಪಂಚ್‌ಗಳಿಂದ ಹೊಡೆತ, ಪ್ರಜ್ಞಾಹೀನರಾಗಿ ನೆಲಕ್ಕೆ ಬಿದ್ದ ನೌಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...