Homeಕರ್ನಾಟಕಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ...

ಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ಕುತೂಹಲ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ರಚಿಸಲಾದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿಯು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗ್ಗೆ 11 ಗಂಟೆಗೆ ಸಲ್ಲಿಕೆಯಾಗಲಿದೆ. ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿ ಕುರಿತು ಶಿಫಾರಸು ಮಾಡಲು ಈ ಆಯೋಗವನ್ನು ರಚಿಸಲಾಗಿತ್ತು.

ಆಯೋಗದ ಮೂಲಗಳ ಪ್ರಕಾರ, ಅಂತಿಮ ವರದಿ ಸಿದ್ಧವಾಗಿದೆ. ಇಂದು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಒಳ ಮೀಸಲಾತಿ ವಿಷಯದಿಂದಾಗಿ ಸಾರ್ವಜನಿಕ ಸೇವೆಗಳ ನೇಮಕಾತಿಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ವರದಿ ಸಲ್ಲಿಕೆಯಾದ ನಂತರ ಮತ್ತು ಶಿಫಾರಸುಗಳು ಅಂಗೀಕಾರಗೊಂಡ ನಂತರ ನೇಮಕಾತಿ ಪ್ರಕ್ರಿಯೆ ಪುನರಾರಂಭವಾಗಲಿದೆ.

ಆಯೋಗವು ಮೇ 5 ರಿಂದ 3 ತಿಂಗಳ ಸಮೀಕ್ಷೆ ನಡೆಸಿದ್ದು, ರಾಜ್ಯದಲ್ಲಿನ 1.16 ಕೋಟಿ ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 93 ರಷ್ಟು ಜನರನ್ನು ಗುರುತಿಸಿದೆ. ಆದರೆ, ಬೆಂಗಳೂರು ನಗರದಲ್ಲಿ ಮಾತ್ರ ಸಮೀಕ್ಷೆ ನಿಧಾನವಾಗಿದ್ದು, ಇಲ್ಲಿನ 13.62 ಲಕ್ಷ ಅಂದಾಜು ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 53 ರಷ್ಟು ಜನರನ್ನು ಮಾತ್ರ ಗುರುತಿಸಲಾಗಿದೆ.

ಸುಪ್ರೀಂ ಕೋರ್ಟ್ ಆಗಸ್ಟ್ 2024 ರಲ್ಲಿ ನೀಡಿದ ತೀರ್ಪಿನ ನಂತರ ರಾಜ್ಯ ಸರ್ಕಾರ ಈ ಆಯೋಗವನ್ನು ರಚಿಸಿತ್ತು. ಈ ತೀರ್ಪು ರಾಜ್ಯದಲ್ಲಿನ 101 ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲು ಅವಕಾಶ ಮಾಡಿಕೊಟ್ಟಿತ್ತು. ದಲಿತ ಎಡ (ಮಾದಿಗ) ಸಮುದಾಯಗಳು ಒಳ ಮೀಸಲಾತಿಗೆ ಪ್ರಮುಖ ಬೇಡಿಕೆ ಇಟ್ಟಿದ್ದು, ಮೀಸಲಾತಿ ಸೌಲಭ್ಯಗಳು ಇದುವರೆಗೆ ದಲಿತ ಬಲ (ಹೊಲೆಯ), ಭೋವಿ ಮತ್ತು ಲಂಬಾಣಿ ಸಮುದಾಯಗಳಿಗೆ ಮಾತ್ರ ದೊರೆತಿವೆ ಎಂದು ಆರೋಪಿಸಿವೆ.

ಒಳಮೀಸಲಾತಿ ಸಮೀಕ್ಷಾ ಅಂತಿಮ ವರದಿಯನ್ನು ಇಂದು ಸಲ್ಲಿಕೆಯಾಗಲಿದೆ. ಕೂಡಲೇ ಮುಂದಿನ ಸಚಿವ ಸಂಪುಟದಲ್ಲಿ ಮಂಡನೆಯಾಗಿ ಮುಂದಿನ ಅಧಿವೇಶನದಲ್ಲಿ ಚರ್ಚೆಯಾಗಿ ಜಾರಿಯಾಗಲೇಬೇಕು.

ಒಂದು ವೇಳೆ ಉಪ ಸಮಿತಿನೋ ಮತ್ತೊಂದೊ ಮಾಡುವ ಪ್ರಯತ್ನವನ್ನೇನಾದರೂ ಸರ್ಕಾರ ಮಾಡುವ ಪ್ರಯತ್ನ ಮಾಡಿದರೆ ನಿಜಕ್ಕೂ ಮೀಸಲಾತಿ ವಿರೋಧಿ ಬಿಜೆಪಿ ಸಂಘಪರಿವಾರದ ಖೂಳರು ಇದರ ಎಲ್ಲಾ ಲಾಭವನ್ನು ಪಡೆದೇ ಪಡೆಯುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.

ಮತ್ತೆ ಬಿಜೆಪಿಯ ಸಂಘಪರಿವಾರದ ಖೂಳರು ಇದರ ಲಾಭ ಪಡೆಯುತ್ತಾರೆಂದ ಒಳಮೀಸಲಾತಿ ಮಾಡಬೇಕಿಲ್ಲ.  35 ವರ್ಷಗಳ ನ್ಯಾಯದ ಬೇಡಿಕೆ ಇದು. ಇದನ್ನು ಜಾರಿ ಮಾಡಬೇಕಿರುವುದು ಕಾಂಗ್ರೆಸ್ ನ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಒಳಮೀಸಲಾತಿ ಪರ ಹೋರಾಟಗಾರ ಚಂದ್ರು ತರಹುಣಸೆ ತಿಳಿಸಿದ್ದಾರೆ.

ಒಳಮಿಸಲಾತಿ ವರದಿ ಸಲ್ಲಿಸಲು ಇಂದಿಗೆ (ಜು.4) ಸಮಯ ನಿಗದಿಯಾಗಿದೆ. ಹಾಗಂತ ಇದಕ್ಕಾಗಿ ಸಂಭ್ರಮಿಸಬೇಕಿಲ್ಲ ಮತ್ತು ಮೈ ಮರೆಯಬೇಕಿಲ್ಲ. ವರದಿ ಜಾರಿ ಆಗಿ ಸರ್ಕಾರದ ಆದೇಶದ ಪ್ರತಿ ಕೈ ಸೇರುವವರೆಗೂ ಸರ್ಕಾರದ ಮೇಲೆ ಒತ್ತಡ ನಿರಂತರವಾಗಿರಲಿ ಮತ್ತು ಒಳಮೀಸಲಾತಿ ಜಾರಿ ಪ್ರಮಾಣದಲ್ಲಿ ಅಂದರೇ ಪರ್ಸಂಟೇಜ್ ಹಂಚಿಕೆ ವಿಚಾರದಲ್ಲಿ ಯಾವ ಮೋಸ, ಅನ್ಯಾಯ ಆಗದಂತೆ ಹಕ್ಕೊತ್ತಾಯ ನಿರಂತರವಾಗಿರಲಿ. ಕಳೆದ ಮುವ್ವತೈದು ವರ್ಷಗಳಲ್ಲಿ ಆದ ಅದೆಷ್ಟೋ ನಂಬಿಕೆ ದ್ರೋಹಗಳು ಇನ್ನೂ ನಮ್ಮ ಕಣ್ಣಿಗೆ ಕಟ್ಟಿದಂತಿರುವಾಗ ಮತ್ತೊಂದು ನಂಬಿಕೆ ದ್ರೋಹ ಆಗದಂತೆ ಜಾಗ್ರತೆ ವಹಿಸೋಣ. ಸಂಭ್ರಮ ಅಂತ ಮೈ ಮರೆತು ಬಿಡೋದು ಬೇಡ. ಸದಾಶಿವ ಆಯೋಗದ ವರದಿ ಸಲ್ಲಿಕೆಯಾದಾಗ ಮತ್ತು ಮಾದುಸ್ವಾಮಿ ವರದಿ ಸಲ್ಲಿಕೆಯಾದಾಗಲೂ ಹೀಗೆಯೇ ಸಂಭ್ರಮ ಪಟ್ಟಿದ್ದು. ಕೊನೆಗೆ ಏನಾಯಿತೆಂಬ ಉದಾಹರಣೆಗೆ ನಾವೆ ಜೀವಂತ ಸಾಕ್ಷಿಗಳು ಇದ್ದೇವೆಯಲ್ಲ ಎಂದು ಹೋರಾಟಗಾರ ಬಿ ಆರ್ ಭಾಸ್ಕರ್ ಪ್ರಸಾದ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅಭಿಪ್ರಾಯಿಸಿದ್ದಾರೆ.

ಸೇನಾ ಅಧಿಕಾರಿಯಿಂದ ಸ್ಪೈಸ್‌ಜೆಟ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಪಂಚ್‌ಗಳಿಂದ ಹೊಡೆತ, ಪ್ರಜ್ಞಾಹೀನರಾಗಿ ನೆಲಕ್ಕೆ ಬಿದ್ದ ನೌಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...