Homeಅಂತರಾಷ್ಟ್ರೀಯಆಸ್ಟ್ರೇಲಿಯಾದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಪ್ರತಿಭಟನೆ: ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ ಲಕ್ಷಾಂತರ...

ಆಸ್ಟ್ರೇಲಿಯಾದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಪ್ರತಿಭಟನೆ: ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ ಲಕ್ಷಾಂತರ ಜನರು

- Advertisement -
- Advertisement -

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಭಾನುವಾರ (ಆ.3) ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆಯಿತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದರು.

ಆಸ್ಟ್ರೇಲಿಯಾದ ಸುಪ್ರೀಂ ಕೋರ್ಟ್ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಲು ಅನುಮತಿ ನೀಡಿದ ಮರು ದಿನವೇ ಈ ಬೃಹತ್ ಪ್ರತಿಭಟನೆ ನಡೆದಿದೆ. ಆಯೋಜಕರು ಸುಪ್ರೀಂ ಕೋರ್ಟ್‌ ಆದೇಶ ‘ಐತಿಹಾಸಿಕ’ ಎಂದು ಕರೆದಿದ್ದಾರೆ.

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ನರಮೇಧ ಖಂಡಿಸಿ, ಗಾಝಾ ಜನತೆಗೆ ಆಹಾರ ಅಗತ್ಯ ಸಾಮಾಗ್ರಿಗಳು ಸಿಗದಂತೆ ದಿಗ್ಬಂಧನ ವಿಧಿಸಿರುವುದನ್ನು ವಿರೋಧಿಸಿ ರ್‍ಯಾಲಿ ಆಯೋಜಿಸಲಾಗಿತ್ತು.

ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ಕೊನೆಯದಾಗಿ 2023ರಲ್ಲಿ ಸುಮಾರು 50 ಸಾವಿರ ಜನರು ‘ವರ್ಲ್ಡ್ ಪ್ರೈಡ್‌’ ಮೆರವಣಿಗೆ ನಡೆಸಿದ್ದರು. ಆ ಬಳಿಕ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸುವುದನ್ನು ನಿಷೇಧಿಸಲಾಗಿತ್ತು.

ಭಾನುವಾರ ಸಿಡ್ನಿಯಲ್ಲಿ ಭಾರೀ ಮಳೆಯಾಗುತ್ತಿದ್ದರೂ ಲೆಕ್ಕಿಸದೆ ಲಕ್ಷಾಂತರ ಜನರು ಪ್ರತಿಭಟನಾ ರ್‍ಯಾಲಿಯಲ್ಲಿ ಪಾಲ್ಗೊಂಡಿರುವುದು ಮಾನವೀಯತೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಸಾಕ್ಷಿ ಎಂದು ಕೆಲ ಮಾಧ್ಯಮ ವರದಿಗಳು ಬಣ್ಣಿಸಿವೆ.

ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸಾಂಜೆ. ಫೆಡರಲ್ ಎಂಪಿ ಎಡ್ ಹುಸಿಕ್ ಮತ್ತು ಮಾಜಿ ಎನ್‌ಎಸ್‌ಡಬ್ಲ್ಯೂ ಪ್ರೀಮಿಯರ್ ಬಾಬ್ ಕಾರ್ ಕೂಡ ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗವಹಿಸಿರುವುದು ಗಮನಾರ್ಹ ಎಂದು ಬಿಬಿಸಿ ವರದಿ ಮಾಡಿದೆ.

“ಶೇಮ್ ಶೇಮ್ ಇಸ್ರೇಲ್, ಶೇಮ್ ಶೇಮ್ ಅಮೆರಿಕ”. “ನಮಗೆ ಗಾಝಾದಲ್ಲಿ ಕದನ ವಿರಾಮ ಬೇಕು, ಅದು ಯಾವಾಗ ಆಗುತ್ತದೆ?”. “ಫ್ರೀ ಪ್ಯಾಲೆಸ್ಟೈನ್” ಇತ್ಯಾದಿ ಘೋಷಣೆಗಳನ್ನು ರ್‍ಯಾಲಿಯಲ್ಲಿ ಭಾಗವಹಿಸಿದ್ದ ಜನ ಸಮೂಹ ಕೂಗುತ್ತಿತ್ತು ಎಂದು ವರದಿಗಳು ಹೇಳಿವೆ.

ಜನರು ಕುಟುಂಬ ಸಮೇತರಾಗಿ, ತಮ್ಮ ಪುಟ್ಟ ಕಂದಮ್ಮಗಳೊಂದಿಗೆ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಲೆಕ್ ಬೆವಿಲ್ಲೆ ಎಂಬ ವ್ಯಕ್ತಿ,”ನಾವಿರೋದು ಭೂಮಿಯ ಇನ್ನೊಂದು ಬದಿ. ಗಾಝಾಕ್ಕಿಂತ ತುಂಬಾ ದೂರ ಎಂದು ನನಗೆ ಗೊತ್ತಿದೆ. ಆದರೆ, ಅಲ್ಲಿನ ಯುದ್ಧ ನಮ್ಮ ಮೇಲೂ ಪರಿಣಾಮ ಬೀರುತ್ತದೆ” ಎಂದಿದ್ದಾರೆ. ಅವರು ಗಾಝಾದ ಮಕ್ಕಳನ್ನು ತಮ್ಮ ಮೂರು ವರ್ಷದ ಮಗ ಫ್ರಾಂಕಿಗೆ ಹೋಲಿಸುತ್ತಾರೆ. ನಾವು ಇನ್ನೂ ಹೆಚ್ಚಿನ ಸಹಾಯ ಅವರಿಗೆ ಮಾಡಬಹುದು” ಎಂದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಪ್ರತಿಭಟನಾ ರ್‍ಯಾಲಿ ಆರಂಭಗೊಂಡು ಎರಡು ಗಂಟೆಗಳ ನಂತರ ನ್ಯೂ ಸೌತ್ ವೇಲ್ (ಎನ್‌ಎಸ್‌ಡಬ್ಲ್ಯು) ಪೊಲೀಸರು ಒಂದು ಪಠ್ಯ ಸಂದೇಶ ಕಳುಹಿಸಿದರು. ಅದರಲ್ಲಿ, “ಆಯೋಜಕರೊಂದಿಗೆ ಸಮಾಲೋಚಿಸಿ, ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಮೆರವಣಿಗೆಯನ್ನು ನಿಲ್ಲಿಸಬೇಕಾಗಿದೆ ಮತ್ತು ಮುಂದಿನ ಸೂಚನೆಗಳಿಗಾಗಿ ಕಾಯಬೇಕಾಗಿದೆ” ಎಂದು ಬರೆಯಲಾಗಿತ್ತು.

ಸೇತುವೆಯ ಮೇಲಿದ್ದ ಪ್ರತಿಯೊಬ್ಬರೂ ಉತ್ತರಕ್ಕೆ ನಡೆಯುವುದನ್ನು ನಿಲ್ಲಿಸಿ ‘ನಿಯಂತ್ರಿತ’ ರೀತಿಯಲ್ಲಿ ನಗರದ ಕಡೆಗೆ ಹಿಂದಿರುಗಿ ಎಂದು ಅದರಲ್ಲಿ ಮನವಿ ಮಾಡಲಾಗಿತ್ತು ಎಂದು ವರದಿಗಳು ವಿವರಿಸಿವೆ.

ಪ್ರತಿಭಟನಾ ರ್‍ಯಾಲಿಯಲ್ಲಿ ಸುಮಾರು 90 ಸಾವಿರ ಜನರು ಪಾಲ್ಗೊಂಡಿದ್ದರು ಎಂದು ಎನ್‌ಎಸ್‌ಡಬ್ಲ್ಯು ಪೊಲೀಸರು ಅಂದಾಜಿಸಿದ್ದಾರೆ. ಆದರೆ, ಪ್ರತಿಭಟನೆ ಆಯೋಜಸಿದ್ದ ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್ ಸಿಡ್ನಿ’ಯ ಫೇಸ್‌ಬುಕ್ ಪೋಸ್ಟ್‌ನಲ್ಲಿ ಸುಮಾರು 300,000 ಜನರು ಭಾಗವಹಿಸಿದ್ದರು ಎಂದು ಹೇಳಲಾಗಿದೆ.

ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಷರತ್ತುಗಳೊಂದಿಗೆ ಫ್ರಾನ್ಸ್, ಕೆನಡಾ ಮತ್ತು ಯುಕೆ ಪ್ರತ್ಯೇಕವಾಗಿ ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಸ್ಥಾನಮಾನ ನೀಡಲು ಮುಂದಾಗಿವೆ. ಹಾಗಾಗಿ, ಆಸ್ಟ್ರೇಲಿಯಾ ಕೂಡ ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ ಎಂದು ಪರಿಗಣಿಸಲು ಆಗ್ರಹ ಹೆಚ್ಚಾಗಿದೆ.

ಇಸ್ರೇಲ್‌ನಿಂದ 22,000ಕ್ಕೂ ಹೆಚ್ಚು ನೆರವಿನ ಟ್ರಕ್‌ಗಳು ನಿರ್ಬಂಧ: ಗಾಜಾ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...