Homeಅಂತರಾಷ್ಟ್ರೀಯಆಸ್ಟ್ರೇಲಿಯಾದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಪ್ರತಿಭಟನೆ: ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ ಲಕ್ಷಾಂತರ...

ಆಸ್ಟ್ರೇಲಿಯಾದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಪ್ರತಿಭಟನೆ: ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ ಲಕ್ಷಾಂತರ ಜನರು

- Advertisement -
- Advertisement -

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಭಾನುವಾರ (ಆ.3) ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆಯಿತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದರು.

ಆಸ್ಟ್ರೇಲಿಯಾದ ಸುಪ್ರೀಂ ಕೋರ್ಟ್ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಲು ಅನುಮತಿ ನೀಡಿದ ಮರು ದಿನವೇ ಈ ಬೃಹತ್ ಪ್ರತಿಭಟನೆ ನಡೆದಿದೆ. ಆಯೋಜಕರು ಸುಪ್ರೀಂ ಕೋರ್ಟ್‌ ಆದೇಶ ‘ಐತಿಹಾಸಿಕ’ ಎಂದು ಕರೆದಿದ್ದಾರೆ.

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ನರಮೇಧ ಖಂಡಿಸಿ, ಗಾಝಾ ಜನತೆಗೆ ಆಹಾರ ಅಗತ್ಯ ಸಾಮಾಗ್ರಿಗಳು ಸಿಗದಂತೆ ದಿಗ್ಬಂಧನ ವಿಧಿಸಿರುವುದನ್ನು ವಿರೋಧಿಸಿ ರ್‍ಯಾಲಿ ಆಯೋಜಿಸಲಾಗಿತ್ತು.

ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ಕೊನೆಯದಾಗಿ 2023ರಲ್ಲಿ ಸುಮಾರು 50 ಸಾವಿರ ಜನರು ‘ವರ್ಲ್ಡ್ ಪ್ರೈಡ್‌’ ಮೆರವಣಿಗೆ ನಡೆಸಿದ್ದರು. ಆ ಬಳಿಕ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸುವುದನ್ನು ನಿಷೇಧಿಸಲಾಗಿತ್ತು.

ಭಾನುವಾರ ಸಿಡ್ನಿಯಲ್ಲಿ ಭಾರೀ ಮಳೆಯಾಗುತ್ತಿದ್ದರೂ ಲೆಕ್ಕಿಸದೆ ಲಕ್ಷಾಂತರ ಜನರು ಪ್ರತಿಭಟನಾ ರ್‍ಯಾಲಿಯಲ್ಲಿ ಪಾಲ್ಗೊಂಡಿರುವುದು ಮಾನವೀಯತೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಸಾಕ್ಷಿ ಎಂದು ಕೆಲ ಮಾಧ್ಯಮ ವರದಿಗಳು ಬಣ್ಣಿಸಿವೆ.

ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸಾಂಜೆ. ಫೆಡರಲ್ ಎಂಪಿ ಎಡ್ ಹುಸಿಕ್ ಮತ್ತು ಮಾಜಿ ಎನ್‌ಎಸ್‌ಡಬ್ಲ್ಯೂ ಪ್ರೀಮಿಯರ್ ಬಾಬ್ ಕಾರ್ ಕೂಡ ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗವಹಿಸಿರುವುದು ಗಮನಾರ್ಹ ಎಂದು ಬಿಬಿಸಿ ವರದಿ ಮಾಡಿದೆ.

“ಶೇಮ್ ಶೇಮ್ ಇಸ್ರೇಲ್, ಶೇಮ್ ಶೇಮ್ ಅಮೆರಿಕ”. “ನಮಗೆ ಗಾಝಾದಲ್ಲಿ ಕದನ ವಿರಾಮ ಬೇಕು, ಅದು ಯಾವಾಗ ಆಗುತ್ತದೆ?”. “ಫ್ರೀ ಪ್ಯಾಲೆಸ್ಟೈನ್” ಇತ್ಯಾದಿ ಘೋಷಣೆಗಳನ್ನು ರ್‍ಯಾಲಿಯಲ್ಲಿ ಭಾಗವಹಿಸಿದ್ದ ಜನ ಸಮೂಹ ಕೂಗುತ್ತಿತ್ತು ಎಂದು ವರದಿಗಳು ಹೇಳಿವೆ.

ಜನರು ಕುಟುಂಬ ಸಮೇತರಾಗಿ, ತಮ್ಮ ಪುಟ್ಟ ಕಂದಮ್ಮಗಳೊಂದಿಗೆ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಲೆಕ್ ಬೆವಿಲ್ಲೆ ಎಂಬ ವ್ಯಕ್ತಿ,”ನಾವಿರೋದು ಭೂಮಿಯ ಇನ್ನೊಂದು ಬದಿ. ಗಾಝಾಕ್ಕಿಂತ ತುಂಬಾ ದೂರ ಎಂದು ನನಗೆ ಗೊತ್ತಿದೆ. ಆದರೆ, ಅಲ್ಲಿನ ಯುದ್ಧ ನಮ್ಮ ಮೇಲೂ ಪರಿಣಾಮ ಬೀರುತ್ತದೆ” ಎಂದಿದ್ದಾರೆ. ಅವರು ಗಾಝಾದ ಮಕ್ಕಳನ್ನು ತಮ್ಮ ಮೂರು ವರ್ಷದ ಮಗ ಫ್ರಾಂಕಿಗೆ ಹೋಲಿಸುತ್ತಾರೆ. ನಾವು ಇನ್ನೂ ಹೆಚ್ಚಿನ ಸಹಾಯ ಅವರಿಗೆ ಮಾಡಬಹುದು” ಎಂದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಪ್ರತಿಭಟನಾ ರ್‍ಯಾಲಿ ಆರಂಭಗೊಂಡು ಎರಡು ಗಂಟೆಗಳ ನಂತರ ನ್ಯೂ ಸೌತ್ ವೇಲ್ (ಎನ್‌ಎಸ್‌ಡಬ್ಲ್ಯು) ಪೊಲೀಸರು ಒಂದು ಪಠ್ಯ ಸಂದೇಶ ಕಳುಹಿಸಿದರು. ಅದರಲ್ಲಿ, “ಆಯೋಜಕರೊಂದಿಗೆ ಸಮಾಲೋಚಿಸಿ, ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಮೆರವಣಿಗೆಯನ್ನು ನಿಲ್ಲಿಸಬೇಕಾಗಿದೆ ಮತ್ತು ಮುಂದಿನ ಸೂಚನೆಗಳಿಗಾಗಿ ಕಾಯಬೇಕಾಗಿದೆ” ಎಂದು ಬರೆಯಲಾಗಿತ್ತು.

ಸೇತುವೆಯ ಮೇಲಿದ್ದ ಪ್ರತಿಯೊಬ್ಬರೂ ಉತ್ತರಕ್ಕೆ ನಡೆಯುವುದನ್ನು ನಿಲ್ಲಿಸಿ ‘ನಿಯಂತ್ರಿತ’ ರೀತಿಯಲ್ಲಿ ನಗರದ ಕಡೆಗೆ ಹಿಂದಿರುಗಿ ಎಂದು ಅದರಲ್ಲಿ ಮನವಿ ಮಾಡಲಾಗಿತ್ತು ಎಂದು ವರದಿಗಳು ವಿವರಿಸಿವೆ.

ಪ್ರತಿಭಟನಾ ರ್‍ಯಾಲಿಯಲ್ಲಿ ಸುಮಾರು 90 ಸಾವಿರ ಜನರು ಪಾಲ್ಗೊಂಡಿದ್ದರು ಎಂದು ಎನ್‌ಎಸ್‌ಡಬ್ಲ್ಯು ಪೊಲೀಸರು ಅಂದಾಜಿಸಿದ್ದಾರೆ. ಆದರೆ, ಪ್ರತಿಭಟನೆ ಆಯೋಜಸಿದ್ದ ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್ ಸಿಡ್ನಿ’ಯ ಫೇಸ್‌ಬುಕ್ ಪೋಸ್ಟ್‌ನಲ್ಲಿ ಸುಮಾರು 300,000 ಜನರು ಭಾಗವಹಿಸಿದ್ದರು ಎಂದು ಹೇಳಲಾಗಿದೆ.

ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಷರತ್ತುಗಳೊಂದಿಗೆ ಫ್ರಾನ್ಸ್, ಕೆನಡಾ ಮತ್ತು ಯುಕೆ ಪ್ರತ್ಯೇಕವಾಗಿ ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಸ್ಥಾನಮಾನ ನೀಡಲು ಮುಂದಾಗಿವೆ. ಹಾಗಾಗಿ, ಆಸ್ಟ್ರೇಲಿಯಾ ಕೂಡ ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ ಎಂದು ಪರಿಗಣಿಸಲು ಆಗ್ರಹ ಹೆಚ್ಚಾಗಿದೆ.

ಇಸ್ರೇಲ್‌ನಿಂದ 22,000ಕ್ಕೂ ಹೆಚ್ಚು ನೆರವಿನ ಟ್ರಕ್‌ಗಳು ನಿರ್ಬಂಧ: ಗಾಜಾ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...