Homeಅಂತರಾಷ್ಟ್ರೀಯಆಸ್ಟ್ರೇಲಿಯಾದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಪ್ರತಿಭಟನೆ: ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ ಲಕ್ಷಾಂತರ...

ಆಸ್ಟ್ರೇಲಿಯಾದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಪ್ರತಿಭಟನೆ: ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ ಲಕ್ಷಾಂತರ ಜನರು

- Advertisement -
- Advertisement -

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಭಾನುವಾರ (ಆ.3) ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆಯಿತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದರು.

ಆಸ್ಟ್ರೇಲಿಯಾದ ಸುಪ್ರೀಂ ಕೋರ್ಟ್ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಲು ಅನುಮತಿ ನೀಡಿದ ಮರು ದಿನವೇ ಈ ಬೃಹತ್ ಪ್ರತಿಭಟನೆ ನಡೆದಿದೆ. ಆಯೋಜಕರು ಸುಪ್ರೀಂ ಕೋರ್ಟ್‌ ಆದೇಶ ‘ಐತಿಹಾಸಿಕ’ ಎಂದು ಕರೆದಿದ್ದಾರೆ.

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ನರಮೇಧ ಖಂಡಿಸಿ, ಗಾಝಾ ಜನತೆಗೆ ಆಹಾರ ಅಗತ್ಯ ಸಾಮಾಗ್ರಿಗಳು ಸಿಗದಂತೆ ದಿಗ್ಬಂಧನ ವಿಧಿಸಿರುವುದನ್ನು ವಿರೋಧಿಸಿ ರ್‍ಯಾಲಿ ಆಯೋಜಿಸಲಾಗಿತ್ತು.

ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ಕೊನೆಯದಾಗಿ 2023ರಲ್ಲಿ ಸುಮಾರು 50 ಸಾವಿರ ಜನರು ‘ವರ್ಲ್ಡ್ ಪ್ರೈಡ್‌’ ಮೆರವಣಿಗೆ ನಡೆಸಿದ್ದರು. ಆ ಬಳಿಕ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸುವುದನ್ನು ನಿಷೇಧಿಸಲಾಗಿತ್ತು.

ಭಾನುವಾರ ಸಿಡ್ನಿಯಲ್ಲಿ ಭಾರೀ ಮಳೆಯಾಗುತ್ತಿದ್ದರೂ ಲೆಕ್ಕಿಸದೆ ಲಕ್ಷಾಂತರ ಜನರು ಪ್ರತಿಭಟನಾ ರ್‍ಯಾಲಿಯಲ್ಲಿ ಪಾಲ್ಗೊಂಡಿರುವುದು ಮಾನವೀಯತೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಸಾಕ್ಷಿ ಎಂದು ಕೆಲ ಮಾಧ್ಯಮ ವರದಿಗಳು ಬಣ್ಣಿಸಿವೆ.

ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸಾಂಜೆ. ಫೆಡರಲ್ ಎಂಪಿ ಎಡ್ ಹುಸಿಕ್ ಮತ್ತು ಮಾಜಿ ಎನ್‌ಎಸ್‌ಡಬ್ಲ್ಯೂ ಪ್ರೀಮಿಯರ್ ಬಾಬ್ ಕಾರ್ ಕೂಡ ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗವಹಿಸಿರುವುದು ಗಮನಾರ್ಹ ಎಂದು ಬಿಬಿಸಿ ವರದಿ ಮಾಡಿದೆ.

“ಶೇಮ್ ಶೇಮ್ ಇಸ್ರೇಲ್, ಶೇಮ್ ಶೇಮ್ ಅಮೆರಿಕ”. “ನಮಗೆ ಗಾಝಾದಲ್ಲಿ ಕದನ ವಿರಾಮ ಬೇಕು, ಅದು ಯಾವಾಗ ಆಗುತ್ತದೆ?”. “ಫ್ರೀ ಪ್ಯಾಲೆಸ್ಟೈನ್” ಇತ್ಯಾದಿ ಘೋಷಣೆಗಳನ್ನು ರ್‍ಯಾಲಿಯಲ್ಲಿ ಭಾಗವಹಿಸಿದ್ದ ಜನ ಸಮೂಹ ಕೂಗುತ್ತಿತ್ತು ಎಂದು ವರದಿಗಳು ಹೇಳಿವೆ.

ಜನರು ಕುಟುಂಬ ಸಮೇತರಾಗಿ, ತಮ್ಮ ಪುಟ್ಟ ಕಂದಮ್ಮಗಳೊಂದಿಗೆ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಲೆಕ್ ಬೆವಿಲ್ಲೆ ಎಂಬ ವ್ಯಕ್ತಿ,”ನಾವಿರೋದು ಭೂಮಿಯ ಇನ್ನೊಂದು ಬದಿ. ಗಾಝಾಕ್ಕಿಂತ ತುಂಬಾ ದೂರ ಎಂದು ನನಗೆ ಗೊತ್ತಿದೆ. ಆದರೆ, ಅಲ್ಲಿನ ಯುದ್ಧ ನಮ್ಮ ಮೇಲೂ ಪರಿಣಾಮ ಬೀರುತ್ತದೆ” ಎಂದಿದ್ದಾರೆ. ಅವರು ಗಾಝಾದ ಮಕ್ಕಳನ್ನು ತಮ್ಮ ಮೂರು ವರ್ಷದ ಮಗ ಫ್ರಾಂಕಿಗೆ ಹೋಲಿಸುತ್ತಾರೆ. ನಾವು ಇನ್ನೂ ಹೆಚ್ಚಿನ ಸಹಾಯ ಅವರಿಗೆ ಮಾಡಬಹುದು” ಎಂದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಪ್ರತಿಭಟನಾ ರ್‍ಯಾಲಿ ಆರಂಭಗೊಂಡು ಎರಡು ಗಂಟೆಗಳ ನಂತರ ನ್ಯೂ ಸೌತ್ ವೇಲ್ (ಎನ್‌ಎಸ್‌ಡಬ್ಲ್ಯು) ಪೊಲೀಸರು ಒಂದು ಪಠ್ಯ ಸಂದೇಶ ಕಳುಹಿಸಿದರು. ಅದರಲ್ಲಿ, “ಆಯೋಜಕರೊಂದಿಗೆ ಸಮಾಲೋಚಿಸಿ, ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಮೆರವಣಿಗೆಯನ್ನು ನಿಲ್ಲಿಸಬೇಕಾಗಿದೆ ಮತ್ತು ಮುಂದಿನ ಸೂಚನೆಗಳಿಗಾಗಿ ಕಾಯಬೇಕಾಗಿದೆ” ಎಂದು ಬರೆಯಲಾಗಿತ್ತು.

ಸೇತುವೆಯ ಮೇಲಿದ್ದ ಪ್ರತಿಯೊಬ್ಬರೂ ಉತ್ತರಕ್ಕೆ ನಡೆಯುವುದನ್ನು ನಿಲ್ಲಿಸಿ ‘ನಿಯಂತ್ರಿತ’ ರೀತಿಯಲ್ಲಿ ನಗರದ ಕಡೆಗೆ ಹಿಂದಿರುಗಿ ಎಂದು ಅದರಲ್ಲಿ ಮನವಿ ಮಾಡಲಾಗಿತ್ತು ಎಂದು ವರದಿಗಳು ವಿವರಿಸಿವೆ.

ಪ್ರತಿಭಟನಾ ರ್‍ಯಾಲಿಯಲ್ಲಿ ಸುಮಾರು 90 ಸಾವಿರ ಜನರು ಪಾಲ್ಗೊಂಡಿದ್ದರು ಎಂದು ಎನ್‌ಎಸ್‌ಡಬ್ಲ್ಯು ಪೊಲೀಸರು ಅಂದಾಜಿಸಿದ್ದಾರೆ. ಆದರೆ, ಪ್ರತಿಭಟನೆ ಆಯೋಜಸಿದ್ದ ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್ ಸಿಡ್ನಿ’ಯ ಫೇಸ್‌ಬುಕ್ ಪೋಸ್ಟ್‌ನಲ್ಲಿ ಸುಮಾರು 300,000 ಜನರು ಭಾಗವಹಿಸಿದ್ದರು ಎಂದು ಹೇಳಲಾಗಿದೆ.

ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಷರತ್ತುಗಳೊಂದಿಗೆ ಫ್ರಾನ್ಸ್, ಕೆನಡಾ ಮತ್ತು ಯುಕೆ ಪ್ರತ್ಯೇಕವಾಗಿ ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಸ್ಥಾನಮಾನ ನೀಡಲು ಮುಂದಾಗಿವೆ. ಹಾಗಾಗಿ, ಆಸ್ಟ್ರೇಲಿಯಾ ಕೂಡ ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ ಎಂದು ಪರಿಗಣಿಸಲು ಆಗ್ರಹ ಹೆಚ್ಚಾಗಿದೆ.

ಇಸ್ರೇಲ್‌ನಿಂದ 22,000ಕ್ಕೂ ಹೆಚ್ಚು ನೆರವಿನ ಟ್ರಕ್‌ಗಳು ನಿರ್ಬಂಧ: ಗಾಜಾ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...