Homeಮುಖಪುಟಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್

ಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್

- Advertisement -
- Advertisement -

ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿ ಬಂಧಿಸಲು ಪೊಲೀಸರಿಗೆ ನಿರ್ದೇಶಿಸಲಾಗುವುದು, ನ್ಯಾಯಾಂಗ ನಿಂದನೆ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಸಿದ ಬಳಿಕ, ಸಾರಿಗೆ ನೌಕಕರು ತಮ್ಮ ಮುಷ್ಕರವನ್ನು ಮಂಗಳವಾರ ಸಂಜೆ (ಆ.5) ವಾಪಸ್ ಪಡೆದಿದ್ದಾರೆ.

ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಣೆ ಮಾಡಿದ್ದ ಅನಿರ್ಧಾಷ್ಟವಧಿ ಮುಷ್ಕರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬೆಂಗಳೂರಿನ ಜೆ ಸುನೀಲ್‌ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ಮಂಗಳವಾರ ನಡೆಸಿತು.

ರಾಜ್ಯ ಸರ್ಕಾರ ಜುಲೈ 17ರಂದು ಎಸ್ಮಾ ಜಾರಿ ಮಾಡಿದ್ದು, ಕಾಯ್ದೆಯ ನಿಬಂಧನೆಯ ಪ್ರಕಾರ ಯೂನಿಯನ್‌ ಕರೆ ನೀಡಿರುವ ಮುಷ್ಕರವು ಅಕ್ರಮವಾಗಿದೆ. ಹೀಗಾಗಿ, ದಂಡನೀಯ ಕ್ರಮಕೈಗೊಳ್ಳಬಹುದಾಗಿದೆ. ನಿನ್ನೆ (ಸೋಮವಾರ) ಮುಷ್ಕರಕ್ಕೆ ತಡೆ ನೀಡಿರುವ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಲಾಗಿದೆ” ಎಂದು ನ್ಯಾಯಾಲಯವು ಆದೇಶಿಸಿದೆ.

ಸಂಧಾನಕ್ಕೆ ಒಳಪಟ್ಟು ಮುಷ್ಕರವನ್ನು ವಾಪಸ್ ಪಡೆಯಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಕೆಲಸಗಾರರ ಒಕ್ಕೂಟ (ಐಐಟಿಯುಸಿ) ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ರಸ್ತೆ ನೌಕರರ ಮಹಾಮಂಡಳಿ; ಉಳಿದ ಯೂನಿಯನ್‌ಗಳನ್ನು ಪ್ರತ್ಯೇಕವಾಗಿ ಪಕ್ಷಕಾರರನ್ನಾಗಿಸಲು ಅರ್ಜಿದಾರರಿಗೆ ಆದೇಶಿಸಿರುವ ನ್ಯಾಯಾಲಯವು, ಇಂದಿನ (ಮಂಗಳವಾರ) ಆದೇಶವನ್ನು ಅವರಿಗೆ ತಲುಪಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಆಗಸ್ಟ್‌ 7ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ ಪೀಠವು, ಮುಷ್ಕರಕ್ಕೆ ಕರೆ ನೀಡಿರುವ ಯೂನಿಯನ್‌ಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಹೇಳಿದೆ. ಎಸ್ಮಾ ಜಾರಿಯಾಗಿರುವಾಗ ಮುಷ್ಕರ ನಡೆಸಿರುವುದು ಕಾನೂನುಬಾಹಿರವಾಗಿದೆ. ಎಸ್ಮಾ ಅಡಿ ಮುಷ್ಕರಕ್ಕೆ ಬೆಂಬಲ ನೀಡುವ ಯಾರನ್ನು ಬೇಕಾದರೂ ಪೊಲೀಸರು ಬಂಧಿಸುವ ಅಧಿಕಾರ ಹೊಂದಲಿದ್ದಾರೆ ಎಂದಿದೆ.

ಈಗಾಗಲೇ ನಡೆಸಿರುವ ಮುಷ್ಕರವು ಕಾನೂನಿನ ಪ್ರಕಾರ ಅಕ್ರಮವಾಗಿದೆ. ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿರುವುದಕ್ಕೆ ಯೂನಿಯನ್‌ಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕೈಗೊಳ್ಳಬೇಕಾಗುತ್ತದೆ. ನಾಳೆ (ಬುಧವಾರ) ಮುಷ್ಕರ ನಿಲ್ಲಬೇಕು. ಎಸ್ಮಾ ಕಾಯ್ದೆಯ ಸೆಕ್ಷನ್‌ 8ರ ಅಡಿ ಪೊಲೀಸರು ಬಂಧಿಸುವ ಅಧಿಕಾರ ಹೊಂದಲಿದ್ದು, ಪದಾಧಿಕಾರಿಗಳನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಲಾಗುವುದು” ಎಂದು ಮೌಖಿಕವಾಗಿ ನ್ಯಾಯಾಲಯ ಹೇಳಿದೆ.

ನಿಮ್ಮ ಬೇಡಿಕೆಗಳನ್ನು ಸರ್ಕಾರದ ಜೊತೆ ಚರ್ಚಿಸಿ ಬಗೆ ಹರಿಸಿಕೊಳ್ಳಿ. ಜನರಿಗೆ ತೊಂದೆರೆ ಉಂಟು ಮಾಡಲು ಸಾಧ್ಯವಿಲ್ಲ. ಯೂನಿಯನ್ ಅದನ್ನೇ ಮಾಡುತ್ತಿದೆ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಒಟ್ಟು ನಾಲ್ಕು ನಿಗಮಗಳಿದ್ದು, ನ್ಯಾಯಾಲಯದ ಮಧ್ಯಂತರ ಆದೇಶದ ಹೊರತಾಗಿಯೂ ಮೂರು ನಿಗಮಗಳ ಸಿಬ್ಬಂದಿ ಮುಷ್ಕರ ಮುಂದುವರಿಸಿದ್ದಾರೆ. ಸಿಬ್ಬಂದಿ ಕೊರತೆಯಿಂದ ಶೇ.30-40 ಬಸ್‌ಗಳು ಮಾತ್ರ ಓಡಾಡುತ್ತಿವೆ. ಮುಖ್ಯಮಂತ್ರಿ ಸಾರಿಗೆ ಸಿಬ್ಬಂದಿಯ ಜಂಟಿ ಕ್ರಿಯಾ ಸಮಿತಿಯೊಂದಿಗೆ ಸಭೆ ನಡೆಸಿದ್ದಾರೆ. ಕೈಗಾರಿಕಾ ವಿವಾದ ಇತ್ಯರ್ಥ ಕಾಯ್ದೆ ಅಡಿ ಸಾರಿಗೆ ಆಯುಕ್ತರ ಜೊತೆ ಸಂಬಂಧಿತ ಸಂಧಾನ ಸಭೆ ನಡೆಸಲಾಗಿದೆ. ಇದರ ಮುಂದಿನ ಸಭೆಯು ಆಗಸ್ಟ್‌ 7ಕ್ಕೆ ನಿಗದಿಯಾಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಕೆಲಸಗಾರರ ಒಕ್ಕೂಟದ ಪರ ವಕೀಲರು, “ಸೋಮವಾರ ಸಂಜೆ ಮುಷ್ಕರಕ್ಕೆ ತಡೆ ಕೋರಿರುವ ಅರ್ಜಿ ಕೊಟ್ಟಿದ್ದಾರೆ. ಇದಕ್ಕೆ ವಕಾಲತ್ತು ಹಾಕಲಾಗಿದೆ. ಬೆಂಗಳೂರಿನಲ್ಲಿ ಶೇ. 90ರಷ್ಟು ಬಿಎಂಟಿಸಿ ಬಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಸಂಧಾನ ನಡೆಯುತ್ತಿದೆ. ಮುಷ್ಕರವನ್ನು ನಿಲ್ಲಿಸುತ್ತಿದ್ದೇವೆ” ಎಂದು ಪೀಠಕ್ಕೆ ವಾಗ್ದಾನ ನೀಡಿದ್ದಾರೆ ಎಂದು barandbench.com ವರದಿ ಮಾಡಿದೆ.

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...