Homeಮುಖಪುಟಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್

ಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್

- Advertisement -
- Advertisement -

ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿ ಬಂಧಿಸಲು ಪೊಲೀಸರಿಗೆ ನಿರ್ದೇಶಿಸಲಾಗುವುದು, ನ್ಯಾಯಾಂಗ ನಿಂದನೆ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಸಿದ ಬಳಿಕ, ಸಾರಿಗೆ ನೌಕಕರು ತಮ್ಮ ಮುಷ್ಕರವನ್ನು ಮಂಗಳವಾರ ಸಂಜೆ (ಆ.5) ವಾಪಸ್ ಪಡೆದಿದ್ದಾರೆ.

ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಣೆ ಮಾಡಿದ್ದ ಅನಿರ್ಧಾಷ್ಟವಧಿ ಮುಷ್ಕರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬೆಂಗಳೂರಿನ ಜೆ ಸುನೀಲ್‌ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ಮಂಗಳವಾರ ನಡೆಸಿತು.

ರಾಜ್ಯ ಸರ್ಕಾರ ಜುಲೈ 17ರಂದು ಎಸ್ಮಾ ಜಾರಿ ಮಾಡಿದ್ದು, ಕಾಯ್ದೆಯ ನಿಬಂಧನೆಯ ಪ್ರಕಾರ ಯೂನಿಯನ್‌ ಕರೆ ನೀಡಿರುವ ಮುಷ್ಕರವು ಅಕ್ರಮವಾಗಿದೆ. ಹೀಗಾಗಿ, ದಂಡನೀಯ ಕ್ರಮಕೈಗೊಳ್ಳಬಹುದಾಗಿದೆ. ನಿನ್ನೆ (ಸೋಮವಾರ) ಮುಷ್ಕರಕ್ಕೆ ತಡೆ ನೀಡಿರುವ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಲಾಗಿದೆ” ಎಂದು ನ್ಯಾಯಾಲಯವು ಆದೇಶಿಸಿದೆ.

ಸಂಧಾನಕ್ಕೆ ಒಳಪಟ್ಟು ಮುಷ್ಕರವನ್ನು ವಾಪಸ್ ಪಡೆಯಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಕೆಲಸಗಾರರ ಒಕ್ಕೂಟ (ಐಐಟಿಯುಸಿ) ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ರಸ್ತೆ ನೌಕರರ ಮಹಾಮಂಡಳಿ; ಉಳಿದ ಯೂನಿಯನ್‌ಗಳನ್ನು ಪ್ರತ್ಯೇಕವಾಗಿ ಪಕ್ಷಕಾರರನ್ನಾಗಿಸಲು ಅರ್ಜಿದಾರರಿಗೆ ಆದೇಶಿಸಿರುವ ನ್ಯಾಯಾಲಯವು, ಇಂದಿನ (ಮಂಗಳವಾರ) ಆದೇಶವನ್ನು ಅವರಿಗೆ ತಲುಪಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಆಗಸ್ಟ್‌ 7ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ ಪೀಠವು, ಮುಷ್ಕರಕ್ಕೆ ಕರೆ ನೀಡಿರುವ ಯೂನಿಯನ್‌ಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಹೇಳಿದೆ. ಎಸ್ಮಾ ಜಾರಿಯಾಗಿರುವಾಗ ಮುಷ್ಕರ ನಡೆಸಿರುವುದು ಕಾನೂನುಬಾಹಿರವಾಗಿದೆ. ಎಸ್ಮಾ ಅಡಿ ಮುಷ್ಕರಕ್ಕೆ ಬೆಂಬಲ ನೀಡುವ ಯಾರನ್ನು ಬೇಕಾದರೂ ಪೊಲೀಸರು ಬಂಧಿಸುವ ಅಧಿಕಾರ ಹೊಂದಲಿದ್ದಾರೆ ಎಂದಿದೆ.

ಈಗಾಗಲೇ ನಡೆಸಿರುವ ಮುಷ್ಕರವು ಕಾನೂನಿನ ಪ್ರಕಾರ ಅಕ್ರಮವಾಗಿದೆ. ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿರುವುದಕ್ಕೆ ಯೂನಿಯನ್‌ಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕೈಗೊಳ್ಳಬೇಕಾಗುತ್ತದೆ. ನಾಳೆ (ಬುಧವಾರ) ಮುಷ್ಕರ ನಿಲ್ಲಬೇಕು. ಎಸ್ಮಾ ಕಾಯ್ದೆಯ ಸೆಕ್ಷನ್‌ 8ರ ಅಡಿ ಪೊಲೀಸರು ಬಂಧಿಸುವ ಅಧಿಕಾರ ಹೊಂದಲಿದ್ದು, ಪದಾಧಿಕಾರಿಗಳನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಲಾಗುವುದು” ಎಂದು ಮೌಖಿಕವಾಗಿ ನ್ಯಾಯಾಲಯ ಹೇಳಿದೆ.

ನಿಮ್ಮ ಬೇಡಿಕೆಗಳನ್ನು ಸರ್ಕಾರದ ಜೊತೆ ಚರ್ಚಿಸಿ ಬಗೆ ಹರಿಸಿಕೊಳ್ಳಿ. ಜನರಿಗೆ ತೊಂದೆರೆ ಉಂಟು ಮಾಡಲು ಸಾಧ್ಯವಿಲ್ಲ. ಯೂನಿಯನ್ ಅದನ್ನೇ ಮಾಡುತ್ತಿದೆ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಒಟ್ಟು ನಾಲ್ಕು ನಿಗಮಗಳಿದ್ದು, ನ್ಯಾಯಾಲಯದ ಮಧ್ಯಂತರ ಆದೇಶದ ಹೊರತಾಗಿಯೂ ಮೂರು ನಿಗಮಗಳ ಸಿಬ್ಬಂದಿ ಮುಷ್ಕರ ಮುಂದುವರಿಸಿದ್ದಾರೆ. ಸಿಬ್ಬಂದಿ ಕೊರತೆಯಿಂದ ಶೇ.30-40 ಬಸ್‌ಗಳು ಮಾತ್ರ ಓಡಾಡುತ್ತಿವೆ. ಮುಖ್ಯಮಂತ್ರಿ ಸಾರಿಗೆ ಸಿಬ್ಬಂದಿಯ ಜಂಟಿ ಕ್ರಿಯಾ ಸಮಿತಿಯೊಂದಿಗೆ ಸಭೆ ನಡೆಸಿದ್ದಾರೆ. ಕೈಗಾರಿಕಾ ವಿವಾದ ಇತ್ಯರ್ಥ ಕಾಯ್ದೆ ಅಡಿ ಸಾರಿಗೆ ಆಯುಕ್ತರ ಜೊತೆ ಸಂಬಂಧಿತ ಸಂಧಾನ ಸಭೆ ನಡೆಸಲಾಗಿದೆ. ಇದರ ಮುಂದಿನ ಸಭೆಯು ಆಗಸ್ಟ್‌ 7ಕ್ಕೆ ನಿಗದಿಯಾಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಕೆಲಸಗಾರರ ಒಕ್ಕೂಟದ ಪರ ವಕೀಲರು, “ಸೋಮವಾರ ಸಂಜೆ ಮುಷ್ಕರಕ್ಕೆ ತಡೆ ಕೋರಿರುವ ಅರ್ಜಿ ಕೊಟ್ಟಿದ್ದಾರೆ. ಇದಕ್ಕೆ ವಕಾಲತ್ತು ಹಾಕಲಾಗಿದೆ. ಬೆಂಗಳೂರಿನಲ್ಲಿ ಶೇ. 90ರಷ್ಟು ಬಿಎಂಟಿಸಿ ಬಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಸಂಧಾನ ನಡೆಯುತ್ತಿದೆ. ಮುಷ್ಕರವನ್ನು ನಿಲ್ಲಿಸುತ್ತಿದ್ದೇವೆ” ಎಂದು ಪೀಠಕ್ಕೆ ವಾಗ್ದಾನ ನೀಡಿದ್ದಾರೆ ಎಂದು barandbench.com ವರದಿ ಮಾಡಿದೆ.

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...