Homeಮುಖಪುಟಸಂವಿಧಾನ ದಿನ ಆಚರಿಸದಿದ್ದನ್ನು ಪ್ರಶ್ನಿಸಿದ್ದಕ್ಕೆ ಗುಜರಾತ್‌ ವಿಧಾನಸಭೆಯಿಂದ ಮೇವಾನಿ ಹೊರಕ್ಕೆ...

ಸಂವಿಧಾನ ದಿನ ಆಚರಿಸದಿದ್ದನ್ನು ಪ್ರಶ್ನಿಸಿದ್ದಕ್ಕೆ ಗುಜರಾತ್‌ ವಿಧಾನಸಭೆಯಿಂದ ಮೇವಾನಿ ಹೊರಕ್ಕೆ…

- Advertisement -
- Advertisement -

“ಗುಜರಾತ್‌‌ನ ಮುಖ್ಯಮಂತ್ರಿ ವಿಜಯ್‌ ರೂಪಾಣಿ ಮನುಸ್ಮೃತಿಯನ್ನು ಅನುಸರಿಸುತ್ತಿದ್ದರೆಯೆ ಹೊರತು ಸಂವಿಧಾನವನ್ನಲ್ಲ” ಎಂಬುದಾಗಿ ಹೇಳಿಕೆ ನೀಡಿದ ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿಯವರನ್ನು ಗುಜರಾತ್ ವಿಧಾನಸಭಾ ಸ್ಪೀಕರ್ ಮೂರು ದಿನಗಳ ಕಾಲ ಇಂದು ಅಮಾನತುಗೊಳಿಸಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಜಿಗ್ನೇಶ್‌ ಮೇವಾನಿಯವರು, ಸಂವಿಧಾನವನ್ನು ಬೆಂಬಲಿಸುವಾಗ ಅಮಾನತುಗೊಂಡಿದ್ದಕ್ಕೆ ನನಗೆ ಹೆಮ್ಮೆ ಇದೆ ಎಂದು ತಿಳಿಸಿದ್ದಾರೆ.

ನವೆಂಬರ್ 26 ಅನ್ನು ಸಂವಿಧಾನ ದಿನವನ್ನಾಗಿ ಆಚರಿಸದಿರುವ ಸರ್ಕಾರದ ನಡೆಯನ್ನು ಖಂಡಿಸಿದ ಅವರು ಮನುವಾದಿ ಸರ್ಕಾರವು ಸಂವಿಧಾನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿಲ್ಲ ಎಂದು ಟೀಕಿಸಿದ್ದಾರೆ.

ಈ ಹಿಂದೆ ವಿಧಾನಸಭೆಯಲ್ಲಿ ಮಾತನಾಡುವಾಗ ಸ್ಪೀಕರ್ ರಾಜೇಂದ್ರ ತ್ರಿವೇದಿ ನನ್ನ ಮೈಕ್ ಮ್ಯೂಟ್ ಮಾಡಿದ್ದರು. ದಲಿತ ಶಾಸಕರನ್ನು ಅಮಾನತುಗೊಳಿಸಿ ಮತ್ತು ವಿಧಾನಸಭೆಯಿಂದ ಹೊರಗೆ ಕಳಿಸಿ ಈಗ ಸಂವಿಧಾನದ ಬಗ್ಗೆ ಮಾತನಾಡಲು ಯೋಜಿಸಿದ್ದಾರೆ. ”ಇದೇ ಗುಜರಾತ್‌ ಮಾದರಿ’ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

0
ಕೋವಿಡ್ -19 ವಿರುದ್ಧದ 'ಕೋವಿಶೀಲ್ಡ್‌' ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. TTS ಅಥವಾ...