Homeಕರ್ನಾಟಕBREAKING NEWS| ಧರ್ಮಸ್ಥಳದಲ್ಲಿ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ-VIDEO

BREAKING NEWS| ಧರ್ಮಸ್ಥಳದಲ್ಲಿ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ-VIDEO

- Advertisement -
- Advertisement -

ಧರ್ಮಸ್ಥಳ: ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಸುಮಾರು 60-70 ಜನರಿದ್ದ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ ವರದಿಯಾಗಿದೆ.

ಧರ್ಮಸ್ಥಳದ ಸಮೀಪದ ಸೌಜನ್ಯ ಅವರ ಮನೆಯ ಬಳಿ ಸಂದರ್ಶನ ನಡೆಸುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ದಾಳಿಗೆ ಒಳಗಾದವರು ಕುಡ್ಲ ರ್ಯಾಂಪೇಜ್ ಯೂಟ್ಯೂಬ್ ಚಾನೆಲ್‌ನ ಅಜಯ್ ಅಂಚನ್, ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲ ರ್ಯಾಂಪೇಜ್‌ನ ಕ್ಯಾಮೆರಾ ಪರ್ಸನ್ ಎಂದು ಗುರುತಿಸಲಾಗಿದೆ. ಈ ದಾಳಿಯಲ್ಲಿ ಇವರಿಗೆ ತೀವ್ರ ಗಾಯಗಳಾಗಿದ್ದು, ಅವರ ಕ್ಯಾಮೆರಾ ಮತ್ತು ಇತರ ಉಪಕರಣಗಳನ್ನು ಧ್ವಂಸ ಮಾಡಲಾಗಿದೆ.

ಘಟನೆಯ ವಿವರ:

  • ಸಂದರ್ಶನ ಸಂದರ್ಭ: ಬಿಗ್‌ಬಾಸ್ ಕನ್ನಡ ರಿಯಾಲಿಟಿ ಶೋನ ಸ್ಪರ್ಧಿ ರಜತ್ ಅವರು ಸೌಜನ್ಯ ಅವರ ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಅವರನ್ನು ಸಂದರ್ಶನ ಮಾಡಲು ಈ ಯೂಟ್ಯೂಬರ್‌ಗಳು ತೆರಳಿದ್ದರು.
  • ದಾಳಿ ನಡೆದ ಸ್ಥಳ: ಸೌಜನ್ಯ ಅವರ ಮನೆಯ ಪಾಂಗಳ ಕ್ರಾಸ್ ಸಮೀಪ ಈ ಸಂದರ್ಶನ ನಡೆಯುತ್ತಿದ್ದಾಗ, ಸುಮಾರು 50 ರಿಂದ 100 ಜನರ ದೊಡ್ಡ ಗುಂಪು ಇವರ ಮೇಲೆ ಹಠಾತ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.
  • ದಾಳಿಯ ಕಾರಣ: ದಾಳಿ ನಡೆಸಿದವರು “ಧರ್ಮಸ್ಥಳದ ಹೆಸರು ಕೆಡಿಸುತ್ತಿದ್ದೀರಿ” ಎಂದು ಆರೋಪಿಸಿ, ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
  • ಪರಿಣಾಮ: ದಾಳಿಯಲ್ಲಿ ಗಾಯಗೊಂಡ ಎಲ್ಲರನ್ನು ಉಜಿರೆಯ ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಅವರೊಂದಿಗೆ ಮಾತನಾಡಿದ ಹೋರಾಟಗಾರರ ಪ್ರಕಾರ, ಘಟನೆ ನಡೆದು ಅರ್ಧ ಗಂಟೆಯಷ್ಟೇ ಆಗಿದ್ದು, ತಕ್ಷಣವೇ ಉನ್ನತ ಮಟ್ಟದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಗೂಂಡಾಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯನ್ನು ಕರ್ನಾಟಕದ ಡಿಜಿಟಲ್ ಮಾಧ್ಯಮಗಳ ವೇದಿಕೆಯಾದ ಡಿಜಿಟಲ್ ಮೀಡಿಯಾ ಫಾರ್ ಡೆಮಾಕ್ರಸಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ.

ಈ ಘಟನೆಯು ಕರ್ನಾಟಕದಲ್ಲಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿಯಾಗಿದೆ ಎಂದು ವ್ಯಾಪಕವಾಗಿ ಖಂಡಿಸಲಾಗುತ್ತಿದೆ.

‘ನಿಮ್ಮ ಪಾದ ತೊಳೆಯಲು ಗಂಗಾ ಮಾತೆ ಬಂದಿದ್ದಾಳೆ, ನಿಮ್ಮನ್ನು ಸೀದಾ ಸ್ವರ್ಗಕ್ಕೆ ಕೊಂಡೊಯ್ಯುತ್ತಾಳೆ’: ಪ್ರವಾಹ ಸಂತ್ರಸ್ತರಿಗೆ ಹೇಳಿದ ಉತ್ತರ ಪ್ರದೇಶ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...