Homeಮುಖಪುಟಅಲಿಗಢ್: ವಿದೇಶಿ ಉತ್ಪನ್ನಗಳ ಖರೀದಿ ಭಯೋತ್ಪಾದನೆ, ಮತಾಂತರ ಮತ್ತು 'ಲವ್ ಜಿಹಾದ್'ಗೆ ಹಣಕಾಸು ಒದಗಿಸುತ್ತದೆ -...

ಅಲಿಗಢ್: ವಿದೇಶಿ ಉತ್ಪನ್ನಗಳ ಖರೀದಿ ಭಯೋತ್ಪಾದನೆ, ಮತಾಂತರ ಮತ್ತು ‘ಲವ್ ಜಿಹಾದ್’ಗೆ ಹಣಕಾಸು ಒದಗಿಸುತ್ತದೆ – ಸಿಎಂ ಯೋಗಿ

- Advertisement -
- Advertisement -

ಅಲಿಗಢ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿದೇಶಿ ಉತ್ಪನ್ನಗಳನ್ನು ಖರೀದಿಸುವುದರಿಂದ ಬಂದ ಲಾಭವು ಭಯೋತ್ಪಾದನೆ, ಮತಾಂತರ ಮತ್ತು ‘ಲವ್ ಜಿಹಾದ್’ನಂತಹ ದೇಶ ವಿರೋಧಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತದೆ ಎಂದು ಹೇಳಿಕೆ ನೀಡಿ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ಅವರ ಈ ಹೇಳಿಕೆ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ನಾಂದಿ ಹಾಡಿದೆ.

ದೇಶೀಯ ಉತ್ಪನ್ನಗಳಿಗೆ ಒತ್ತು

ರಾಜ್ಯ ಸರ್ಕಾರದ ‘ಒಂದು ಜಿಲ್ಲೆ, ಒಂದು ಉತ್ಪನ್ನ’ (ODOP) ಕಾರ್ಯಕ್ರಮದಡಿ ಅಲಿಗಢದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಯೋಗಿ, ಪ್ರಜೆಗಳು ವಿಶೇಷವಾಗಿ ಹಬ್ಬಗಳ ಸಂದರ್ಭದಲ್ಲಿ ‘ಸ್ವದೇಶಿ’ ಉತ್ಪನ್ನಗಳನ್ನು ಮಾತ್ರ ಖರೀದಿಸಬೇಕು ಎಂದು ಕರೆ ನೀಡಿದರು. “ನೀವು ವಿದೇಶಿ ವಸ್ತುಗಳನ್ನು ಖರೀದಿಸಿದಾಗ, ಅದರ ಲಾಭ ವಿದೇಶಗಳಿಗೆ ಹೋಗುತ್ತದೆ. ಆ ಹಣವು ದೇಶದ ಸ್ಥಿರತೆಗೆ ಧಕ್ಕೆ ತರುವ ಭಯೋತ್ಪಾದನೆ, ಲವ್ ಜಿಹಾದ್ ಮತ್ತು ಮತಾಂತರ ಚಟುವಟಿಕೆಗಳಿಗೆ ಬಳಕೆಯಾಗುತ್ತದೆ,” ಎಂದು ಅವರು ಆತಂಕ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್ ಲೋಕಲ್’ ಅಭಿಯಾನವನ್ನು ಬಲಪಡಿಸಲು ಈ ಹೇಳಿಕೆ ನೀಡಿರುವುದಾಗಿ ಅವರು ತಿಳಿಸಿದರು. ಆರ್ಥಿಕ ಸ್ವಾವಲಂಬನೆಯನ್ನು ರಾಷ್ಟ್ರೀಯ ಭದ್ರತೆಗೆ ಜೋಡಿಸುವುದು ಇದರ ಮುಖ್ಯ ಉದ್ದೇಶ ಎಂದು ಅವರು ಹೇಳಿದರು.

ಅಲಿಗಢದ ಸಾಂಪ್ರದಾಯಿಕ ಬೀಗಗಳ ಉದ್ಯಮವನ್ನು ಉದಾಹರಣೆಯಾಗಿ ನೀಡಿದ ಸಿಎಂ, 2017ರ ಮೊದಲು ಮಾರುಕಟ್ಟೆ ಚೀನಾ ಉತ್ಪನ್ನಗಳಿಂದ ತುಂಬಿ ಹೋಗಿತ್ತು. ಇದರಿಂದ ಸ್ಥಳೀಯ ಕುಶಲಕರ್ಮಿಗಳ ಜೀವನಕ್ಕೆ ಹೊಡೆತ ಬಿದ್ದಿತ್ತು ಎಂದು ಹೇಳಿದರು. ಆದರೆ, ODOP ಉಪಕ್ರಮವು ಪ್ರಾದೇಶಿಕ ಉತ್ಪಾದನೆಯನ್ನು ಪುನಶ್ಚೇತನಗೊಳಿಸಿದೆ ಎಂದು ಅವರು ಪ್ರತಿಪಾದಿಸಿದರು.

ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ

ವಿದೇಶಿ ಸರಕುಗಳ ಖರೀದಿ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವುದರ ನಡುವೆ ಯಾವುದೇ ದೃಢವಾದ ಪುರಾವೆಗಳಿಲ್ಲ ಎಂಬುದು ವಿಶ್ಲೇಷಕರ ಅಭಿಪ್ರಾಯವಾಗಿದೆ. ಸಿಎಂ ಯೋಗಿ ಅವರ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಕೆಲವರು ಯೋಗಿ ಅವರ ಹೇಳಿಕೆಯನ್ನು ರಾಷ್ಟ್ರೀಯತೆ ಮತ್ತು ಆರ್ಥಿಕ ಜಾಗೃತಿಯ ಸಂಕೇತವೆಂದು ಬಣ್ಣಿಸಿದ್ದಾರೆ. “ಸ್ವದೇಶಿ ಕೇವಲ ಆರ್ಥಿಕತೆಯ ಪ್ರಶ್ನೆಯಲ್ಲ, ಇದು ರಾಷ್ಟ್ರೀಯತೆಯ ವಿಷಯ. ವಿದೇಶಿ ವಸ್ತುಗಳ ಮೇಲೆ ಖರ್ಚು ಮಾಡುವ ಪ್ರತಿಯೊಂದು ರೂಪಾಯಿಯೂ ಭಾರತಕ್ಕೆ ಹಾನಿ ಮಾಡಬಹುದು,” ಎಂದು X (ಹಿಂದಿನ ಟ್ವಿಟರ್) ಬಳಕೆದಾರರೊಬ್ಬರು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಹೆಚ್ಚಿನ ಜನರು ಈ ಹೇಳಿಕೆಯನ್ನು “ಭಯ ಹುಟ್ಟಿಸುವ ತಂತ್ರ” ಎಂದು ಟೀಕಿಸಿದ್ದಾರೆ. “ಗ್ರಾಹಕರ ಆಯ್ಕೆಗಳನ್ನು ಭಯೋತ್ಪಾದನೆಯೊಂದಿಗೆ ಜೋಡಿಸುವುದು ರಾಜಕೀಯ ತಂತ್ರದ ಹೊರತಾಗಿ ಬೇರೇನೂ ಅಲ್ಲ. ಇದು ವಾಸ್ತವಿಕ ನೀತಿಯಲ್ಲ,” ಎಂದು ಮತ್ತೊಬ್ಬ X ಬಳಕೆದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೆಡ್ಡಿಟ್ ಫೋರಮ್‌ಗಳು ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ, ಈ ಹೇಳಿಕೆಯ ಕುರಿತು ವ್ಯಂಗ್ಯಭರಿತ ಪೋಸ್ಟ್‌ಗಳು ಮತ್ತು ಮೀಮ್‌ಗಳು ಹರಿದಾಡುತ್ತಿವೆ. ವಿದೇಶಿ ವ್ಯಾಪಾರವನ್ನು ರಾಷ್ಟ್ರವಿರೋಧಿ ಚಟುವಟಿಕೆಗಳೊಂದಿಗೆ ಸಮೀಕರಿಸುತ್ತಿರುವ ಬಗ್ಗೆ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ಒಬ್ಬ ರೆಡ್ಡಿಟ್ ಬಳಕೆದಾರರು, “ಬಸ್ ಅಬ್ PM ಬನಾ ಹಿ ದೊ” (ಇನ್ನು ಇವರನ್ನು ಪ್ರಧಾನಿ ಮಾಡಿಬಿಡಿ) ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿ, ಈ ಹೇಳಿಕೆಯು ಆರ್ಥಿಕ ತರ್ಕಕ್ಕಿಂತ ಹೆಚ್ಚಾಗಿ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಹೊಂದಿದೆ ಎಂದು ಸೂಚಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಉಲ್ಲೇಖಿಸಿ, ಮುಸ್ಲಿಮೇತರರ ಟ್ರಿಬ್ಯೂನಲ್ ಪ್ರಕರಣ ಕೈಬಿಡಲು ಅಸ್ಸಾಂ ಸರಕಾರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...