Homeಕರ್ನಾಟಕಸುಳ್ಳು ಸುದ್ದಿ ಪ್ರಸಾರ ಆರೋಪ: ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್

ಸುಳ್ಳು ಸುದ್ದಿ ಪ್ರಸಾರ ಆರೋಪ: ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್

ಸುವರ್ಣ ನ್ಯೂಸ್‌ನ ವರದಿಗಾರ, ಕ್ಯಾಮರಾ ಮ್ಯಾನ್‌ ವಿರುದ್ದವೂ ಪ್ರಕರಣ ದಾಖಲಾಗಿದೆ, ಧರ್ಮಸ್ಥಳ, ಬೆಳ್ತಂಗಡಿ ಠಾಣೆಗಳ ಪೊಲೀಸರು ಒಟ್ಟು 7 ಎಫ್‌ಐಆರ್ ದಾಖಲಿಸಿದ್ದಾರೆ

- Advertisement -
- Advertisement -

ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಬುಧವಾರ (ಆ.6) ಸಂಜೆ ನಾಲ್ವರು ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಮತ್ತು ಇತರ ಘಟನೆಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಲ್ಕು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿವೆ.

1. ಕುಡ್ಲ ರ್‍ಯಾಂಪೇಜ್ ಯೂಟ್ಯೂಬ್ ಚಾನೆಲ್‌ನ ಮಾಲೀಕ ಅಜಯ್ ಅಂಚನ್ ಅವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿದೆ.

ಬುಧವಾರ (ಆ.6) ಸಂಜೆ ಧರ್ಮಸ್ಥಳ ಪಾಂಗಳ ಕ್ರಾಸ್‌ನಲ್ಲಿ ವ್ಯಕ್ತಿಯೊಬ್ಬರ ವಿಡಿಯೊ ಬೈಟ್ ಪಡೆಯುತ್ತಿದ್ದಾಗ ಸ್ಥಳಕ್ಕೆ ಬಂದ ಸುಮಾರು 15 ರಿಂದ 50 ಜನರ ತಂಡ ತನ್ನ ಕ್ಯಾಮರಾಮ್ಯಾನ್ ಸುಹಾಸ್, ಸಂಚಾರಿ ಸ್ಟುಡಿಯೋ ಚಾನೆಲ್‌ನ  ಸಂತೋಷ್ ಮತ್ತು ಯುನೈಟೆಡ್ ಮೀಡಿಯಾ ಚಾನೆಲ್‌ನ ಅಭಿಷೇಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳು ತಮ್ಮ ಕ್ಯಾಮರಾವನ್ನು ರಸ್ತೆಗೆಸೆದು ಹಾನಿಗೊಳಿಸಿದ್ದಾರೆ. ಅದರಲ್ಲಿದ್ದ ಮೆಮೋರಿ ಕಾರ್ಡ್ ಕಳವು ಮಾಡಿದ್ದಾರೆ. ಅಲ್ಲದೆ, ಬಳಿಕ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಅಜಯ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್ 189(2), 191(2), 115(2), 324(5) , 352, 307 ಮತ್ತು 190 ಅಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

2. ಧರ್ಮಸ್ಥಳ ಠಾಣೆಯಲ್ಲಿ ಎರಡೇ ಎಫ್‌ಐಆರ್ ಅನ್ನು ಪೊಲೀಸರು ಸ್ವಯಂ (ಸುಮೋಟೋ) ದಾಖಲಿಸಿಕೊಂಡಿದ್ದಾರೆ.

ಬುಧವಾರ ಸಂಜೆ ಪಾಂಗಳ ಕ್ರಾಸ್ ಬಳಿ ಸುಮಾರು 25 ರಿಂದ 50 ಜನರು ಎರಡು ಪ್ರತ್ಯೇಕ ಗುಂಪುಗಳಾಗಿ ಅಪರಾಧ ಕೃತ್ಯ ನಡೆಸಲು ಅಕ್ರಮ ಕೂಟ ಸೇರಿದ್ದು, ಈ ವೇಳೆ ಸ್ಥಳಕ್ಕೆ ಬಂದ ಧರ್ಮಸ್ಥಳ ಪೊಲೀಸ್‌ ಠಾಣಾ ಉಪನಿರೀಕ್ಷಕರು ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಯಾವುದೇ ಅಹಿತಕರ ಘಟನೆಗೆ ನಡೆಸದೇ ಸ್ಥಳದಿಂದ ತೆರಳುವಂತೆ ಸೂಚಿಸಿದರೂ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡ್ಡಿಪಡಿಸಿ, ಸೇರಿದ್ದ ಗುಂಪುಗಳು ಪರಸ್ಪರ ಗಲಾಟೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 189(2), 191(2), 132, 324(6) ಮತ್ತು 190ರ ಅಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

3. ಧರ್ಮಸ್ಥಳ ಠಾಣೆಯಲ್ಲಿ ಮೂರನೇ ಎಫ್‌ಐಆರ್ ಕೂಡ ಪೊಲೀಸರು ಸ್ವಯಂ ದಾಖಲಿಸಿಕೊಂಡಿದ್ದಾರೆ. ಇದೂ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ ಬುಧವಾರ (ಆ.6) ಸಂಜೆ ನಡೆದ ಅಹಿತಕರ ಘಟನೆಗೆ  ಸಂಬಂಧಿಸಿದೆ.

ಸುಮಾರು 50 ರಿಂದ 100 ಮಂದಿ ಧರ್ಮಸ್ಥಳ ಠಾಣಾ ಆವರಣ ಮುಂದೆ ಯಾವುದೇ ಪೂರ್ವಾನುಮತಿಯಿಲ್ಲದೇ, ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿದ್ದಾರೆ ಎಂದು ಆರೋಪಿಸಿರುವ ಪೊಲೀಸರು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್ 189(2) ಮತ್ತು 190ರ ಅಡಿ ಕ್ರಮ ಕೈಗೊಂಡಿದ್ದಾರೆ.

4. ಇನ್ನು ಧರ್ಮಸ್ಥಳ ಠಾಣೆಯಲ್ಲಿ ನಾಲ್ಕನೇ ಪ್ರಕರಣ ಬೆಳ್ತಂಗಡಿ ನಿವಾಸಿ ಪ್ರಮೋದ್‌ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ ದಾಖಲಾಗಿದೆ. ಪಾಂಗಳ ಕ್ರಾಸ್‌ನಲ್ಲಿ ಸುಮಾರು 30 ರಿಂದ 40 ಜನರ ಗುಂಪು ಅವ್ಯಾಚವಾಗಿ‌ ಬೈದು, ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಎರಡು ವಾಹನಗಳಿಗೆ ಹಾಗೂ ಕ್ಯಾಮರಾಕ್ಕೆ ಹಾನಿ ಮಾಡಿದ್ದಾರೆ ಎಂದು ಪ್ರಮೋದ್ ಕುಮಾರ್ ಆರೋಪಿಸಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 189(2), 191(2), 115(2), 110, 324(3),  352, 351(2) ಮತ್ತು 190 ಅಡಿ ಎಫ್‌ಐಆರ್ ದಾಖಲಾಗಿದೆ.

5. ಬೆಳ್ತಂಗಡಿ ಠಾಣೆಯಲ್ಲಿ ಮೊದಲ ಎಫ್‌ಐಆರ್ ಎಷ್ಯಾನೆಟ್ ಸುವರ್ಣ ನ್ಯೂಸ್‌ನ ಕ್ರೈ ರಿಪೋರ್ಟರ್, ಬೆಂಗಳೂರು ನಿವಾಸಿ ಹರೀಶ್ ಆರ್ ನೀಡಿದ ದೂರು ಆಧರಿಸಿ ದಾಖಲಾಗಿದೆ.

ಧರ್ಮಸ್ಥಳ ಪಾಂಗಳ ಕ್ರಾಸ್‌ನಲ್ಲಿ ನಡೆದ ಹಲ್ಲೆ ಘಟನೆಯ ಗಾಯಾಳುಗಳ ಬಗ್ಗೆ ವರದಿ ಮಾಡಲು ಉಜಿರೆ ಬೆನಕ ಆಸ್ಪತ್ರೆಯ ಬಳಿ ತೆರಳಿದ್ದೆ. ಅಲ್ಲಿ ಗಿರೀಶ್ ಮಟ್ಟಣ್ಣನವರ್ ಅವರೊಂದಿಗೆ ವಿಡಿಯೋ ಬೈಟ್ ಕೊಡುವಂತೆ ಕೇಳಿದ್ದೆ. ಈ ವೇಳೆ ಅವರು ನನಗೆ ಬೈದರು, ಸ್ಥಳದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರೊಂದಿಗಿದ್ದ ಇತರರು ಹಲ್ಲೆ ನಡೆಸಿ ಅವ್ಯಾಚವಾಗಿ ಬೈದರು. ಆಗ ಸ್ಥಳಕ್ಕೆ ಬಂದ ಯೂಟ್ಯೂಬರ್ ಸಮೀರ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹರೀಶ್ ಅರೋಪಿಸಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 189(2), 191(1) (2), 115(2), 351(2), 352 ಮತ್ತು 190 ಅಡಿ ಎಫ್‌ಐಆರ್ ದಾಖಲಾಗಿದೆ.

6. ಬೆಳ್ತಂಗಡಿ ಠಾಣೆಯಲ್ಲಿ ಎರಡನೇ ಎಫ್‌ಐಆರ್ ಬೆಳ್ತಂಗಡಿ ನಿವಾಸಿ ಗಣೇಶ್ ಶೆಟ್ಟಿ ಅವರು ಸುವರ್ಣ ನ್ಯೂಸ್ ಸಂಪಾದಕ ಹಾಗೂ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ದ ನೀಡಿರುವ ದೂರು ಆಧರಿಸಿ ದಾಖಲಾಗಿದೆ.

ಧರ್ಮಸ್ಥಳದ ಪಾಂಗಳ ಕ್ರಾಸ್‌ನಲ್ಲಿ ಹಲ್ಲೆಗೊಳಗಾದವರನ್ನು ಚಿಕಿತ್ಸೆಗಾಗಿ ಉಜಿರೆ ಬೆನಕಾ ಆಸ್ಪತ್ರೆಗೆ  ವಾಹನವೊಂದರಲ್ಲಿ ಕರೆತಂದಿದ್ದೆ. ಗಾಯಾಳುಗಳನ್ನು ನೋಡಲು ಬಂದ ಮಹೇಶ್‌ ಶೆಟ್ಟಿ ತಿಮರೋಡಿ  ಹಾಗೂ ಗಿರೀಶ್‌ ಮಟ್ಟಣ್ಣನವರ್‌ ಅವರನ್ನು ಬೈಟ್‌ ಕೊಡುವಂತೆ ಸುವರ್ಣ ನ್ಯೂಸ್‌ ನ ವರದಿಗಾರ ಹಾಗೂ ಕ್ಯಾಮರಾಮ್ಯಾನ್ ತಡೆದು ನಿಲ್ಲಿಸಿದ್ದರು. ಮಹೇಶ್ ಶೆಟ್ಟಿ ಮತ್ತು ಮಟ್ಟಣ್ಣವರ್ ಬೈಟ್ ಕೊಡಲು ನಿರಾಕರಿಸಿದಾಗ ಬೈಟ್ ಕೊಡಲು ನಿರಾಕರಿಸಿದಾಗ ಸುವರ್ಣ ನ್ಯೂಸ್ ವರದಿಗಾರ ಮತ್ತು ಕ್ಯಾಮರಾ ಮ್ಯಾನ್ ಅವಾಚ್ಯ  ಶಬ್ದಗಳಿಂದ ನಿಂದಿಸಿ ತಳ್ಳಾಟ ನಡೆಸಿದ್ದರು. ಈ ಘಟನೆ ನಡೆದು ಕೆಲಹೊತ್ತಿನಲ್ಲಿ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ಅಜಿತ್‌ ಹನುಮಕ್ಕನವರ್‌ “ಸುವರ್ಣ ನ್ಯೂಸ್‌  ವರದಿಗಾರರ ಮೇಲೆ ಮಹೇಶ್‌ ಶೆಟ್ಟಿ ತಿಮರೋಡಿಯಿಂದ ಹಲ್ಲೆ” ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಬೆಳ್ತಂಗಡಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ(ಬಿಎನ್‌ಎಸ್‌) ಸೆಕ್ಷನ್ 126(2), 296, 351 ಮತ್ತು 3(5) ಅಡಿ ಎಫ್‌ಐಆರ್ ದಾಖಲಿಸಿದ್ದಾರೆ.

7. ಬೆಳ್ತಂಗಡಿ ಠಾಣೆಯಲ್ಲಿ ಮೂರನೇ ಎಫ್‌ಐಆರ್ ಪೊಲೀಸರು ಸ್ವಯಂ ದಾಖಲಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದೆ.

ಬುಧವಾರ (ಆ.6) ಸಂಜೆ ಧರ್ಮಸ್ಥಳ ಪಾಂಗಳ ಕ್ರಾಸ್‌ನಲ್ಲಿ ನಡೆದ ಹಲ್ಲೆಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಿದ್ದ ಉಜಿರೆಯ ಬೆನಕ ಆಸ್ಪತ್ರೆಯ ಬಳಿ ಸಾರ್ವಜನಿಕರು ಜಮಾವಣೆಗೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ್ದರು.ಈ ವೇಳೆ ಸ್ಥಳದಲ್ಲಿ ಸುಮಾರು 50 ರಿಂದ 100 ಜನರು ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಘೋಷಣೆಗಳನ್ನು ಕೂಗುತ್ತಿದ್ದರು. ಯಾವುದೇ ಅಹಿತಕರ ಘಟನೆ ನಡೆಸದಂತೆ ಹಾಗೂ ಸ್ಥಳದಿಂದ ತೆರಳುವಂತೆ ಸೂಚಿಸಿದರೂ, ಪೂರ್ವಾನುಮತಿ ಪಡೆಯದೇ ಅಕ್ರಮಕೂಟ ಸೇರಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 189(2)r/ w 190 ಅಡಿ ಎಫ್‌ಐಆರ್ ದಾಖಲಿಸಿದ್ದಾರೆ.

4 ಯೂಟ್ಯೂಬರ್‌ಗಳ ಮೇಲೆ ಹಲ್ಲೆ: ಧರ್ಮಸ್ಥಳದ ಧರ್ಮಾಧಿಕಾರಿಯ ಸರ್ವಾಧಿಕಾರಕ್ಕೆ ಅಂತಿಮ ಮೊಳೆ – ಕೆ.ಎಲ್. ಅಶೋಕ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...