Homeಕರ್ನಾಟಕಒಳಮೀಸಲಾತಿಗಾಗಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ: ಕರಿಯಪ್ಪ ಗುಡಿಮನಿ

ಒಳಮೀಸಲಾತಿಗಾಗಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ: ಕರಿಯಪ್ಪ ಗುಡಿಮನಿ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ಆಗಸ್ಟ್ 11ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹವನ್ನು ಆರಂಭಿಸುವುದಾಗಿ ಘೋಷಿಸಿದೆ. ನ್ಯಾ. ಹೆಚ್.ಎನ್. ನಾಗಮೋಹನ್‌ದಾಸ್ ಅವರ ಸಮೀಕ್ಷಾ ವರದಿಯನ್ನು ತಕ್ಷಣವೇ ಸ್ವೀಕರಿಸಿ, ಮುಂಬರುವ ಮಳೆಗಾಲ ಅಧಿವೇಶನದಲ್ಲಿಯೇ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ಮುಖಂಡರಾದ ಕರಿಯಪ್ಪ ಗುಡಿಮನಿಯವರು, ಸುಪ್ರೀಂ ಕೋರ್ಟ್ ಪರಿಶಿಷ್ಟರ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರಗಳು ಆದ್ಯತೆಯ ಮೇರೆಗೆ ಜಾರಿಗೊಳಿಸಬಹುದು ಎಂಬ ಐತಿಹಾಸಿಕ ತೀರ್ಪು ನೀಡಿ ಒಂದು ವರ್ಷ ಗತಿಸಿದೆ. ಆದರೆ, ಇಷ್ಟಾದರೂ ಸರ್ಕಾರಗಳು ಒಳಮೀಸಲಾತಿ ಜಾರಿಗೆ ಮುಂದಾಗಿಲ್ಲ. ನ್ಯಾ. ನಾಗಮೋಹನ್‌ದಾಸ್ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸಿ ಜುಲೈ 30ರೊಳಗೆ ವರದಿ ಸಲ್ಲಿಸಬೇಕಿತ್ತು. ಆದರೆ, ವಿಳಂಬ ಧೋರಣೆ ಮುಂದುವರಿದಿರುವುದರಿಂದ ಮತ್ತೊಂದು ಸುತ್ತಿನ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.

ಕಳೆದ 30 ವರ್ಷಗಳಿಂದ ಒಳಮೀಸಲಾತಿ ಹೋರಾಟ ಮುಂದುವರಿದಿದ್ದು, ಆಯೋಗಗಳ ನೇಮಕ, ಅನುದಾನ ಬಿಡುಗಡೆ ಮತ್ತು ವರದಿ ಅನುಷ್ಠಾನದಲ್ಲಿ ನಿರಂತರ ವಿಳಂಬವಾಗುತ್ತಿದೆ. ಇದರಿಂದಾಗಿ, ಸಮುದಾಯದ ಜನರು ಯಾವ ಸರ್ಕಾರವನ್ನೂ ನಂಬುವ ಸ್ಥಿತಿಯಲ್ಲಿಲ್ಲ ಎಂದು ಸಮಿತಿ ವಿಷಾದ ವ್ಯಕ್ತಪಡಿಸಿದೆ.

ಹೋರಾಟದ ಭಾಗವಾಗಿ, ಆಗಸ್ಟ್ 11ರಂದು ಆರಂಭವಾಗಲಿರುವ ಮಳೆಗಾಲ ಅಧಿವೇಶನದಲ್ಲಿಯೇ ಒಳಮೀಸಲಾತಿ ಮಸೂದೆಯನ್ನು ಅಂಗೀಕರಿಸಬೇಕು. ಇದರಿಂದ 30 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ವಂಚಿತ ಯುವಕ-ಯುವತಿಯರಿಗೆ ಸಿಗಲಿವೆ. ಸರ್ಕಾರವು ಈ ಅಧಿವೇಶನದಲ್ಲಿ ತನ್ನ ಬದ್ಧತೆಯನ್ನು ಪ್ರಕಟಿಸಬೇಕು ಎಂದು ಸಮಿತಿ ಆಗ್ರಹಿಸಿದೆ. ಈ ಹೋರಾಟದಲ್ಲಿ ಎಲ್ಲ ಸಂಘ-ಸಂಸ್ಥೆಗಳ ಮುಖಂಡರು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಪಕ್ಷಾತೀತವಾಗಿ ಭಾಗವಹಿಸಬೇಕೆಂದು ಸಮಿತಿ ಮನವಿ ಮಾಡಿದೆ.

ಒಳಮೀಸಲಾತಿ ಬೇಡಿಕೆಯ ಪ್ರಮುಖ ಅಂಶಗಳು:

ನ್ಯಾ. ನಾಗಮೋಹನ್‌ದಾಸ್ ಸಮೀಕ್ಷಾ ವರದಿಯನ್ನು ತಕ್ಷಣವೇ ಅಂಗೀಕರಿಸುವುದು

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಧಿವೇಶನದಲ್ಲಿ ತಮ್ಮ ಬದ್ಧತೆಯನ್ನು ಘೋಷಿಸುವುದು

ಆಗಸ್ಟ್ 11ರಿಂದ ಆರಂಭವಾಗುವ ಅಧಿವೇಶನದಲ್ಲಿಯೇ ಒಳಮೀಸಲಾತಿ ಜಾರಿಗೊಳಿಸುವುದು

30 ಸಾವಿರಕ್ಕೂ ಹೆಚ್ಚು ಖಾಲಿ ಇರುವ ಹುದ್ದೆಗಳಿಗೆ ವಂಚಿತ ಸಮುದಾಯದವರಿಗೆ ಅವಕಾಶ ಕಲ್ಪಿಸುವುದು

ಸರ್ಕಾರವು ಈ ನಿರ್ಲಕ್ಷ್ಯ ಧೋರಣೆಯನ್ನು ಕೈಬಿಟ್ಟು, ನುಡಿದಂತೆ ನಡೆಯುವ ಮೂಲಕ ತಮ್ಮ ಬದ್ಧತೆಯನ್ನು ತೋರಿಸಬೇಕೆಂದು ಹೋರಾಟ ಸಮಿತಿ ಒತ್ತಾಯಿಸಿದೆ.

ಸುಳ್ಳು ಸುದ್ದಿ ಪ್ರಸಾರ ಆರೋಪ: ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...