Homeಕರ್ನಾಟಕಮಾಧ್ಯಮ ನಿರ್ಬಂಧ| ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಧರ್ಮಸ್ಥಳ ಹರ್ಷೇಂದ್ರ ಕುಮಾರ್

ಮಾಧ್ಯಮ ನಿರ್ಬಂಧ| ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಧರ್ಮಸ್ಥಳ ಹರ್ಷೇಂದ್ರ ಕುಮಾರ್

- Advertisement -
- Advertisement -

ಧರ್ಮಸ್ಥಳ ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ಧ ಅವಹೇಳನಕಾರಿ ವಿಷಯವನ್ನು ಪ್ರಕಟಿಸದಂತೆ ಯೂಟ್ಯೂಬ್ ಚಾನೆಲ್‌ಗೆ ವಿಧಿಸಿದ್ದ ನಿರ್ಬಂಧವನ್ನು ರದ್ದುಪಡಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್ ನಾಳೆ (ಆ.8) ಅರ್ಜಿ ವಿಚಾರಣೆ ನಡೆಸಲಿದೆ ಎಂದು livelaw.in ವರದಿ ಮಾಡಿದೆ.

ಧರ್ಮಸ್ಥಳ ದೇವಾಲಯದ ಅಧೀನ ಸಂಸ್ಥೆಯ ಕಾರ್ಯದರ್ಶಿಯಾಗಿರುವ ಹರ್ಷೇಂದ್ರ ಕುಮಾರ್ ಡಿ ಅವರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಶೇಷ ರಜಾ ಅವಧಿಯ ಅರ್ಜಿ ಸಲ್ಲಿಸಿದ್ದಾರೆ.

ಗುರುವಾರ (ಆ.7) ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ಎಸ್‌ಸಿ ಶರ್ಮಾ ಮತ್ತು ವಿನೋದ್ ಚಂದ್ರನ್ ಅವರ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿದ ಹರ್ಷೇಂದ್ರ ಕುಮಾರ್ ಪರ ವಕೀಲ, “ಹಲವಾರು ಯೂಟ್ಯೂಬ್ ಚಾನೆಲ್‌ಗಳು ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ದ ಅವಹೇಳನಕಾರಿ ವಿಷಯ ಪ್ರಸಾರ ಮಾಡುತ್ತಿವೆ” ಎಂದು ಹೇಳಿದರು.

“8 ಸಾವಿರ ಯೂಟ್ಯೂಬ್ ಚಾನೆಲ್‌ಗಳು ದೇವಸ್ಥಾನದ ಆಡಳಿತದ ವಿರುದ್ದ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡುತ್ತಿವೆ. ಆದ್ದರಿಂದ, ಅರ್ಜಿಯನ್ನು ನಾಳೆ ವಿಚಾರಣೆಗೆ ಪರಿಗಣಿಸಿ” ಎಂದು ವಕೀಲ ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, “ಈ ವಿಷಯವನ್ನು ಈಗಾಗಲೇ ನಾಳೆಗೆ ಪಟ್ಟಿ ಮಾಡಲಾಗಿದೆ” ಎಂದರು.

ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ನೀಡಿದ ದೂರಿನ ತನಿಖೆಯನ್ನು ಎಸ್‌ಐಟಿ ತಂಡ ನಡೆಸುತ್ತಿದೆ. ಈ ವಿಷಯವನ್ನು ಮುಂದಿಟ್ಟುಕೊಂಡು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ದ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಹರ್ಷೇಂದ್ರ ಕುಮಾರ್ ಡಿ ಬೆಂಗಳೂರಿನ ನ್ಯಾಯಾಲಯ ಮೊರೆ ಹೋಗಿದ್ದರು.

ನ್ಯಾಯಾಲಯ ಯೂಟ್ಯೂಬ್ ಚಾನೆಲ್‌ಗಳು ಸೇರಿದಂತೆ ಮಾಧ್ಯಮಗಳು ಧರ್ಮಸ್ಥಳ ದೇವಾಲಯ ಮತ್ತು ಅದರ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ನಿರ್ಬಂಧ (ಗ್ಯಾಗ್ ಆರ್ಡರ್) ವಿಧಿಸಿತ್ತು. ಈ ನಿರ್ಬಂಧವನ್ನು ಆಗಸ್ಟ್ 1ರಂದು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ಬೆಂಗಳೂರು ನ್ಯಾಯಾಲಯದ ಆದೇಶದ ರದ್ದುಗೊಳಿಸುವ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು,”ವಿಚಾರಣಾ ನ್ಯಾಯಾಲಯವು ಯಾವುದೇ ಆಪಾದಿತ ಮಾನನಷ್ಟ ವಿಷಯವನ್ನು ಆಧರಿಸಿ ಆದೇಶ ನೀಡಿಲ್ಲ. ‘ಕಡ್ಡಾಯ ವ್ಯಾಪಕ ತಡೆಯಾಜ್ಞೆ ನೀಡಿದೆ’ ಎಂಬುವುದನ್ನು ಗಮನಿಸಿತ್ತು. ಈ ಆದೇಶವು ಎಷ್ಟು ವಿಶಾಲವಾಗಿದೆಯೆಂದರೆ, ಪ್ರತಿವಾದಿ ಹರ್ಷೇಂದ್ರ ಕುಮಾರ್ ಡಿ, ಅವರ ಕುಟುಂಬ ಅಥವಾ ಧರ್ಮಸ್ಥಳ ಸ್ಥಳದ ವಿರುದ್ಧ ಯಾವುದೇ ವಿಷಯಗಳನ್ನು ಮಾತನಾಡದಂತೆ ಬೆದರಿಕೆಯೊಡ್ಡುತ್ತದೆ” ಎಂದಿತ್ತು.

ನಿರ್ದಿಷ್ಟವಾಗಿ ‘ಕುಡ್ಲ ರಾಂಪೇಜ್’ ಯೂಟ್ಯೂಬ್ ಚಾನೆಲ್‌ ಮೇಲಿನ ನಿರ್ಬಂಧ ತೆರವು ಪ್ರಶ್ನಿಸಿ ಹರ್ಷೇಂದ್ರ ಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಆದರೆ, ಹರ್ಷೇಂದ್ರ ಕುಮಾರ್ ಪರ ವಕೀಲರು 8 ಸಾವಿರ ಯೂಟ್ಯೂಬ್ ಚಾನೆಲ್‌ಗಳು ಅವಹೇಳನಕಾರಿ ವಿಷಯ ಪ್ರಸಾರ ಮಾಡುತ್ತಿವೆ ಎಂದು ಸಿಜೆಐ ಪೀಠದ ಮುಂದೆ ಹೇಳಿದ್ದಾರೆ. ಹಾಗಾಗಿ, ಕುಡ್ಲ ರಾಂಪೇಜ್ ವಿರುದ್ದ ಮಾತ್ರ ಹರ್ಷೇಂದ್ರ ಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರಾ? ಎಲ್ಲಾ ಮಾಧ್ಯಮಗಳ ವಿರುದ್ದ ಅರ್ಜಿ ಸಲ್ಲಿಸಿದ್ದಾರಾ? ಎಂಬುವುದು ನಮಗೆ ಸ್ಪಷ್ಟವಾಗಿಲ್ಲ.

Courtesy : livelaw.in

ಸುಳ್ಳು ಸುದ್ದಿ ಪ್ರಸಾರ ಆರೋಪ: ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...