Homeಮುಖಪುಟಅಮೆರಿಕಾದಿಂದ ಶೇ. 50 ರಷ್ಟು ಸುಂಕ: ವಿರೋಧ ಪಕ್ಷಗಳಿಂದ ತೀವ್ರ ಖಂಡನೆ; "ಇದು ಮೋದಿ ಸರ್ಕಾರದ...

ಅಮೆರಿಕಾದಿಂದ ಶೇ. 50 ರಷ್ಟು ಸುಂಕ: ವಿರೋಧ ಪಕ್ಷಗಳಿಂದ ತೀವ್ರ ಖಂಡನೆ; “ಇದು ಮೋದಿ ಸರ್ಕಾರದ ವೈಫಲ್ಯ” ಎಂದು ದೂಷಣೆ

- Advertisement -
- Advertisement -

ನವದೆಹಲಿ: ಭಾರತೀಯ ಸರಕುಗಳ ಮೇಲೆ ಅಮೆರಿಕಾವು ಶೇ. 25ರಿಂದ ಶೇ.50ಕ್ಕೆ ಸುಂಕವನ್ನು ಹೆಚ್ಚಿಸಿರುವ ಕ್ರಮವನ್ನು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಈ ಕ್ರಮವು “ಪ್ರಧಾನಿ ಮೋದಿ ಅವರ ವೈಯಕ್ತಿಕ, ಪ್ರಚಾರ-ಪ್ರಿಯತೆಯ ಸಂಪೂರ್ಣ ವೈಫಲ್ಯ” ಎಂದು ವಿರೋಧ ಪಕ್ಷದ ನಾಯಕರು ದೂಷಿಸಿದ್ದಾರೆ. ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರು ರಷ್ಯಾದಿಂದ ತೈಲ ಖರೀದಿಸಿದ ಕಾರಣಕ್ಕೆ ಭಾರತದ ಮೇಲೆ ಹೆಚ್ಚುವರಿ 25% ಸುಂಕವನ್ನು ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ.

ಕಾಂಗ್ರೆಸ್‌ನಿಂದ ತೀವ್ರ ಟೀಕೆ

ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು, “ಅಧ್ಯಕ್ಷ ಟ್ರಂಪ್ ಇನ್ನೂ ಮೋದಿ ಅವರ ಸ್ನೇಹಿತ ಎಂದು ಹೇಳಿಕೊಳ್ಳುತ್ತಿದ್ದರೂ, ಅವರು ಭಾರತಕ್ಕೆ ಅನ್ಯಾಯ ಮತ್ತು ಭಾರೀ ಹೊಡೆತ ನೀಡಿದ್ದಾರೆ” ಎಂದು ಹೇಳಿದ್ದಾರೆ. ಟ್ರಂಪ್ ಅವರ ಸುಂಕದ ಕ್ರಮಗಳು ಸ್ವೀಕಾರಾರ್ಹವಲ್ಲ. ಈ ಘಟನೆ ಮೋದಿ ಅವರ ವೈಯಕ್ತಿಕ ರಾಜತಂತ್ರದ ಸಂಪೂರ್ಣ ವೈಫಲ್ಯವನ್ನು ತೋರಿಸುತ್ತದೆ ಎಂದು ಅವರು ಪ್ರತಿಪಾದಿಸಿದರು.

ರಮೇಶ್ ಅವರು, ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ “ಅಬ್ ಕಿ ಬಾರ್, ಟ್ರಂಪ್ ಸರ್ಕಾರ” ಎಂದು ಮೋದಿ ಘೋಷಿಸಿದ್ದರು. ಟ್ರಂಪ್ ಅವರು WTO, WHO, UNESCO ಮತ್ತು ಪ್ಯಾರಿಸ್ ಒಪ್ಪಂದದಂತಹ ಜಾಗತಿಕ ಸಂಸ್ಥೆಗಳನ್ನು ದುರ್ಬಲಗೊಳಿಸಿದಾಗಲೂ ಭಾರತ ಮೌನವಾಗಿತ್ತು ಎಂದು ಟೀಕಿಸಿದರು. 1970ರ ದಶಕದಲ್ಲಿ ಇಂದಿರಾ ಗಾಂಧಿಯವರು ಅಮೆರಿಕದ ದಬ್ಬಾಳಿಕೆಯನ್ನು ದೃಢವಾಗಿ ಎದುರಿಸಿದಂತೆಯೇ ಮೋದಿ ಅವರು ತಮ್ಮ “ಅಹಂಕಾರವನ್ನು ತೊರೆದು” ಪ್ರೇರಣೆ ಪಡೆಯಬೇಕು ಎಂದು ರಮೇಶ್ ಸಲಹೆ ನೀಡಿದರು.

ರಾಹುಲ್ ಗಾಂಧಿ ಅವರು, ಈ ಸುಂಕವನ್ನು “ಆರ್ಥಿಕ ಬ್ಲ್ಯಾಕ್‌ಮೇಲ್” ಮತ್ತು “ಅನಗತ್ಯ ವ್ಯಾಪಾರ ಒಪ್ಪಂದಕ್ಕೆ ಭಾರತವನ್ನು ಬೆದರಿಸುವ ಪ್ರಯತ್ನ” ಎಂದು ಕರೆದಿದ್ದಾರೆ. “ಪ್ರಧಾನಿ ಮೋದಿ ತಮ್ಮ ದೌರ್ಬಲ್ಯವನ್ನು ಭಾರತೀಯರ ಹಿತಾಸಕ್ತಿಗಳ ಮೇಲೆ ಬರಲು ಬಿಡಬಾರದು” ಎಂದು ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಕ್ಸ್‌ನಲ್ಲಿ, “ಭಾರತದ ರಾಷ್ಟ್ರೀಯ ಹಿತಾಸಕ್ತಿ ಅತ್ಯುನ್ನತವಾಗಿದೆ” ಎಂದು ಪ್ರತಿಪಾದಿಸಿ, “ಯಾವುದೇ ದೇಶವು ನಮ್ಮ ದೃಢವಾದ ಸ್ವಾಯತ್ತ ನೀತಿಯನ್ನು ಅನಿಯಂತ್ರಿತವಾಗಿ ಶಿಕ್ಷಿಸಿದರೆ, ಅದು ಭಾರತದ ಉಕ್ಕಿನ ಚೌಕಟ್ಟನ್ನು ಅರ್ಥಮಾಡಿಕೊಂಡಿಲ್ಲ” ಎಂದು ಎಚ್ಚರಿಸಿದ್ದಾರೆ.

ಅವರು ಮೋದಿ ಸರ್ಕಾರದ ವಿದೇಶಾಂಗ ನೀತಿಯ ಹಲವಾರು ವೈಫಲ್ಯಗಳನ್ನು ಪಟ್ಟಿ ಮಾಡಿದರು. “ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮವನ್ನು ನಾನು ಮಧ್ಯಸ್ಥಿಕೆ ವಹಿಸಿದ್ದೇನೆ ಎಂದು ಟ್ರಂಪ್ 30ಕ್ಕೂ ಹೆಚ್ಚು ಬಾರಿ ಹೇಳಿದಾಗ ನೀವು ಮೌನವಾಗಿದ್ದಿರಿ” ಎಂದು ಖರ್ಗೆ ಆರೋಪಿಸಿದರು. ಇದಲ್ಲದೆ, ಟ್ರಂಪ್ BRICS ರಾಷ್ಟ್ರಗಳ ಮೇಲೆ 100% ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದಾಗ ಪ್ರಧಾನಿ ಮೋದಿ ನಗುತ್ತಿದ್ದರು ಎಂದು ಅವರು ನೆನಪಿಸಿದರು. ಟ್ರಂಪ್ ಸುಂಕದ ಬಗ್ಗೆ ತಿಂಗಳುಗಳಿಂದ ಯೋಜನೆ ರೂಪಿಸಿದ್ದರೂ, ಸರ್ಕಾರವು ಕೃಷಿ, MSME ಮತ್ತು ಇತರ ಪ್ರಮುಖ ಕೈಗಾರಿಕೆಗಳಿಗೆ ನೆರವಾಗಲು ಬಜೆಟ್‌ನಲ್ಲಿ ಏನನ್ನೂ ಮಾಡಲಿಲ್ಲ ಎಂದು ಖರ್ಗೆ ಟೀಕಿಸಿದರು.

“ನಿಮ್ಮ ಸರ್ಕಾರಕ್ಕೆ ಈ ಸಮಸ್ಯೆಯನ್ನು ಹೇಗೆ ನಿಭಾಯಿಸಬೇಕು ಎಂಬುದು ತಿಳಿದಿಲ್ಲ” ಎಂದು ಖರ್ಗೆ ಹೇಳಿದ್ದಾರೆ. ಶೇ. 50ರಷ್ಟು ಸುಂಕವು ಭಾರತದ ರಫ್ತುಗಳ ಮೇಲೆ ರೂ. 3.75 ಲಕ್ಷ ಕೋಟಿ ಆರ್ಥಿಕ ಹೊರೆ ಹೇರಬಹುದು ಎಂದು ಅವರು ಎಚ್ಚರಿಸಿದರು.

ಇತರ ವಿರೋಧ ಪಕ್ಷಗಳ ಪ್ರತಿಕ್ರಿಯೆ

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಅವರು ಈ ಕ್ರಮವನ್ನು “ಏಕಪಕ್ಷೀಯ ಮತ್ತು ಕಾನೂನುಬಾಹಿರ” ಎಂದು ಖಂಡಿಸಿ, ಭಾರತವು “ದೃಢವಾಗಿ ನಿಂತು, ತನ್ನ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಬೇಕು” ಎಂದು ಒತ್ತಿ ಹೇಳಿದರು.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, “ಇದು ರಾಜತಂತ್ರವಲ್ಲ, ಇದು ಜಾಗತಿಕ ವ್ಯಾಪಾರದ ಬಗ್ಗೆ ತಿಳಿಯದ ‘ಬಫೂನ್-ಇನ್-ಚೀಫ್’ ನ ದಬ್ಬಾಳಿಕೆ” ಎಂದು ಟೀಕಿಸಿದರು. ಈ ಸುಂಕಗಳು ಭಾರತೀಯ ರಫ್ತುದಾರರು, MSMEಗಳು ಮತ್ತು ತಯಾರಕರಿಗೆ ಹಾನಿ ಮಾಡುವುದಲ್ಲದೆ, ವಿದೇಶಿ ನೇರ ಹೂಡಿಕೆಗೆ ಅಡ್ಡಿಯಾಗಬಹುದು ಎಂದು ಅವರು ಎಚ್ಚರಿಸಿದರು. “56 ಇಂಚಿನ ಎದೆ ಇರುವವರು ಈಗ ಎಲ್ಲಿ ಹೋಗಿದ್ದಾರೆ?” ಎಂದು ಓವೈಸಿ ಪ್ರಧಾನಿ ಅವರನ್ನು ಅಣಕಿಸಿದರು.

ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರೇನ್, “25 + 25 = 50. ಈಗ 50% ಟ್ರಂಪ್ ಸುಂಕದ ಬಗ್ಗೆ 56 ಇಂಚು ಎದೆ ಏನು ಹೇಳುತ್ತದೆ?” ಎಂದು ಪ್ರಧಾನಿ ಅವರನ್ನು ಪ್ರಶ್ನಿಸಿದರು.

ಪ್ರಧಾನಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರತಿಕ್ರಿಯೆ

ಈ ಟೀಕೆಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು, ಅಮೆರಿಕದ ಸುಂಕದ ಬೆದರಿಕೆಗಳಿಗೆ ಸೂಚ್ಯವಾಗಿ ಪ್ರತಿಕ್ರಿಯಿಸಿದ್ದಾರೆ. “ನಮಗೆ ನಮ್ಮ ರೈತರ ಹಿತಾಸಕ್ತಿಗಳು ಪ್ರಮುಖ ಆದ್ಯತೆಯಾಗಿದೆ. ರೈತರು, ಮೀನುಗಾರರು ಮತ್ತು ಡೈರಿ ರೈತರ ಹಿತಾಸಕ್ತಿಗಳ ಮೇಲೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಕ್ರಮವನ್ನು “ಅನ್ಯಾಯ, ಅಸಮರ್ಥನೀಯ ಮತ್ತು ಅವಿವೇಕದ” ಎಂದು ಕರೆದಿದೆ. “1.4 ಶತಕೋಟಿ ನಾಗರಿಕರ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತದ ಆಮದುಗಳು ಮಾರುಕಟ್ಟೆ ಅಂಶಗಳಿಂದ ನಿರ್ಧರಿಸಲ್ಪಡುತ್ತವೆ” ಎಂದು ಅದು ಹೇಳಿದೆ. “ಇತರ ದೇಶಗಳು ತಮ್ಮ ರಾಷ್ಟ್ರೀಯ ಹಿತಾಸಕ್ತಿಗಾಗಿ ತೆಗೆದುಕೊಳ್ಳುವ ಕ್ರಮಗಳಿಗಾಗಿ ಭಾರತವನ್ನು ಶಿಕ್ಷಿಸಲು ಅಮೆರಿಕ ಮುಂದಾಗಿರುವುದು ದುರದೃಷ್ಟಕರ” ಎಂದು ಸಚಿವಾಲಯ ತಿಳಿಸಿದೆ.

“ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಮತಗಳ್ಳತನ ಆರೋಪ:  ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಭಾಗಿ: ಸಂಚಾರ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...