Homeಕರ್ನಾಟಕಮತಗಳ್ಳತನದ ಆರೋಪ: ಸಂವಿಧಾನದ ಮೇಲೆ ಕೈ ಇಟ್ಟಿದ್ದೇನೆ, ಸುಳ್ಳು ಹೇಳುವುದಿಲ್ಲ - ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ...

ಮತಗಳ್ಳತನದ ಆರೋಪ: ಸಂವಿಧಾನದ ಮೇಲೆ ಕೈ ಇಟ್ಟಿದ್ದೇನೆ, ಸುಳ್ಳು ಹೇಳುವುದಿಲ್ಲ – ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶದಲ್ಲಿ ರಾಹುಲ್ ಗಾಂಧಿ

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳು ಕಳ್ಳತನವಾಗಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಪ್ರಮಾಣ ಮಾಡುವಂತೆ ಕೇಳಿದ್ದ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ ಅವರು, “ನಾನು ಈಗಾಗಲೇ ಸಂಸತ್ತಿನಲ್ಲಿ ಸಂವಿಧಾನದ ಮೇಲೆ ಕೈಯಿಟ್ಟು ಪ್ರಮಾಣ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಭಾಷಣ ಮಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಾಡಿದ ಮತ ಕಳ್ಳತನದ ಬಗ್ಗೆ ಸಮಗ್ರ ವರದಿ ನೀಡಲು ಚುನಾವಣಾ ಆಯೋಗ ನಿರಾಕರಿಸುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿನ ಮತದಾರರ ಪಟ್ಟಿಯಲ್ಲೂ ಗೊಂದಲಗಳಿವೆ ಎಂದು ಉಲ್ಲೇಖಿಸಿ, ವಿಧಾನಸಭೆ ಚುನಾವಣೆಯಲ್ಲಿ ಮತ ಹಾಕದ ಒಂದು ಕೋಟಿ ಹೊಸ ಮತದಾರರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮಹಾದೇವಪುರದಲ್ಲಿ ಮತ ಕಳ್ಳತನದ ಪುರಾವೆಗಳನ್ನು ಮುಂದಿಟ್ಟ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರು ಕರ್ನಾಟಕದ ಬೆಂಗಳೂರು ಮಹಾದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ಸಮಗ್ರ ವಿಶ್ಲೇಷಣೆಯ ವರದಿಯನ್ನು ಸಾರ್ವಜನಿಕವಾಗಿ ಪ್ರಸ್ತುತಪಡಿಸಿದರು. “ಮಹಾದೇವಪುರದಲ್ಲಿರುವ 6.5 ಲಕ್ಷ ಮತಗಳಲ್ಲಿ 1 ಲಕ್ಷದ 2,250 ಮತಗಳು ಕಳ್ಳತನವಾಗಿವೆ ಎಂದು ನಾವು ಖಚಿತವಾಗಿ ಹೇಳುತ್ತೇವೆ” ಎಂದು ರಾಹುಲ್ ಗಾಂಧಿ ಘೋಷಿಸಿದರು.

ಈ ಮತ ಕಳ್ಳತನದ ಪ್ರಕ್ರಿಯೆಯು ಐದು ವಿಧಗಳಲ್ಲಿ ನಡೆದಿದೆ ಎಂದು ಅವರು ವಿವರಿಸಿದರು:

ದ್ವಿಪ್ರತಿ ನಮೂದು (Duplicate Entries): ಒಬ್ಬ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಲ್ಲಿ ಹಲವು ಬಾರಿ ಸೇರಿಸಲಾಗಿದೆ ಮತ್ತು ಆತ ಐದು ಮತಗಟ್ಟೆಗಳಲ್ಲಿ ಮತದಾನ ಮಾಡಿರುವುದು ಕಂಡುಬಂದಿದೆ. ಈ ರೀತಿಯ 12,000 ಕಳ್ಳ ಮತಗಳನ್ನು ಗುರುತಿಸಲಾಗಿದೆ.

ನಕಲಿ ವಿಳಾಸಗಳು: ಒಂದೇ ಕೊಠಡಿಯಿರುವ ಮನೆಗಳಲ್ಲಿ 40 ರಿಂದ 80 ಮತದಾರರ ಹೆಸರುಗಳನ್ನು ಸೇರಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ಹೋಗಿ ಪರಿಶೀಲಿಸಿದಾಗ ಆ ವಿಳಾಸಗಳಲ್ಲಿ ಯಾರೂ ಇರಲಿಲ್ಲ. ಈ ರೀತಿಯ 40,000 ನಕಲಿ ಮತದಾರರನ್ನು ಗುರುತಿಸಲಾಗಿದೆ.

ಫೋಟೋ ಇಲ್ಲದ ಮತದಾರರು: ಕೆಲವು ಮತದಾರರ ಗುರುತಿನ ಚೀಟಿಗಳಲ್ಲಿ ಫೋಟೋ ಇರಲಿಲ್ಲ.

ನಮೂನೆ 6ರಲ್ಲಿ ಅಕ್ರಮಗಳು: ಹೊಸ ಮತದಾರರನ್ನು ಸೇರಿಸಲು ಬಳಸುವ ಫಾರ್ಮ್ 6 ರಲ್ಲಿ ಅವ್ಯವಹಾರಗಳು ನಡೆದಿವೆ. 85-90 ವರ್ಷ ವಯಸ್ಸಿನ ವ್ಯಕ್ತಿಗಳನ್ನು ಹೊಸ ಮತದಾರರನ್ನಾಗಿ ಸೇರಿಸಲಾಗಿದೆ. ಈ ರೀತಿ 34,000 ಮತದಾರರ ಹೆಸರುಗಳು ಕಂಡುಬಂದಿವೆ.

ಬಹು ಮತದಾನದ ಹಕ್ಕು: ಒಬ್ಬ ವ್ಯಕ್ತಿಗೆ ಬೆಂಗಳೂರು, ಲಕ್ನೋ ಮತ್ತು ವಾರಣಾಸಿಯಲ್ಲೂ ಮತದಾನದ ಹಕ್ಕನ್ನು ನೀಡಲಾಗಿದೆ.

ಚುನಾವಣಾ ಆಯೋಗದ ವಿರುದ್ಧ ಆಕ್ರೋಶ

ಚುನಾವಣಾ ಆಯೋಗವು ಬಿಜೆಪಿಯ ಕೈಗೊಂಬೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. “ನಾವು ಈ ಅಕ್ರಮಗಳ ಬಗ್ಗೆ ಪ್ರಶ್ನಿಸಿದಾಗ, ಚುನಾವಣಾ ಆಯೋಗ ದಾಖಲೆಗಳನ್ನು ಬದಲಿಸಿ, ದಾಖಲೆಗಳನ್ನು ಅಳಿಸಿಹಾಕುತ್ತಿದೆ” ಎಂದು ಅವರು ಹೇಳಿದರು. ಬಿಹಾರ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಚುನಾವಣಾ ಆಯೋಗದ ವೆಬ್‌ಸೈಟ್‌ಗಳನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಜನರು ಪ್ರಶ್ನಿಸಲು ಆರಂಭಿಸಿದರೆ ತಮ್ಮ “ನಾಟಕ” ಕೊನೆಯಾಗುತ್ತದೆ ಎಂಬ ಭಯದಿಂದ ಆಯೋಗವು ಹೀಗೆ ಮಾಡುತ್ತಿದೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಅವರು, “ನಾವು ಚುನಾವಣಾ ಆಯೋಗದಿಂದ ಕಳೆದ 10 ವರ್ಷಗಳ ಡಿಜಿಟಲ್ ಮತದಾನ ಮಾಹಿತಿ ಮತ್ತು ಮತಗಟ್ಟೆಗಳ ವೀಡಿಯೋ ರೆಕಾರ್ಡ್‌ಗಳನ್ನು ಕೇಳುತ್ತಿದ್ದೇವೆ. ಈ ಮಾಹಿತಿ ಸಿಕ್ಕರೆ ದೇಶಾದ್ಯಂತ ನಡೆದಿರುವ ಮತ ಕಳ್ಳತನದ ಬಗ್ಗೆ ನಾವು ಪುರಾವೆಗಳೊಂದಿಗೆ ತೋರಿಸುತ್ತೇವೆ. ಕೇವಲ ಒಂದು ಕ್ಷೇತ್ರದಲ್ಲಿ ಇದನ್ನು ಸಾಬೀತು ಮಾಡಲು ನಮಗೆ ಆರು ತಿಂಗಳು ಬೇಕಾಯಿತು” ಎಂದು ಹೇಳಿದರು.

ಈ ಮತ ಕಳ್ಳತನ ಕೇವಲ ರಾಜ್ಯಮಟ್ಟದಲ್ಲಿ ನಡೆಯುತ್ತಿಲ್ಲ, ಬದಲಾಗಿ ಇದು ದೇಶಾದ್ಯಂತ ವ್ಯಾಪಕವಾಗಿ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನರೇಂದ್ರ ಮೋದಿ ಕೇವಲ 25 ಸ್ಥಾನಗಳ ಅಂತರದಿಂದ ಪ್ರಧಾನಿಯಾಗಿದ್ದಾರೆ. ಈ ರೀತಿಯ ಮತ ಕಳ್ಳತನ ನಡೆದಿಲ್ಲವೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಿರುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಬಿಜೆಪಿಯು 35 ಸಾವಿರ ಅಂತರದಿಂದ ಜಯಗಳಿಸಿದ 25 ಸ್ಥಾನಗಳಲ್ಲೂ ಮತ ಕಳ್ಳತನ ನಡೆದಿದೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ರಕ್ಷಣೆಯ ಕರೆ

ಈ ಮತ ಕಳ್ಳತನವು ಸಂವಿಧಾನದ ಮೇಲಿನ ನೇರ ದಾಳಿಯಾಗಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. “ಸಂವಿಧಾನವು ನಮ್ಮ ಪವಿತ್ರ ಗ್ರಂಥ. ಅದು ಈ ದೇಶದ ಬಡವರು, ಕಾರ್ಮಿಕರು, ರೈತರು ಮತ್ತು ಮಹಿಳೆಯರ ಧ್ವನಿ” ಎಂದು ಅವರು ಹೇಳಿದರು. ಚುನಾವಣಾ ಆಯೋಗವು ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸುತ್ತಿದ್ದು, ಬಿಜೆಪಿಯ ನಿರ್ದೇಶನದಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಅಂತಿಮವಾಗಿ, ರಾಹುಲ್ ಗಾಂಧಿ ಅವರು ಕರ್ನಾಟಕದ ರಾಜ್ಯ ಸರ್ಕಾರವನ್ನು ಈ ವಿಷಯದ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿದರು. “ಮಹಾದೇವಪುರದ ಈ ಕ್ರಿಮಿನಲ್ ಕೃತ್ಯದ ತನಿಖೆ ನಡೆಸಿ, ನೈಜತೆ ಹೊರತರುವಂತೆ” ಮನವಿ ಮಾಡಿದರು. ಜೊತೆಗೆ, ಕಾಂಗ್ರೆಸ್ ಕಾರ್ಯಕರ್ತರಿಗೆ ಸಂವಿಧಾನ ರಕ್ಷಣೆಗೆ ಒಗ್ಗಟ್ಟಿನಿಂದ ಹೋರಾಡುವಂತೆ ಕರೆ ನೀಡಿದರು.

“ಬಿಜೆಪಿಯ ಸಿದ್ಧಾಂತವು ಸಂವಿಧಾನ ವಿರೋಧಿಯಾಗಿದೆ” ಎಂದು ಹೇಳಿದ ರಾಹುಲ್ ಗಾಂಧಿ, ನಾವು ಸತ್ಯವನ್ನು ಹೊರತರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಆಯೋಗವು ನಮಗೆ ಸರಿಯಾದ ಮಾಹಿತಿ ನೀಡದಿದ್ದರೆ ನಾವು ಮತ್ತಷ್ಟು 20 ಕ್ಷೇತ್ರಗಳ ಮಾಹಿತಿಯನ್ನು ಹೊರತರುತ್ತೇವೆ” ಎಂದು ಅವರು ಎಚ್ಚರಿಸಿದರು. ಈ ಮತ ಕಳ್ಳತನವು ದೇಶದಾದ್ಯಂತ ನಡೆದಿರುವ ಕಾರಣ, ಎಲ್ಲ ರಾಜಕೀಯ ಪಕ್ಷಗಳು ಇದರ ವಿರುದ್ಧ ಒಟ್ಟಾಗಿ ಪ್ರಶ್ನೆ ಮಾಡುತ್ತಿವೆ ಎಂದು ಅವರು ಹೇಳಿದರು.

ಲೋಕಸಭೆಯಲ್ಲಿ ಮಣಿಪುರಕ್ಕೆ ಸಂಬಂಧಿಸಿದ ಎರಡು ಮಸೂದೆಗಳು ಚರ್ಚೆಯಿಲ್ಲದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...