Homeಕರ್ನಾಟಕಮತಗಳ್ಳತನ| ಕಾನೂನು ಇಲಾಖೆ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

ಮತಗಳ್ಳತನ| ಕಾನೂನು ಇಲಾಖೆ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತಗಳ್ಳತನದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಬಿಬಿಎಂಪಿ ಚುನಾವಣೆಗೆ ಮುನ್ನ ಪಕ್ಷ ಇದನ್ನು ಪರಿಶೀಲಿಸುತ್ತದೆಯೇ ಎಂಬ ಶ್ನೆಗೆ ಸಿಎಂ ಉತ್ತರಿಸಿದರು.

ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗುವುದು. ಮತದಾರರ ಪಟ್ಟಿಯ ಸಂಬಂಧ ಸಂಪೂರ್ಣ ಅಧಿಕಾರವಿರುವುದು ಚುನಾವಣಾ ಆಯೋಗಕ್ಕೆ ಎಂದರು.

ಮೂರು ಸಾವಿರ ಮತ ಖರೀದಿ ಬಗ್ಗೆ ತಿಳಿದಿಲ್ಲ: ಸಿದ್ದರಾಮಯ್ಯ  ಬಾದಾಮಿ ಕ್ಷೇತ್ರದಲ್ಲಿ ಮೂರು ಸಾವಿರ ಮತಗಳನ್ನು ಖರೀದಿ ಮಾಡಿ ಗೆದ್ದಿದ್ದರು ಎಂಬ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಇಬ್ರಾಹಿಂ ನಮ್ಮ ಪಕ್ಷದವರಲ್ಲ. ನಾನು ನಾಮನಿರ್ದೇಶನ ಸಲ್ಲಿಸಲು ಹಾಗೂ ಪ್ರಚಾರಕ್ಕಾಗಿ ಬಾದಾಮಿಗೆ ಹೋಗಿದ್ದೆ. ಅದು ಬಿಟ್ಟರೆ ನನಗೆ ಏನೂ ಗೊತ್ತಿಲ್ಲ. ನಾನು 1,600 ಮತಗಳಿಂದ ಗೆದ್ದಿದ್ದು. ಈ ವಿಚಾರ ನನಗೆ ಹೊಸದು, ಈ ಬಗ್ಗೆ ನನಗೆ ಗೊತ್ತಿಲ್ಲ” ಎಂದರು.

ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ

ಕಾಂಗ್ರೆಸ್ ಈಗ ಮತಗಳ ಸ್ಥಾನದ ಬಗ್ಗೆ ಪ್ರಸ್ತಾಪಿಸಿರುವುದು ಏಕೆ ಎಂದು ಬಿಜೆಪಿಯವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಬಿಜೆಪಿಯವರು ತಪ್ಪು ಮಾಡಿ ಸುಳ್ಳು ಹೇಳುತ್ತಿದ್ದಾರೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವುದು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು. ಆದರೆ ನಾವು ಗೆದ್ದದ್ದು 9 ಸ್ಥಾನಗಳನ್ನು ಮಾತ್ರ. ರಾಹುಲ್ ಗಾಂಧಿ ಅವರು ಸಾಕ್ಷಿ ಸಮೇತ ವಿಚಾರಗಳನ್ನು ತಿಳಿಸಿದ್ದಾರೆ. ಈ ಎಲ್ಲವೂ ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗದ ಬಳಿ ಲಭ್ಯವಿದೆ. ದಾಖಲಾತಿಗಳ ಬಗ್ಗೆಯೇ ಪ್ರಸ್ತಾಪ ಮಾಡಿದ್ದಾರೆ. ಒಂದೇ ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದರು. ನಾವು ಈ ಬಗ್ಗೆ ಅಧ್ಯಯನ ಮಾಡಿದ ನಂತರ ವಿಷಯ ತಿಳಿದಿದೆ ಎಂದರು.

ಚುನಾವಣೆಗಳಲ್ಲಿ ಕೈವಾಡ

ಚುನಾವಣಾ ಆಯೋಗದ ಬಗ್ಗೆ ಜನರಲ್ಲಿ ವಿಶ್ವಾಸವನ್ನು ಮೂಡಿಸಲು ಮತಗಳ್ಳತನದ ಬಗ್ಗೆ ನ್ಯಾಯಾಂಗ ಸ್ವಯಂ ಪ್ರೇರಿತವಾಗಿ ಮಧ್ಯಪ್ರವೇಶ ಮಾಡಬೇಕೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಸಿಎಂ, “ಚುನಾವಣೆಗಳಲ್ಲಿ, ಇವಿಎಂಗಳಲ್ಲಿ, ಮತದಾರರ ಪಟ್ಟಿಗಳಲ್ಲಿ ಕೈವಾಡ ನಡೆಯುತ್ತಿದೆ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ನನ್ನ ಪ್ರಕಾರ ರಾಹುಲ್ ಗಾಂಧಿಯವರು ಮಾಧ್ಯಮಗಳಲ್ಲಿ ಪ್ರದರ್ಶನ ಮಾಡಿದ್ದು ನಿಜ” ಎಂದರು.

ಸತ್ತವರು ಮತ ಹಾಕಿದ್ದರೆ ಅದಕ್ಕೆ ಚುನಾವಣಾ ಆಯೋಗ ಹೊಣೆ

ಉಪ ಚುನಾವಣೆಯಲ್ಲಿ ಸತ್ತವರೆಲ್ಲಾ ಮತ ಹಾಕಿ ಗೆಲ್ಲಿಸಿದ್ದಾರೆ ಎಂದು ಹಿಂದೆ ಸಿಎಂ ಮಾಡಿದ್ದ ಭಾಷಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಒಂದು ವೇಳೆ ಸತ್ತವರು ಮತ ಹಾಕಿದ್ದರೆ ಅದಕ್ಕೆ ಯಾರು ಜವಾಬ್ದಾರರು? ಚುನಾವಣಾ ಆಯೋಗ ಇದಕ್ಕೆ ನೇರ ಹೊಣೆ” ಎಂದರು.

‘ಹಿಂದೂಗಳು ನಮಗಾಗಿ ಮತ ಹಾಕಿದರೆ ಅದು ವಂಚನೆಯೇ?’: ಮಹಾದೇವಪುರದಲ್ಲಿ ಮತ ಕಳ್ಳತನ ಆರೋಪಕ್ಕೆ ಸಂಸದ ಪಿ.ಸಿ. ಮೋಹನ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....