Homeಕರ್ನಾಟಕಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

ಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

- Advertisement -
- Advertisement -

ಧರ್ಮಸ್ಥಳದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೈಗೊಂಡಿರುವ ಶವ ಶೋಧ ಕಾರ್ಯಾಚರಣೆಯಲ್ಲಿ ಶನಿವಾರ (ಆ.9) ಹೊಸ ಬೆಳವಣಿಗೆಯೊಂದು ನಡೆದಿದೆ.

ಸಾಕ್ಷಿ ದೂರುದಾರ ಬಾಹುಬಲಿ ಬೆಟ್ಟದಲ್ಲಿ ಹೊಸ ಜಾಗವೊಂದನ್ನು ತೋರಿಸಿದ್ದಾರೆ. ಈ ಜಾಗವನ್ನು ಎಸ್‌ಐಟಿ ತಂಡ ಪಾಯಿಂಟ್ ನಂಬರ್ 16 ಎಂದು ಗುರುತಿಸಿದೆ. ಬಾಹುಬಲಿ ಬೆಟ್ಟದ ತುದಿಗೆ ತೆರಳುವ ರಸ್ತೆ ಬದಿಯೇ ಈ ಜಾಗವಿದ್ದು, ಅಲ್ಲಿ ಅಧಿಕಾರಿಗಳು ಶೋಧ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ವಿಶೇಷವಾಗಿ, ಎಸ್‌ಐಟಿ ತಂಡ ದೂರುದಾರನನ್ನು ಕರೆದುಕೊಂಡು ಧರ್ಮಸ್ಥಳ ದೇವಸ್ಥಾನದ ಮುಖ್ಯ ದ್ವಾರದ ಮೂಲಕವೇ ಒಳ ಪ್ರವೇಶಿಸಿ ಬೆಟ್ಟದ ತುದಿಗೆ ತೆರಳಿದೆ. ಅಲ್ಲಿ ಆತ ತೋರಿಸಿರುವ ಜಾಗವನ್ನು ಅಧಿಕಾರಿಗಳು ಟೇಪ್ ಕಟ್ಟಿ ಗುರುತು ಮಾಡಿದ್ದಾರೆ. ಅಲ್ಲದೆ, ಹಸಿರು ನೆಟ್ ಕಟ್ಟಿ ಮಣ್ಣು ಅಗೆಯಲು ಸಿದ್ದತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸಾಕ್ಷಿ ದೂರುದಾರ ಆರಂಭದಲ್ಲಿ 13 ಜಾಗಗಳನ್ನು ಪಾಯಿಂಟ್‌ಗಳನ್ನು ಗುರುತಿಸಿದ್ದರು. ಬಳಿಕ ಅದು 15ರಕ್ಕೇರಿತ್ತು. ಈ ಪೈಕಿ ಪಾಯಿಂಟ್‌ 13 ಹೊರತುಪಡಿಸಿ ಉಳಿದೆಡೆ ಶೋಧ ನಡೆಸಲಾಗಿದೆ. ಪಾಯಿಂಟ್ ನಂಬರ್ 6 ಮತ್ತು 11ರ ಸಮೀಪ ಮನುಷ್ಯರ ಅಸ್ಥಿಪಂಜರದ ಅವಶೇಷಗಳು ಸಿಕ್ಕಿದೆ ಎನ್ನಲಾಗಿದೆ.

ಈಗಾಗಲೇ ಎಲ್ಲೆಡೆ ಸುದ್ದಿಯಾಗಿರುವಂತೆ ದೂರುದಾರ ಧರ್ಮಸ್ಥಳ ಸಮೀಪದ ಕಲ್ಲೇರಿ ಮತ್ತು ಬೋಳಿಯಾರ್ ಎಂಬ ಜಾಗಗಳಲ್ಲಿ ಶವ ಹೂತಿರುವ ಬಗ್ಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಆ ಜಾಗಗಳಲ್ಲಿ ಎಸ್‌ಐಟಿ ಶನಿವಾರ ಶೋಧ ನಡೆಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಈ ನಡುವೆ ದೂರುದಾರ ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ್ದಾರೆ.

ಇಬ್ಬರು ಸಾಕ್ಷಿಗಳು ಪ್ರತ್ಯಕ್ಷ

ಎಸ್‌ಐಟಿ ಶವ ಶೋಧ ನಡೆಸುತ್ತಿರುವ ಪ್ರಕರಣದ ದೂರುದಾರ ಶವ ಹೂತಿರುವುದನ್ನು ನಾವು ನೋಡಿದ್ದೇವೆ ಎಂದು ಇಬ್ಬರು ಎಸ್‌ಐಟಿ ತಂಡ ಮುಂದೆ ಹಾಜರಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿತ್ತು. ಅವರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಸಲಹೆ ನೀಡಿದ್ದರು. ಅದರಂತೆ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಜಯಂತ ಶೆಟ್ಟಿಯಿಂದ ಎರಡೇ ದೂರು

ಮೊದಲ ಅನಾಮಿಕ ವ್ಯಕ್ತಿಯ ದೂರಿನಂತೆ ಪ್ರಸ್ತುತ ಧರ್ಮಸ್ಥಳದಲ್ಲಿ ಶವ ಶೋಧ ನಡೆಯುತ್ತಿದೆ. ಈ ನಡುವೆ ಆಗಸ್ಟ್ 2ರಂದು ಜಯಂತ ಶೆಟ್ಟಿ ಎಂಬವರು ವರ್ಷಗಳ ಬಾಲಕಿಯೊಬ್ಬಳ ಶವ ಹೂತು ಹಾಕಿರುವುದನ್ನು ನಾನು ನೋಡಿದ್ದೇನೆ. ತನ್ನ ಆರೋಪಕ್ಕೆ ಜೀವಂತ ಸಾಕ್ಷಿಗಳಿದ್ದಾರೆ. ಅಗತ್ಯ ಬಂದರೆ ಅವರನ್ನು ಕರೆತಂದು ನಿಲ್ಲಿಸುತ್ತೇನೆ ಎಂದು ಎಸ್‌ಐಟಿಗೆ ದೂರು ನೀಡಿದ್ದರು. ತಾನು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ ಪದ್ಮಲತಾ ಅವರ ಸಂಬಂಧಿ ಎಂದು ಜಯಂತ ಶೆಟ್ಟಿ ಹೇಳಿಕೊಂಡಿದ್ದಾರೆ.
ಜಯಂತ ಶೆಟ್ಟಿ ದೂರು ನೀಡಿದ ಮರುದಿನವೇ 5 ಮಂದಿ ಸಾಕ್ಷಿಗಳು ತಾವು ಶವ ಹೂತಿರುವುದನ್ನು ನೋಡಿರುವುದಾಗಿ ಎಸ್‌ಐಟಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಯೂಟ್ಯೂಬರ್‌ಗಳ ಮೇಲೆ ಹಲ್ಲೆ

ಆಗಸ್ಟ್ 6ರಂದು ಸೌಜನ್ಯ ಮನೆಗೆ ತೆರಳುವ ಪಾಂಗಳ ಕ್ರಾಸ್ ಬಳಿ ನಾಲ್ವರು ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ, ನಂತರದ ಘಟನೆಗಳಿಗೆ ಸಂಬಂಧಪಟ್ಟಂತೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಒಟ್ಟು ಎಫ್‌ಐಆರ್‌ಗಳು ದಾಖಲಾಗಿವೆ.

ಮತಗಳ್ಳತನ| ಕಾನೂನು ಇಲಾಖೆ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...