Homeಕರ್ನಾಟಕಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

ಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

- Advertisement -
- Advertisement -

ಧರ್ಮಸ್ಥಳದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೈಗೊಂಡಿರುವ ಶವ ಶೋಧ ಕಾರ್ಯಾಚರಣೆಯಲ್ಲಿ ಶನಿವಾರ (ಆ.9) ಹೊಸ ಬೆಳವಣಿಗೆಯೊಂದು ನಡೆದಿದೆ.

ಸಾಕ್ಷಿ ದೂರುದಾರ ಬಾಹುಬಲಿ ಬೆಟ್ಟದಲ್ಲಿ ಹೊಸ ಜಾಗವೊಂದನ್ನು ತೋರಿಸಿದ್ದಾರೆ. ಈ ಜಾಗವನ್ನು ಎಸ್‌ಐಟಿ ತಂಡ ಪಾಯಿಂಟ್ ನಂಬರ್ 16 ಎಂದು ಗುರುತಿಸಿದೆ. ಬಾಹುಬಲಿ ಬೆಟ್ಟದ ತುದಿಗೆ ತೆರಳುವ ರಸ್ತೆ ಬದಿಯೇ ಈ ಜಾಗವಿದ್ದು, ಅಲ್ಲಿ ಅಧಿಕಾರಿಗಳು ಶೋಧ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ವಿಶೇಷವಾಗಿ, ಎಸ್‌ಐಟಿ ತಂಡ ದೂರುದಾರನನ್ನು ಕರೆದುಕೊಂಡು ಧರ್ಮಸ್ಥಳ ದೇವಸ್ಥಾನದ ಮುಖ್ಯ ದ್ವಾರದ ಮೂಲಕವೇ ಒಳ ಪ್ರವೇಶಿಸಿ ಬೆಟ್ಟದ ತುದಿಗೆ ತೆರಳಿದೆ. ಅಲ್ಲಿ ಆತ ತೋರಿಸಿರುವ ಜಾಗವನ್ನು ಅಧಿಕಾರಿಗಳು ಟೇಪ್ ಕಟ್ಟಿ ಗುರುತು ಮಾಡಿದ್ದಾರೆ. ಅಲ್ಲದೆ, ಹಸಿರು ನೆಟ್ ಕಟ್ಟಿ ಮಣ್ಣು ಅಗೆಯಲು ಸಿದ್ದತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸಾಕ್ಷಿ ದೂರುದಾರ ಆರಂಭದಲ್ಲಿ 13 ಜಾಗಗಳನ್ನು ಪಾಯಿಂಟ್‌ಗಳನ್ನು ಗುರುತಿಸಿದ್ದರು. ಬಳಿಕ ಅದು 15ರಕ್ಕೇರಿತ್ತು. ಈ ಪೈಕಿ ಪಾಯಿಂಟ್‌ 13 ಹೊರತುಪಡಿಸಿ ಉಳಿದೆಡೆ ಶೋಧ ನಡೆಸಲಾಗಿದೆ. ಪಾಯಿಂಟ್ ನಂಬರ್ 6 ಮತ್ತು 11ರ ಸಮೀಪ ಮನುಷ್ಯರ ಅಸ್ಥಿಪಂಜರದ ಅವಶೇಷಗಳು ಸಿಕ್ಕಿದೆ ಎನ್ನಲಾಗಿದೆ.

ಈಗಾಗಲೇ ಎಲ್ಲೆಡೆ ಸುದ್ದಿಯಾಗಿರುವಂತೆ ದೂರುದಾರ ಧರ್ಮಸ್ಥಳ ಸಮೀಪದ ಕಲ್ಲೇರಿ ಮತ್ತು ಬೋಳಿಯಾರ್ ಎಂಬ ಜಾಗಗಳಲ್ಲಿ ಶವ ಹೂತಿರುವ ಬಗ್ಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಆ ಜಾಗಗಳಲ್ಲಿ ಎಸ್‌ಐಟಿ ಶನಿವಾರ ಶೋಧ ನಡೆಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಈ ನಡುವೆ ದೂರುದಾರ ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ್ದಾರೆ.

ಇಬ್ಬರು ಸಾಕ್ಷಿಗಳು ಪ್ರತ್ಯಕ್ಷ

ಎಸ್‌ಐಟಿ ಶವ ಶೋಧ ನಡೆಸುತ್ತಿರುವ ಪ್ರಕರಣದ ದೂರುದಾರ ಶವ ಹೂತಿರುವುದನ್ನು ನಾವು ನೋಡಿದ್ದೇವೆ ಎಂದು ಇಬ್ಬರು ಎಸ್‌ಐಟಿ ತಂಡ ಮುಂದೆ ಹಾಜರಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿತ್ತು. ಅವರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಸಲಹೆ ನೀಡಿದ್ದರು. ಅದರಂತೆ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಜಯಂತ ಶೆಟ್ಟಿಯಿಂದ ಎರಡೇ ದೂರು

ಮೊದಲ ಅನಾಮಿಕ ವ್ಯಕ್ತಿಯ ದೂರಿನಂತೆ ಪ್ರಸ್ತುತ ಧರ್ಮಸ್ಥಳದಲ್ಲಿ ಶವ ಶೋಧ ನಡೆಯುತ್ತಿದೆ. ಈ ನಡುವೆ ಆಗಸ್ಟ್ 2ರಂದು ಜಯಂತ ಶೆಟ್ಟಿ ಎಂಬವರು ವರ್ಷಗಳ ಬಾಲಕಿಯೊಬ್ಬಳ ಶವ ಹೂತು ಹಾಕಿರುವುದನ್ನು ನಾನು ನೋಡಿದ್ದೇನೆ. ತನ್ನ ಆರೋಪಕ್ಕೆ ಜೀವಂತ ಸಾಕ್ಷಿಗಳಿದ್ದಾರೆ. ಅಗತ್ಯ ಬಂದರೆ ಅವರನ್ನು ಕರೆತಂದು ನಿಲ್ಲಿಸುತ್ತೇನೆ ಎಂದು ಎಸ್‌ಐಟಿಗೆ ದೂರು ನೀಡಿದ್ದರು. ತಾನು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ ಪದ್ಮಲತಾ ಅವರ ಸಂಬಂಧಿ ಎಂದು ಜಯಂತ ಶೆಟ್ಟಿ ಹೇಳಿಕೊಂಡಿದ್ದಾರೆ.
ಜಯಂತ ಶೆಟ್ಟಿ ದೂರು ನೀಡಿದ ಮರುದಿನವೇ 5 ಮಂದಿ ಸಾಕ್ಷಿಗಳು ತಾವು ಶವ ಹೂತಿರುವುದನ್ನು ನೋಡಿರುವುದಾಗಿ ಎಸ್‌ಐಟಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಯೂಟ್ಯೂಬರ್‌ಗಳ ಮೇಲೆ ಹಲ್ಲೆ

ಆಗಸ್ಟ್ 6ರಂದು ಸೌಜನ್ಯ ಮನೆಗೆ ತೆರಳುವ ಪಾಂಗಳ ಕ್ರಾಸ್ ಬಳಿ ನಾಲ್ವರು ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ, ನಂತರದ ಘಟನೆಗಳಿಗೆ ಸಂಬಂಧಪಟ್ಟಂತೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಒಟ್ಟು ಎಫ್‌ಐಆರ್‌ಗಳು ದಾಖಲಾಗಿವೆ.

ಮತಗಳ್ಳತನ| ಕಾನೂನು ಇಲಾಖೆ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...