Homeಕರ್ನಾಟಕಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

ಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

- Advertisement -
- Advertisement -

ಧರ್ಮಸ್ಥಳದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೈಗೊಂಡಿರುವ ಶವ ಶೋಧ ಕಾರ್ಯಾಚರಣೆಯಲ್ಲಿ ಶನಿವಾರ (ಆ.9) ಹೊಸ ಬೆಳವಣಿಗೆಯೊಂದು ನಡೆದಿದೆ.

ಸಾಕ್ಷಿ ದೂರುದಾರ ಬಾಹುಬಲಿ ಬೆಟ್ಟದಲ್ಲಿ ಹೊಸ ಜಾಗವೊಂದನ್ನು ತೋರಿಸಿದ್ದಾರೆ. ಈ ಜಾಗವನ್ನು ಎಸ್‌ಐಟಿ ತಂಡ ಪಾಯಿಂಟ್ ನಂಬರ್ 16 ಎಂದು ಗುರುತಿಸಿದೆ. ಬಾಹುಬಲಿ ಬೆಟ್ಟದ ತುದಿಗೆ ತೆರಳುವ ರಸ್ತೆ ಬದಿಯೇ ಈ ಜಾಗವಿದ್ದು, ಅಲ್ಲಿ ಅಧಿಕಾರಿಗಳು ಶೋಧ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ವಿಶೇಷವಾಗಿ, ಎಸ್‌ಐಟಿ ತಂಡ ದೂರುದಾರನನ್ನು ಕರೆದುಕೊಂಡು ಧರ್ಮಸ್ಥಳ ದೇವಸ್ಥಾನದ ಮುಖ್ಯ ದ್ವಾರದ ಮೂಲಕವೇ ಒಳ ಪ್ರವೇಶಿಸಿ ಬೆಟ್ಟದ ತುದಿಗೆ ತೆರಳಿದೆ. ಅಲ್ಲಿ ಆತ ತೋರಿಸಿರುವ ಜಾಗವನ್ನು ಅಧಿಕಾರಿಗಳು ಟೇಪ್ ಕಟ್ಟಿ ಗುರುತು ಮಾಡಿದ್ದಾರೆ. ಅಲ್ಲದೆ, ಹಸಿರು ನೆಟ್ ಕಟ್ಟಿ ಮಣ್ಣು ಅಗೆಯಲು ಸಿದ್ದತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸಾಕ್ಷಿ ದೂರುದಾರ ಆರಂಭದಲ್ಲಿ 13 ಜಾಗಗಳನ್ನು ಪಾಯಿಂಟ್‌ಗಳನ್ನು ಗುರುತಿಸಿದ್ದರು. ಬಳಿಕ ಅದು 15ರಕ್ಕೇರಿತ್ತು. ಈ ಪೈಕಿ ಪಾಯಿಂಟ್‌ 13 ಹೊರತುಪಡಿಸಿ ಉಳಿದೆಡೆ ಶೋಧ ನಡೆಸಲಾಗಿದೆ. ಪಾಯಿಂಟ್ ನಂಬರ್ 6 ಮತ್ತು 11ರ ಸಮೀಪ ಮನುಷ್ಯರ ಅಸ್ಥಿಪಂಜರದ ಅವಶೇಷಗಳು ಸಿಕ್ಕಿದೆ ಎನ್ನಲಾಗಿದೆ.

ಈಗಾಗಲೇ ಎಲ್ಲೆಡೆ ಸುದ್ದಿಯಾಗಿರುವಂತೆ ದೂರುದಾರ ಧರ್ಮಸ್ಥಳ ಸಮೀಪದ ಕಲ್ಲೇರಿ ಮತ್ತು ಬೋಳಿಯಾರ್ ಎಂಬ ಜಾಗಗಳಲ್ಲಿ ಶವ ಹೂತಿರುವ ಬಗ್ಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಆ ಜಾಗಗಳಲ್ಲಿ ಎಸ್‌ಐಟಿ ಶನಿವಾರ ಶೋಧ ನಡೆಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಈ ನಡುವೆ ದೂರುದಾರ ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ್ದಾರೆ.

ಇಬ್ಬರು ಸಾಕ್ಷಿಗಳು ಪ್ರತ್ಯಕ್ಷ

ಎಸ್‌ಐಟಿ ಶವ ಶೋಧ ನಡೆಸುತ್ತಿರುವ ಪ್ರಕರಣದ ದೂರುದಾರ ಶವ ಹೂತಿರುವುದನ್ನು ನಾವು ನೋಡಿದ್ದೇವೆ ಎಂದು ಇಬ್ಬರು ಎಸ್‌ಐಟಿ ತಂಡ ಮುಂದೆ ಹಾಜರಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿತ್ತು. ಅವರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಸಲಹೆ ನೀಡಿದ್ದರು. ಅದರಂತೆ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಜಯಂತ ಶೆಟ್ಟಿಯಿಂದ ಎರಡೇ ದೂರು

ಮೊದಲ ಅನಾಮಿಕ ವ್ಯಕ್ತಿಯ ದೂರಿನಂತೆ ಪ್ರಸ್ತುತ ಧರ್ಮಸ್ಥಳದಲ್ಲಿ ಶವ ಶೋಧ ನಡೆಯುತ್ತಿದೆ. ಈ ನಡುವೆ ಆಗಸ್ಟ್ 2ರಂದು ಜಯಂತ ಶೆಟ್ಟಿ ಎಂಬವರು ವರ್ಷಗಳ ಬಾಲಕಿಯೊಬ್ಬಳ ಶವ ಹೂತು ಹಾಕಿರುವುದನ್ನು ನಾನು ನೋಡಿದ್ದೇನೆ. ತನ್ನ ಆರೋಪಕ್ಕೆ ಜೀವಂತ ಸಾಕ್ಷಿಗಳಿದ್ದಾರೆ. ಅಗತ್ಯ ಬಂದರೆ ಅವರನ್ನು ಕರೆತಂದು ನಿಲ್ಲಿಸುತ್ತೇನೆ ಎಂದು ಎಸ್‌ಐಟಿಗೆ ದೂರು ನೀಡಿದ್ದರು. ತಾನು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ ಪದ್ಮಲತಾ ಅವರ ಸಂಬಂಧಿ ಎಂದು ಜಯಂತ ಶೆಟ್ಟಿ ಹೇಳಿಕೊಂಡಿದ್ದಾರೆ.
ಜಯಂತ ಶೆಟ್ಟಿ ದೂರು ನೀಡಿದ ಮರುದಿನವೇ 5 ಮಂದಿ ಸಾಕ್ಷಿಗಳು ತಾವು ಶವ ಹೂತಿರುವುದನ್ನು ನೋಡಿರುವುದಾಗಿ ಎಸ್‌ಐಟಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಯೂಟ್ಯೂಬರ್‌ಗಳ ಮೇಲೆ ಹಲ್ಲೆ

ಆಗಸ್ಟ್ 6ರಂದು ಸೌಜನ್ಯ ಮನೆಗೆ ತೆರಳುವ ಪಾಂಗಳ ಕ್ರಾಸ್ ಬಳಿ ನಾಲ್ವರು ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ, ನಂತರದ ಘಟನೆಗಳಿಗೆ ಸಂಬಂಧಪಟ್ಟಂತೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಒಟ್ಟು ಎಫ್‌ಐಆರ್‌ಗಳು ದಾಖಲಾಗಿವೆ.

ಮತಗಳ್ಳತನ| ಕಾನೂನು ಇಲಾಖೆ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...