Homeಕರ್ನಾಟಕಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

- Advertisement -
- Advertisement -

ಧರ್ಮಸ್ಥಳದ ಪಾಂಗಳ ಕ್ರಾಸ್‌ನಲ್ಲಿ ಬುಧವಾರ (ಆ.6) ನಡೆದ ಯೂಟ್ಯೂಬ್‌ ಮಾಧ್ಯಮದವರ (ಪತ್ರಕರ್ತರ) ಮೇಲಿನ ಮಾರಣಾಂತಿಕ ದಾಳಿಯನ್ನು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಬೆಳ್ತಂಗಡಿ ತಾಲೂಕು ಸಮಿತಿ ತೀವ್ರವಾಗಿ ಖಂಡಿಸಿದೆ.

ದಲಿತ ಪತ್ರಕರ್ತನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹಿಸಿದೆ.

ಹಲ್ಲೆಗೊಳಗಾದ ನಾಲ್ವರು ಪತ್ರಕರ್ತರ ಪೈಕಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ದಲಿತ ಸಮುದಾಯದ ಅಭಿ ಕೂಡ ಒಬ್ಬರು. ವರದಿಗಳ ಪ್ರಕಾರ, ಅಭಿ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಲ್ಲ. ಕುಡ್ಲ ರ‍್ಯಾಂಪೇಜ್ ಯೂಟ್ಯೂಬ್ ಚಾನೆಲ್‌ನ ಅಜಯ್ ಅಂಚನ್ ಅವರು ನೀಡಿರುವ ದೂರು ಆಧರಿಸಿ ಅಭಿ ಅವರ ಹೇಳಿಕೆ ಪಡೆದುಕೊಂಡಿದ್ದಾರೆ.

ಶುಕ್ರವಾರ (ಆ.8) ಉಜಿರೆಯ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಬೆಳ್ತಂಗಡಿಯ ಮುಖಂಡರು ಹಲ್ಲೆಗೊಳಗಾದ ದಲಿತ ಸಮುದಾಯದ ಪತ್ರಕರ್ತ ಅಭಿ ಮತ್ತು ಇತರರ ಆರೋಗ್ಯ ವಿಚಾರಿಸಿದ್ದಾರೆ.

ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುವ ಮತ್ತು ಅದರ ಅಂಗವೆನಿಸಿಕೊಂಡಿರುವ ಮಾಧ್ಯಮದವರ ಮೇಲೆ ಸವಾರಿ ಮಾಡುವುದೆಂದರೆ, ಅಂದು ಸಂವಿಧಾನದ ಮೇಲೆ ಮಾಡುವ ದಾಳಿಯಾಗುತ್ತದೆ ಎಂದು ದಸಂಸ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾಳಿ ಮಾಡಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ದಸಂಸ ಬೆಳ್ತಂಗಡಿ ತಾಲೂಕು ಸಮಿತಿಯ ಮುಖಂಡ ಬಿ.ಕೆ ವಸಂತ್, ಹಲ್ಲೆಗೊಳಗಳಾದ ದಲಿತ ಪತ್ರಕರ್ತ ಅಭಿ ಅವರಿಂದ ಪೊಲೀಸರು ಕೇವಲ ಹೇಳಿಕೆ ಪಡೆದುಕೊಂಡಿದ್ದಾರೆ. ಇದು ಸಾಲದು, ಆರೋಪಿಗಳ ವಿರುದ್ದ ಪೊಲೀಸರು ದಲಿತ ದೌರ್ಜನ್ಯ ಪ್ರಕರಣ ದಾಖಲಿಸಬೇಕು. ಅಲ್ಲದೆ, ಹಲ್ಲೆ ಮಾಡುವಾಗ ವಿಡಿಯೋ ಮಾಡುವುದಕ್ಕೆ ತಡೆಯೊಡ್ಡಿದ್ದಕ್ಕೆ ಮತ್ತು ಕ್ಯಾಮಾರ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಾನಿ ಮಾಡಿದ್ದಕ್ಕೆ ದರೋಡೆ ಮತ್ತು ಸಾಕ್ಷ್ಯನಾಶ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಭಿ ಹಲ್ಲೆಗೊಳಗಾಗಿ ಅಸ್ವಸ್ಥರಾಗಿದ್ದಾಗ ಪೊಲೀಸರು ಅವರಿಂದ ಹೇಳಿಕೆ ಪಡೆದಿದ್ದಾರೆ. ಅದು ಸರಿಯಾಗಿಲ್ಲ. ಹಾಗಾಗಿ, ಪೊಲೀಸರು ಮತ್ತೊಮ್ಮೆ ಅವರಿಂದ ಹೇಳಿಕೆ ಪಡೆದು ಸರಿಯಾಗಿ ಪ್ರಕರಣ ದಾಖಲಿಸಬೇಕು. ದಲಿತ ದೌರ್ಜನ್ಯ ಸೇರಿದಂತೆ ಸೂಕ್ತ ಕಾನೂನುಗಳಡಿ ಕ್ರಮ ಕೈಗೊಳ್ಳಬೇಕು ಎಂದು ವಸಂತ್ ಒತ್ತಾಯಿಸಿದ್ದಾರೆ.

ಎಸ್‌ಐಟಿ ತನಿಖೆಯ ದಿಕ್ಕು ತಪ್ಪಿಸಲು ಕಾಣದ ಕೈಗಳು ಮಾಧ್ಯಮದವರ ಮೇಲೆ ದಾಳಿ ಮಾಡಿಸಿದೆ ಎಂದು ವಂಸತ್ ಆರೋಪಿಸಿದ್ದಾರೆ.

ಉಜಿರೆ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ದಸಂಸ ಬೆಳ್ತಂಗಡಿ ನಿಯೋಗದಲ್ಲಿ ಶೇಖರ್ ಕುಕ್ಕೇಡಿ, ರಮೇಶ್ ಆರ್., ಬಿ.ಕೆ ವಸಂತ್ ಬೆಳ್ತಂಗಡಿ, ವೆಂಕಣ್ಣ ಕೊಯ್ಯೂರು, ನೇಮಿರಾಜ್ ಕಿಲ್ಲೂರ್, ಶ್ರೀಧರ್ ಎಸ್ ಕಳೆಂಜ, ಶಂಕರ್ ಮಾಲಾಡಿ, ಪ್ರಭಾಕರ್ ಶಾಂತಿಕೋಡಿ, ಹರೀಶ್ ಲಾಯಿಲ, ಕೂಸ ಅಳದಂಗಡಿ, ಸುಂದರ ನಾಲ್ಕೂರು, ಪುಷ್ಪರಾಜ್ ಶಿರ್ಲಾಲ್, ಸಂದೀಪ್ ಹೊಸಪಟ್ನ, ಶೇಖರ್ ಮಾಲಾಡಿ, ರಮೇಶ್ ಗಾಂಧಿನಗರ ಹಾಗೂ ಇತರರು ಇದ್ದರು.

ಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...