Homeಮುಖಪುಟಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ

ಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ

- Advertisement -
- Advertisement -

ಪಾಟ್ನಾ: ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ 20 ವರ್ಷದ ಫೈಜ್ ಅನ್ವರ್ ಎಂಬ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಅನ್ವರ್ ಕುಟುಂಬಸ್ಥರು ಪೊಲೀಸರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಪೊಲೀಸ್ ವಶದಲ್ಲಿ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸಿವಾನ್‌ನ ಮೊಹಿಯುದ್ದೀನ್‌ಪುರದ ನಿವಾಸಿಯಾಗಿರುವ ಅನ್ವರ್ ಅವರನ್ನು ಜುಲೈ 31, 2025ರಂದು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದರು. ಆದರೆ ಆಗಸ್ಟ್ 2 ರಂದು ಪೊಲೀಸರು, ಆತ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿ ಮೃತ ಎಂದು ಘೋಷಿಸಿದ್ದಾರೆ. ಈ ವಿಚಾರ ಕೇಳಿ ಆಘಾತಕ್ಕೊಳಗಾದ ಅನ್ವರ್ ಕುಟುಂಬಸ್ಥರು, ಆತ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಪೊಲೀಸರು ಥಳಿಸಿದ್ದಾರೆ, ಆತನದ್ದು ಆತ್ಮಹತ್ಯೆಯಲ್ಲ, ಇದೊಂದು ಉದ್ದೇಶಪೂರ್ವಕ ಕೊಲೆ ಎಂದು ಆರೋಪಿಸಿದ್ದಾರೆ.

ಅನ್ವರ್ ಅವರ ಹಿರಿಯ ಸಹೋದರ ಸೈಫ್ ಅಲಿ, “ನನ್ನ ಸಹೋದರನ ದೇಹದ ಮೇಲೆ ಗಾಯದ ಗುರುತುಗಳಿದ್ದವು. ಆತನ ಕುತ್ತಿಗೆಯ ಮೇಲೆ ಎರಡು ಆಳವಾದ ಗುರುತುಗಳಿದ್ದವು. ಇದು ಬಲವಂತವಾಗಿ ಕತ್ತು ಹಿಸುಕಿ ಹತ್ಯೆ ಮಾಡಿರುವುದನ್ನು ಸೂಚಿಸುತ್ತದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾನು ನನ್ನ ಸಹೋದರನನ್ನು ಭೇಟಿಯಾಗಲು ಹಲವಾರು ಬಾರಿ ಪ್ರಯತ್ನಿಸಿದೆ, ಆದರೆ ಪೊಲೀಸರು ನನ್ನನ್ನು ಮೂರು ಬಾರಿ ಹಿಂದಕ್ಕೆ ಕಳುಹಿಸಿದರು. ನಾನು ಅಂತಿಮವಾಗಿ ಅವನನ್ನು ಭೇಟಿಯಾಗಲು ಅವಕಾಶ ಪಡೆದಾಗ, ಪೊಲೀಸರು ನನ್ನ ಸಹೋದರನ ದೇಹವನ್ನು ಜೈಲಿನ ಆವರಣದಿಂದ ಹೊರಗೆ ಕೊಂಡೊಯ್ಯುವುದನ್ನು ನೋಡಿದೆ. ಅದು ನನ್ನ ಸಹೋದರ ಫೈಜ್ ಎಂದು ಪೊಲೀಸರು ನನಗೆ ತಿಳಿಸಲಿಲ್ಲ” ಎಂದು ಅಲಿ ಆರೋಪಿಸಿದ್ದಾರೆ.

“ನಾನು ಮಧ್ಯಪ್ರವೇಶಿಸಿ, ಅದು ನನ್ನ ಸಹೋದರ ಎಂದು ಖಚಿತಪಡಿಸಿಕೊಂಡೆ. ಪೊಲೀಸರ ಬಳಿ ದೇಹವನ್ನು ಎಲ್ಲಿಗೆ ಮತ್ತು ಏಕೆ ಕರೆದೊಯ್ಯುತ್ತಿದ್ದಾರೆ ಎಂದು ಕೇಳಿದಾಗ, ಅವರು ಆತ ಜೈಲಿನ ಆಸ್ಪತ್ರೆಯ ಒಳಗೆ ಬಿದ್ದಿದ್ದಾನೆ, ಆ ಕಾರಣಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದರು. ಆದರೆ ನಾವು ಸದರ್ ಆಸ್ಪತ್ರೆಗೆ ತಲುಪಿದಾಗ, ಆತನನ್ನು ಮೃತನೆಂದು ಘೋಷಿಸಲಾಗಿತ್ತು” ಎಂದು ಸೈಫ್ ಅಲಿ ಹೇಳಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ನನ್ನನ್ನು ಪೊಲೀಸರ ಬಳಿ ಕಳುಹಿಸುತ್ತಿದ್ದರು ಮತ್ತು ಪೊಲೀಸರು ನನ್ನನ್ನು ವೈದ್ಯರ ಬಳಿ ಕಳುಹಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ಈ ಗೊಂದಲಮಯ ಪರಿಸ್ಥಿತಿಯಿಂದ ಬೇಸತ್ತು, ಅನ್ವರ್ ಅವರ ಕುಟುಂಬವು ಆಸ್ಪತ್ರೆಯ ಹೊರಗೆ ಮೃತದೇಹದೊಂದಿಗೆ ಪ್ರತಿಭಟನೆ ನಡೆಸಿತು. ನಂತರದಲ್ಲಿ, ಪೊಲೀಸರು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರು.

ಅಧಿಕಾರಿಗಳು ಮೂರು ದಿನಗಳಿಗೂ ಹೆಚ್ಚು ಕಾಲ ಮರಣೋತ್ತರ ಪರೀಕ್ಷೆಯ ವರದಿಯನ್ನು ತಡೆಹಿಡಿದಿದ್ದಾರೆ ಎಂದು ಸೈಫ್ ಅಲಿ ಆರೋಪಿಸಿದ್ದಾರೆ. ಈ ವಿಳಂಬವು ಕಸ್ಟಡಿಯಲ್ಲಿನ ಸಾವಿನ ಮೂಲಭೂತ ಶಿಷ್ಟಾಚಾರಗಳನ್ನು ಉಲ್ಲಂಘಿಸುತ್ತದೆ ಮತ್ತು ಸತ್ಯಾಂಶವನ್ನು ಮುಚ್ಚಿಡುವ ಪ್ರಯತ್ನದ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮೃತನ ಕುಟುಂಬವು ಆಗಸ್ಟ್ 8, 2025ರಂದು ಮೊಫಾಸಿಲ್ ಪೊಲೀಸ್ ಠಾಣೆಯಲ್ಲಿ ಲಿಖಿತ ಅರ್ಜಿ ಸಲ್ಲಿಸಿದೆ, ಆದರೆ ಎಫ್‌ಐಆರ್ ಇನ್ನೂ ದಾಖಲಾಗಿಲ್ಲ. ಅನ್ವರ್ ಅವರ ತಾಯಿ ಜೈದಾ ಖಾತೂನ್, ಜಿಲ್ಲಾಧಿಕಾರಿಗೆ ಸಲ್ಲಿಸಿದ ಲಿಖಿತ ಅರ್ಜಿಯಲ್ಲಿ, “ನನ್ನ ಮಗನನ್ನು ಪೊಲೀಸರು ಕಸ್ಟಡಿಯಲ್ಲಿ ಕೊಂದಿದ್ದಾರೆ” ಎಂದು ಹೇಳಿದ್ದಾರೆ ಮತ್ತು ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಸೈಫ್ ಅಲಿ ಅವರು ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ, ಸಿಬಿಐ ತನಿಖೆ ಮತ್ತು ಫೈಜ್‌ನ ಬಂಧನದ ಸಮಯದಲ್ಲಿ ಕರ್ತವ್ಯದಲ್ಲಿದ್ದ ಎಲ್ಲಾ ಅಧಿಕಾರಿಗಳ ತಕ್ಷಣದ ಅಮಾನತಿಗೆ ಒತ್ತಾಯಿಸಿದ್ದಾರೆ. ಕುಟುಂಬಕ್ಕೆ ಸಹಾಯ ಮಾಡುತ್ತಿರುವ ವಕೀಲರಾದ ಕೈಫ್ ಹಸನ್, ಈ ಪ್ರಕರಣದ ನಿರ್ವಹಣೆಯನ್ನು “ನ್ಯಾಯ ನಿರಾಕರಣೆ” ಎಂದು ಖಂಡಿಸಿದ್ದಾರೆ.

“ಇಂತಹ ಪ್ರಕರಣಗಳಲ್ಲಿ ಪಾರದರ್ಶಕತೆ ಖಚಿತಪಡಿಸುವುದು, ಫೋರೆನ್ಸಿಕ್ ಪರೀಕ್ಷೆಗಳನ್ನು ನಡೆಸುವುದು ಮತ್ತು ಸ್ವತಂತ್ರ ತನಿಖೆಗಳನ್ನು ಪ್ರಾರಂಭಿಸುವುದು ಸರ್ಕಾರದ ಕಾನೂನುಬದ್ಧ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ. ಲಾಕಪ್‌ ಅಥವಾ ಆಸ್ಪತ್ರೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿದ್ದವೇ ಎಂಬುದರ ಬಗ್ಗೆ ಯಾವುದೇ ತನಿಖೆ ನಡೆದಿಲ್ಲ. ಯಾವುದೇ ಸಿಸಿಟಿವಿ ದೃಶ್ಯಾವಳಿ ಅಥವಾ ಅಧಿಕೃತ ದಾಖಲೆಗಳನ್ನು ಕುಟುಂಬದೊಂದಿಗೆ ಹಂಚಿಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಫೈಜ್ ಅವರ ಕುಟುಂಬವು ತಮ್ಮ ಮರಣೋತ್ತರ ವರದಿಗಾಗಿ ಮತ್ತು ಅವರ ಸಾವಿಗೆ ನ್ಯಾಯಕ್ಕಾಗಿ ಕಾಯುತ್ತಿದೆ. ಆದರೆ, ಈವರೆಗೆ ಯಾವುದೇ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿಲ್ಲ, ಪ್ರಶ್ನಿಸಿಲ್ಲ ಅಥವಾ ಯಾವುದೇ ಅಧಿಕೃತ ವಿಚಾರಣೆ ಪ್ರಾರಂಭವಾಗಿಲ್ಲ. ಕುಟುಂಬಸ್ಥರು ಇನ್ನೂ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...