Homeಮುಖಪುಟ334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

- Advertisement -
- Advertisement -

ನೋಂದಣಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಥವಾ ಶಾಸನಬದ್ಧ ಬಾಧ್ಯತೆಗಳನ್ನು ಪೂರೈಸದ ಕಾರಣಕ್ಕಾಗಿ ಚುನಾವಣಾ ಆಯೋಗವು ಶನಿವಾರ (ಆ.9) 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು (ಆರ್‌ಯುಪಿಪಿ) ಪಟ್ಟಿಯಿಂದ ತೆಗೆದುಹಾಕಿದೆ.

ತನ್ನ ಕ್ರಮ ‘ರಾಜಕೀಯ ಕ್ಷೇತ್ರವನ್ನು ಶುದ್ಧೀಕರಿಸುವ ಸಮಗ್ರ ಮತ್ತು ನಿರಂತರ ಕಾರ್ಯತಂತ್ರದ ಒಂದು ಭಾಗ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಇತ್ತೀಚಿನ ಶುದ್ದೀಕರಣದ ಬಳಿಕ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಸಂಖ್ಯೆ 2,854 ರಿಂದ 2,520ಕ್ಕೆ ಇಳಿದಿದೆ ಎಂದು ವರದಿಗಳು ಹೇಳಿವೆ.

ಪಟ್ಟಿಯಿಂದ ತೆಗೆದುಹಾಕಲಾದ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳಿಗೆ ಇನ್ನು ಮುಂದೆ ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಸೆಕ್ಷನ್ 29B ಮತ್ತು ಸೆಕ್ಷನ್ 29C,ಆದಾಯ ತೆರಿಗೆ ಕಾಯ್ದೆ, 1961ರ ಸಂಬಂಧಿತ ನಿಬಂಧನೆಗಳು ಮತ್ತು ಚುನಾವಣಾ ಚಿಹ್ನೆಗಳು (ಮೀಸಲಾತಿ ಮತ್ತು ಹಂಚಿಕೆ) ಆದೇಶ, 1968ರ ಅಡಿಯಲ್ಲಿ ಆದಾಯ ತೆರಿಗೆ ರಿಯಾಯಿತಿಗಳು ದೊರೆಯುವುದಿಲ್ಲ.

ಮಾರ್ಗಸೂಚಿಗಳ ಪ್ರಕಾರ, ಒಂದು ಪಕ್ಷವು ಆರು ವರ್ಷಗಳ ಕಾಲ ನಿರಂತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೆ, ಅದನ್ನು ನೋಂದಾಯಿತ ಪಕ್ಷಗಳ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.

ಚುನಾವಣಾ ಆಯೋಗ ತನ್ನ ಮಾರ್ಗಸೂಚಿಗಳು ಮತ್ತು ಜನ ಪ್ರತಿನಿಧಿಗಳ ಕಾಯ್ದೆಯಡಿಯಲ್ಲಿ ಸೂಚಿಸಲಾದ ಮೇಲಿನ ಷರತ್ತುಗಳ ಅನುಸರಣೆಗೆ ಸಂಬಂಧಿಸಿದಂತೆ 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಪರಿಶೀಲನಾ ವಿಚಾರಣೆಗಳನ್ನು ನಡೆಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ (ಸಿಇಒ) ನಿರ್ದೇಶನ ನೀಡಿತ್ತು.

ಸಿಇಒಗಳ ವರದಿಗಳ ಆಧಾರದ ಮೇಲೆ, 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಪೈಕಿ 334 ಪಕ್ಷಗಳು ಮೇಲಿನ ಷರತ್ತುಗಳನ್ನು ಪಾಲಿಸುತ್ತಿಲ್ಲ ಎಂದು ಕಂಡುಬಂದಿದೆ. ಉಳಿದ ಪ್ರಕರಣಗಳನ್ನು ಮರುಪರಿಶೀಲನೆಗಾಗಿ ಸಿಇಒಗಳಿಗೆ ಹಿಂತಿರುಗಿಸಲಾಗಿದೆ” ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎನ್ನುವ ಷರತ್ತನ್ನು ಪಟ್ಟಿಯಿಂದ ಕೈಬಿಟ್ಟ ಪಕ್ಷಗಳು ಪಾಲಿಸಿಲ್ಲ. 2019ರಿಂದ ಇದುವರೆಗಿನ ಆರು ವರ್ಷಗಳ ಅವಧಿಯಲ್ಲಿ ಈ ಪಕ್ಷಗಳು ಒಂದೇ ಒಂದು ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಮತ್ತು ನೋಂದಾಯಿಸಿಕೊಂಡಿರುವ ವಿಳಾಸದಲ್ಲಿಯೂ ಈ ಪಕ್ಷಗಳ ಕಚೇರಿಯೂ ಪತ್ತೆಯಾಗಿಲ್ಲ ಎಂದು ಆಯೋಗ ಹೇಳಿದೆ.

ಉತ್ತರ ಪ್ರದೇಶದಲ್ಲಿನ 115 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ದೆಹಲಿ 27, ತಮಿಳುನಾಡು 22, ಹರಿಯಾಣ 21, ಮಧ್ಯಪ್ರದೇಶ 15, ತೆಲಂಗಾಣ 13 ಹಾಗೂ ಗುಜರಾತ್‌ನ 11 ಪಕ್ಷಗಳನ್ನು ಆಯೋಗವು ಪಟ್ಟಿಯಿಂದ ಕೈಬಿಟ್ಟಿದೆ ಎಂದು ವರದಿಯಾಗಿದೆ.

ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲೂ ಭಾರತೀಯ ಹಿಂದುಳಿದ ಪಕ್ಷ, ಬಿಹಾರ ಜನತಾ ಪಕ್ಷ ಮತ್ತು ಗಾಂಧಿ ಪ್ರಕಾಶ್‌ ಪಕ್ಷ ಸೇರಿದಂತೆ 17 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.

2022ರಲ್ಲಿ ನಡೆದ ಪರಿಷ್ಕರಣೆಯಲ್ಲಿ 537 ಪಕ್ಷಗಳ ಪೈಕಿ 284 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿತ್ತು.

ಪಟ್ಟಿಯಿಂದ ಕೈಬಿಟ್ಟ ಪಕ್ಷಗಳ ಪೈಕಿ ಕರ್ನಾಟಕದ 12 ಪಕ್ಷಗಳಿವೆ ಎಂದು ವರದಿಯಾಗಿದೆ.

ಅಂಬೇಡ್ಕರ್‌ ಜನತಾ ಪಕ್ಷ, ಭಾರತೀಯ ಪ್ರಜಾ ಪಕ್ಷ, ಜನ ಸ್ವರಾಜ್ಯ ಪಕ್ಷ,ಕಲ್ಯಾಣ ಕ್ರಾಂತಿ ಪಕ್ಷ,
ಕರ್ನಾಟಕ ಪ್ರಜಾ ವಿಕಾಸ್‌ ಪಕ್ಷ, ಕರ್ನಾಟಕ ಸ್ವರಾಜ್ಯ ಪಕ್ಷ, ಮಹಿಳಾ ಪ್ರಧಾನ ಪಕ್ಷ, ನಮ್ಮ ಕಾಂಗ್ರೆಸ್‌
ಪ್ರಜಾ ರೈತ ರಾಜ್ಯ ಪಕ್ಷ, ರಕ್ಷಕ ಸೇನಾ ಸಮನ್ಯಾ ಜನತಾ ಪಕ್ಷ (ಲೋಕ ತಾಂತ್ರಿಕ್‌) ಮತ್ತು ವಿಚಾರ ಜಾಗೃತಿ ಕಾಂಗ್ರೆಸ್‌ ಪಕ್ಷ ಪಟ್ಟಿಯಿಂದ ಕೈಬಿಟ್ಟ ಕರ್ನಾಟಕದ ಪಕ್ಷಗಳು ಎಂದು ತಿಳಿದು ಬಂದಿದೆ.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...