Homeಮುಖಪುಟಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

- Advertisement -
- Advertisement -

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ 2024ರ ಲೋಕಸಭೆ ಚುನಾವಣೆಯ ‘ಮತಗಳ್ಳತನ’ ಆರೋಪ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ಅಖಿಲ ಭಾರತ ಕಾಂಗ್ರೆಸ್ ‘ವೋಟ್ ಚೋರಿ’ (ಮತಗಳ್ಳತನ) ಎಂಬ ಹೆಸರಿನಲ್ಲಿ ವೆಬ್‌ ಪೋರ್ಟಲ್ ತೆರೆದಿದೆ. ಈ ಮೂಲಕ ಮತಗಳ್ಳತನದ ವಿರುದ್ದ ಅಭಿಯಾನ ಆರಂಭಿಸಿದೆ.

‘ಮತಗಳ್ಳತನದ ಆಧಾರ’, ‘ಚುನಾವಣಾ ಆಯೋಗದ ಪಾರದರ್ಶಕತೆಗೆ ಆಗ್ರಹ’ ಮತ್ತು ‘ಮತಗಳ್ಳತನದ ಬಗ್ಗೆ ವರದಿ’ ಎಂಬ ಮೂರು ಆಯ್ಕೆಗಳು ವೆಬ್‌ ಪೋರ್ಟಲ್‌ನಲ್ಲಿದ್ದು, ಜನರು ಪೋರ್ಟಲ್‌ಗೆ ಭೇಟಿ ನೀಡಿ ಮತಗಳ್ಳನದ ಆಧಾರಗಳನ್ನು ಪರಿಶೀಲಿಸಿ, ಆ ಬಗ್ಗೆ ವರದಿ ಮಾಡಿ, ಚುನಾವಣಾ ಪಾರದರ್ಶಕತೆಗೆ ಆಯೋಗವನ್ನು ಆಗ್ರಹಿಸಬಹುದು.

ಬಿಜೆಪಿ ಮತ್ತು ಚುನಾವಣಾ ಆಯೋಗ ಪರಸ್ಪರ ಒಪ್ಪಂದ ಮಾಡಿಕೊಂಡು ಕಳೆದ ಲೋಕಸಭೆ ಚುನಾವಣೆಯಲ್ಲಿ “ದೊಡ್ಡ ಕ್ರಿಮಿನಲ್ ವಂಚನೆ” ಎಸಗಿದೆ ಎಂಬ ಆರೋಪವನ್ನು ರಾಹುಲ್ ಗಾಂಧಿಯ ಪುನರುಚ್ಚರಿಸುವ ವೀಡಿಯೊ ಕೂಡ ವೆಬ್‌ ಪೋರ್ಟನಲ್ಲಿದೆ. ವಿಡಿಯೋದಲ್ಲಿ ಕರ್ನಾಟಕದ ಒಂದು ಕ್ಷೇತ್ರದ ವಿಶ್ಲೇಷಣೆಯನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಇದು “ಸಂವಿಧಾನದ ವಿರುದ್ಧದ ಅಪರಾಧ” ಎಂದು ಹೇಳಿದ್ದಾರೆ.

ಈ ಪೋರ್ಟಲ್‌ನಲ್ಲಿ ಮತದಾನವು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಆದರೆ, ಅದು ‘ಚುನಾವಣಾ ಆಯೋಗದ ಶಾಮೀಲಿನೊಂದಿಗೆ ಬಿಜೆಪಿಯಿಂದ ವ್ಯವಸ್ಥಿತ ದಾಳಿಗೆ ಒಳಗಾಗಿದೆ’ ಎಂಬ ಸಂದೇಶವಿದೆ.

“ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಕೇವಲ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಲೋಕಸಭಾ ಚುನಾವಣೆ ಗೆಲ್ಲಲು ಸಹಾಯಕ ಮಾಡಿದ 1 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ನಾವು ಕಂಡುಕೊಂಡಿದ್ದೇವೆ. ಸುಮಾರು 70-100 ಸ್ಥಾನಗಳಲ್ಲಿ ಇದು ಸಂಭವಿಸಿದೆ. ಹಾಗಾದರೆ ಊಹಿಸಿ, ಇದು ಮುಕ್ತ ಚುನಾವಣೆಗಳನ್ನು ನಾಶಪಡಿಸುತ್ತದೆ ಎಂದು ಪೋರ್ಟಲ್‌ನಲ್ಲಿ ಹೇಳಲಾಗಿದೆ.

ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಕುರಿತು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟದ ಈ ಹಿಂದೆಯೂ ಎಚ್ಚರಿಕೆ ನೀಡಿವೆ. ಈಗ ನಮ್ಮ ಬಳಿ ಪುರಾವೆಗಳಿವೆ. ನಾವು ಈ ಮತಗಳ್ಳತನದ ವಿರುದ್ಧ ನಮ್ಮೆಲ್ಲ ಶಕ್ತಿಯಿಂದ ಹೋರಾಡುತ್ತೇವೆ. ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಮ್ಮೊಂದಿಗೆ ನೀವು ಕೈಜೋಡಿಸಿ ಎಂದು ಪೋರ್ಟಲ್‌ನಲ್ಲಿ ಮನವಿ ಮಾಡಲಾಗಿದೆ.

ಒಬ್ಬರು ವ್ಯಕ್ತಿ ಪೋರ್ಟಲ್‌ನಲ್ಲಿ ನೋಂದಾಯಿಸಿದ ನಂತರ, ಅವರ ಹೆಸರಿನಲ್ಲಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಈ ಮೂಲಕ ಅವರು ಮತಗಳ್ಳತನವನ್ನು ವಿರೋಧಿಸುತ್ತಾರೆ ಎಂದು ಹೇಳಲಾಗುತ್ತದೆ.

“ಚುನಾವಣಾ ಆಯೋಗ ಡಿಜಿಟಲ್ ಮತದಾರರ ಪಟ್ಟಿಯನ್ನು ಒದಗಿಸಬೇಕು ಎಂಬ ರಾಹುಲ್ ಗಾಂಧಿಯವರ ಬೇಡಿಕೆಯನ್ನು ನಾನೂ ಬೆಂಬಲಿಸುತ್ತೇನೆ” ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ. ಜನರು ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳುವ ಮತ್ತು ಎಸ್‌ಎಂಎಸ್‌ನಲ್ಲಿರುವ ಲಿಂಕ್ ಅನ್ನು ಭರ್ತಿ ಮಾಡುವ ಆಯ್ಕೆಯನ್ನು ಕೂಡ ಪೋರ್ಟಲ್ ನೀಡುತ್ತದೆ.

ಪ್ರಮಾಣಪತ್ರವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಖಜಾಂಚಿ ಅಜಯ್ ಮಾಕನ್ ಅವರ ಸಹಿಗಳನ್ನು ಹೊಂದಿದೆ.

ಹಲವಾರು ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಮಾಣಪತ್ರಗಳನ್ನು ಹಂಚಿಕೊಂಡಿದ್ದಾರೆ.

ರಾಹುಲ್ ಗಾಂಧಿಯವರ ‘ಮತಗಳ್ಳತನ’ ಆರೋಪವನ್ನು ಕಾಂಗ್ರೆಸ್ ನಾಯಕರು ಪ್ರತಿಧ್ವನಿಸುತ್ತಿದ್ದಂತೆ, ಚುನಾವಣಾ ಆಯೋಗದ ಅಧಿಕಾರಿಗಳು ಶನಿವಾರ ಮತ್ತೊಮ್ಮೆ ರಾಹುಲ್ ಗಾಂಧಿ ತನ್ನ ಆರೋಪವನ್ನು ದೃಢೀಕರಿಸುವ ಘೋಷಣಾ ಪತ್ರಕ್ಕೆ ಸಹಿ ಹಾಕಬೇಕು ಅಥವಾ ಸುಳ್ಳಾರೋಪ ಮಾಡಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕನಿಷ್ಠ ಮೂರು ರಾಜ್ಯಗಳಲ್ಲಿ ನಡೆದ ಮತ ಕಳ್ಳತನದ ಆರೋಪದ ಕುರಿತು ರಾಹುಲ್ ಗಾಂಧಿ ಮತ್ತು ಚುನಾವಣಾ ಆಯೋಗದ ನಡುವೆ ಜಟಾಪಟಿ ಏರ್ಪಟ್ಟಿದೆ.

334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...