Homeಅಂತರಾಷ್ಟ್ರೀಯಇಸ್ರೇಲ್ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆ; ಮನಕಲಕಿದ ಅನಾಸ್ ಅಲ್-ಶರೀಫ್ ಅಂತಿಮ...

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆ; ಮನಕಲಕಿದ ಅನಾಸ್ ಅಲ್-ಶರೀಫ್ ಅಂತಿಮ ಸಂದೇಶ 

- Advertisement -
- Advertisement -

ಪ್ಯಾಲೆಸ್ತೀನ್/ಗಾಜಾ: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಗಾಜಾ ಮೂಲದ ಧೈರ್ಯಶಾಲಿ ಪತ್ರಕರ್ತ ಅನಾಸ್ ಅಲ್-ಶರೀಫ್ ಸೇರಿದಂತೆ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆಯಾಗಿದ್ದಾರೆ. ಗಾಜಾ ನರಮೇಧ ಆರಂಭವಾದಾಗಿನಿಂದಲೂ ನಿರಂತರವಾಗಿ ವರದಿ ಮಾಡುತ್ತಿದ್ದ ಅನಾಸ್ ಅಲ್-ಶರೀಫ್, ಅಲ್ ಜಝೀರಾ ಅರೇಬಿಕ್‌ನ ಪ್ರಮುಖ ಧ್ವನಿಯಾಗಿದ್ದರು. ಈ ದಾಳಿಯಲ್ಲಿ ಅಲ್-ಶರೀಫ್ ಅವರೊಂದಿಗೆ, ಕ್ಯಾಮರಾಮ್ಯಾನ್‌ಗಳಾದ ಇಬ್ರಾಹಿಂ ಝಾಹರ್ ಮತ್ತು ಮೊಹಮ್ಮದ್ ನೌಫಲ್ ಹಾಗೂ ಮತ್ತೊಬ್ಬ ಪತ್ರಕರ್ತ ಮೊಹಮ್ಮದ್ ಖ್ರೀಖೆ ಕೂಡ ಸಾವನ್ನಪ್ಪಿದ್ದಾರೆ.

ಅಲ್ ಜಝೀರಾ ವರದಿ ಪ್ರಕಾರ, ಈ ಘಟನೆ ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯ ಹೊರಗೆ ಪತ್ರಕರ್ತರು ತಂಗಿದ್ದ ಡೇರೆಯ ಮೇಲೆ ನಡೆದ ಇಸ್ರೇಲಿ ದಾಳಿಯ ಪರಿಣಾಮವಾಗಿದೆ. ಇದು ಉದ್ದೇಶಪೂರ್ವಕ ದಾಳಿ ಎಂದು ಅಲ್ ಜಝೀರಾ ಖಂಡಿಸಿದೆ. ಹತ್ಯೆಗೀಡಾದ ಅನಾಸ್ ಅಲ್-ಶರೀಫ್ (28) ಅವರು ಉತ್ತರ ಗಾಜಾದಲ್ಲಿ ವ್ಯಾಪಕವಾಗಿ ವರದಿ ಮಾಡಿದ್ದರಿಂದ ಅಲ್ಲಿ ಮನೆ ಮಾತಾಗಿದ್ದರು. ಇಸ್ರೇಲ್ ಪಡೆಗಳು ಈ ಪತ್ರಕರ್ತರ ವಿರುದ್ಧ, ವಿಶೇಷವಾಗಿ ಅಲ್-ಶರೀಫ್ ವಿರುದ್ಧ, “ಪ್ರಚೋದನೆಯ ಅಭಿಯಾನ” ನಡೆಸುತ್ತಿದ್ದವು ಎಂದು ಅಲ್ ಜಝೀರಾ ಮೀಡಿಯಾ ನೆಟ್‌ವರ್ಕ್ ಹೇಳಿದೆ.

ಆದರೆ, ಇಸ್ರೇಲ್ ಸೇನೆಯು ಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಾ, ಅಲ್-ಶರೀಫ್ ಹಮಾಸ್ ಕೋಶದ ಮುಖ್ಯಸ್ಥನಾಗಿದ್ದ ಮತ್ತು “ಇಸ್ರೇಲಿ ನಾಗರಿಕರು ಮತ್ತು ಪಡೆಗಳ ವಿರುದ್ಧ ರಾಕೆಟ್ ದಾಳಿಗಳನ್ನು ಉತ್ತೇಜಿಸುತ್ತಿದ್ದ” ಎಂದು ಆರೋಪಿಸಿದೆ. ಈ ಆರೋಪಗಳನ್ನು ಅಲ್ ಜಝೀರಾ ಸಂಪೂರ್ಣವಾಗಿ ನಿರಾಕರಿಸಿದೆ.

ತಮ್ಮ ಹತ್ಯೆಯ ಕೆಲವು ಕ್ಷಣಗಳ ಮೊದಲು, ಅಲ್-ಶರೀಫ್ ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಗಾಜಾ ನಗರದ ಪೂರ್ವ ಮತ್ತು ದಕ್ಷಿಣ ಭಾಗಗಳ ಮೇಲೆ ಇಸ್ರೇಲ್ ತೀವ್ರವಾದ ಮತ್ತು ಕೇಂದ್ರೀಕೃತ ಬಾಂಬ್ ದಾಳಿ ನಡೆಸುತ್ತಿದೆ ಎಂದು ಬರೆದಿದ್ದರು. ಈ ಬಾಂಬ್ ದಾಳಿಯನ್ನು “ಫೈರ್ ಬೆಲ್ಟ್‌ಗಳು” ಎಂದೂ ಕರೆಯಲಾಗುತ್ತದೆ. ಅವರ ಕೊನೆಯ ವೀಡಿಯೊದಲ್ಲಿ, ಹಿನ್ನೆಲೆಯಲ್ಲಿ ನಿರಂತರ ಬಾಂಬ್ ದಾಳಿಯ ಶಬ್ದಗಳು ಕೇಳಿಬರುತ್ತಿದ್ದು, ಕತ್ತಲೆ ಆಕಾಶ ಕಿತ್ತಳೆ ಬೆಳಕಿನಿಂದ ಮಿನುಗುತ್ತಿರುವುದು ಕಾಣುತ್ತದೆ. “ಕಳೆದ ಎರಡು ಗಂಟೆಗಳಿಂದ ಗಾಜಾ ನಗರದ ಮೇಲೆ ಇಸ್ರೇಲಿ ಆಕ್ರಮಣ ತೀವ್ರಗೊಂಡಿದೆ” ಎಂದು ಅವರು ಬರೆದಿದ್ದರು.

“ನಾನು ನಿಮಗೆ ಪ್ಯಾಲೆಸ್ಟೈನ್ ಅನ್ನು ಒಪ್ಪಿಸುತ್ತೇನೆ”: ಅನಾಸ್ ಅಲ್-ಶರೀಫ್ ಅವರ ಅಂತಿಮ ಸಂದೇಶ

ಅನಾಸ್ ಅಲ್-ಶರೀಫ್ ಅವರ ಹತ್ಯೆಯ ನಂತರ, ಅವರು ಈ ವರ್ಷದ ಆರಂಭದಲ್ಲಿ ಬರೆದಿದ್ದ ತಮ್ಮ ಅಂತಿಮ ಸಂದೇಶವನ್ನು ಅವರ ಎಕ್ಸ್ ಖಾತೆಯಲ್ಲಿ ಪ್ರಕಟಿಸಲಾಯಿತು. ಈ ಸಂದೇಶವು ಅವರ ನೋವು, ಕಷ್ಟಗಳು ಮತ್ತು ತಮ್ಮ ಜನರು ಹಾಗೂ ಮಾತೃಭೂಮಿಯ ಮೇಲಿದ್ದ ಪ್ರೀತಿಯನ್ನು ಪ್ರತಿಬಿಂಬಿಸುತ್ತದೆ.

ಅವರ ಅಂತಿಮ ಸಂದೇಶದ ಪೂರ್ಣ ಪಠ್ಯ ಇಲ್ಲಿದೆ:

“ನನ್ನ ಮಾತುಗಳು ನಿಮ್ಮನ್ನು ತಲುಪಿದರೆ, ಇಸ್ರೇಲ್ ನನ್ನನ್ನು ಕೊಲ್ಲುವಲ್ಲಿ ಮತ್ತು ನನ್ನ ಧ್ವನಿಯನ್ನು ಮೌನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಯಿರಿ. ಮೊದಲಿಗೆ, ನಿಮ್ಮೆಲ್ಲರ ಮೇಲೆ ಶಾಂತಿ, ಕರುಣೆ ಮತ್ತು ಆಶೀರ್ವಾದವಿರಲಿ.

ಜಬಾಲಿಯಾ ನಿರಾಶ್ರಿತರ ಶಿಬಿರದ ಗಲ್ಲಿಗಳಲ್ಲಿ ಮತ್ತು ಬೀದಿಗಳಲ್ಲಿ ನನ್ನ ಬದುಕು ಆರಂಭವಾದಾಗಿನಿಂದ, ನನ್ನ ಜನರಿಗೆ ಧ್ವನಿ ಮತ್ತು ಶಕ್ತಿಯಾಗಿ ನಿಲ್ಲಲು ನಾನು ನನ್ನ ಸರ್ವ ಪ್ರಯತ್ನವನ್ನೂ ಅರ್ಪಿಸಿದ್ದೇನೆ ಎಂದು ಅಲ್ಲಾಹನಿಗೆ ತಿಳಿದಿದೆ. ಅತಿಕ್ರಮಿತ ಭೂಮಿ, ನನ್ನ ಮೂಲ ಪಟ್ಟಣ ಅಸ್ಖಲಾನ್ (ಅಲ್-ಮಜ್ದಲ್)ಗೆ ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಹಿಂತಿರುಗುವ ಆಸೆಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೆ. ಆದರೆ ಅಲ್ಲಾಹನ ಇಚ್ಛೆಯು ಅನಿರೀಕ್ಷಿತವಾಗಿತ್ತು, ಮತ್ತು ಆತನ ತೀರ್ಮಾನವೇ ಅಂತಿಮ. ನೋವಿನ ಎಲ್ಲಾ ರೂಪಗಳನ್ನು ನಾನು ಅನುಭವಿಸಿದ್ದೇನೆ, ದುಃಖ ಮತ್ತು ನಷ್ಟವನ್ನು ಪದೇ ಪದೇ ಕಂಡಿದ್ದೇನೆ. ಆದರೂ, ಸತ್ಯವನ್ನು ಅದು ಇರುವಂತೆಯೇ, ಯಾವುದೇ ಬದಲಾವಣೆ ಅಥವಾ ಸುಳ್ಳಿಲ್ಲದೆ ಹೇಳಲು ನಾನು ಎಂದಿಗೂ ಹಿಂಜರಿಯಲಿಲ್ಲ. ನಮ್ಮ ಹತ್ಯೆಯನ್ನು ಒಪ್ಪಿಕೊಂಡ, ನಮ್ಮ ಉಸಿರುಗಳನ್ನು ಬಂಧಿಸಿದ, ನಮ್ಮ ಮಕ್ಕಳ ಮತ್ತು ಮಹಿಳೆಯರ ಛಿದ್ರಗೊಂಡ ದೇಹಗಳನ್ನು ನೋಡಿಯೂ ಹೃದಯ ಕರಗದ ಮತ್ತು ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ನಮ್ಮ ಜನರ ಮೇಲೆ ನಡೆಯುತ್ತಿರುವ ಈ ಮಾರಣಹೋಮವನ್ನು ನಿಲ್ಲಿಸದವರ ವಿರುದ್ಧ ಅಲ್ಲಾಹನು ಸಾಕ್ಷಿಯಾಗಿರುತ್ತಾನೆ ಎಂದು ನಾನು ನಂಬಿದ್ದೇನೆ.

ನಾನು ಪ್ಯಾಲೆಸ್ಟೈನ್ ಅನ್ನು ನಿಮ್ಮ ಕೈಗೆ ಒಪ್ಪಿಸುತ್ತೇನೆ. ಇದು ಮುಸ್ಲಿಂ ಪ್ರಪಂಚದ ಒಂದು ರತ್ನ ಮತ್ತು ಪ್ರತಿಯೊಬ್ಬ ಸ್ವತಂತ್ರ ಹೃದಯದ ಆಸೆಯಾಗಿದೆ. ಸಾವಿರಾರು ಟನ್‌ಗಳ ಇಸ್ರೇಲಿ ಬಾಂಬ್‌ಗಳಿಂದ ಹರಿದುಹೋದ ಅಮಾಯಕ ಮಕ್ಕಳ ದೇಹಗಳು ಮತ್ತು ಅಲ್ಲಿನ ಜನರ ಜವಾಬ್ದಾರಿಯನ್ನು ನಾನು ನಿಮಗೆ ವಹಿಸುತ್ತಿದ್ದೇನೆ. ಯಾವುದೇ ಬಂಧನಗಳು ನಿಮ್ಮನ್ನು ಮೌನವಾಗಿಸಬಾರದು. ನಮ್ಮ ನೆಲ ಮತ್ತು ಜನರಿಗೆ ಘನತೆ ಮತ್ತು ಸ್ವಾತಂತ್ರ್ಯ ದೊರೆಯುವವರೆಗೂ ಅವರನ್ನು ಬಿಡುಗಡೆಗೊಳಿಸುವ ಸೇತುವೆಯಾಗಿ ನೀವು ಇರಿ.

ನನ್ನ ಪ್ರೀತಿಯ ಕುಟುಂಬವನ್ನು ನಿಮಗೆ ಒಪ್ಪಿಸುತ್ತಿದ್ದೇನೆ. ನನ್ನ ಕಣ್ಣಿನ ದೃಷ್ಟಿಯಂತಿದ್ದ ಮಗಳು ಶಮ್ಳನ್ನು ನಿಮಗೆ ವಹಿಸುತ್ತಿದ್ದೇನೆ, ಅವಳು ಬೆಳೆಯುವುದನ್ನು ನೋಡುವ ಆಸೆ ನನಗೆ ಈಡೇರಲಿಲ್ಲ. ನನ್ನ ಮಗ ಸಲಾಹ್‌ನನ್ನು ನಿಮಗೆ ಒಪ್ಪಿಸುತ್ತೇನೆ, ಅವನು ನನ್ನ ಜವಾಬ್ದಾರಿಯನ್ನು ಹೊರುವಷ್ಟು ಶಕ್ತಿಯುತನಾಗುವವರೆಗೆ ನಾನು ಅವನ ಬೆಂಬಲಕ್ಕೆ ನಿಲ್ಲಬೇಕಿತ್ತು.

ನನ್ನ ಶಕ್ತಿಯಾಗಿದ್ದ ಪ್ರೀತಿಯ ತಾಯಿಯನ್ನು, ಅವರ ಪ್ರಾರ್ಥನೆಗಳು ನನ್ನನ್ನು ಕಾಪಾಡಿದವು, ನಿಮಗೆ ಒಪ್ಪಿಸುತ್ತೇನೆ. ಜೀವನದುದ್ದಕ್ಕೂ ನನ್ನ ಜೊತೆಗಿದ್ದ ನನ್ನ ಪತ್ನಿ ಬಯಾನ್ಳನ್ನು ನಿಮಗೆ ವಹಿಸುತ್ತೇನೆ. ಯುದ್ಧವು ನಮ್ಮನ್ನು ದೂರಮಾಡಿದರೂ, ಅವಳು ದೃಢವಾಗಿ ಮತ್ತು ನಿಷ್ಠೆಯಿಂದ ಕುಟುಂಬವನ್ನು ನೋಡಿಕೊಂಡಳು. ದಯವಿಟ್ಟು ನೀವು ಎಲ್ಲರೂ ಸೇರಿ, ಅವರಿಗೆ ಅಲ್ಲಾಹನ ನಂತರ ದೊಡ್ಡ ಬೆಂಬಲವಾಗಿರಿ.

ನನ್ನ ಅಂತ್ಯ ಸಂಭವಿಸಿದರೆ, ನನ್ನ ತತ್ವಗಳಿಗೆ ಬದ್ಧನಾಗಿ ಈ ಜಗತ್ತನ್ನು ಬಿಡುತ್ತೇನೆ. ಅಲ್ಲಾಹನ ಇಚ್ಛೆಯಿಂದ ನಾನು ತೃಪ್ತನಾಗಿದ್ದೇನೆ ಮತ್ತು ಆತನನ್ನು ಸೇರುವುದು ಶಾಶ್ವತ ಶಾಂತಿಯ ದಾರಿ ಎಂದು ನಾನು ನಂಬಿದ್ದೇನೆ.

ಓ ಅಲ್ಲಾಹ್, ನನ್ನನ್ನು ಹುತಾತ್ಮನಾಗಿ ಸ್ವೀಕರಿಸು. ನನ್ನ ಭೂತ ಮತ್ತು ಭವಿಷ್ಯದ ಪಾಪಗಳನ್ನು ಕ್ಷಮಿಸು. ನನ್ನ ರಕ್ತದ ಹನಿಯು ನನ್ನ ಜನ ಮತ್ತು ಕುಟುಂಬದ ಸ್ವಾತಂತ್ರ್ಯಕ್ಕಾಗಿ ಪ್ರಕಾಶಿಸುವ ಬೆಳಕಾಗಲಿ. ಒಂದು ವೇಳೆ ನಾನು ಎಲ್ಲಿಯಾದರೂ ತಪ್ಪು ಮಾಡಿದ್ದರೆ ನನ್ನನ್ನು ಕ್ಷಮಿಸು. ನನ್ನ ಒಡಂಬಡಿಕೆಗೆ ನಾನು ಸದಾ ನಿಷ್ಠನಾಗಿದ್ದೇನೆ. ಗಾಜಾವನ್ನು ಮರೆಯಬೇಡಿ… ಮತ್ತು ನಿಮ್ಮ ಒಳ್ಳೆಯ ಪ್ರಾರ್ಥನೆಗಳಲ್ಲಿ ನನ್ನನ್ನು ದಯೆಯಿಂದ ನೆನಪಿಸಿಕೊಳ್ಳಿ.

ಅನಾಸ್ ಅಲ್-ಶರೀಫ್

06.04.2025″

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...